Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಕ್ಕಳಲ್ಲಿ ಯಾವುದೇ ರೀತಿಯ ಭೇದಭಾವ ಸಲ್ಲದು. ಮಕ್ಕಳಿಗೆ ಅಡಿಪಾಯದ ಶಿಕ್ಷಣ ಬಹಳ ಮುಖ್ಯ ಎಂದು ಉತ್ತರ ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡರ್ ಹೇಳಿದರು.ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ಮಂಗಳವಾರ ಅಂಗನವಾಡಿ ಮಕ್ಕಳ ಸಮ್ಮೇಳನ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.ಬುಧವಾರ ಸ್ನೇಹಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ. ನಮ್ಮೆಲ್ಲರಿಗೂ ಮಕ್ಕಳೇ ದೇವರು ಮಕ್ಕಳಿಗಾಗಿ ಅವರ ಶಿಕ್ಷಣಕ್ಕಾಗಿ ನಾವೆಲ್ಲರೂ ಒಂದಾಗಬೇಕು. ಸಮುದಾಯದ ಸಹಕಾರ ಹಾಗೂ ಗ್ರಾಮದ ಸರ್ವರೂ ಕೂಡ ನಿಮ್ಮ ಜೊತೆಗಿರುತ್ತಾರೆ ಎಂದರು.ಸಾನಿಧ್ಯ ವಹಿಸಿದ ಮಂಜುನಾಥ ಹಿರೇಮಠ ಮಾತನಾಡಿ, ಪಾಲಕರು ಅಂಗನವಾಡಿಗಳ ಬಗ್ಗೆ ವಿಶೇಷ ಕಾಳಜಿ ಮತ್ತು ಒಳ್ಳೆಯ ಅಭಿಪ್ರಾಯ ಬೆಳೆಸಿಕೊಳ್ಳಬೇಕು. ಗ್ರಾಮದ ಶರಣಬಸು ಅಪ್ಪಾಸಾಹೇಬ ಬಸವರೆಡ್ಡಿ ಎಂಬುವರು ೨೦ ಲಕ್ಷ ರೂ. ಮೌಲ್ಯದ ಜಾಗವನ್ನು ಅಂಗನವಾಡಿ ಕಟ್ಟಡಕ್ಕೆ ಕೊಟ್ಟಿರುವುದು ಶ್ಲಾಘನೀಯ ಎಂದರು.ಸ್ನೇಹ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಗೌಡಪ್ಪ ಬಿರಾದಾರ ಮಾತನಾಡಿ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಅವಶ್ಯಕತೆ ಇದೆ ಎಂದರು.ಇದೇ ಸಂದರ್ಭದಲ್ಲಿ ಅಂಗನವಾಡಿ…

Read More

ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್.೧ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ,ಅಧಿಕಾರಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.ಕಚೇರಿ ಸಮಯ ಬದಲಾವಣೆ ಹಿನ್ನೆಲೆಯಲ್ಲಿ ಬುಧವಾರ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು. ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ದೈನಂದಿನ ಕಚೇರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಯಾವುದೇ ಸಿಬ್ಬಂದಿ ಯಾವುದೇ ಕಡತ:ವಹಿ ಬಾಕಿ ಉಳಿಸಿಕೊಳ್ಳದೇ ಕಾರ್ಯ ನಿರ್ವಹಿಸುವ ಮೂಲಕ ಕಡತಗಳನ್ನು ವಿಲೇವಾರಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.ಸಾರ್ವಜನಿಕರಿಗೆ ಸ್ಪಂದಿಸಿ: ತಮ್ಮ ಎಂದಿನ ಕೆಲಸ ಕಾರ್ಯಗಳಿಗೆ ಆಯಾ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಳವಾಡ ಏತ ನೀರಾವರಿ ವೃತ್ತ ಟಕ್ಕಳಕಿ ಅಡಿ ಬರುವ ಕಾಲುವೆ ಜಾಲಕ್ಕೆ ೨೦೨೫-೨೬ರ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಹರಿಸುವ ಅವಧಿಯನ್ನು ಏ.೧ ರಿಂದ ಏ.೭ರವರೆಗೆ ವಿಸ್ತರಿಸಲಾಗಿದೆ ಎಂದು ಕೆಬಿಜೆಎನ್‌ಎಲ್ ಮುಳವಾಡ ಏತ ನೀರಾವರಿ ಯೋಜನೆಯ ಟಕ್ಕಳಕಿ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.೨೦೨೫-೨೬ನೇ ಸಾಲಿನ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಳವಾಡ ಏತ ನೀರಾವರಿ ವೃತ್ತ ಟಕ್ಕಳಕಿ ಅಡಿಯಲ್ಲಿ ಬರುವ ಹಂತ-೨ ರ ಪೂರ್ವ ಮತ್ತು ಪಶ್ಚಿಮ ಕಾಲುವೆ, ಸೊನ್ನ ಏತ ನೀರಾವರಿ, ರೊಳ್ಳಿ ಮನ್ನೀಕೇರಿ ಏತ ನೀರಾವರಿ ಮತ್ತು ತೆಗ್ಗಿ ಸಿದ್ದಾಪೂರ ಏತ ನೀರಾವರಿ ಯೋಜನೆಗಳ ಕಾಲುವೆ ಜಾಲಕ್ಕೆ ಹಿಂಗಾರು ಹಂಗಾಮಿಗೆ ದಿನಾಂಕ: ೦೨-೧೨-೨೦೨೫ ರಿಂದ ೦೩-೦೪-೨೦೨೬ ರವರೆಗೆ ೧೪ ದಿನ ಚಾಲೂ ಹಾಗೂ ೧೦ ದಿನ ಬಂದ ಅನುಸರಿಸಿ ಒಟ್ಟು ೧೨೩ ದಿನಗಳವರೆಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ವಜ್ರ ಹನುಮಾನ ದೇವಸ್ಥಾನದ ಸೇವಾ ಸಮಿತಿ ಆಶ್ರಯದಲ್ಲಿ ಚೈತ್ರ ಮಾಸ ಪೂರ್ಣಿಮೆ ಪ್ರಯುಕ್ತ ಶ್ರೀ ಹನುಮಾನ ದೇವರ ಜಯಂತ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ಪಾಂಡು ಸಾಹುಕಾರ ದೊಡ್ಡಮನಿ ತಿಳಿಸಿದ್ದಾರೆ.ಜಯಂತ್ಯೋತ್ಸವ ಅಂಗವಾಗಿ ಬೆಳಿಗ್ಗೆ 4 ಗಂಟೆಗೆ ಮಂಗಳವಾದ್ಯಗಳೊಂದಿಗೆ ಶ್ರೀ ಹನುಮಾನ ದೇವರಿಗೆ ವಿಶೇಷ ಅಲಂಕಾರ ಹಾಗೂ ಪಂಚಾಮೃತ ಅಭಿಷೇಕ ನೆರವೇರಿಸಲಾಗುತ್ತದೆ. ಬೆಳಿಗ್ಗೆ 6.22ಕ್ಕೆ ಶ್ರೀ ವಜ್ರ ಹನುಮಾನ್ ದೇವರನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಂಗಳಾರತಿ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ಜರುಗಲಿವೆ.ಮಧ್ಯಾಹ್ನ 12.30ಕ್ಕೆ ದೇವಸ್ಥಾನದ ಆವರಣದಲ್ಲಿ ಅನ್ನಪ್ರಸಾದ ಸೇವೆ ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿ ಅಧ್ಯಕ್ಷರು ಮನವಿ ಮಾಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಏಪ್ರಿಲ್ ೧೦ ರಿಂದ ೧೪ ವರೆಗೆ ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುಸ್ತಕ ಮೇಳದಲ್ಲಿ ಜಿಲ್ಲೆಯ ಜನರು, ಸಾಹಿತ್ಯಾಸಕ್ತರು, ಓದುಗರು ಪಾಲ್ಗೊಂಡು ಪುಸ್ತಕ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದರು.ಮೇ ಸಾಹಿತ್ಯ ಬಳಗದ ಚೆನ್ನು ಕಟ್ಟಿಮನಿ, ಸೋಮು ರಣದೇವಿ, ಶಿವರಾಜ ಕಟ್ಟಿಮನಿ, ಅಪ್ಪು ಚಿನಗುಂಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ಇಂಡಿ: ಸಾಮೂಹಿಕ ವಿವಾಹಗಳು ನಿರ್ಗತಿಕರ ಮದುವೆಗಳಲ್ಲ. ಅವು ಭಾಗ್ಯವಂತರ ಮದುವೆಗಳು ಇಂತಹ ವಿವಾಹ ಮಾಡಿಕೊಂಡವರೇ ಶ್ರೇಷ್ಠರು ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯ ಹೇಳಿದರು.ಅವರು ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಶ್ರೀ ಅಲ್ಲಮಪ್ರಭು, ಹನುಮ ಜಯಂತಿ ಹಾಗೂ ಗೈಬುಸಾಬ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸರಳ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.ಇಲ್ಲಿ ಮದುವೆಯಾಗುವ ವಧು ವರರಿಗೆ ಹರ ಗುರು ಚರಮೂರ್ತಿಗಳು, ಸಹಸ್ರಾರು ಜನ ಅಕ್ಷತೆ ಹಾಕಿ ಹರಸುತ್ತಾರೆ. ಇಂತಹ ಭಾಗ್ಯ ಬೇರೆಡೆ ಸಿಗುವುದಿಲ್ಲ. ಹೀಗಾಗಿ ಇವು ಭಾಗ್ಯವಂತರ ಮದುವೆಗಳು ಎಂದು ಹೇಳಿದರು.ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ನವದಂಪತಿಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೇರುವ ಶಪಥ ಮಾಡಬೇಕು.ನಿಮ್ಮ ಉದರದಿಂದ ಜನಿಸಿದ ಒಂದು ಮಗು ದೇಶ ಸೇವೆಗಾಗಿ, ಒಂದು ಮಗು ಧರ್ಮ ರಕ್ಷಣೆಗಾಗಿ, ಇನ್ನೊಂದು ಮಗು ಸಮಾಜದ ರಕ್ಷಣೆಗಾಗಿ ಮತ್ತೊಂದು ಮಗು ನಿಮ್ಮ ರಕ್ಷಣೆಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಲ್ಕು ಕಾರ್ಮಿಕ ಕಾಯಿದೆಗಳ ವಿರುದ್ದ ೨೦೨೫ರ ಏಪ್ರಿಲ್ ಒಂದರಂದು ಕರಾಳ ದಿನ ಆಚರಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಕ್ಷೇತ್ರೀಯ ಮಹಾಸಂಘಗಳು ಮತ್ತು ಸಂಘಗಳ ಜಂಟಿ ವೇದಿಕೆಯವರು ಕರೆ ನೀಡಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮುಂದೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ವತಿಯಿಂದ ಕರಾಳ ದಿನ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಿಐಟಿಯು ಸಂಚಾಲಕರಾದ ಲಕ್ಷ್ಮಣ ಹಂದ್ರಾಳ ಮಾತನಾಡಿ, ಏಪ್ರಿಲ್ ಒಂದರಂದೇ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕಾಗಿ ಕೇಂದ್ರ ನಿಯಮಗಳನ್ನು ಜಾರಿಗೆ ತರುವುದಾಗಿ ಘೋಷಿಸಿದೆ. ವ್ಯವಹಾರ ಮಾಡಲು ಸುಲಭತೆ ಎಂಬ ಹೆಸರಿನಲ್ಲಿ ಕಾರ್ಮಿಕ ವಿರೋಧಿ ಮತ್ತು ಮಾಲೀಕರ ಪರವಾದ ಈ ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ಸಂಘಟನೆಗಳು ನಿರಂತರವಾಗಿ ವಿರೋಧಿಸುತ್ತಿವೆ ಮತ್ತು ಅವನ್ನು ರದ್ದುಪಡಿಸುವಂತೆ ಆಗ್ರಹಿಸುತ್ತಿವೆ. ೨೦೨೬ರ ಫೆಬ್ರವರಿ ೧೨ರಂದು ನಡೆದ ಐತಿಹಾಸಿಕ ಸಾರ್ವತ್ರಿಕ ಮುಷ್ಕರದ ನಂತರವೂ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಯಾವುದೇ ಗಂಭೀರ ಚರ್ಚೆಗೆ ಮುಂದೆ ಬಂದಿಲ್ಲ ಕೂಡಲೇ ಕಾರ್ಮಿಕ ಕಾಯ್ದೆಯನ್ನು ವಾಪಸ್ಸು…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ಧೆ ಬೀಳ್ಕೊಡುಗೆ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಹನೆ, ಕಠಿಣ ಪರಿಶ್ರಮ, ತ್ಯಾಗ ಹಾಗೂ ಸಮರ್ಪಣಾ ಮನೋಭಾವಗಳನ್ನು ಅಳವಡಿಸಿಕೊಂಡವರು ಉತ್ತಮ ಆಡಳಿತಗಾರರಾಗಲು ಸಾಧ್ಯ ಎಂದು ಬಿಎಲ್‌ಡಿಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಆರ್.ವಿ.ಕುಲಕರ್ಣಿ ಹೇಳಿದರು.ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಾರ್ಚ.೩೧ ರಂದು ಹಮ್ಮಿಕೊಳ್ಳಲಾಗಿದ್ದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಆಡಳಿತಗಾರನ ಮೊದಲ ಗುಣ ಸಹನೆ. ಪ್ರೊಫೆಸರ್ ಆಗಬೇಕು, ಪ್ರಿನ್ಸಿಪಲ್ ಆಗಬೇಕು ಎನ್ನುವ ಕನಸು ಎಲ್ಲರಲ್ಲೂ ಇರುತ್ತದೆ. ಆದರೆ ಪ್ರಾಚಾರ್ಯ ಹುದ್ದೆ ನಿರ್ವಹಣೆ ಅಷ್ಟೊಂದು ಸುಲಭವಾದದ್ದಲ್ಲ. ನಾವು ಆಡಳಿತ ಮಾಡಿ ನಮ್ಮ ಹೆಜ್ಜೆ ಗುರುತುಗಳನ್ನು ಆ ಸಂಸ್ಥೆಯಲ್ಲಿ ಉಳಿಸಿಕೊಂಡು ಹೋಗಬೇಕಾದರೆ ಸಂಯಮ ಹಾಗೂ ವೃತ್ತಿ ಮೇಲಿನ ನಮ್ಮ ಶ್ರದ್ಧೆ ಬಹಳ ಮುಖ್ಯವಾಗುತ್ತವೆ. ಆ ನಿಟ್ಟಿನಲ್ಲಿ ಡಾ.ಆರ್.ಎಂ.ಮಿರ್ಧೆ ಅವರು ಉತ್ತಮವಾದ ಆಡಳಿತ ಮಾಡಿದ್ದಾರೆ. ಅತ್ಯಂತ ಜವಾಬ್ದಾರಿಯುತವಾಗಿ ಹುದ್ದೆಯ…

Read More

ವಿಶ್ವಾಸದ್ರೋಹಕ್ಕೆ ಮತ್ತೊಂದು ಹೆಸರು ಸಿದ್ದರಾಮಯ್ಯ ಎಂದು ಗಂಭೀರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರು: ನಂಬಿಕೆ ಮತ್ತು ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಮುಖ್ಯಮಂತ್ರಿಯಾದ ನಂತರ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಗಲು ದರೋಡೆ – ವರ್ಗಾವಣೆ, ಕಮಿಷನ್ ಮತ್ತು ಹಗರಣಗಳಲ್ಲಿ ನಿರತವಾಗಿದೆ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಇತಿಹಾಸದಲ್ಲಿ ಅತಿ ಭ್ರಷ್ಟ ಸರ್ಕಾರ ಇದಾಗಿದೆ. ಕಾಂಗ್ರೆಸ್ ಸರ್ಕಾರ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಗಳನ್ನು ನಡೆಸಿದೆ, ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಶುರುವಾಗಿದೆ ಎಂದು ಆರೋಪಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ವರ್ಷದಲ್ಲಿ 5 ಲಕ್ಷ ಕೋಟಿ ಹೊಸ ಸಾಲ ಮಾಡಿ ದಾಖಲೆ ಬರೆದಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರಿದರು. ಆಸ್ಪತ್ರೆ, ಸಚಿವರ ಕಚೇರಿ, ಮುಖ್ಯಮಂತ್ರಿ ಕಚೇರಿಯಿಂದಲೇ ಭ್ರಷ್ಟಾಚಾರ ಆರಂಭವಾಗುತ್ತದೆ. ವರ್ಗಾವಣೆ ಉದ್ಯಮವಾಗಿ ಮಾರ್ಪಾಡಾಗಿದೆ. ಯಾವುದೇ ಅಧಿಕಾರಿ ಎಷ್ಟೇ ದುಡ್ಡು ಕೊಟ್ಟು ಬಂದರೂ, ಎಷ್ಟು ದಿನ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಮೀಪದ ಕಾಖಂಡಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಏಳು ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ರಾಜಶೇಖರಯ್ಯ ಮಳಯ್ಯ ಮಠಪತಿ ಅವರಿಗೆ ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಂದೇನವಾಜ್ ಗುರಾತೆ, ರಾಮನಗೌಡ ಪಾಟೀಲ್, ಉಮೇಶ್ ಸೊನ್ನದ, ಶಾಲೆಯ ಮುಖ್ಯ ಗುರುಮಾತೆ ಲಲಿತಾ ಕೋರಿ ಹಾಗೂ ಸಿಆರ್‌ಪಿ ಬಸವರಾಜ್ ಜಿಲ್ಲಿ, ಎಸ್‌ಡಿಎಂಸಿ ಸದಸ್ಯರು ಮತ್ತು ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

Read More