Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ: ಹೂಗಾರ ಅಭಿವೃದ್ದಿ ನಿಗಮಕ್ಕೆ ೧೦೦ ಕೋಟಿ ಅನುದಾನ ನೀಡುವುದರೊಂದಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಜೊತೆಗೆ ಹೂಗಾರ ಸಮಾಜಕ್ಕೆ ಸೇರಿದವರಿಗೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಬೇಕು, ಹೂಗಾರ ಸಮಾಜವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಸರಕಾರ ಇವರಿಗೆ ಸಾಮಾಜಿಕವಾಗಿ ನ್ಯಾಯ ನೀಡಬೇಕೇಂದು ಒತ್ತಾಯಿಸಿ ಚಡಚಣ ತಾಲೂಕಾ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದಿಂದ ಸೋಮವಾರ ಚಡಚಣ ತಾಲೂಕಾ ದಂಡಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ನಮವಿ ಸಲ್ಲಿಸಲಾಯಿತು.ತಾಲೂಕಾ ಅಧ್ಯಕ್ಷ ಅಂಬಣ್ಣ ಮ ಪೂಜಾರಿ ಮಾತನಾಡಿ, ಪ್ರತಿ ತಾಲೂಕಿನ ಬಸ್ ನೀಲ್ದಾಣಗಳಲ್ಲಿ ಹೂಗಾರ ಮಳಿಗೆಗೆ ಅವಕಾಶ ಮಾಡಿಕೊಡಬೇಕು, ತಾಲೂಕಿಗೆ ಒಂದರಂತೆ ಹೂಗಾರ ಸಮುದಾಯ ಭವನ ನಿರ್ಮಾಣ ಮಾಡಬೇಕು, ಸರಕಾರದ ವತಿಯಿಂದ ಹೂಗಾರ ಮಾದಯನ್ನವರ ಜಯಂತಿಯನ್ನ ಆಚರಣೆ ಮಾಡಬೇಕು, ಸಮಾಜದ ಅರ್ಚಕರಿಗೆ ತಸ್ತಿಕ ಭತ್ಯ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.ಪತ್ರಕರ್ತ ಸಂಗಮೇಶ ಹ. ಹೂಗಾರ ಮಾತನಾಡಿ, ಇತರೆ ಸಮುದಾಯದ ಅಭಿವೃದ್ದಿ ನಿಗಮಗಳಿಗೆ ನೀಡುವ ಎಲ್ಲಾ ಸೌಲಭ್ಯವನ್ನು ಹೂಗಾರ ಅಭೀವೃದ್ದಿ ನಿಗಮಕ್ಕೆ ನೀಡಬೇಕು, ಇತರೆ ಸಮುದಾಯದವರಿಗೆ ನೀಡುವಂತ ಸರಕಾರಿ ಸೌಲಭ್ಯವನ್ನು ಹೂಗಾರ ಸಮುದಾಯದ…
ದೇವರಹಿಪ್ಪರಗಿ: ಜನಪರ ಸೇವೆಗೆ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಸಮಾಜದ ಋಣ ತೀರಿಸುವ ಕಾಯಕ ಮಾಡುತ್ತೇನೆ. ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನೇಮಕಕ್ಕೆ ಕಾರಣರಾದವರ ಹೆಸರು ತರುವ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಕೆಡಿಪಿ ಸದಸ್ಯ ನೂರಅಹಮ್ಮದ ಅತ್ತಾರ ಹೇಳಿದರು.ಪಟ್ಟಣದ ಖ್ಯಾತ ನ್ಯಾಯವಾದಿ ಎ.ಎಂ.ತಾಂಬೋಳಿ ಗೆಳೆಯರ ಬಳಗದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಸರಕಾರ ಹಾಗೂ ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಗುರುತರ ಜವಾಬ್ದಾರಿ ನೀಡಿದೆ. ನನ್ನ ನೇಮಕ ಮಾಡಲು ಶಾಸಕ ಅಶೋಕ ಮನಗೂಳಿ ಸಹಕಾರ ನೀಡಿ ಶಿಫಾರಸ್ಸು ಮಾಡಿದ್ದರಿಂದ ನನ್ನ ನೇಮಕವಾಗಿದೆ. ಮೊದಲಿನಿಂದಲೂ ನನ್ನ ಮೇಲೆ ಮನಗೂಳಿ ಮನೆತನದ ಭರವಸೆಯಿದೆ. ಶಾಸಕ ಅಶೋಕ ಮನಗೂಳಿ ಯಾವುದೇ ಬೇದಭಾವ ಮಾಡದೆ ನನ್ನನ್ನು ಜಿಲ್ಲಾ ಕೆಡಿಪಿ ಸದಸ್ಯನ್ನನಾಗಿಸಿ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ಶಾಸಕರ ಮಾರ್ಗದರ್ಶನದಲ್ಲಿ ಸಮಾಜ ಸೇವೆ ಮಾಡುತ್ತೇನೆ, ತಮ್ಮೆಲ್ಲರ ಸಹಕಾರ ಇರಲಿ ಎಂದರು.ಖ್ಯಾತ ನ್ಯಾಯವಾದಿ ಎ.ಎಂ.ತಾಂಬೋಳಿ ಮಾತನಾಡಿ, ನೂರಅಹಮ್ಮದ ಅತ್ತಾರ ಅವರು ಶ್ರಮಜೀವಿಗಳಾಗಿದ್ದು, ಉತ್ತಮ ಸಂಘಟಕರಾಗಿದ್ದಾರೆ. ಇವರ ಶ್ರಮಕ್ಕೆ ತಕ್ಕ ಹುದ್ದೆ ದೊರೆತಿದ್ದು, ಇನ್ನಷ್ಟು…
ಇಂಡಿ: ಮಣ್ಣುಗಳಲ್ಲಿಯ ಮುಖ್ಯ ಹಾಗೂ ಲಘು ಪೋಷಕಾಂಶಗಳ ಕೊರತೆ ಮತ್ತು ನೀರಿನಲ್ಲಿ ಲವಣಗಳು ಮತ್ತು ಕ್ಷಾರಗಳ ಕೊರತೆ ನೀಗಿಸಲು ರೈತರು ತಮ್ಮ ಹೊಲದಲ್ಲಿಯ ಮಣ್ಣು ಪರೀಕ್ಷೆಯ ಅಗತ್ಯತೆ ಇದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಶಿವಶಂಕರಮೂರ್ತಿ ಹೇಳಿದರು.ಅವರು ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಣ್ಣು ಮತ್ತು ನೀರು ಪರೀಕ್ಷೆಯ ಮಹತ್ವ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಮಣ್ಣು ನೈಸರ್ಗಿಕವಾಗಿ ದೊರೆತಂತಹ ಅತ್ಯಮೂಲ್ಯ ವಸ್ತು. ಭೂಮಿಯು ಸಸ್ಯಗಳಿಗೆ ಆಧಾರವನ್ನು ಕೊಡುವದರ ಜೊತೆಗೆ ಅದರ ಬೆಳವಣೆಗೆಗೆ ಅವಶ್ಯವಿರುವ ನೀರು ಮತ್ತು ಎಲ್ಲಾ ಪೋಷಕಾಂಶಗಳನ್ನು ನೀಡುತ್ತದೆ. ಆದ್ದರಿಂದ ಬೆಳೆಗಳ ಉತ್ತಮವಾದ ಬೆಳೆವಣೆಗಾಗಿ ಹಾಗೂ ಪೋಷಕಾಂಶ ಕೊರತೆ ನಿವಾರಿಸಲು ಪೋಷಕಾಂಶಗಳ ಪ್ರಮಾಣ ಮತ್ತು ರೂಪವನ್ನು ಮಣ್ಣು ಪರೀಕ್ಷೆಯು ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂದರು.ವಿಜ್ಞಾನಿ ಡಾ. ಹೀನಾ ಮಾತನಾಡಿ, ಒಂದೇ ವ್ಯವಸಾಯ ಜಮೀನಿನಲ್ಲಿ ನಿರಂತರವಾಗಿ ಬೆಳೆ ಬೆಳೆಯುವರಿಂದ ಮಣ್ಣಿನಲ್ಲಿರುವ ಪೋಷಕಾಂಶಗಳೆಲ್ಲ ಬೆಳೆಗಳ ಬೆಳವಣೆಗೆಗಾಗಿ ಉಪಯೋಗವಾಗಿ ಮಣ್ಣಿನಲ್ಲಿ ಪೋಷಕಾಂಶಗಳ…
ವಿಜಯಪುರ: ಆಷಾಢ ಏಕಾದಶಿಯ ಮುನ್ನಾ ದಿನವಾದ ಮಂಗಳವಾರದಂದು ಮಹಾರಾಷ್ಟ್ರದ ಜತ್ತ ತಾಲೂಕಿನ ಗಡಿ ಗ್ರಾಮ ಅಂಕಲಗಿಯ ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆಯಲ್ಲಿ ಆಷಾಢ ಏಕಾದಶಿಯನ್ನು ಸಡಗರ ಮತ್ತು ಸಂಭ್ರದಿಂದ ಆಚರಿಸಲಾಯಿತು.ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಮೂಹಿಕ ನೃತ್ಯ ಪ್ರದರ್ಶನ ಮನಸರ್ಯಗೊಂಡಿತು. ವಿಠ್ಠಲ ವಿಠ್ಠಲ ಹಾಡಿಗೆ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. ಹುಡುಗರು ಮತ್ತು ಹುಡುಗಿಯರು ಸುಂದರವಾದ ವೇಷಭೂಷಣಗಳೊಂದಿಗೆ ವಾರಕರಿಗಳಂತೆ ಧರಿಸಿದ್ದರು. ಪೋಗಡಿ, ಪುಗಡಿ ನೃತ್ಯಗಳನ್ನು ಪ್ರದರ್ಶಿಸಿದರು.ಹುಡುಗಿಯರು ತುಳಸಿ ಗಿಡಗಳನ್ನು ಹೊತ್ತೊಯ್ದರು ಮತ್ತು ಹುಡುಗರು ‘ಲಾರ್ಡ್ ವಿಠ್ಠಲ’ ನಾಮವನ್ನು ಮೋಡಿಮಾಡುವ ತಾಳಗಳನ್ನು ಹಿಡಿದಿದ್ದರು. ಈ ಕೃತ್ಯ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತು. ಆಷಾಢ ಏಕಾದಶಿಯ ಮಹತ್ವ ಮತ್ತು ಭಕ್ತಾಧಿಗಳಿಗೆ ‘ಪಂಢರಪುರ ಯಾತ್ರೆ’ಯ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳು ಅಮೂಲ್ಯವಾದ ಮಾಹಿತಿಯನ್ನು ಹಂಚಿಕೊಂಡರು. ಈ ಆಚರಣೆಯು ವಿದ್ಯಾರ್ಥಿಗಳಲ್ಲಿ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಭಾವನೆಯನ್ನು ತಂದಿತು.ಶಾಲೆಯ ಮುಖ್ಯ ಗುರುಗಳಾದ ಡಿ.ಎಸ್.ಬಿರಾದಾರರವರು ಮಾತನಾಡುತ್ತ. ಆಷಾಢ ಏಕಾದಶಿಯು ಶ್ರೀ ವಿಠ್ಠಲ ದೇವರ ಪವಿತ್ರ ದಿನವಾಗಿದೆ. ಮಕ್ಕಳಿಗೆ ನಮ್ಮ ಸಂಪ್ರದಾಯ ಮತ್ತು…
ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯವು ೨೦೨೪ನೇ ಸಾಲಿನ ಸ್ನಾತಕ ಕೋರ್ಸ್ಗಳು, ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಜುಲೈ ೩೧ರವರೆಗೆ ದಿನಾಂಕವನ್ನು ವಿಸ್ತರಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಇಗ್ನೋ ವೆಬ್ಸೈಟ್ www.ignou.ac.in/ಅಥವಾ ದೂರವಾಣಿ ಸಂಖ್ಯೆ ೦೮೩೫೨-೨೫೨೦೦೬ ಹಾಗೂ ಮೊ:೯೪೮೨೩೧೧೦೦೬ನ್ನು ಸಂಪರ್ಕಿಸಬಹುದೆಂದು ಸಹಾಯಕ ಕ್ಷೇತ್ರಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಿಜಯಪುರ: ೨೦೨೩-೨೪ನೇ ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿಯಲ್ಲಿ ಸಾಲತ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ www.kacdc.karnataka.gov.inಅಥವಾ ನಿಗಮದ ಸಹಾಯವಾಣಿ ಸಂಖ್ಯೆ:೯೪೪೮೪೫೧೧೧೧ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ತಿಪ್ಪನಗೌಡ ಕುಮಸಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಸುಮಾರು ೨೦ ರಿಂದ ೨೫ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಯಾದ ವ್ಯಕ್ತಿಯ ವಾರಸುದಾರರ ಪತ್ತೆಗೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಪತ್ತೆಯಾದ ವ್ಯಕ್ತಿಯ ಎತ್ತರ ಸುಮಾರು ೦೫ ಅಡಿ ೦೬ ಇಂಚು ಇದ್ದು, ಸಾಧಗಪ್ಪು ಮೈಬಣ್ಣ, ತೆಳ್ಳನೆಯ ಸಣಕಲು ಮೈಕಟ್ಟು, ಕೋಲು ಮುಖ, ನೇರವಾದ ಮೂಗು, ಕಪ್ಪು ತಲೆಕೂದಲು, ಚಿಗುರು ಮೀಸೆವುಳ್ಳವನಾಗಿದ್ದು, ಕಪ್ಪು ಬಣ್ಣದ ತುಂಬು ತೋಳಿನ ರೆಡಿಮೆಡ್ ಅಂಗಿ, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದು, ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಆರಕ್ಷಕ ಉಪ ನಿರೀಕ್ಷಕರು, ರೈಲ್ವೆ ಪೊಲೀಸ್ ಠಾಣೆ, ವಿಜಯಪುರ ದೂ: ೦೮೩೫೨-೨೫೦೮೮೩,ಇಮೇಲ್ bijapurrly@ksp.gov.in ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ: ೦೮೦-೨೨೮೭೧೨೯೧, ಇ-ಮೇಲ್: dcrly@ksp.gov.inಮಾಹಿತಿ ನೀಡಲು ಪ್ರಕಟಣೆಯಲ್ಲಿ ರೈಲ್ವೆ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜುಲೈ ೧೩ ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು ೧೩,೪೦೦ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು ಹಾಗೂ ೨,೧೯,೪೭೫ ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಇತ್ಯರ್ಥಗೊಂಡಿದೆ.ಈ ಲೋಕ ಅದಾಲತ್ನಲ್ಲಿ ವಿವಿಧ ಕಾರಣಗಳಿಂದ ವಿಚ್ಚೇದನಕ್ಕೆ ಮೊರೆ ಹೋಗಿದ್ದ ಏಳು ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಲ್ಲಿ ಮೂಲಕ ಒಂದಾಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.ಈ ರಾಷ್ಟ್ರೀಯ ಲೋಕ್ ಅದಾಲತನ ಯಶಸ್ಸಿಗೆ ಸಹಕರಿಸಿದ ಎಲ್ಲಾ ವಕೀಲರು, ಕಕ್ಷಿದಾರರು, ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಪ್ರಚಾರದಲ್ಲಿ ಸಹಭಾಗಿಯಾದ ಎಲ್ಲರಿಗೂ ಪ್ರಧಾನ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಂಗಳವಾರ ಬೆಳಿಗ್ಗೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ ಅವರೊಂದಿಗೆ ದಿಢೀರ ಭೇಟಿ ನೀಡಿ, ಕ್ರೀಡಾಂಗಣದ ಆವರಣ ಪರಿವೀಕ್ಷಣೆ ನಡೆಸಿದರು.ಕ್ರೀಡಾಂಗಣದಲ್ಲಿ ಒದಗಿಸಿರುವ ಕ್ರೀಡಾ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಕ್ರೀಡಾಂಗಣ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿರುವ ಮಾಹಿತಿ ಪಡೆದುಕೊಂಡು, ಈ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ವಾಲಿಬಾಲ್, ಪುಟ್ಬಾಲ್, ಬಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಹಾಕಿ ಅಸೋಷಿಯೇಶನ್ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತು ಕುಂದುಕೊರತೆ ಸಭೆ ನಡೆಸಿದರು. ಕ್ರೀಡಾ ಇಲಾಖೆಯ ತರಬೇತಿದಾರರೊಂದಿಗೆ ಕ್ರೀಡಾ ತರಬೇತಿ ಹಾಗೂ ಸಾಧನೆಯ ಪ್ರಗತಿ ಕುರಿತು ವಿವರ ಪಡೆದುಕೊಂಡ ಅವರು,ಅಗತ್ಯ ಸಲಹೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ…
ಪಂ.ಪಂಚಾಕ್ಷರ ಗವಾಯಿಗಳ ಪುಣ್ಯಸ್ಮರಣೆಯಲ್ಲಿ ಪಂ.ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕ ಚನ್ನವೀರಸ್ವಾಮಿ (ಕಡಣಿ) ಆಗ್ರಹ ಧಾರವಾಡ: ಉತ್ತರದ ಸಂಗೀತವನ್ನು ದಕ್ಷಿಣಕ್ಕೆ ತಂದ ಪ್ರಮುಖರಲ್ಲಿ ಒಬ್ಬರಾದ, ಶಿಷ್ಯ ಪರಂಪರೆಯ ಮೂಲಕ ಧಾರವಾಡಕ್ಕೆ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ತವರು ಎನ್ನುವ ಖ್ಯಾತಿ ತಂದು ಕೊಟ್ಟ, ವಚನಗಳಿಗೆ ರಾಗ ಸಂಯೋಜಿಸಿ ಹಾಡಿ, ವಚನ ಗಾಯನ ಪರಂಪರೆಗೆ ನಾಂದಿ ಹಾಡಿದ, ಮಾತ್ರವಲ್ಲದೇ ಭಾರತ ರತ್ನ ಭೀಮಸೇನ ಜೋಷಿಯವರಂತಹ ಮಹಾನ ಸಂಗೀತ ದಿಗ್ಗಜರನ್ನು ಕೊಡುಗೆಯಾಗಿ ನೀಡಿದ ಶ್ರೇಯಸ್ಸು ಗಾನಯೋಗಿ ಪಂಚಾಕ್ಷರ ಗವಾಯಿಗಳವರಿಗೆ ಸಲ್ಲುತ್ತದೆ. ಇಂತಹ ಮಹಾನ್ ವಿಭೂತಿ ಪುರುಷ ಗಾನಯೋಗಿ ಪಂ. ಪಂಚಾಕ್ಷರ ಗವಾಯಿಗಳವರ ಸ್ಮಾರಕ ಧಾರವಾಡದಲ್ಲಿ ಆಗಬೇಕು ಎಂದು, ಡಾ. ಪಂ.ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕರಾದ ವೇ. ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಹೇಳಿದರು.ಅವರು ಜು.೧೪ ರಂದು ಸಂಜೆ ಧಾರವಾಡದ ರಂಗಾಯಣದಲ್ಲಿ, ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಆಯೋಜಿಸಿದ್ದ ಗಾನಯೋಗಿ ಪಂ. ಪಂಚಾಕ್ಷರ ಗವಾಯಿಗಳವರ ೮೦ನೆಯ ಪುಣ್ಯಸ್ಮರಣೆ ‘ಗುರು ಗುಣಗಾನ’ ಕವಿಗೋಷ್ಠಿ, ಕಾವ್ಯಗಾಯನ ಮತ್ತು ನೃತ್ಯ ನಮನವನ್ನು…
