Author: editor.udayarashmi@gmail.com

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ ವಿಜಯಪುರ: ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೪ ಕೊನೆಯ ದಿನವಾಗಿದ್ದು, ೨ ಪಾಸ್ ಪೋರ್ಟ ಅಳತೆಯ ಭಾವಚಿತ್ರ (ವ್ಯಕ್ತಿ ವಿಭಾಗ), ಅರ್ಜಿದರರ ವ್ಯಕ್ತಿ, ಸಂಸ್ಥೆಗಳಿಂದ ವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ (೧ಪುಟಕ್ಕೆ ಮೀರದಂತೆ) ಹಾಗೂ ಇತರೆ ದಾಖಲೆಗಳೊಂದಿಗೆ ಅರ್ಜಿಯನ್ನು www.awards.gov.in & www.depwd.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಆವರಣ ವಿಜಯಪುರ ಕಚೇರಿಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ…

Read More

ವಿಜಯಪುರ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‌ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‌ನಿಂದ ಮುಂಗಾರು ಬೆಳೆ ಸಮೀಕ್ಷೆ ಆಪ್ ಡೌನ್‌ಲೋಡ್ ಮಾಡಿಕೊಂಡು, ಸ್ವತ: ತಾವೇ ಬೆಳೆ ಸಮೀಕ್ಷೆ ಮಾಡಿ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ.ರೈತರು ಸ್ವತ: ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ದಿನಾಂಕ : ೩೧-೦೮-೨೦೨೪ರವರೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ತಾವೇ ಕೈಗೊಳ್ಳಲು ಸಾಧ್ಯವಾಗದಿದ್ದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ವಿವಿಧ ಬೆಳೆಗಳ ಮಾಹಿತಿಯನ್ನು ಖಾಸಗಿ ನಿವಾಸಿಗಳ ಮೂಲಕ ಖುದ್ದಾಗಿ ಕ್ಷೇತ್ರದಲ್ಲಿದ್ದು, ದಿನಾಂಕ : ೧೫-೦೮-೨೦೨೪ ರಿಂದ ೩೦-೦೯-೨೦೨೪ರೊಳಗಾಗಿ ನಿಖರವಾಗಿ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.ಬೆಳೆ ಸಮೀಕ್ಷೆ ಆಪ್‌ನಲ್ಲಿ ದಾಖಲಾಗುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ, ಬೆಳೆ ಪರಿಹಾರ,…

Read More

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಮಾಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚಿಸಲಾಗಿದ್ದು, ಜಿಲ್ಲೆಯಲ್ಲಿ ಓರಿಯೆಂಟಲ್ ಜನರಲ್ ಇನ್ಸೂರೆನ್ಸ ಕಂಪನಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರೈತರು ತಮ್ಮ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.ಗ್ರಾಮ ಪಂಚಾಯತ್ ಮಟ್ಟಕ್ಕೆ ಅಧಿಸೂಚಿಸಲಾದ ಮಳೆಯಾಶ್ರಿತ ಬೆಳೆಗಳಾದ ತೊಗರಿ, ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಮತ್ತು ತೊಗರಿ ಬೆಳೆಗಳಿಗೆ ವಿಮಾ ನೊಂದಣಿಗೆ ದಿನಾಂಕ : ೩೧-೦೭-೨೦೨೪ ಕೊನೆಯ ದಿನವಾಗಿರುತ್ತದೆ.ಹೋಬಳಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾದ ನೀರಾವರಿ ಈರುಳ್ಳಿ ಹಾಗೂ ಕೆಂಪು ಮೆಣಸಿನಕಾಯಿ ಮತ್ತು ಮಳೆಯಾಶ್ರಿತ ಹತ್ತಿ ಬೆಳೆಗೆ ದಿನಾಂಕ : ೧೬-೦೮-೨೦೨೪ ಕೊನೆಯ ದಿನವಾಗಿದೆ. ನೀರಾವರಿ ಶೇಂಗಾ ಹಾಗೂ ಇನ್ನುಳಿದ ಹೋಬಳಿ ಮಟ್ಟದ ಬೆಳೆಗಳಿಗೆ ದಿನಾಂಕ : ೩೧-೦೭-೨೦೨೪ ಕೊನೆಯ ದಿನವಾಗಿದೆ.ರೈತರು ನೊಂದಣಿಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೊಂದಿದ ಎಫ್‌ಐಡಿ ಸಂಖ್ಯೆಯನ್ನು ಹಾಗೂ ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ ಜೊತೆಗೆ ಎನ್‌ಪಿಸಿಆಯ್ ಸೀಡಿಂಗ್ ಮಾಡಿಸಿರಬೇಕು.ಆಧಾರ…

Read More

“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ‌. ಎಚ್. ಕೆ. ಬೆಂಗಳೂರು ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿ ಘೋಷಣೆಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಬಹುತೇಕ ಕನ್ನಡಿಗರು ಸಂಭ್ರಮಿಸಿದರೆ, ಅನ್ಯ ಭಾಷಿಕರು ಮತ್ತು ಇಲ್ಲಿಯ ಕೆಲವು ಉದ್ಯಮಪತಿಗಳು ಬಲವಾದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.. ಈ ನಿಯಮದ ಎರಡು ಮುಖಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ.. ಮೊದಲನೆಯದಾಗಿ, ಯಾವುದೇ ಪ್ರದೇಶದ ಉದ್ಯೋಗಗಳು, ಸಂಪನ್ಮೂಲಗಳು, ಮೂಲಭೂತ ವಸ್ತುಗಳ ಮೇಲೆ ಬಹುತೇಕ ಅಲ್ಲಿನ ಸ್ಥಳಿಯರಿಗೇ ಮೊದಲ ಹಕ್ಕು ಹಾಗೂ ಅವರಿಗೇ ಮೊದಲ ಪ್ರಾಧಾನ್ಯತೆ ಕೊಡಬೇಕು. ಇದು ಪ್ರಾಕೃತಿಕ ಸಹಜ ಸ್ವಾಭಾವಿಕ ನ್ಯಾಯ. ವಿಶ್ವಸಂಸ್ಥೆಯ ಮೂಲ ಆಶಯವೂ ಕೂಡ, ಹಾಗೆಯೇ ಎಲ್ಲಾ ನಾಗರಿಕತೆಗಳ ಆಗ್ರಹವೂ ಕೂಡ.. ಏಕೆಂದರೆ ಒಂದು ಭೂ ಪ್ರದೇಶದ ನೆಲ ಜಲ ಭಾಷೆ ಸಂಸ್ಕೃತಿ ಎಲ್ಲವೂ ಅಲ್ಲಿನ ಮೂಲ ನಿವಾಸಿಗಳೊಂದಿಗೆ ಅಂತರ್ಗತವಾಗಿರುತ್ತದೆ. ಆ ಮೂಲ ನಿವಾಸಿಗಳೇ ಅಲ್ಲಿನ ನಿಜವಾದ ಬೇರುಗಳು. ಅದರ ಮೇಲೆ ಯಾವುದೇ ಇತರ ಸಂಸ್ಕೃತಿಯ ಹೇರಿಕೆಯು ಅಸಹಜ ಬೆಳವಣಿಗೆಯಾಗುತ್ತದೆ. ಒಂದು ವೇಳೆ ಒತ್ತಾಯಪೂರ್ವಕವಾಗಿ, ಅಕ್ರಮಣಕಾರಿಯಾಗಿ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಸೀರೆ ಅಂಗಡಿಯಲ್ಲಿರುವ ಎಲ್ಲಾ ಸೀರೆಗಳನ್ನು ಕಿತ್ತು ಹಾಕಿಸಿದ ಆ ಹೆಣ್ಣು ಮಗಳು ಕೊನೆಗೂ ಒಂದು ಸೀರೆಯನ್ನು ಆರಿಸಲಾಗದೆ ಒದ್ದಾಡುತ್ತಿದ್ದಳು. ಆಕೆಗೆ ಸೀರೆ ತೋರಿಸುತ್ತಿದ್ದ ಅಂಗಡಿಯ ಕೆಲಸದವರು ಕೂಡ ಬೇಸತ್ತಿದ್ದರು. ಚಿನ್ನದ ಅಂಗಡಿಗೆ ಹೋದ ಹೆಣ್ಣುಮಗಳು ಅಲ್ಲಿರುವ ತರಹೇವಾರಿ ಡಿಸೈನ್ಗಳನ್ನು ನೋಡಿ ಯಾವುದನ್ನು ಆರಿಸಿಕೊಳ್ಳಬೇಕು ಎಂದು ಗಲಿಬಿಲಿಗೊಂಡಳು. ಬಟ್ಟೆ ಅಂಗಡಿಗೆ ಹೋದ ಆ ಯುವಕ ತನಗೆ ಬೇಕಾದ ಬಟ್ಟೆ ಆರಿಸಲು ಬಹಳ ಸಮಯ ವ್ಯಯಿಸಿದ. ಮೊಬೈಲ್ ಮುಂತಾದ ಎಲೆಕ್ಟ್ರಿಕ್ ಗ್ಯಾಜೆಟ್ಗಳನ್ನು ಆರಿಸುವಾಗಲು ಅಷ್ಟೇ ಗಂಡು ಹುಡುಗರು ವಿಪರೀತ ಸಮಯ ತೆಗೆದುಕೊಳ್ಳುತ್ತಾರೆ ಇಲ್ಲವೇ ಹೊಯ್ದಾಡುತ್ತಾರೆ. ಇನ್ನು ಕೆಲ ಹೆಣ್ಣು ಮಕ್ಕಳು ಪ್ರತಿದಿನ ಮುಂಜಾನೆ, ಮಧ್ಯಾಹ್ನ ಮತ್ತು ರಾತ್ರಿಗೆ ಏನು ಅಡುಗೆ ಮಾಡಬೇಕು ಎಂದು ಗೊಂದಲ, ಗಡಿಬಿಡಿಗಳಲ್ಲಿಯೇ ದಿನ ಕಳೆಯುತ್ತಾರೆ. ಬೇರೆಯವರನ್ನು ಕೇಳಿ ಉಪ್ಪು ಖಾರ ಹುಳಿ ಬಳಸುವ ಹೆಣ್ಣುಮಗಳಲ್ಲಿ ಬಹಳಷ್ಟು ಕಾಲ ಅಡುಗೆಗೆ ಬಳಸಬಹುದಾದ ಪದಾರ್ಥಗಳ ಕುರಿತು ಖಚಿತತೆ ಬರುವುದೇ ಇಲ್ಲ. ಕೆಲವೊಮ್ಮೆ ಮನೆಯಲ್ಲಿ ಅನಾರೋಗ್ಯ…

Read More

ಶಶಿಧರ್ ಕೋಸಂಬೆ ಕ್ಷಮೆ ಯಾಚನೆಗೆ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಆಗ್ರಹ ವಿಜಯಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವಿಕೆಯು, ಪ್ರಜಾಪ್ರಭುತ್ವದ ಜೀವಂತಿಕೆ ಲಕ್ಷಣವಾಗಿದ್ದು, ವ್ಯವಸ್ಥೆಯಲ್ಲಿಯ ಲೋಪ ದೋಷಗಳ ಬಗ್ಗೆ ಪ್ರಶ್ನಿಸಿ ತಿಳಿದುಕೊಂಡು, ಚರ್ಚಿಸಿ, ಅರ್ಥ ಮಾಡಿಕೊಂಡು ಮುಂದುವರಿಯುವುದು ಆರೋಗ್ಯಕರವಾದ ಲಕ್ಷಣ. ಆದರೆ ಪ್ರಶ್ನಿಸುವ ಸ್ವಾತಂತ್ರ್ಯವನ್ನೇ ಪ್ರಶ್ನಿಸಿ ಅಪಾರ್ಥ ಮಾಡಿಕೊಂಡು, ಹತಾಶೆಗೊಳಗಾಗಿ ಇನ್ನೊಬ್ಬರ ಮೇಲೆ ಆಧಾರರಹಿತವಾದ ಸುಳ್ಳು ಆರೋಪ ಮಾಡಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆಯ ವರ್ತನೆ ನೀಚತನದ ಪರಮಾವಧಿಯಾಗಿದೆ ಎಂದು ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಸಂಗಮೇಶ ಬಬಲೇಶ್ವರ ಅವರು ಶಶಿಧರ್ ಕೋಸಂಬೆ ಆರೋಪಗಳ ಕುರಿತಂತೆ ಅವರಿಗೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಿಗೆ ಸರಿಯಾದ ಸಮರ್ಪಕ ಉತ್ತರ ನೀಡದಿದ್ದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಬಬಲೇಶ್ವರ ಎಚ್ಚರಿಸಿದ್ದಾರೆ.ಮೊದಲನೆಯದಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅದರ…

Read More

ಕಾಂಗ್ರೆಸ್‌ ಸರ್ಕಾರ ಬುಡಮೇಲು ಮಾಡುವ ಉದ್ದೇಶ | ಸರ್ಕಾರ ಬುಡಮೇಲು ಮಾಡುವ ಹುನ್ನಾರ | ವಾಮಮಾರ್ಗದಲ್ಲಿ ಅಧಿಕಾರಕ್ಕೇರುವ ಯತ್ನ ಬೆಂಗಳೂರು: “ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ” ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು, “ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.“ಹಗರಣದಲ್ಲಿ ಸಿಎಂ-ಡಿಸಿಎಂ ಸಹ ಭಾಗಿಯಾಗಿದ್ದಾರೆ ಎಂದು ತಪ್ಪೊಪ್ಪಿಗೆ ನೀಡಿ, ಇಲ್ಲದಿದ್ದರೆ ನಿಮಗೆ ಇಡಿ ಪವರ್‌ ಗೊತ್ತಿಲ್ಲ. ಆಮೇಲೆ ನೀವು ಕಷ್ಟಕ್ಕೆ ಸಿಲುಕುತ್ತೀರಿ ಎಂದು ವಿಚಾರಣೆ ವೇಳೆ ಹೆದರಿಸುವ…

Read More

ಬಬಲೇಶ್ವರ: ಕನ್ನಡ ಸಾಹಿತಿ ಶಂ ಗು ಬಿರಾದಾರ, ಸಾಹಿತಿ ಮ. ಗು ಬಿರಾದಾರ ಮನೆತನದ ಪ್ರಗತಿಪರ ರೈತ ರಾಜುಗೌಡ ಚಂದ್ರಶೇಖರ ಬಿರಾದಾರ ಎಸ್.ಎಸ್.ಎಲ್.ಸಿ ವರೆಗೆ ಶಿಕ್ಷಣ ಮುಗಿಸಿ ತಮ್ಮ ೧೫ ಎಕರೆ ಜಮೀನಿನಲ್ಲಿ ಕೃಷಿ ಜೊತೆ ವಿವಿಧ ಲಾಭವನ್ನು ಪಡೆಯುವುದರ ಜೊತೆಗೆ ಈ ಭಾಗದ ಯುವ ರೈತರಿಗೆ ತಮ್ಮ ನಗುಮುಖದಿಂದಲೇ ಯಾವುದೇ ಜಾತಿ ಮತ ಅನ್ನದೇ ಎಲ್ಲರನ್ನು ಗೌರವಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ,ಕೃಷಿಯಲ್ಲಿ ತಾವೇ ಸ್ವತಃ ತಮ್ಮ ಕುಟುಂಬದವರು ಸೇರಿಕೊಂಡು ಕೆಲಸ ಮಾಡುತ್ತಿರುವುದರಿಂದ ಇಂದಿನ ಕೂಲಿಕಾರ್ಮಿಕರು ಸಿಗದೇ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ರೈತರಿಗೆ ಇವರ ತಾಯಿ ಪಾರ್ವತಿಬಾಯಿ, ಸಹೋದರಿಯಾದ ರೂಪಾ ಜಂಗಮಶೆಟ್ಟಿ ಹಾಗೂ ಧರ್ಮಪತ್ನಿಯಾದ ಶ್ವೇತಾ ಬಿರಾದಾರ ಅವರು ಕೂಡಾ ಇವರ ಜೊತೆ ಹೆಗಲಿಗೆ ಹೆಗಲಾಗಿ ದುಡಿಯುತ್ತಿರುವುದರಿಂದ ಸಾಕಷ್ಟು ಹಣ ಉಳಿತಾಯವಾಗುತ್ತಿದೆ ಎನ್ನುತ್ತಾರೆ ಅವರ ತಾಯಿ.ಬೀಜದ ಹೋರಿಗಳಾದ ರಾಮೆ ಎಂಬ ಹೆಸರಿನ ಮಹಾರಾಷ್ಟ್ರದ ತಳಿ ಮತ್ತು ಸಾರಂಗ ಎಂಬ ಕರ್ನಾಟಕದ ಹೋರಿಗಳನ್ನು ಸಾಕಿ ಪ್ರತಿದಿನ ಸುತ್ತಮುತ್ತಲಿನ ಸುಮಾರು ೧೦ ಹಳ್ಳಿಗಳಿಂದ ಆಕಳುಗಳನ್ನು ಕಟ್ಟಿಸಲು…

Read More

ವಿಜಯಪುರದ ಡಿಡಿಪಿಯು ಡಾ. ಸಿ.ಕೆ.ಹೊಸಮನಿ ಆರ್.ಡಿ.ಪಾಟೀಲ ಪಿಯು ಕಾಲೇಜಿಗೆ ಅನಿರೀಕ್ಷಿತ ಭೇಟಿ ಸಿಂದಗಿ: ಕಾಲೇಜು ಅಭಿವೃದ್ಧಿ ಕೆಲಸ ಕಾರ್ಯ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೇ ನಮಗೆಲ್ಲ ಮುಖ್ಯ ಧ್ಯೇಯವಾಗಬೇಕು ಎಂದು ವಿಜಯಪುರದ ಡಿಡಿಪಿಯು ಡಾ. ಸಿ.ಕೆ.ಹೊಸಮನಿ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಅನಿರೀಕ್ಷಿತ ಭೇಟಿ ನೀಡಿ ಆಡಳಿತಾತ್ಮಕ ದಾಖಲೆಗಳನ್ನು ಪರೀಶೀಲಿಸಿ ಅವರು ಮಾತನಾಡಿದರು.ಏಕಾಗ್ರತೆಯಿಂದ ಪಾಠ, ಪ್ರವಚನಗಳಿಗೆ ಹೆಚ್ಚಿನ ಒತ್ತು ಗುರುವೃಂದ ನೀಡಿದಾಗ ವಿದ್ಯಾರ್ಥಿಗಳು ಸಾಧನೆಯ ನಡೆಯಲ್ಲಿ ಹೆಜ್ಜೆಯಿರಿಸಲು ಸಾಧ್ಯ. ಗುರಿಸಾಧನೆಗೆ ಏಕಚಿತ್ತದ ಹಂಬಲ ಇರಬೇಕು ಅಂದಾಗ ಭವಿಷ್ಯತ್ತಿನ ಗುರಿ ತಲುಪಲು ಯುವ ಪೀಳಿಗೆಗೆ ಸಾಧ್ಯ. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶೈಕ್ಷಣಿಕ ಭವಿಷ್ಯಕ್ಕೆ ಕಾರಣಕರ್ತರಾಗಬೇಕು. ಆ ನಿಟ್ಟಿನಲ್ಲಿ ಪಿಯು ಕಾಲೇಜ ಉಪನ್ಯಾಸಕರು ಹೃದಯದಿಂದ ಶ್ರಮಿಸಬೇಕು. ಶೈಕ್ಷಣಿಕ ಪ್ರಗತಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯೊಂದಿಗೆ ಜೊತೆಯಾಗಿ ನಿಂತು ಸಹಕರಿಸಬೇಕು ಎಂದರು.ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ವಿಶೇಷ ಪಾಠ, ಯೋಜನಾ ಕ್ರಮಗಳ ಮಾಹಿತಿ ಪಡೆದರು. ಫಲಿತಾಂಶ…

Read More

ಚಿಮ್ಮಡ ಗಾಪಂ | ನಿನ್ನೆ ಕಾಂಗ್ರೆಸ್ ಇಂದು ಬಿಜೆಪಿ | ಗ್ರಾಂ.ಪಂ. ಸದಸ್ಯನ ಜಿಗಿದಾಟ – ಇಲಾಹಿ ಇ. ಜಮಖಂಡಿಚಿಮ್ಮಡ: ರಬಕವಿ- ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ನಡುವೆ ತೀವ್ರ ಹಗ್ಗ ಜಗ್ಗಾಟ ಶುರುವಾಗಿದ್ದು ಅಂತಿಮವಾಗಿ ಯಾರ ಕೈ ಮೇಲಾಗುವುದೋ ಕಾಯ್ದು ನೋಡಬೇಕಾಗಿದೆ.ಇಲ್ಲಿನ ಗ್ರಾಮ ಪಂಚಾಯತಿಗೆ ಹಾಲಿ ಅಧ್ಯಕ್ಷರಾಗಿರುವ ಶ್ರೀಮತಿ ಮಾಲಾ ಅಶೋಕ ಮೋಟಗಿ ತಮ್ಮ ಬೆಂಬಲಿಗ ಸದಸ್ಯರ ನಡುವೆ ಮಾಡಿಕೊಂಡ ಒಪ್ಪಂದದಂತೆ ಕಳೆದ ಹದಿನೈದು ದಿನಗಳ ಹಿಂದೆ ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೊಂಡ ರವರಿಗೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು.ನಂತರ ನಡೆದ ಬೆಳವಣಿಗೆಯಲ್ಲಿ ರಾಜಿನಾಮೆಯನ್ನು ಹಿಂಪಡೆದು ಪತಿ ಅಶೋಕ ಮೋಟಗಿಯವರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡರು.ಇಪ್ಪತ್ತೆಂಟು ಸದಸ್ಯಬಲದ ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಹನ್ನೊಂದು ತಿಂಗಳ ಹಿಂದೆ ಬಿಜೆಪಿ ಬೆಂಬಲಿತ ೧೯ ಸದಸ್ಯರ ಬೆಂಬಲದೊಂದಿಗೆ ಶ್ರೀಮತಿ ಮಾಲಾ ಅಶೋಕ ಮೋಟಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ೧೯/೯ ಪರ, ವಿರೋಧ ಬಲವಿರುವ ಇಲ್ಲಿನ ಪಂಚಾಯತಿಯಲ್ಲಿ ದಿನಕ್ಕೊಂದು…

Read More