Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮಕ್ಕೆ ಐವರು ಸ್ವಿಪ್ಟ್ ಕಾರಿನಲ್ಲಿ ಜುಲೈ ೮ ರಂದು ರಾತ್ರಿ ಹೋಗುವಾಗ ಮಾರ್ಗಮಧ್ಯ ರಸ್ತೆ ಬದಿಯಲ್ಲಿರುವ ಪೂಟ್ ಕಟ್ಟೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಒರ್ವ ಗಂಭೀರ ಗಾಯಗೊಂಡು, ಇನ್ನಿಬ್ಬರಿಗೆ ಗಾಯಗೊಂಡ ಘಟನೆ ಜರುಗಿತ್ತು. ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಕುಡಿದ ಮತ್ತಿನಲ್ಲಿ ಖುಷಿಯಲ್ಲಿ ತೇಲಾಡುತ್ತಿದ್ದಾಗ ಕಾರು ಅಪಘಾತವಾಗುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.ಬಸವನಬಾಗೇವಾಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿಕೊಂಡು ರಾತ್ರಿ ಕಾರಿನಲ್ಲಿ ತಮ್ಮ ಇಂಗಳೇಶ್ವರ ಗ್ರಾಮಕ್ಕೆ ತೆರಳುವಾಗ ಕಾರಿನ ಮುಂಭಾಗ ಕುಳಿತುಕೊಂಡಿದ್ದ ಮಾಳಪ್ಪ ಡೋಳಗೊಂಡ ಅವರು ಮೊಬೈಲ್ನಲ್ಲಿ ಕಾರಿನ ಮುಂಭಾಗ ರಸ್ತೆಯ ವಿಡಿಯೋ ಚಿತ್ರೀಕರಣ ಮಾಡುವಾಗ ಹೇಂಗಿದ್ದಿ ಹೆಂಗ್ಯಾದಿ, ಕುಡುಕ ಕುಡುಕ ಅಂತ ಕರಿಯಬ್ಯಾಡ ನೀನ ಅನ್ನೊ ಲವ್ ಫೇಲ್ಯೂರ್ ಹಾಡು ಹಾಕಿಕೊಂಡು ಕಾರಿನಲ್ಲಿ ಕಾರಿನಲ್ಲಿದವರು ಹಾಡಿಗೆ ಧ್ವನಿಗೂಡಿಸಿದ ಸಂದರ್ಭದಲ್ಲಿ ಒವರ್ ಸ್ಪೀಡ್ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪೂಟ್ ಕಟ್ಟೆಗೆ ಡಿಕ್ಕಿ ಹೊಡೆದ ದೃಶ್ಯ ವೈರಲ್ ಆಗಿದೆ.…
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಜುಲೈ ೧೯ ರಂದು ಬೆಳಗ್ಗೆ ೧೧ ಗಂಟೆಗೆ ಅಖಂಡ ಕರ್ನಾಟಕ ರೈತಸಂಘದ ನೇತೃತ್ವದಲ್ಲಿ ತಾಲೂಕಿನ ನಾಗರಾಳಹುಲಿ ಗ್ರಾಮದ ರೈತ ಕುಟುಂಬ ಸೇರಿದಂತೆ ಜಮೀನಿಗೆ ದಾರಿ ಬೇಕಾದ ರೈತರೊಂದಿಗೆ ಜಮೀನು ದಾರಿಗಾಗಿ ಕಾನೂನು ತಿದ್ದುಪಡಿ ಸರ್ಕಾರ ಮಾಡಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ರೈತ ಬಾಂಧವರು ತಮ್ಮ ತಮ್ಮ ಜಮೀನುಗಳಿಗೆ ಹೋಗಲು ಮುಂದಿನ ರೈತಬಾಂಧವರು ದಾರಿ ಕೊಡಲು ತಕರಾರು ಮಾಡುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಕೆಲ ರೈತ ಬಾಂಧವರಿಗೆ ಜಮೀನು ಬಿತ್ತನೆ ಮಾಡದೇ ಜಮೀನು ಪಾಳು ಬೀಳುವಂತಹ ಪರಿಸ್ಥಿತಿ ಎದುರಾಗುತ್ತಿದೆ.ರಾಜ್ಯದಲ್ಲಿ ಅನೇಕ ರೈತರು ಜಮೀನು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ಈಗ ನಡೆಯುತ್ತಿರುವ ಅಧಿವೇಶನದಲ್ಲಿ ರೈತರ ಜಮೀನು ದಾರಿ ಸಮಸ್ಯೆ ಚರ್ಚಿಸಿ ಜಮೀನುಗಳಿಗೆ ಹೋಗಲು ದಾರಿ ಕುರಿತು ಕಾನೂನು ತಿದ್ದುಪಡಿ ಮಾಡಿ ತಹಸೀಲ್ದಾರರಿಗೆ ದಾರಿ…
ಬಸವನಬಾಗೇವಾಡಿ: ಸುಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮದ್ಯವ್ಯಸನಿಗಳನ್ನು ಮದ್ಯದಿಂದ ದೂರಮಾಡುವ ಸದುದ್ದೇಶದಿಂದ ವಿನೂತನವಾಗಿ ಮದ್ಯವರ್ಜನ ಶಿಬಿರವನ್ನು ಆಯೋಜನೆ ಮಾಡುವ ಮೂಲಕ ಮದ್ಯವ್ಯಸನಿಗಳು ಮದ್ಯದಿಂದ ದೂರ ಮಾಡುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಹೇಳಿದರು.ತಾಲೂಕಿನ ಯರನಾಳ ಗ್ರಾಮದ ವಿರಕ್ತಮಠದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ,ಧರ್ಮಸ್ಥಳದ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಒಂದು ವಾರ ಕಾಲ ಹಮ್ಮಿಕೊಂಡಿರುವ ೧೮೨೩ ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಇದುವರೆಗೂ ಯಾರೂ ಮಾಡದೇ ಇರುವ ವಿಶೇಷವಾದ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಮಾಡುವ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ. ಮದ್ಯಪಾನದಿಂದ ಅನೇಕ ಕುಟುಂಬಗಳು ಬೀದಿಗೆ…
ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ಮುಖ್ಯರಸ್ತೆಯಲ್ಲಿರುವ ಹಳೆ ನ್ಯಾಯಾಲಯ ಎದುರಿನ ಪಾದಚಾರಿ(ಪುಟ್ಪಾತ) ರಸ್ತೆಯ ಮೇಲಿರುವ ಬೀದಿ ಅಂಗಡಿಗಳನ್ನು ಪುರಸಭೆಯಿಂದ ತೆರವು ಗೊಳಿಸುವ ಕಾರ್ಯಾಚರಣೆ ಮಂಗಳವಾರ ಬೆಳ್ಳಂಬೆಳಗ್ಗೆ ಆರಂಭವಾಯಿತು. ನಂತರ ಜನರ ವಿರೋಧದಿಂದಾಗಿ ಅಧಿಕಾರಿಗಳು ಶುಕ್ರವಾರ ಕಾರ್ಯಾಚರಣೆ ಮುಂದೂಡಿದ ಘಟನೆ ಜರುಗಿತು.ಹಳೆಯ ನ್ಯಾಯಾಲಯದ ಎದುರುಗಡೆ ಇದ್ದ ಎರಡು ಬೀದಿ ಬದಿಯ ಅಂಗಡಿಗಳನ್ನು ಜೆಸಿಬಿಯಿಂದ ತೆರವುಗೊಳಿಸಲಾಯಿತು. ನಂತರ ತಾಲೂಕು ಪಂಚಾಯಿತಿ ಎದುರಿಗೆ ಇದ್ದ ಎರಡು ಅಂಗಡಿಗಳನ್ನು ಪುರಸಭೆ ಜೆಸಿಬಿಯಿಂದ ತೆರವುಗೊಳಿಸಲಾಯಿತು.ಬೀದಿ ಬದಿಯ ಅಂಗಡಿಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ಸುದ್ದಿ ತಿಳಿಯುತ್ತಿದ್ದಂತೆ ಬೀದಿ ಬದಿಯ ವ್ಯಾಪಾರಸ್ಥರು ಸೇರಿದಂತೆ ಸಾರ್ವಜನಿಕರು ಕಾರ್ಯಾಚರಣೆ ನಡೆಯುವ ಸ್ಥಳಕ್ಕೆ ಬಂದರು. ಸ್ಥಳಕ್ಕೆ ಆಗಮಿಸಿದ್ದ ಪುರಸಭೆ ಹಿರಿಯ ಸದಸ್ಯ ನೀಲಪ್ಪ ನಾಯಕ ಅವರು ಪುರಸಭೆ ಮುಖ್ಯಾಧಿಕಾರಿಗಳಿಗೆ ಯಾಕೆ ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡುತ್ತಿದ್ದೀರಿ. ನಿಮ್ಮ ಹತ್ತಿರ ಯಾವ ಆದೇಶವಿದೆ. ಒಮ್ಮೆಲೆ ಈ ರೀತಿಯಾಗಿ ಅಂಗಡಿಗಳನ್ನು ತೆರವು ಗೊಳಿಸಬಾರದು ಎಂದು ಅಧಿಕಾರಿಗಳೊಂದಿಗೆ ವಾಗ್ವಾದ ಮಾಡಿದರು. ಇವರೊಂದಿಗೆ ಕೆಲ ಸಾರ್ವಜನಿಕರು ಜೊತೆಯಾದರು. ಕೆಲ ಹೊತ್ತು ಗೊಂದಲದ…
-ಮಲಿಕ್. ಎಲ್. ಜಮಾದಾರ ಉಪನ್ಯಾಸಕರು, ಲೇಖಕರು ವಿಜಯಪುರ. ಮೊ:9743129744 ಇಂದು ಮೊಹರಂ ಹಬ್ಬದ ಪ್ರಯುಕ್ತ ವಿಶೇಷ ಲೇಖನ ಭಾರತೀಯ ಸಂಸ್ಕೃತಿಯು ಜಗಮೆಚ್ಚುವಂಥದ್ದು ಅಂತಹ ಪವಿತ್ರ ದೇಶ ನಮ್ಮದು. ವಿವಿಧತೆಯಲ್ಲಿ ಏಕತೆಯ, ಭಾವೈಕ್ಯತೆಯ, ಸಾಂಸ್ಕೃತಿಕ, ಸಾಂಪ್ರದಾಯಿಕ ಹಿನ್ನೆಲೆಯ ನೆಲೆಬೀಡಾಗಿದ್ದು ಅದು ವಿಶೇಷವಾಗಿ ಹಲವು ಧರ್ಮಗಳ ವಿವಿಧ ಆಚರಣೆಗಳಾಧಾರಿತವಾದ ಹಬ್ಬ ಹರಿದಿನಗಳು ನಾವು ಕಾಣುತಿದ್ದೇವೆ.ಇಸ್ಲಾಮಿಕ್ ನ ಹೊಸ ವರ್ಷವೆಂದು ಕರೆಯಲ್ಪಡುವ ‘ಮೊಹರಂ’ ಎಂಬ ಪವಿತ್ರ ತಿಂಗಳು ಅದು ಅಮವಾಸ್ಯೆ ದೃಶ್ಯದೊಂದಿಗೆ ಇಸ್ಲಾಮಿಕ್ನ ಪ್ರಸ್ತುತದಲ್ಲಿ ಹಿಜರಿ ಸನ್ ೧೪೪೬ ನೇ ಮೊಹರಂ ಇಸ್ಲಾಮಿಕ್ ಕ್ಯಾಲೆಂಡರ್ ಈ ತಿಂಗಳಿನಿಂದ ಪ್ರಾರಂಭ. ಪ್ರಾರಂಭದ ಹತ್ತು ದಿನಗಳ ಕಾಲ ಆಚರಿಸುವ ಈ ಹಬ್ಬವು ಶೋಕವನ್ನು ಒಳಗೊಂಡಿರುವಂಥದ್ದು.ಮೊಹರಂ ಐತಿಹಾಸಿಕ ಹಿನ್ನೆಲೆ: ಮೊಹರಂ ಎಂಬ ಹಬ್ಬವು ಸುನ್ನಿ ಮತ್ತು ಶಿಯಾ ಮುಸ್ಲಿಂ ಪಂಗಡಗಳು ವಿಭಿನ್ನವಾಗಿ ಆಚರಿಸುತ್ತಾರೆ. ಪ್ರವಾದಿ ಮೊಹಮ್ಮದ ಅವರ ಮೊಮ್ಮಗ ಹುಸೇನ್ ಇಬ್ನ ಅಳಿಯ ಕೊಲೆಯ ಅವರ ಸಾವಿನ ರೋಚಕತೆ ಒಳಗೊಂಡಿರುವ ಇತಿಹಾಸ ಇದಾಗಿದೆ. ಮೊಹರಂ ಎಂಬುದು ಒಂದು ಇಸ್ಲಾಮಿಕ್ ಧರ್ಮದ…
೨ನೇ ಅವಧಿಗೆ ಘೋಷಣೆಯಾಗದ ಮೀಸಲು | ಏ೨೮ಕ್ಕೆ ಮುಗಿದ ಆಡಳಿತ ಮಂಡಳಿ ಮೊದಲ ಅವಧಿ – ಶಂಕರ್ ಜೆ ಎಮ್ಇಂಡಿ: ನಿರಾಸೆಯಲ್ಲಿ ಪುರಸಭೆ ಸದಸ್ಯರಿದ್ದರೆ, ಆಕ್ರೋಶದಲ್ಲಿ ನಗರ ನಿವಾಸಿಗಳು ಇದ್ದಾರೆ. ಹೌದು ಪುರಸಭೆ ಆಡಳಿತ ಮಂಡಳಿ ರಚನೆ ಇಲ್ಲದ ಕಾರಣಕ್ಕೆ ಪುರಸಭೆ ಸದಸ್ಯರು ವಾರ್ಡಗಳಲ್ಲಿ ಮತ್ತು ಸಾರ್ವಜನಿಕರ ಕೆಲಸಗಳನ್ನು ಮಾಡಲು ಅನಾನುಕೂಲ ಉಂಟಾಗಿದೆ ಎಂಬ ಬೇಸರದಲ್ಲಿದ್ದರೆ, ಇನ್ನೊಂದು ಕಡೆ ಭರವಸೆಯಿಟ್ಟು ಸದಸ್ಯರನ್ನ ಆಯ್ಕೆ ಮಾಡಿದ್ದೇವೆ. ಆದರೆ ವಾರ್ಡಗಳಲ್ಲಿ ಸದಸ್ಯರು ಕೆಲಸ ಮಾಡುತ್ತಿಲ್ಲ ಎಂಬ ವಿಚಾರದಲ್ಲಿ ಆಕ್ರೋಶದಲ್ಲಿ ನಗರ ನಿವಾಸಿಗಳು ಇದ್ದಾರೆ. ಇದು ಭವಿಷ್ಯದ ಜಿಲ್ಲಾ ಕೇಂದ್ರದ ಕನಸು ಕಾಣುತ್ತಿರುವ ಇಂಡಿ ಪುರಸಭೆಯ ಕಥೆ-ವ್ಯಥೆ!ಇಂಡಿ ಪುರಸಭೆ ಆಡಳಿತ ಮಂಡಳಿಯ ಮೊದಲ ಅವಧಿ ಮುಕ್ತಾಯವಾಗಿದ್ದು, ಮುಂದಿನ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಆಗಬೇಕಿದೆ. ಎರಡನೇ ಅವಧಿಗೆ ಮೀಸಲು ನಿಗದಿಯಾಗದ ಕಾರಣ ಸದ್ಯಕ್ಕೆ ನೂತನ ಆಡಳಿತ ಮಂಡಳಿ ರಚನೆಯಾಗುವುದು ಅನುಮಾನ ಎಂಬಂತಾಗಿದೆ.ಪುರಸಭೆ ಆಡಳಿತ ಮಂಡಳಿಯ ಮೊದಲ ಅವಧಿ ಏ.೨೮ಕ್ಕೆ ಕೊನೆಗೊಂಡಿದೆ. ಆ ಮೂಲಕ ಶೈಲಜಾ ಪೂಜಾರಿ,…
ವಿಜಯಪುರ: ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದ ನಿಗಮದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕಾನೂನು ಶಿಸ್ತು ಕ್ರಮ ಜರುಗಿಸಿ ಮರಳಿ ನಿಗಮಕ್ಕೆ ವಿನಿಯೋಗ ಮಾಡಬೇಕು,ಪ್ರತಿ ವರ್ಷ ಸರಕಾರದ ವತಿಯಿಂದ ಪ. ಜಾತಿ /ಪ. ಪಂಗಡ ಸಮುದಾಯದ ಜನರಿಗೆ ಅಂಬೇಡ್ಕರ್ ಅವರ ನಿಗಮದಿಂದ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳು ಒಳಗೊಂಡ ಅರ್ಜಿ ಕರೆಯಲಾಗುತ್ತದೆ. ಪ್ರತಿ ವರ್ಷ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತಾಗಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡದ ವಾಲ್ಮೀಕಿ ರಾಜ್ಯ ಯುವ ಘಟಕದ ಜಿಲ್ಲಾಧ್ಯಕ್ಷರಾದ ಅಮರೇಶ್ ಉಪ್ಪಳದ್ದಿನಿಯವರು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರವಾಗಿದೆ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ನಿಗಮ ಇರುವದು ಬಡಜನರ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸಿಗುವ ಅನುದಾನ ತುಂಬಾ ಕಡಿಮೆ ಮಾಡಲಾಗಿದೆ ಅನುದಾನದಲ್ಲಿ ಕನಿಷ್ಠ20%…
ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರ ವಿಜಯಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮನೋಭಾವ ಬೆಳೆಸಿ ಅವರನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಭಾರತ ಸೇವಾದಳ ಶ್ರಮಿಸುತ್ತಿದೆ ಎಂದು ಡಾ,ಅಶೋಕ್ ಜಾದವ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಮಂಗಳವಾರದಂದು ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ನಂಬರ್- ೨೪ ರಲ್ಲಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗಾಗಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಬೆಳೆಸುವಲ್ಲಿ ಭಾರತ ಸೇವಾದಳ ಸಹಕಾರಿಯಾಗಿದೆ. ಗಾಂಧೀಜಿಯವರ ತತ್ವ ಆದರ್ಶಗಳನ್ನು ಮುಂದಿಟ್ಟುಕೊಂಡು ಧೈರ್ಯ, ಸಂಯಮ, ತ್ಯಾಗಮನೋಭಾವನೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಕೆಲಸವನ್ನು ಭಾರತ್ ಸೇವಾದಳ ಮಾಡುತ್ತಿದೆ. ಯುವ ಜನಾಂಗವನ್ನು ಈ ದೇಶದ ಸಂಪತ್ತಾಗಿ ಮಾಡುವಲ್ಲಿ ಸೇವಾದಳದ ಕಾರ್ಯ ಶ್ಲಾಘನೀಯ ಎಂದರು.ಜೀವನದಲ್ಲಿ ಯಶಸ್ಸು ಸಿಗಬೇಕಾದರೆ ನಮ್ಮಲ್ಲಿ ಪರಿಶ್ರಮ…
ಸೇತುವೆಯ ಕಂಬಗಳಲ್ಲಿ ಇಳಿಯುತ್ತಿರುವ ನೀರು | ಸೇತುವೆ ಮೇಲೆ ಗುಂಡಿಗಳು | ಕಂಬಗಳು ಶಿಥಿಲಗೊಳ್ಳುವ ಸಂಭವ – ಗುರು ಆರ್.ಹಿರೇಮಠ (ದೇವಣಗಾಂವ)ಆಲಮೇಲ: ವಿಜಯಪುರ, ಕಲ್ಬುರ್ಗಿ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ ದೇವಣಗಾಂವ ಸೇತುವೆ ಇದೀಗ ಕುಸಿದು ಬೀಳುವ ಭೀತಿ ಎದುರಾಗಿದೆ.ಕಳೆದ ಹಲವು ವರ್ಷಗಳಿಂದ ಲೋಕೋಪಯೋಗಿ ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿರುವ ಈ ಸೇತುವೆ ರಿಪೇರಿಯಾಗದೆ ಮೇಲ್ಬಾಗದಲ್ಲಿ ಮಳೆಯ ನೀರು ನಿಂತು ಸೇತುವೆಯ ಕಂಬಗಳಲ್ಲಿ ನೀರು ಇಳಿಯುತ್ತಿದೆ. ಆದ್ದರಿಂದ ಕಂಬಗಳು ಶಿಥಿಲವಾಗುವ ಹಂತ ತಲುಪಿದೆ ಇದು ಹೀಗೆ ಮುಂದುವರೆದರೆ ಕಲ್ಲಿನ ಕಂಬಗಳಲ್ಲಿ ಒಂದೇ ಕಲ್ಲು ಸರಿದು ಹೋದರೆ ಸಾಕು ಶಿಥಿಲವಾಗುವ ಹಂತ ಹೆಚ್ಚಾಗುತ್ತದೆ.ಸದ್ಯ ಸೇತುವೆ ತುಂಬ ಹೊಂಡಗಳು ನಿರ್ಮಾಣವಾಗಿ ಸೇತುವೆ ಮೇಲ್ಭಾಗದ ತುಂಬಾ ನೀರು ನಿಂತು ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಮೊಳಕಾಲು ಉದ್ಧದ ಗುಂಡಿಗಳು ತುಂಬಿಕೊಂಡಿವೆ.ಸೇತುವೆಯ 2 ಭಾಗದ ತಡೆಗೋಡೆಗಳು ಶಿಥಿಲಾವಸ್ತೆಯಲ್ಲಿದ್ದು ಅವುಗಳು ಕೂಡ ಅಪಾಯಕ್ಕೆ ಆಹ್ವಾನ ನೀಡುತ್ತಿವೆ1960 ರಲ್ಲಿ ಪ್ರಾರಂಭಗೊಂಡು 1963 ರಲ್ಲಿ ಉದ್ಘಾಟನೆಗೊಂಡಿರುವ ಈ ಸೇತುವೆ ಜಿಲ್ಲೆಯ ಅತಿ ಹಳೆಯ ಸೇತುವೆ…
ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಅಭಿಮತ ವಿಜಯಪುರ: ಚುನಾವಣೆ ಮುಗಿದ ನಂತರ ಜನರು ಹಾಗೂ ಕಾರ್ಯಕರ್ತರನ್ನು ಮರೆಯುತ್ತೇನೆಂಬ ಭಾವನೆ ಬೇಡ, ಸಾಯುವವರೆಗೂ ನಿಮ್ಮ ಜೊತೆಗೆ ಇರುತ್ತೇನೆಂದು ಸಂಸದ ರಮೇಶ ಜಿಗಜಿಣಗಿ ಭಾವುಕರಾಗಿ ನುಡಿದರು.ಮಂಗಳವಾರ ನಗರದ ಸಾಯಿ ವಿಹಾರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ, ನೂತನ ಸಂಸದರಿಗೆ ಸನ್ಮಾನ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಳೆದ ೪೫ ವರ್ಷಗಳಿಂದ ಜಿಲ್ಲೆಯಲ್ಲಿ ರಾಜಕೀಯದಲ್ಲಿ ಯಾರೊಂದಿಗೂ ಕೆಟ್ಟದಾಗಿ ವ್ಯವಹರಿಸದೇ ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದರು.ಚುನಾವಣೆ ಸಂದರ್ಭ ಯಾರಿಗೂ ಒಂದು ನಯಾಪೈಸೆ ಕೊಡದೆ ಪುಕ್ಸಟ್ಟೆಯಾಗಿ ನಿಮ್ಮ ಬಳಿ ಕೆಲಸ ಮಾಡಿಸಿಕೊಂಡಿದ್ದೇನೆಯಾದರೂ ಮುಂದಿನ ೫ ವರ್ಷಗಳ ಕಾಲ ನಿಮ್ಮ ಕೆಲಸವನ್ನು ಯಾರಿಂದಲೂ ಏನು ಅಪೇಕ್ಷೆ ಪಡದೇ ನಿಮ್ಮ ಕೆಲಸವನ್ನು ಪುಕ್ಸಟ್ಟೆಯಾಗಿ ಮಾಡಿ ಕೊಡುವುದಾಗಿ ಹೇಳಿದರು.೨೦೦೪ ರಲ್ಲಿ ಬಿಜೆಪಿ ಸೇರಿದ ದಿನದಿಂದ ಇಂದಿನವರೆಗೂ ಪಕ್ಷಕ್ಕೆ ಪ್ರಾಮಾಣಿವಾಗಿದ್ದೇನೆ. ಆದರೆ ನನ್ನ ಅನುಭವ ಹಂಚಿಕೊಳ್ಳಲು ಪಕ್ಷದ ಮುಖಂಡರು ಮಾಡುತ್ತಿಲ್ಲ. ಅಧಿಕಾರದ ಬೇಕೆಂದು…
