Author: editor.udayarashmi@gmail.com

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ಲಕ್ಷ್ಮೀ ಹುಬ್ಬಳ್ಳಿ ಕಾಣೆಯಾಗಿರುವ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲೂಕಿನ ನಾಗರಬೆಟ್ಟ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಮೇಲ್ವಿಚಾರಕಿ ಅಂತಾ ಸೇವೆಯಲ್ಲಿದ್ದಳು. ಶಾಲೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ಮರಳಿ ಮನೆಗೆ ಬಂದಿರುವದಿಲ್ಲ ಎಂದು ಈಕೆಯ ಸಹೋದರ ಪ್ರಭು ಚಲವಾದಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.ಎತ್ತರಕ್ಕೆ ೫ಫೂಟ್ ೨ಇಂಚು, ದುಂಡುಮುಖ, ಸಾದಾರಣ ದಪ್ಪ, ಸಾದಗಪ್ಪು ಬಣ್ಣ, ಕನ್ನಡ ಭಾಷೆ ಮಾತನಾಡುವ ಇವಳು ಎಲ್ಲಿಯಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ೦೮೩೫೬-೨೨೦೩೩೩ ಈ ದೂರವಾಣಿ ಸಂಖ್ಯೆಗೆ ಕರೆಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Read More

ಚಡಚಣ: ಪಟ್ಟಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಚುನಾವಣೆಯ ಮುಖಾಂತರ ಮಹಾವಿದ್ಯಾಲಯದ ಪ್ರದಾನ ಕಾರ್ಯದರ್ಶಿ ಮತ್ತು ವರ್ಗ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯ ಮನೋಜ ಕಟಗೇರಿ, ಮುಂದಿನ ವರ್ಷ ೧೮ ವರ್ಷ ತುಂಬಿ ದೇಶದ ಚುನಾವಣೆಗೆ ಮತ ಚಲಾಯಿಸಲು ಸಿದ್ದರಾಗುತ್ತಿರುವ ಯುವ ಪಿಳಿಗೆಗೆ ಚುನಾವಣೆಯ ಕುರಿತು ಅರಿವು ಮೂಡಿಸುವದು ಈ ಚುನಾವಣೆಯ ಉದ್ದೇಶವಾಗಿದೆ ಎಂದು ಹೇಳಿದರು.ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳಿಗೆ ನಾಮ ಪತ್ರ ಸಲ್ಲಿಕೆ, ನಾಮ ಪತ್ರ ಹಿಂತಗೆಯುವದು, ಚುನಾವಣೆಯ ಪ್ರಚಾರ ಮತ್ತು ಬ್ಯಾಲೆಟ್ ಮುಖಾಂತರ ಮತ ಚಲಾಯಿಸಿ ಯಾವ ರೀತಿ ಚುನಾವಣೆಗಳು ನಡೆಯುತ್ತವೆ ಎನ್ನವು ಅರಿವು ಮೂಡಿಸಲಾಯಿತು.ಮಹಾವಿದ್ಯಾಲಯದ ಉಪನ್ಯಾಸಕರು ಚುನಾವಣಾ ಸಿಬ್ಬಂದಿಗಳಾಗಿ ಕಾರ್ಯ ನಿರ್ವಹಿಸಿದರು. ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಮತ ಚಲಾಯಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆಮಾಡಿದರು. ದ್ವಿತೀಯ ವರ್ಷದ ವಿದ್ಯಾರ್ಥಿ ಎಚ್.ಎ.ದರ್ಶನಾಳ ಮಹಾವಿದ್ಯಾಲಯದ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾದನು. ವರ್ಗ ಪ್ರತಿನಿಧಿಗಳಾಗಿ ವಿಜ್ಞಾನ ವಿಭಾಗದ ಕುಮಾರ ಮಾನೆ ಮತ್ತು ಕುಮಾರಿ ಕುಲಕರ್ಣಿ ವಾಣಿಜ್ಯ ವಿಭಾಗದ ಕುಮಾರಿ ತಾಳಿಕೋಟಿ ಮತ್ತು…

Read More

ನಂದಿ ಕಾರ್ಖಾನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಭರವಸೆ ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಈ ವರ್ಷದ ಹಂಗಾಮಿನಲ್ಲಿ ಕಬ್ಬು ನುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ.ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದ ಇಲ್ಲಿನ ಕಾರ್ಮಿಕರು ಕಾರ್ಖಾನೆ ಉಳಿಸಿ ಎಂದು ಕೈಮುಗಿದು ಬೇಡಿಕೊಂಡ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಅಲ್ಲಿದ್ದವರ ಕರುಳು ಚುರ್ ಎನಿಸಿ ಕಣ್ಣುಗಳು ತೇವಗೊಳ್ಳುವಂತೆ ಮಾಡಿದವು. ಅಷ್ಟೇ ಅಲ್ಲ, ಈ ಪ್ರಸಂಗ ಕಾರ್ಖಾನೆಯ ಪ್ರಸ್ತುತ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿತ್ತು.ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದ ರೈತರು, ಕಾರ್ಖಾನೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ರೈತ ಮುಖಂಡರು ಮತ್ತು ಎಂಜಿನಿಯರಿಂಗ್ ಕಂಪನಿ ಅಧಿಕಾರಿಗಳಿಂದ ಪ್ರತ್ಯೇಕವಾಗಿ ಸಭೆ ನಡೆಸಿ ಮಾಹಿತಿ ಪಡೆದ ಸಚಿವರು, ಕಾರ್ಖಾನೆ ಪುನಾರಂಭದ ಹಲವಾರು…

Read More

ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದರಿಂದ ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿವನ್ನು 15000 ಕ್ಯುಸೆಕ್ ಗೆ ಭಾನುವಾರ ರಾತ್ರಿ 7 ಗಂಟೆಯಿಂದ ಹೆಚ್ಚಿಸಲಾಗಿದೆ.ಕೃಷ್ಣಾ ನದಿ ಹಿನ್ನೀರಿನಲ್ಲಿ ಯಾವುದೇ ಪ್ರವಾಹ ಸ್ಥಿತಿ ಉಂಟಾಗಬಾರದು ಎಂದು ಹೊರಹರಿವನ್ನು ಹೆಚ್ಚಿಸಲಾಗಿದೆ.ಪ್ರವಾಹ ಸ್ಥಿತಿ ಉಂಟಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮ ಅನುಸರಿಸಲಾಗುತ್ತಿದೆ. ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಅಧಿಕಾರಿಗಳು, ಕೆಬಿಜೆಎನ್ಎಲ್ ಅಧಿಕಾರಿಗಳು ಮೇಲಿಂದ ಮೇಲೆ ನೀರಿನ ಮಾಹಿತಿ ಮಳೆ ಮಾಹಿತಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.ಜಲಾಶಯದ ಮಟ್ಟ;519.60 ಮೀ ಎತ್ತರದ ಜಲಾಶಯದಲ್ಲಿ ಭಾನುವಾರ ಬೆಳಿಗ್ಗೆ 517.46 ಮೀ ಇದ್ದ ನೀರಿನ ಮಟ್ಟವಿದ್ದು, 23,678 ಕ್ಯುಸೆಕ್ ಒಳಹರಿವು ಇದೆ.ಜಲಾಶಯದಲ್ಲಿ 91 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.ಆಲಮಟ್ಟಿಯ ಹೊರಹರಿವು ಹೆಚ್ಚಿಸಿದ್ದರಿಂದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ 55 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಎರಡು ಘಟಕಗಳು ಕಾರ್ಯಾರಂಭ ಮಾಡಿದ್ದು, ಅದರಿಂದ 100 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಕೆಪಿಸಿಎಲ್ ಮೂಲಗಳು ತಿಳಿಸಿವೆ.ಬೆಂಗಳೂರಿನಲ್ಲಿ ಐಸಿಸಿ ಸಭೆ ಜು.16 ರಂದು;ಕೃಷ್ಣಾ ಅಚ್ಚುಕಟ್ಟು…

Read More

ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಭವಿಷ್ಯ ವಿಜಯಪುರ: ಸಂಗಮೇಶ ಬಬಲೇಶ್ವರ ಈ ನಾಡಿನ ಒಬ್ಬ ಸೃಜನಶೀಲ ಯುವ ನಾಯಕನಾಗಿದ್ದು, ಅವರಂಥ ಅತ್ಯುತ್ತಮ ವಾಗ್ಮಿ, ವಿದ್ಯಾವಂತ ವಿಧಾನ ಪರಿಷತ್ತಿನಲ್ಲಿ ಇರಬೇಕೆನ್ನುವುದು ಶ್ರೀಪೀಠದ ಆಶಯವಾಗಿತ್ತು. ಆದರೆ ಕರ್ನಾಟಕ ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಸಚಿವರಾದ ಎಂ.ಬಿ ಪಾಟೀಲ, ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಕ್ಕಳ ಬಗೆಗಿನ ಅವರ ಕಳಕಳಿಯನ್ನು ಗುರುತಿಸಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದು ನಮ್ಮೆಲ್ಲರಿಗೂ ಸಂತೋಷವನ್ನುಂಟು ಮಾಡಿದೆ ಎಂದು ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.ಭಾನುವಾರ ತಮಗೆ ಸನ್ಮಾನಿಸಿ ಆಶೀರ್ವಾದ ಪಡೆದ ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ವಕ್ತಾರರೂ ಆಗಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರನ್ನು ಸನ್ಮಾನಿಸಿ, ಆಶೀರ್ವದಿಸಿ ಅವರು ಮಾತನಾಡಿದರು.ಸಂಗಮೇಶ ಬಬಲೇಶ್ವರ ಈ ನಾಡಿನ ಭವಿಷ್ಯದ ಯುವ ನಾಯಕರಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಎಂ.ಬಿ ಪಾಟೀಲರು ಮುಂಬರುವ ದಿನಗಳಲ್ಲಿ ಅತ್ಯುತ್ತಮ ವಾಗ್ಮಿಯಾಗಿರುವ ಸಂಗಮೇಶ…

Read More

ವಿಜಯಪುರ: ಯೂತ್ ಫಾರ್ ಸೇವಾ ಸಂಸ್ಥೆ ಹಾಗೂ ಟೆಕ್ಸಸ್ ಇನ್ಸ್ಟ್ರುಮೆಂಟ್ಸ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ, ಜಮೆಟ್ರಿ ಬಾಕ್ಸ್ಪ, ಕಂಪಾಸ್, ಪೆನ್, ಪೆನ್ಸಿಲ್, ನೋಟ ಬುಕ್ ಇತ್ಯಾದಿಗಳನ್ನು ವಿಜಯಪುರ ನಗರದ ಕೆ. ಬಿ. ಎಸ್ ನಂ.06 ಸರ್ಕಾರಿ ಶಾಲೆಯಲ್ಲಿ ವಿತರಿಸಲಾಯಿತು.ಯೂತ್ ಫಾರ್ ಸೇವಾ ಸಂಸ್ಥೆ ಸಹಯೋಗದಡಿಯಲ್ಲಿ ಆರ್ಥಿಕವಾಗಿ ತೊಂದರೆಯಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸುವ ಮೂಲಕ ಬಡಮಕ್ಕಳಿಗೆ ಸಹಾಯವಾಗುವಂತೆ ಸರಕಾರಿ ಶಾಲೆಗಳಲ್ಲಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆ ವಿಜಯಪುರ ಸಂಚಲನಾ ಸಮಿತಿಯ ಸದಸ್ಯರು ಕೃಷ್ಣಾ ಮಂಡ್ಲಾ, ಜಿಲ್ಲಾ ಸಂಯೋಜಕರು ದುರದುಂಡೇಶ್ವರ ಸಾಲಿಮಠ, ಅವಿನಾಷ್, ಸಂಕೇತ, ಸಂಗೀತಾ,ಸುಧಾ, ಬೋರಮ್ಮ, ನಸ್ರಿನ, ಸುಹಾಸಿನಿ, ರೇಖಾ,ಸುಷ್ಮಿತಾ, ಸುಪ್ರಿಯಾ, ಪೂರ್ಣಿಮಾ,ನ ನಿಖಿಲ, ಶ್ರೀಗಿರಿ ಸಂಗಡಿಗರು ಶಾಲಾ ಶಿಕ್ಷಕರು ಹಾಗೂ ಮಕ್ಕಳ ತಂದೆ ತಾಯಿಯರು ಉಪಸ್ಥಿತರಿದ್ದರು.

Read More

ವಿಜಯಪುರ: ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗವನ್ನು ಜಾರಿ ಮಾಡದೇ ರಾಜ್ಯ ಸರ್ಕಾರ ವಿಳಂಬ‌ ಮಾಡುತ್ತಿದೆ. ವೇತನ ಆಯೋಗ ಜಾರಿಗೆ ತರದಿದ್ದರೆ ರಾಜ್ಯಾಧ್ಯಂತ ಶಾಲಾ ಕಾಲೇಜು ಸರ್ಕಾರಿ ಕಛೇರಿಗಳನ್ನು ಬಂದ್ ಮಾಡಿ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಹೇಳಿದರು.ನಗರದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಶುಕ್ರವಾರ ಸಂಜೆ ಏಳನೇ ವೇತನ ಜಾರಿ ಸೇರಿದಂತೆ ಎನ್ಪಿಎಸ್ ರದ್ದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಕುರಿತು ಮನವಿ ಸಲ್ಲಿಸಿ ಮಾತನಾಡಿದರು.ಏಳನೇ ವೇತನ ಕೊಡುವಲ್ಲಿ ರಾಜ್ಯ ಸರ್ಕಾರ ಎರಡು ವರ್ಷದಿಂದ ಮೀನಾಮೇಷ ಮಾಡುತ್ತಿದೆ. ನಾಲ್ಕು ರಾಜ್ಯಗಳಲ್ಲಿ ಎನ್ಪಿಎಸ್ (ನೂತನ ಪಿಂಚಣಿ ಯೋಜನೆ) ರದ್ದು ಮಾಡಿ ಓಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿ ಮಾಡಿದ್ದಾರೆ. ನಮ್ಮ‌ ರಾಜ್ಯದಲ್ಲೂ ಆಗಬೇಕು. ನೌಕರರು ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಿದ್ದು, ಪ್ರತಿ ಕಾಯಿಲೆ ಚಿಕಿತ್ಸೆಗೆ ಒಳಪಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು. ಬರುವ ಅಧಿವೇಶನದಲ್ಲಿ ನಮ್ಮ…

Read More

ಇಂಡಿ: ಬ್ಯಾಂಕಿನ ಸಾಲ ಪ್ರಕರಣಗಳು ಸೇರಿದಂತೆ ಒಟ್ಟು ಒಂದು ಕೋಟಿ ರೂ ವಸೂಲಾತಿಯಾಗಿದೆ. ಮತ್ತು ೨೧೨೨ ಪ್ರಕರಣಗಳು ಇತ್ಯರ್ಥ ವಾಗಿವೆ ಎಂದು ದಿವಾನಿ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ ಸಮಿತಿ ಈಶ್ವರ ಎಸ್.ಎಂ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತ್ ಕಾರ್ಯಕ್ರಮದ ನಂತರ ಮಾತನಾಡಿದ ಅವರುಲೋಕ ಅದಾಲತ್‌ನಲ್ಲಿ ೨೧೨೨ ಪ್ರಕರಣಗಳು ಇತ್ಯರ್ಥ ಗೊಂಡಿವೆ. ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ ೨೪೮೬ ಪ್ರಕರಣಗಳು ಇತ್ಯರ್ಥ ಗೊಂಡಿದ್ದವು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಿ ಇಬ್ಬರಿಗೂ ನ್ಯಾಯ ಒದಗಿಸಿದೆ ಎಂದು ಈಶ್ವರ ಎಸ್.ಎಂ ತಿಳಿಸಿದರು.ಕ್ರಿಮಿನಲ್ ಪ್ರಕರಣಗಳು, ಕುಡಿದು ವಾಹನ ನಡೆಸಿದ ಪ್ರಕರಣ, ಸಾರ್ವಜನಿಕ ಸ್ಥಳದಲ್ಲಿ ಶಾಂತತೆ ಭಂಗ ಉಂಟು ಮಾಡಿದ್ದು, ಅಪಘಾತ ಪ್ರಕರಣ, ಸಿವಿಲ್ ಪಾಲು, ವಾಟ್ನಿ ದಾವೆ, ನಿರ್ಭಂದಕಾಜ್ಞೆ ದಾವೆ, ವಾಹನ ಅಪಘಾತ ಪರಿಹಾರ ದಂತಹ ಪ್ರಕರಣ ಇತ್ಯರ್ಥ ಪಡಿಸಿದೆ…

Read More

ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಸದರಿ ಲೋಕ ಅದಾಲತ್ ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೬೩೮೦ ಬಾಕಿ ಇರುವ ಪ್ರಕರಣಗಳಲ್ಲಿ ೨೩೮೮ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಒಟ್ಟು ೧೫೪೪ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲುವಾಟ್ನಿ ದಾವೆಗಳು, ಎಲ್‌ಎಸಿ ಇಪಿ ಪ್ರಕರಣಗಳು, ಎಮ್‌ವಿಸಿ ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳು ಹಾಗೂ ಅಬಕಾರಿ ಇಲಾಖೆಯ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು ಪೂರ್ವದಾವೆ (ಪಿಎಲ್‌ಸಿ) ಪ್ರಕರಣಗಳಲ್ಲಿ ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಅಬಕಾರಿ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು ಸೇರಿ ಒಟ್ಟು ೧೯೪೨ ಪ್ರಕರಣಗಳಲ್ಲಿ ೭೪೯ ಪ್ರಕರಣಗಳು ರಾಜಿ ಸಂಧಾನದ ಮೂಲಕ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಮತ್ತು ಸಮಿತಿಯ…

Read More