Author: editor.udayarashmi@gmail.com

ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಧರಣಿ, ಪ್ರತಿಭಟನೆ | ವಿಧಾನಸಭೆಯ ಒಳಗೆ-ಹೊರಗೆ ಹೋರಾಟ ಮುಂದುವರಿಕೆ | ಸಿಬಿಐ ತನಿಖೆಗೆ ಆಗ್ರಹ ಬೆಂಗಳೂರು: ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, SC/ST ನಿಧಿ ಬಳಕೆ, ವಕ್ಫ್ ಬೋರ್ಡ್ ಹಗರಣದ ವಿಚಾರವಾಗಿ ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಶಾಸಕರು ತುಂತುರು ಮಳೆಯ ನಡುವೆಯೇ ವಿಧಾನಸೌಧದ ಬಳಿಯ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಧರಣಿ ಪ್ರತಿಭಟನೆ ನಡೆಸಿದರು.ಸರ್ಕಾರವನ್ನು ಖಂಡಿಸುವ ಬ್ಯಾನರ್‌ಗಳೊಂದಿಗೆ ಮೆರವಣಿಗೆಯನ್ನೂ ನಡೆಸಿದ ನಾಯಕರು, ಘೋಷಣಾ ಫಲಕಗಳನ್ನು ಹಿಡಿದು ಕಾಂಗ್ರೆಸ್ ಸರ್ಕಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ”ಸರ್ಕಾರ ದಲಿತರು ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧವಾಗಿದೆ. ಕರ್ನಾಟಕ ವಿಧಾನಸಭೆಯ ಒಳಗೆ…

Read More

ಚುನಾವಣೆ ಟಾಸ್ಕ್ನಲ್ಲಿ ಸೋತ ಸಚಿವರನ್ನು ಸಂಪುಟದಿಂದ ಕೈಬಿಡಲು ಮಾಲಿಕಯ್ಯ ಗುತ್ತೇದಾರ ಆಗ್ರಹ ಅಫಜಲಪುರ: ಕಲಬುರಗಿ ಲೋಕಸಭೆಯಿಂದ ಮತದಾರರು ನನ್ನನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳಿಸಿದ್ದಾರೆ, ನಾನು ಕಲಬುರಗಿ ಧ್ವನಿಯಾಗಿ ಸಂಸತ್ತಿನಲ್ಲಿ ಕೆಲಸ ಮಾಡುತ್ತೇನೆ ಎಂದು ಸಂಸದ ರಾಧಾಕೃಷ್ಣ ದೊಡ್ಮನಿ ಹೇಳಿದರು.ಪಟ್ಟಣದ ಸರಸಂಬಾ ಕಲ್ಯಾಣ ಮಂಟಪದಲ್ಲಿ ನಡೆದ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ, ಮತದಾರರು ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಎಲ್ಲರ ಕಣ್ಣು ಕಲಬುರಗಿ ಮೇಲಿತ್ತು. ಆದರೆ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಪಕ್ಷದ ಹಿರಿಯರು, ಶಾಸಕರು, ಸಚಿವರು, ಮುಖಂಡರು, ಕಾರ್ಯಕರ್ತರು, ಕ್ಷೇತ್ರದ ಮತದಾರರ ಅಭಿಪ್ರಾಯ, ಸಲಹೆ ಪಡೆದು ಅಭಿವೃದ್ದಿ ಕೆಲಸಗಳನ್ನು ಮಾಡುತ್ತೇನೆ ಎಂದರು.ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡುತ್ತಾ, ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡಿದ್ದ ಸಂದರ್ಭದಲ್ಲಿ ಅಫಜಲಪುರ ಮತಕ್ಷೇತ್ರದಿಂದ ೩೭ ಸಾವಿರ ಮತಗಳು ಬಿಜೆಪಿಗೆ ಲೀಡ್ ಬಂದಿದ್ದರಿಂದ ಖರ್ಗೆ ಅವರು ಸೋಲಬೇಕಾಯಿತು. ಆದರೆ ಈ ಬಾರಿ…

Read More

ಇಂಡಿ: ಪಟ್ಟಣದಲ್ಲಿ ಹುಸೇನ ಬಾಷಾ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಆಟವಿ ಖತಾಲ ಆಚರಿಸಲಾಯಿತು.ಜಾತ್ರೆ ನಿಮಿತ್ಯ ಇಂಡಿ ಸೇರಿದಂತೆ ಕಲಬುರಗಿ, ವಿಜಯಪುರ, ಸೋಲಾಪುರ, ಪುನಾ, ಮುಂಬಯಿ ಮತ್ತು ಮಹಾರಾಷ್ಟ್ರ ಆಂಧ್ರದಿಂದ ಅಂದಾಜು ೧೫ ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ತಮ್ಮ ಹರಕೆ ತೀರಿಸಿದರು.ಹುಸೇನರು ಮಕ್ಕಾ ಮದೀನಾದ ಕರಬಲಾ ಮೈದಾನದಲ್ಲಿ ಹುತಾತ್ಮರಾದ ನಿಮಿತ್ಯ ಆಟವಿ ಖತಾಲ ಆಚರಿಸುವದು ಇಂಡಿಯ ಮೊಹರಮ್ ವಿಶೇಷ.ಬೆಳಗ್ಗೆಯಿಂದ ಭಕ್ತಾದಿಗಳು ದರ್ಶನ ಮತ್ತು ನೈವೆದ್ಯ ಅರ್ಪಣೆಗೆ ಪ್ರಾರಂಭಿಸಿದ್ದರು. ಇಂಡಿಯ ದಾದಾಗೌಡರ ಮನೆ, ನಾಡಗೌಡ, ದೇಶಪಾಂಡೆ ಸೇರಿದಂತೆ ಅನೇಕ ಗಣ್ಯರ ಮನೆಯಿಂದ ನೈವೆದ್ಯ ಮೆರವಣೆಗೆಯಲ್ಲಿ ಬಂದು ಸಲ್ಲಿಸಿದರು.ಕರಬಲ್, ಭಡಂಗ ಕುಣಿತ, ಡೊಳ್ಳು, ಹುಲಿಕುಣಿತ, ಸೇರಿದಂತೆ ತಾಷಾ,ಬೆಂಡ ಒಳಗೊಂಡ ಕಾರ್ಯಕ್ರಮಗಳು ದೇವಸ್ಥಾನದ ಆವರಣದಲ್ಲಿ ನಡೆದವು.ದರ್ಶನಕ್ಕೆ ಗದ್ದಲ ನಿಮಿತ್ಯ ಅರ್ಧ ಕಿ.ಮಿ ವರೆಗೂ ಸರದಿ ಮಾಡಲಾಗಿತ್ತು.ಪೋಲಿಸ ಇಲಾಖೆ ಸಿಪಿಐ ರತನಕುಮಾರ ಜಿರಗಿಹಾಳ ಇವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ ಮಾಡಿದ ನಿಮಿತ್ಯ ಶಾಂತಿಯುತವಾಗಿ ಭಕ್ತರು ದರ್ಶನ ಪಡೆದರು.ಮಂಗಳವಾರ ನಸುಕಿನ ೪ ಗಂಟೆಯ ವರೆಗೂ ದರ್ಶನ ಮುಂದು ವರೆಯಲಿದ್ದು…

Read More

ವಿಜಯಪುರ: ಎಸ್.ಎಂ.ಎನ್. ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದಿಂದ ವಂಚಿತಗೊಂಡ ಗ್ರಾಹಕರ ಸಭೆಯನ್ನು ವಿಜಯಪುರ ಗಗನಮಹಲ್ ದಲ್ಲಿ ಜು.೧೭, ಬುಧವಾರದಂದು ಬೆಳಗ್ಗೆ ೧೧ ಗಂಟೆಗೆ ಕರೆಯಲಾಗಿದೆ. ಈ ಸಭೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರೆಯಲಾದ ಕ್ಲೇಮಗೆ ಅರ್ಜಿ ಆಹ್ವಾನ ಸೇರಿದಂತೆ ವಿವಿಧ ಮಹತ್ವದ ವಿಷಯಗಳನ್ನು ಚರ್ಚೆ ಮಾಡಲಾಗುವದು ಎಂದು ಎಸ್.ಎಂ.ಎನ್. ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ವಂಚಿತ ಗ್ರಾಹಕರ ಹೋರಾಟ ಸಮಿತಿಯ ಅಧ್ಯಕ್ಷ ಅರವಿಂದ ಕುಲಕರ್ಣಿ ಹಾಗೂ ಹೋರಾಟದ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಹೂವಾಡಿಗ, ಹೂಗಾರ. ಜೀರ, ಗುರವ, ಪೂಜಾರಿ ಸಮಾಜದ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಕರ್ನಾಟಕ ಮಾಲಿ, ಮಾಲಗಾರ ಹಾಗೂ ಹೂಗಾರ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಸ್ಥಾಪಿಸಿ ೧೦೦ ಕೋಟಿ ರೂ.ಹಣ ಮಿಸಲಿಡಬೇಕು ಎಂದು ಸಿಂದಗಿ ತಾಲೂಕಾ ಹೂಗಾರ ಸಮಾಜ ಸೇವಾ ಸಂಘ ತಾಲೂಕಾ ಘಟಕದ ವತಿಯಿಂದ ಸೋಮವಾರ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-೨ ತಹಶೀಲ್ದಾರ ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸುವ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ನಂತರ ಶಾಸಕ ಅಶೋಕ ಮನಗೂಳಿ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಅಧಿವೇಶನದಲ್ಲಿ ನಮ್ಮ ಸಮಾಜದ ಧ್ವನಿಯಾಗಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರು.ಕರ್ನಾಟಕ ಮಾಲಿ, ಮಾಲಗಾರ ಹಾಗೂ ಹೂಗಾರ ಅಭಿವೃದ್ಧಿ ನಿಗಮಕ್ಕೆ ಶ್ರೀ ಹೂಗಾರ ಮಾದಯ್ಯ ಅಭಿವೃದ್ಧಿ ನಿಗಮ ಎಂದು ಮರು ನಾಮಕರಣ ಮಾಡಬೇಕು ಎಂಬ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದ ಪಕ್ಷದಲ್ಲಿ ಜು.೨೭ ರಂದು ಅಖಂಡ ಕನಾಟಕ ಹೂಗಾರ ಮಹಾಸಭಾ ವತಿಯಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಜು.೨೭ ರಂದು ಅಹೋರಾತ್ರಿ ಧರಣಿ…

Read More

ವಿಜಯಪುರ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ (ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ) ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ವಿಜಯಕುಮಾರ ಆಜೂರ ಜಿಲ್ಲಾ ಪಂಚಾಯತ ಡಿ.ಎಸ್ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವಿವಿಧ ಬೇಡಿಕೆಗಳಾದ ಶಿಕ್ಷಕರ ಸಾಮಾನ್ಯ ವರ್ಗಾವಣೆಯನ್ನು ಎಪ್ರಿಲ್/ಮೇ ತಿಂಗಳನಲ್ಲಿ ಜಾರಿಗೊಳಿಸುವುದು, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವೇತನವನ್ನು ಮಾಡುವುದು, ೭ ನೇ ವೇತನ ಆಯೋಗ ಜಾರಿಗೊಳಿಸುವುದು, ಪ್ರತಿವರ್ಷ ನಿಯಮಿತವಾಗಿ ಪ್ರೌಢಶಾಲಾ ಶಿಕ್ಷಕರ ಮುಖ್ಯೋಪಾಧ್ಯಾಯರ ಹುದ್ದೆಗೆ ಮುಂಬಡ್ತಿ ನೀಡುವುದು, ಜ್ಯೋತಿ ಸಂಜೀವಿನಿ ಸ್ಕಿಮ್‌ನ್ನು ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿಸ್ತರಿಸುವುದು, ಹಾಗು ಪ್ರೌಢಶಾಲಾ ಶಿಕ್ಷಕರನ್ನು ಪದವಿಪೂರ್ವ ಕಾಲೇಜುಗಳಿಗೆ ಮುಂಬಡ್ತಿ ನೀಡುವುದು ಹಾಗು ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಅರುಣ ಶಹಾಪೂರ, ಎ.ಎಸ್. ಬಿರಾದಾರ, ವೈ. ಎಮ್. ಪ್ರಧಾನಿ, ಜಿ.ಎಸ್. ಸಾವಳಗಿ, ಎಸ್.ಜಿ. ಹಂಚನಾಳ, ಎಸ್,ಬಿ. ಜೋಶಿ ಮುಂತಾದವರು ಇದ್ದರು.

Read More

ಸಿಂದಗಿಯಲ್ಲಿ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿಷಾದ ಸಿಂದಗಿ: ೨ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ನಡೆಸಿರುವ ಹೋರಾಟಕ್ಕೆ ದೀರ್ಘ ಇತಿಹಾಸವಿದೆ. ಇಷ್ಟೊಂದು ಸುಧೀರ್ಘ ಹೋರಾಟದ ನಂತರವೂ ನ್ಯಾಯ ದೊರಕದೆ ಇದ್ದದ್ದು ವಿಪರ್ಯಾಸ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.ಶಾಸಕ ಅಶೋಕ ಮನಗೂಳಿ ಅವರ ಮನೆಗೆ ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮಾಜ ಬಂಧುಗಳು ತೆರಳಿ ಮುಂಗಾರು ಅಧಿವೇಶನದಲ್ಲಿ ೨ಎ ಮೀಸಲಾತಿಗಾಗಿ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕೆಂದು ಆಗ್ರಹ ಪತ್ರವನ್ನು ಸಲ್ಲಿಸಿ ಮಾತನಾಡಿದ ಅವರು, ಕಳೆದ ಬಾರಿಯ ಆಡಳಿತಾರೂಢ ಬಿಜೆಪಿ ಸರಕಾರದ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ. ಪ್ರಸ್ತುತ ಸರ್ಕಾರವೂ ನಿರ್ಲಕ್ಷ ಧೋರಣೆ ತಾಳುತ್ತಿದೆ. ಪಂಚಮಸಾಲಿಗಳ ಹೋರಾಟಕ್ಕೆ ಯಶಸ್ಸು ಸಿಗದೇ ಇರಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇದ್ಯಾವುದಕ್ಕೂ ಜಗ್ಗದೆ, ಎದೆಗುಂದದೆ ಯಾರೇ ಮುಖ್ಯಮಂತ್ರಿಯಾಗಿರಲಿ ಯಾವುದೇ ಸರ್ಕಾರ ಬರಲಿ ಜಯ ಸಿಗುವವರೆಗೂ ನಮ್ಮ ಹೋರಾಟ…

Read More

ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಮಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜ್‌ಗಳ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ, ಗಾಂಜಾ ಸಸಿ-ಗಿಡಗಳು ಬೆಳೆಯದಂತೆ ಕಟ್ಟೆಚ್ಚರ ವಹಿಸಬೇಕು. ಗಾಂಜಾ ಗಿಡಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.…

Read More

ಗುಂಟೆವಾರು ನಿವೇಶನ ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರ | ನೀರಿನ ಸಂಪರ್ಕ-ವಿದ್ಯುತ್ ಸಂಪರ್ಕಕ್ಕೆ ಅನುಮತಿ ಇಲ್ಲ ವಿಜಯಪುರ: ನಗರದಾದ್ಯಂತ ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂ ಮಾಲೀಕರು ತಮ್ಮ ಶೇತ್ಕಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರವಾಗಿದ್ದು, ಈ ರೀತಿಯ ಅನಧಿಕೃತ ಗುಂಟಾ ನಿವೇಶನಗಳ ನಿರ್ಮಾಣದ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸರ್ಕಾರದಿಂದ ಅನುಮೋದನೆಯಾದ ಮಹಾಯೋಜನೆಯಲ್ಲಿ ಪ್ರಸ್ತಾಪಿಸಿರುವ ರಸ್ತೆಗಳಲ್ಲಿ ನಿವೇಶನ-ಕಟ್ಟಡಗಳನ್ನು ಹಾಗೂ ಅನಧಿಕೃತ ಗುಂಟಾ ನಿವೇಶನ ರಚನೆ ತಡೆಗಟ್ಟುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗುಂಟಾ ನಿವೇಶನ ಮಾಡುವ ಭೂ ಮಾಲೀಕರಿಗೆ ಹಲವು ಬಾರಿ ತಿಳುವಳಿಕೆ ನೀಡಿದರೂ ಸಹ ಗುಂಟಾ ನಿವೇಶನ ರಚನೆ ಕಂಡು ಬಂದಿದ್ದು, ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅನಧಿಕೃತವಾಗಿ ನಿರ್ಮಾಣಗೊಂಡ…

Read More