Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶಾಸಕರಾದ ಬಸನಗೌಡ ಆರ್ ಪಾಟೀಲ ಯತ್ನಾಳ ಅವರಿಗೆ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ ವಿಜಯಪೂರ ಜಿಲ್ಲಾ ಘಟಕದಿಂದ ಭೇಟಿ ನೀಡಿ, ಜಿಲ್ಲಾ ಅಧ್ಯಕ್ಷರು ನರಸಪ್ಪ ನಾವಿ ಅವರ ನೇತೃತ್ವದಲ್ಲಿ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವ ರಹಿಪ್ಪರಗಿ ತಾಲೂಕಾ ಉಸ್ತುವಾರಿ ಸದಸ್ಯ ಸೋಮಶೇಖರ ನಾಯಕೋಡಿ ಮಾತನಾಡಿ, ಬೆಳೆ ಸಮೀಕ್ಷೆ ದಾರರ ಪರವಾಗಿ ಇದೇ ಡಿಸೆಂಬರ್ 8 -19 ರ ವರೆಗೆ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಧ್ವನಿ ಎತ್ತ ಬೇಕು ಸಾಹೇಬ್ರೆ ಎಂದು ಮನವಿ ಮಾಡಿಕೊಂಡರು.ಮನವಿ ಸ್ವೀಕರಿಸಿದ ಶಾಸಕರು ನೀವು ಎಷ್ಟು ಜನ ಈ ಕೆಲಸದಲ್ಲಿ ಇರುವಿರಿ ಎಂದು ಪ್ರಶ್ನಿಸಿದರು.ಶಾಸಕರ ಪ್ರಶ್ನೆಗೆ ಜಿಲ್ಲಾ ಪ್ರಧಾನಕಾರ್ಯದರ್ಶಿ ಭೀಮಪ್ಪ ಲಕ್ಷ್ಮಣ ತಳವಾರ ಮಾತನಾಡಿ, ಕರ್ನಾಟಕದ ತುಂಬಾ ನಾವುಗಳು ಸರಿಸುಮಾರು 25,000ಸಾವಿರ ಜನಗಳು ಕಾರ್ಯನಿರ್ವಹಿಸುತ್ತಿದ್ದೇವೆ, ನಮಗೆ ಕನಿಷ್ಠ ವೇತನ ನೀತಿ ಅಡಿಯಲ್ಲಿ ನೇಮಕ ಮಾಡಿಕೊಂಡು ವರ್ಷವಿಡೀ ಕೆಲಸ ನೀಡ ಬೇಕೆಂದು ಉತ್ತರಿಸಿದರು.ಆಗ ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿ ಅಧಿವೇಶನದಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು.ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಮೆಟ್ರಿಕ್ ನಂತರದ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಡಿಸೆಂಬರ್ ೨೦ರ ಒಳಗಾಗಿ ಇಲಾಖೆ ವೆಬ್ಸೈಟ್: https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ನಿಡಗುಂದಿಯ ವಾರ್ಡ್ ನಂಬರ್-೦೪ರ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಸವನ ಬಾಗೇವಾಡಿಯ ಇಕ್ಬಾಲ ನಗರ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಸವನ ಬಾಗೇವಾಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ: ೦೫-೧೨-೨೦೨೫ ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಬಸವನ ಬಾಗೇವಾಡಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವೆ,ಸುಮತಿ ಸುಮತಿ ಶ್ರೀಮತಿಮುದ್ದು ಪೆದ್ದು ಕೋತಿ ಎಂದು ಚೇಡಿಸುತ್ತ, ಬೈಯ್ಯುತ್ತ ಸಣ್ಣ ಮಕ್ಕಳ ತರ ಜಗಳ ಆಡುವಾಗ ಇತಿಶ್ರೀ ಹಾಕುವವನು ನಾನೇ ಆಗಿರುತ್ತಿದ್ದೆ. ಕಾಲೇಜಿನ, ಕ್ಯಾಂಟೀನಿನ, ಗೆಳೆಯ, ಗೆಳೆತಿಯರ ಬಗೆಗೆ ಹರಟುತ್ತಿದ್ದರೆ ಸಮಯ ಸರಿದದ್ದೇ ಗೊತ್ತಾಗುತ್ತಿರಲಿಲ್ಲ. ಆ ಕೆಲಸ ಈ ಕೆಲಸವೆಂದು ಭಾರವಾಗಿದ್ದ ಹೃದಯವನ್ನು ಹತ್ತಾರು ಕ್ಷಣಗಳಲ್ಲಿ ಹಗುರವಾಗಿಸಿ ಒಲವ ಲೋಕದಲ್ಲಿ ಹಾರಿಸುವಷ್ಟು ಚಾಲಾಕಿ ನೀನು. ಬಾಲ್ಯದಲ್ಲಿದ್ದಾಗಿನ ಮಾತು ನೋಟ ಒಂದೇ ಆಗಿದ್ದರೂ ಹರೆಯದ ಮನದಲ್ಲಿ ಹೊಸ ತರ ಏನೋ ಒಂಥರ ಹೇಳಲಾಗದ ಅನುಭವ.. ನೀ ಚೆಲ್ಲುವ ನಗುವೆಲ್ಲ ಎದೆಯಂಗಳದಿ ಬೆಳದಿಂಗಳು ಚೆಲ್ಲಿದಂತಿದೆ. ದಿನಗಳು ಸಾಲುವುದಿಲ್ಲ ನಿನ್ನ ಅಂದ ಚೆಂದ ಹೊಗಳಲು ಒಂದೇ ಮಾತಿನಲ್ಲಿ ಹೇಳಬೇಕೆಂದರೆ ನೀನೆಂದರೆ ಮುಗಿಯದ ಸಂತೋಷ ನನಗೆಎಲ್ಕೆಜಿಯ ಮೊದಲ ದಿನದಿಂದ ಶುರುವಾದ ನಮ್ಮಿಬ್ಬರ ಗೆಳೆತನ ಅದ್ಯಾವಾಗ ಪ್ರೇಮ ಲೋಕಕ್ಕೆ ಪದಾರ್ಪಣೆ ಮಾಡಿತೋ ಗೊತ್ತೇ ಆಗಲಿಲ್ಲ. ರಾಯಲ್ ಎನ್ಫೀಲ್ಡ್ನ ಹಿಂದಿನ ಸೀಟಿನಲ್ಲಿ ಭುಜದ ಮೇಲೆ ಕೈಯಿಟ್ಟು ಹಂಪ್ ಬಂದಾಗಲೆಲ್ಲ…
ವಿಜಯಪುರದಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಶಿವಾನಂದ ಜಮಾದಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ದ ಚುನಾವಣಾ ಆಯೋಗವು ಮತದಾರ ಪಟ್ಟಿಯನ್ನು ಪರಿಷ್ಕರಣೆಯ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವುದು ಮತ್ತು ಇನ್ನಿತರ ಮತದಾರರ ವಿವರಗಳ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಇದು ಮುಂಬರುವ ಚುನಾವಣೆಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಮತದಾರರ ಹಕ್ಕುಗಳನ್ನು ರಕ್ಷಿಸಲು ಸಹಕಾರಿಯಾಗಲಿದೆ ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಶಿವಾನಂದ ಜಮಾದಾರ ಅವರು ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಸಾಕ್ಷರಾ ಕ್ಲರ್ಬ ಅಡಿಯಲ್ಲಿ ನ.೨೭ ರಂದು ಆಯೋಜಿಸಿದ ಮತದಾರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಭಾಗಿದಾರಿಕೆ” ವಿಷಯ ಕುರಿತು ಮಾತನಾಡುತ್ತಿದ್ದರು.ಇನ್ನೊರ್ವ ಅತಿಥಿ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಮಾತನಾಡಿ, ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಚುನಾವಣೆಗಳ ಮೂಲಕ ಪ್ರಜೆಗಳು ತಮ್ಮ ನಾಯಕರನ್ನು ಆಯ್ಕೆ ಮಾಡಲು ಮತ್ತು ಸರ್ಕಾರದ ನೀತಿಗಳ್ಲಲಿ ತಮ್ಮ ಧ್ವನಿಯನ್ನು ಕೇಳಿಸಲು ಇರುವ ಪ್ರಬಲ ಅಸ್ತ್ರವಾಗಿದೆ. ವಿದ್ಯಾರ್ಥಿಗಳು ತಾವು…
ತನು ಫೌಂಡೇಶನ್ ದಶಮಾನೋತ್ಸವ ಸಂಭ್ರಮದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭವಿಷ್ಯದ ಭಾರತ ನಿರ್ಮಾಣಕ್ಕೆ ಇಂದಿನ ದಿನಮಾನಗಳಲ್ಲಿ ಯುವಕರಿಗೆ ಜಾಗೃತಿ ಅತ್ಯಗತ್ಯವಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ತನು ಫೌಂಡೇಶನ್ ನ ದಶಮಾನೋತ್ಸವ ಸಂಭ್ರಮ ಹಾಗೂ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿ ಸಮಾರಂಭದಲ್ಲಿ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ನಮ್ಮ ಇಂದಿನ ಯುವಕರಿಗೆ ಆತ್ಮಸ್ಥೈರ್ಯ ಬೆಳೆಸುವ ಅನಿವಾರ್ಯತೆ ಇದೆ. ಇಂದಿನ ಮೊಬೈಲ್ ಯುಗದಲ್ಲಿ ಯುವಕರು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ಜನತೆ ದೇಶ, ಧರ್ಮದ ಅರಿವು ಮೂಡಿಸಿಕೊಂಡು ಸದೃಡ ರಾಷ್ಟ್ರ ನಿರ್ಮಾಣದತ್ತ ಹೆಜ್ಜೆ ಹಾಕಬೇಕೆಂದರಲ್ಲದೇ, ತನು ಫೌಂಡೇಶನ್ ನಿರಂತರ ಸಾಮಾಜಿಕ ಕಳಕಳಿ ಹೊಂದಿದ್ದು, ಮುಂಬರುವ ದಿನಗಳಲ್ಲಿ ಸಂಸ್ಥೆ ಇನ್ನು ಉತ್ತುಂಗಕ್ಕೇರಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕ ಮಂಜುನಾಥ ಜುನಗೊಂಡ, ನಂತರ ಪ್ರಶಸ್ತಿ ಸ್ವೀಕರಿಸಿ ಅಶೋಕ ಹಂಚಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಶೋಧ…
ಸಿಎಂ ಮತ್ತು ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ | ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ | ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಅವರು ಶನಿವಾರ ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ…
ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಪ್ರಶ್ನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಹಿರಿಯರು, ತಮ್ಮ ಬಿಜೆಪಿ ಪಕ್ಷದಿಂದ ಮೊದಲು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಕೊಳ್ಳಲಿ, ಅವರು ಮುಖ್ಯಮಂತ್ರಿಯಾದರೆ ನಮಗೂ ಸಂತೋಷವೇ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡಲಿ ಎಂದು ಕಾಂಗ್ರೆಸ್ಗೆ ಬೊಟ್ಟು ಮಾಡುವ ಮೊದಲು ಬಿಜೆಪಿಯವರಿಗೆ ಪ್ರಶ್ನೆ ಮಾಡಲಿ, ೨೭ ಕ್ಕೂ ಅಧಿಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಅಲ್ಲಿ ಯಾವ ರಾಜ್ಯದಲ್ಲಾದರೂ ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಜಿಗಜಿಣಗಿ ಹಿರಿಯ ನಾಯಕರು, ಕೇಂದ್ರದಲ್ಲಿ ಸಚಿವರಾದರು, ಆದರೆ ಅವರನ್ನು ಏಕೆ ಮುಖ್ಯಮಂತ್ರಿ ಮಾಡಲಿಲ್ಲ? ಈ ಹಿಂದೆ ಮೂರು ಮೂರು ಮುಖ್ಯಮಂತ್ರಿಗಳನ್ನು ಬದಲಿಸಿದ ಬಿಜೆಪಿಯವರಿಗೆ ಆಗ ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡುವ ಆಲೋಚನೆ ಬರಲಿಲ್ಲವೇ ಎಂದು ಪ್ರಶ್ನಿಸಿದರು.ಈ ಹಿಂದೆ ಬಿಎಸ್ವೈ ಕಣ್ಣೀರು ಹಾಕುವಾಗ ನೆನಪಾಗಿಲ್ಲವೇ?ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರತಿಪಕ್ಷ ನಾಯಕ ಆರ್.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ವಿಳಂಬವಾಗುತ್ತಿದ್ದ ವಿಮಾ ಹಣವನ್ನು ಪಾವತಿ ಮಾಡಲು ಆರಂಭಿಸಿರುವ ಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ.ಕೆ.ಎಚ್. ಮುಂಬಾರೆಡ್ಡಿ ಸೇರಿದಂತೆ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿರುವ ಸಂಘಟನೆಯ ಪದಾಧಿಕಾರಿಗಳು, ಅನೇಕ ಸಮಸ್ಯೆಗಳನ್ನು ಎದುರಿಸಿದ ದ್ರಾಕ್ಷಿ ಬೆಳೆಗಾರರಿಗೆ ವಿಮಾ ಹಣ ಸಕಾಲಕ್ಕೆ ಬಾರದೇ ದೊಡ್ಡ ತೊಂದರೆ ಸೃಜಿಸಿತ್ತು. ಆದರೆ ಈಗ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದ್ದು ವಿಮಾ ಹಣ ಪಾವತಿ ಆರಂಭವಾಗಿರುವುದು ಎಲ್ಲ ದ್ರಾಕ್ಷಿ ಬೆಳೆಗಾರರಿಗೂ ಸಂತೋಷ ತರಿಸಿದೆ, ಈ ನಮ್ಮ ಹೋರಾಟ ಹಾಗೂ ನ್ಯಾಯಯುತವಾದ ಕೂಗಿಗೆ ಸ್ಪಂದಿಸಿದ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲರಿಗೆ, ಸಚಿವ ಶ್ರೀ ಶಿವಾನಂದ ಪಾಟೀಲರಿಗೆ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ತೋಟಗಾರಿಕಾ ಇಲಾಖೆಯಯ ಅಧಿಕಾರಿಗಳಿಗೆ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಭೀಮಸೇನ ಕೋಕರೆ, ಎಚ್.ಆರ್. ಉಟಗಿ, ಎಸ್.ಎಸ್. ಛಾಯಾಗೋಳ, ವಾಮನ ಮಹಿಷಿ,…
ವಿಜಯಪುರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಿಸಿದ ಸಚಿವ ಶಿವಾನಂದ ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದಲ್ಲಿ ಜನತೆಗೆ ಕೊಟ್ಟಿರುವ ವಚನ ಪಾಲಿಸಿ, ಅತ್ಯುತ್ತಮವಾಗಿ ಆಡಳಿತ ನಡೆಸುತ್ತಿದೆ. ಹೀಗಾಗಿ ಸರಕಾರದ ಯೋಜನೆಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವಲ್ಲಿಪಕ್ಷದ ಪ್ರಚಾರ ಸಮಿತಿ ಕೆಲಸ ಮಾಡಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.ನಗರದ ಸಚಿವರ ತೋಟದ ಮನೆಯಲ್ಲಿ ನಡೆದ ಕೆಪಿಸಿಸಿ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಸಚಿವರು, ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಹತ್ತಾರು ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದ್ದು, ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಆಗಿರುವ ಅನುಕೂಲಗಳ ಬಗ್ಗೆ ತಿಳಿಸಿ ಹೇಳುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಭವಿಷ್ಯದಲ್ಲಿ ಎದುರಾಗುವ ಯಾವುದೇ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವಂತೆ ಕಾಂಗ್ರೆಸ್ ಕಾರ್ಯಕರ್ತರ…
