Author: editor.udayarashmi@gmail.com

ವಿಜಯಪುರ: ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಆಯಾ ಬಿಇಒ, ಸಿಡಿಪಿಒ, ಡಿಸಿಪಿಓ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಬೇಕು. ಇಲ್ಲದಿದ್ದರೆ ಆಯಾ ಶಾಲೆಯ ಮುಖೋಪಾಧ್ಯಾಯರು, ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ೨೦೨೪-೨೫ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ಶಾಲೆಯಲ್ಲಿ ಓರ್ವ ಮಹಿಳಾ ಶಿಕ್ಷಕರನ್ನು ಕೌನ್ಸಲರ್ ಆಗಿ ನೇಮಿಸಿಕೊಂಡು ಮಕ್ಕಳಿಗೆ ಪೋಕ್ಸೋ, ದೌರ್ಜನ್ಯ, ಬಾಲ ಕಾರ್ಮಿಕರ ಕುರಿತಾಗಿ ಜಾಗೃತಿ ಮೂಡಿಸಬೇಕು. ಬೋಧನೆಯಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು. ದೌರ್ಜನ್ಯಕ್ಕೊಳಗಾದ ಮಕ್ಕಳ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಅವರ ಮಾನಸಿಕ ಆರೋಗ್ಯ ಸುಧಾರಣೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.ದತ್ತು ಪಡೆದ ಹಾಗೂ ಸಾರ್ವಜನಿಕ ಸ್ಥಳದಲ್ಲಿ ದೊರೆತ ಅನಾಮಧೇಯ ಮಕ್ಕಳ, ಶಿಶುವಿನ ಮಾಹಿತಿಯನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ…

Read More

ಇಂದು ಗುರು ಪೂರ್ಣಿಮೆ ನಿಮಿತ್ತ ಈ ವಿಶೇಷ ಲೇಖನ “ವೀಣಾಂತರಂಗ”- ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ, ಗದಗ ಗುರುಬ್ರಹ್ಮಾ ಗುರುರ್ವಿಷ್ಣುಗುರುರ್ದೇವೋ ಮಹೇಶ್ವರಾಗುರು ಸಾಕ್ಷಾತ್ ಪರಬ್ರಹ್ಮತಸ್ಮೈಶ್ರೀ ಗುರುವೇನ್ನಮಃ ಅಖಂಡ ಮಂಡಲಾಕಾರಂವ್ಯಾಪ್ತಂ ಯೇನ ಚರಾಚರಂತತ್ಪದಂ ದರ್ಶಿತಂ ಯೇನಾತಸ್ಮೈ ಶ್ರೀ ಗುರುವೇ ನಮಃ ಅಜ್ಞಾನ ತಿಮಿರಾಂಧಸ್ಯಜ್ಞಾನಾಂಜನ ಶಲಾಕಯಚಕ್ಷುರ೦ ಮೀಲಿತಂ ಯೇನತಸ್ಮೈ ಶ್ರೀ ಗುರುವೇ ನಮಃ.. ಸಂಪೂರ್ಣ ಮಂಡಲಾಕಾರವಾದ, ಚರಾಚರಗಳಿಂದ ಕೂಡಿದ ಜಗತ್ತನ್ನು ವ್ಯಾಪಿಸಿರುವ ತತ್ವವು ಯಾರಿಂದ ತೋರಿಸಲ್ಪಟ್ಟಿತೋ ಅಂತಹ ಮಹಾನ್ ಗುರುವಿಗೆ ನಮಸ್ಕಾರ.ಅಜ್ಞಾನವೆಂಬ ಕತ್ತಲೆಯಿಂದ ಅಂಧನಾದವನ ಕಣ್ಣನ್ನು ಜ್ಞಾನವೆಂಬ ಅಂಜನ(ದೀಪ) ಸಲಾಕೆಯಿಂದ ಬಿಡಿಸುವ ಶ್ರೀಗುರುವಿಗೆ ನಮಸ್ಕಾರ.. ಹೀಗೆ ಗುರುವನ್ನು ಸ್ತುತಿಸುತ್ತವೆ ನಮ್ಮ ಪೂರ್ವಜರ ಉಕ್ತಿಗಳು. ಗುರು ಎಂದರೆ ‘ಗು’ ಎಂಬ ಪದವು ಗಾಢ ಅಂಧಕಾರ, ಕತ್ತಲನ್ನು ಸೂಚಿಸಿದರೆ ‘ರು’ ಎಂಬ ಪದವು ಕತ್ತಲನ್ನು ಹೋಗಲಾಡಿಸುವವನು, ಕಳೆಯುವವನು ಎಂದು. ಅಷ್ಟಲ್ಲದೆ ಹೇಳಿಲ್ಲ ನಮ್ಮ ಹಿರಿಯರು ಗುರು ತಂದೆ ತಾಯಿಗಳ ನಂತರದ ಸ್ಥಾನದಲ್ಲಿ ಬರುತ್ತಾನೆ ತಂದೆ ತಾಯಿಗಳು ಜೈವಿಕವಾಗಿ ನಮಗೆ ಸಂಬಂಧವನ್ನು ಹೊಂದಿದ್ದರೆ ಗುರು ಮಾನಸಿಕವಾಗಿ…

Read More

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ-ಕಾಲೇಜ್‌ಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಗುತ್ತಿಗೆಯಾಧಾರದ ಮೇಲೆ ನೇಮಕಾತಿಗಾಗಿ ಇಂದಿರಾ ಗಾಂಧಿ ವಸತಿ ಶಾಲೆ, ಜೈನ್ ಮಂದಿರ ಹತ್ತಿರ, ಹಂಚನಾಳ ರಸ್ತೆ, ವಿಜಯಪುರದಲ್ಲಿ ಜು.೨೭ರಂದು ಬೆಳಿಗ್ಗೆ ೧೧ ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.ಗಣಕಯಂತ್ರ ಉಪನ್ಯಾಸಕರು-೦೧, ರಸಾಯನ ಉಪನ್ಯಾಸಕರು-೦೧, ವಿಜ್ಞಾನ ಶಿಕ್ಷಕರು-೦೧, ಸಮಾಜ ವಿಜ್ಞಾನ ಶಿಕ್ಷಕರು-೦೧, ಆಂಗ್ಲಭಾಷಾ ಶಿಕ್ಷಕರು-೦೧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳು ಹಾಗೂ ಒಂದು ಝರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಡಿ.ಎಂ.ಚಲವಾದಿ, ಜಿಲ್ಲಾ ಸಮನ್ವಯಾಧಿಕಾರಿಗಳು, ವಿಜಯಪುರ ಮೊ: ೯೮೮೦೮೯೯೫೧೦ ಸಂಖ್ಯೆಗೆ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಇಟ್ಟಂಗಿಹಾಳದಲ್ಲಿ ಜಲಧೂತ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ವಿಜಯಪುರ: ನೀರು ಅಮೃತಕ್ಕೆ ಸಮಾನ, ನೀರಿದ್ದರೆ ಮಾತ್ರ ಜೀವ ಹಾಗೂ ಜೀವನ, ನೀರಿನ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ನೀರನ್ನು ಹಿತವಾಗಿ ಬಳಸಿದಾಗ ಪ್ರತಿ ಜೀವಿಯ ಬದುಕು ಬಂಗಾರವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಕರೆ ನೀಡಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇಟ್ಟಂಗಿಹಾಳ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಜಲಧೂತ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನೀರಿಲ್ಲದೇ ಜೀವವಿಲ್ಲ, ನೀರು ಇಲ್ಲದಿದ್ದರೆ ಉಸಿರಾಟ ನಡೆಯುವುದಿಲ್ಲ, ಪ್ರತಿ ಹನಿ ನೀರಿಗೂ ತುಂಬಾ ಬೆಲೆಯಿದೆ. ಹನಿ ಹನಿ ಕೂಡಿದರೆ ಹಳ್ಳ ಎಂಬುದು ಗಾದೆ ಮಾತಿನಂತೆ ನಾವು ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಸಿ ನೀರನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.ಜಲಧೂತ ಜಾಗೃತಿ ಜಾಥಾವು ನೀರಿನ ಮಹತ್ವ ಸಾರುವ ವಿವಿಧ ಘೋಷವಾಕ್ಯಗಳೊಂದಿಗೆ ಶಾಲೆಯ ಸುತ್ತಮುತ್ತ ಹಾಗೂ ಊರಿನ ಓಣಿ-ಓಣಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು.ಈ…

Read More

ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಶಿಕ್ಷಕರು (ನಿವೃತ್ತರೂ ಸೇರಿ), ನಿವೃತ್ತ ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂ.ಎಸ್.ಡಬ್ಲೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಪದವಿ ಓದುತ್ತಿರುವ ಹಾಗೂ ಕಾನೂನು ಪದವಿ ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸಂಬಂಧಪಡದ ಹಾಗೂ ಸೇವಾ ಮನೋಭಾವ ಹೊಂದಿರುವ ಸಂಘ-ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘ, ಮೈತ್ರಿ ಸಂಘ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ದೀರ್ಘಕಾಲಿನ ಕಾರಾಗೃಹ ಶಿಕ್ಷೆಗೊಳಗಾಗಿರುವ ಸನ್ನಡತೆಯ ಖೈದಿಗಳನ್ನು ಗುರುತಿಸಿ ಅವರನ್ನು ಅರೆಕಾಲಿಕ ಸ್ವಯಂ ಸೇವಕರನ್ನಾಗಿ ನೇಮಕ ಮಾಡಿಕೊಳ್ಳಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನ ನೀಡಿದೆ.ಆಸಕ್ತ ಅಭ್ಯರ್ಥಿಗಳು ದಿನಾಂಕ : ೦೩-೦೮-೨೦೨೪ರೊಳಗಾಗಿ ವಿಜಯಪುರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ : https://vijayapura.dcourts.gov.in/dlsa/ನಲ್ಲಿ ಲಭ್ಯವಿರುವ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಬಾಗಲಕೋಟೆ…

Read More

ವಿಜಯಪುರ: ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ ವಿಜಯಪುರ ಹಾಗೂ ಮಮದಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಇವರ ಸಹಯೋಗದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜು.೨೬ರಂದು ಬೆಳಿಗ್ಗೆ ೧೦ ಗಂಟೆಗೆ ಬಬಲೇಶ್ವರ ತಾಲೂಕಿನ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಉದ್ಯೊಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಡಿಪ್ಲೋಮಾ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿ ಪಾಸಾದಂತಹ ೩೫ ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಬಯೋಡೆಟಾ ಆಧಾರ ಪ್ರತಿಗಳ ೨ ಸೆಟ್ ಝರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೮೭೪೮೯೯೧೭೮೭, ೯೯೪೫೦೦೦೭೯೩ ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ್ಲಿ ಒಂದಾದ ಯವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಪದವಿ/ಡಿಪ್ಲೋಮಾ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ ೧೮೦ ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ-೨೦೨೪ ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಪ್ರತಿ ತಿಂಗಳಲ್ಲಿ ಅಭ್ಯರ್ಥಿಯು (ತಾನು) ನಿರುದ್ಯೋಗಿ, ಸ್ವಯಂ ಉದ್ಯೋಗವಿಲ್ಲವೆಂದು ‘ಸ್ವಯಂ ಘೋಷಣೆ’ ಮಾಡಬೇಕಾಗಿರುತ್ತದೆ. ಸ್ವಯಂ ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯಾಗುವುದಿಲ್ಲ.ಫಲಿತಾಂಶದ ನಂತರ ನಿರುದ್ಯೋಗಿ ೧೮೦ ದಿನಗಳು ಪೂರ್ಣಗೊಂಡ ನಂತರವು ಯಾವುದೇ ನಗದು ಪಡೆಯದೆ ಹೋದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನ (http://sevasindhugs.karnataka.gov.in)ನಲ್ಲಿ ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿ, ತಮ್ಮ ಅರ್ಜಿಯು ಯಾವ ಕಚೇರಿಯಲ್ಲಿ ಪರಿಶೀಲನೆಗಾಗಿ ಬಾಕಿ ಇದೆ ಎಂದು ತಿಳಿದುಕೊಂಡು ಆ ಕಚೇರಿಗಳಿಗೆ ತಮ್ಮ ಶೈಕ್ಷಣಿಕ ಮೂಲ ಹಾಗೂ ಒಂದು ಪ್ರತಿಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗಿ ಪರಿಶೀಲನೆ ಮಾಡಿಕೊಳ್ಳತಕ್ಕದ್ದು.ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೫೦೩೮೩ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ೧೧೦ ಕೆವಿ ಝಳಕಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಂಟ್ರೋಲ್ ಕೇಬಲ್ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿದ್ದು,ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ೧೧ ಕೆವಿ ಮಾರ್ಗಗಳಲ್ಲಿ ಜುಲೈ ೨೧ರ ಮದ್ಯಾಹ್ನ ೧೨ ಗಂಟೆಯಿಂದ ಸಂಜೆ ೬ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಇಂಡಿ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಎಂಡಿ ಡಾ.ಸತೀಶ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ನಗರದ ವಿಮಾನ ನಿಲ್ದಾಣದಲ್ಲಿ ೨೪/೭ ಕುಡಿಯುವ ನೀರು, ೨ಸಾವಿರ ಕಿ.ವ್ಯಾ. ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ್ ಬಿ.ಸಿ ಸೂಚಿಸಿದರು.ಶನಿವಾರ ಅವರು ಬುರಣಾಪುರ ಹತ್ತಿರ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿಎಫ್‌ಆರ್ ಕಟ್ಟಡ, ಕಂಪೌಂಡ್ ಗೋಡೆ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ ಅವರು, ನಂತರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ನಿಯಮಿತವಾಗಿ ಹಾಗೂ ನಿರಂತರವಾಗಿ ವಿಮಾನ ನಿಲ್ದಾಣಕ್ಕೆ ವಿದ್ಯುತ್ ಪೂರೈಕೆ ಮಾಡುವ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಹಾಗೂ ಹೆಸ್ಕಾಂನ ಅಧಿಕಾರಿಗಳಿಗೆ ಕಾಲಮಿತಿಯೊಳಗೆ ಬಾಕಿ ಉಳಿದ…

Read More

ಕಲುಷಿತ ನೀರು ಸೇವನೆಯಿಂದ ಹೆಚ್ಚಿದ ವಾಂತಿ ಬೇದಿ | ಮುದನೂರ ಗ್ರಾಪಂನಲ್ಲಿ ಘಟನೆ | ಪಿಡಿಓ ನಿರ್ಲಕ್ಷ್ಯ – ಇಲ್ಯಾಸ್ ಪಟೇಲ್ಯಾದಗಿರಿ: ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಮುದನೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಇಬ್ಬರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 52 ಮಂದಿ ಸದ್ಯ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.ಮುದನೂರು ಗ್ರಾಮದ ಜನತಾ ಕಾಲೋನಿಯ ನಿವಾಸಿಗಳು ಕಾಲುವೆ ಪಕ್ಕದ ಕೊಳವೆಬಾವಿಯ ನೀರು ಸೇವನೆ ಮಾಡಿದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇದಕ್ಕೆ ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ.ಆದರೆ, ಈ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಜನರಿಗೆ ವಾಂತಿ ಭೇದಿ ಉಂಟಾಗುತ್ತಿದ್ದಂತೆ ಕೆಲವರು ಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಇನ್ನೂ ಕೆಲವು ಜನ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಲುಷಿತ ನೀರು ಸೇವನೆಯೇ…

Read More