Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಶಾಖೆಯ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಡಿಎಸ್ಎಸ್ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ ಅಧ್ಯಕ್ಷತೆಯಲ್ಲಿ ಜರುಗಿದ ಡಾ.ಡಿ.ಜೆ.ಸಾಗರ ಬಣದ ಸರ್ವಸದಸ್ಯರ ಸಭೆಯಲ್ಲಿ ಡಿಎಸ್ಎಫ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಜಿಲ್ಲಾ ಸಂ. ಸಂಚಾಲಕ ರಮೇಶ ಧರಣಾಕರ, ಇಂಡಿ ತಾಲ್ಲೂಕು ಸಂಚಾಲಕ ರಮೇಶ ನಿಂಬಾಳಕರ, ಸಿಂದಗಿ ತಾಲ್ಲೂಕು ಸಂಚಾಲಕ ಶರಣು ಚಲವಾದಿ, ವಿಜಯಪುರ ತಾಲ್ಲೂಕು ಸಂಚಾಲಕ ವಿಜಯ ಕಾಂಬಳೆ, ಎಸ್.ಎಮ್.ಬಸವಪಟ್ಟಣ, ಪ್ರಕಾಶ ಮಲ್ಲಾರಿ, ಸುನೀಲ ಸುಂಗಠಾಣ ಜೈಭೀಮ ತಳಕೇರಿ ಪಾಲ್ಗೊಂಡು ನೂತನ ಪದಾಧಿಕಾರಿಗಳನ್ನು ನೇಮಿಸಿದರು.ತಾಲ್ಲೂಕು ಶಾಖೆಯ ನೂತನ ಪದಾಧಿಕಾರಿಗಳು: ಜಾನು ಗುಡಿಮನಿ( ತಾಲ್ಲೂಕು ಸಂಚಾಲಕ), ಮಾಂತೇಶ ಕೂಟನೂರ, ದೇವೇಂದ್ರ ಬನಸೋಡೆ, ಕಾಶೀನಾಥ ದೊಡ್ಡಮನಿ( ಸಂಘಟನಾ ಸಂಚಾಲಕರು), ವಿಲಾಸ ಕೊಟಗಿ (ಖಜಾಂಚಿ). ಸುಭಾಷ್ ನಾಟೀಕಾರ( ಡಿಎಸ್ಎಫ್ ತಾಲ್ಲೂಕು ಸಂಚಾಲಕರು) ಸಂಪತ್ ದೊಡಮನಿ( ನಗರ ಪದಾಧಿಕಾರಿ). ಜಬ್ಬರ್ ಚೌಧರಿ( ಸಂಚಾಲಕರು, ತಾಲ್ಲೂಕು ಅಲ್ಪಸಂಖ್ಯಾತರ ಘಟಕ), ಕಮಸಾಬ್ ಕಾಟಮನಳ್ಳಿ(ಸಂಚಾಲಕರು, ನಗರ ಅಲ್ಪ…
ದೇವರಹಿಪ್ಪರಗಿ: ಪಟ್ಟಣದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಿದ್ದು, ಪ್ರತಿಯೊಂದು ವಾರ್ಡಗಳಲ್ಲಿ ಸಿಬ್ಬಂದಿ ನಿತ್ಯ ಸ್ವಚ್ಛತೆ ಕೈಕೊಂಡು ರೋಗಗಳು ಹರಡದಂತೆ ಕ್ರಮ ವಹಿಸಬೇಕೆಂದು ಆಡಳಿತಾಧಿಕಾರಿ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಬಸ್ ನಿಲ್ದಾಣ ಹತ್ತಿರದಲ್ಲಿ ಶನಿವಾರ ಅತೀಕ್ರಮಣಗೊಂಡ ಗೂಡಂಗಡಿ, ಬೀದಿಬದಿಯ ವ್ಯಾಪಾರಿ ಗಾಡಿಗಳನ್ನು ತೆರವುಗೊಳಿಸಿ ನಂತರ ವಿವಿಧ ವಾರ್ಡಗಳಲ್ಲಿ ಸ್ವಚ್ಛತೆ ಕ್ರಮ ಪರಿಶೀಲಿಸಿ ಮಾತನಾಡಿದರು, ಈಗ ಮಳೆಗಾಲ ಇರುವುದರಿಂದ ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಎಲ್ಲೆಡೆ ಸಾಂಕ್ರಾಮಿಕ ರೋಗಗಳ ಭೀತಿ ಕಂಡು ಬರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಕಡೆ ವಿಶೇಷವಾಗಿ ಜನಸಂದಣಿ ಹೆಚ್ಚಿರುವ ಕಡೆ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ದಿನನಿತ್ಯ ನೂರಾರು ಜನ ಗ್ರಾಮಗಳಿಂದ ಆಗಮಿಸುತ್ತಾರೆ. ಪಟ್ಟಣದ ಬಸ್ ನಿಲ್ದಾಣ, ಮೊಹರೆ ಹಣಮಂತ್ರಾಯ ವೃತ್ತ, ಡಾ.ಅಂಬೇಡ್ಕರ್ ವೃತ್ತ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸ್ವಚ್ಛತೆಗೆ ನಿಗಾವಹಿಸಬೇಕೆಂದು ತಿಳಿಸಿದರು.ಮುಖ್ಯಾಧಿಕಾರಿ ಶಬ್ಬಿರ ರೇವೂರಕರ ಮಾತನಾಡಿ, ಪಟ್ಟಣದ ೧೭ ವಾರ್ಡಗಳಲ್ಲಿ ನಿತ್ಯ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ನಮ್ಮ ಪೌರಕಾರ್ಮಿಕರು ಬೆಳಗಿನ ಜಾವ ವಹಿಸಿಕೊಟ್ಟ ಪ್ರದೇಶಗಳನ್ನು ಸ್ವಚ್ಛಗೊಳಿಸಿ ಮಾಹಿತಿ ನೀಡುತ್ತಾರೆ.…
ಬಸವನಬಾಗೇವಾಡಿ: ಬಹುತೇಕ ಗ್ರಾಮೀಣ ಭಾಗದಿಂದ ಬಂದವರೇ ಬದುಕಿನಲ್ಲಿ ಸಾಧನೆ ಮಾಡಿರುವದನ್ನು ಕಾಣುತ್ತೇವೆ. ಬದುಕಿನಲ್ಲಿ ಸಾಧಿಸುವ ಛಲ ಒಂದಿದ್ದರೆ ಖಂಡಿತ ಬದುಕಿನಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸಿ ಒಂದಿಲ್ಲೊಂದು ಸಾಧನೆ ಮಾಡಲು ಸಾಧ್ಯ ಎಂದು ವಿಜಯಪುರ ಸೈನಿಕ ಶಾಲೆಯ ನಿವೃತ್ತ ಶಿಕ್ಷಕ ಡಾ.ಎಸ್.ಆರ್.ಹಿರೇಮಠ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊದಲು ತನ್ನನ್ನು ತಾನು ಪ್ರೀತಿಸಬೇಕು. ಆತ್ಮವಿಶ್ವಾಸದ ಬದುಕು ನಮ್ಮದಾಗಿದ್ದರೆ ಖಂಡಿತ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದರು.ಬಹುಭಾಷೆಯ ಜ್ಞಾನದೊಂದಿಗೆ ಏಕಾಗ್ರತೆ, ನಯ-ವಿನಯ, ಶ್ರದ್ಧೆ, ಗುರಿ ಇಟ್ಟುಕೊಂಡು ಗುರುವಿನ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿ ಜೀವನ ಮುನ್ನಡೆದರೆ ನೀವು ಮತ್ತು ನಿಮ್ಮ ಪಾಲಕರು ಕಂಡ ಕನಸು ನನಸಾಗುವಲ್ಲಿ ಯಾವ ಸಂದೇಹವಿಲ್ಲ. ಅದ್ಭುತ ಪ್ರತಿಭೆಗಳಾದ ವಿದ್ಯಾರ್ಥಿಗಳು ಭಾರತದ ಭವಿಷ್ಯತ್ತಿನ ಆಸ್ತಿಯಾಗಿದ್ದಾರೆ. ಬಂಥನಾಳದ ಸಂಗನಬಸವ ಸ್ವಾಮೀಜಿ, ಡಾ.ಫ.ಗು.ಹಳಕಟ್ಟಿ, ದಿ. ಬಿ.ಎಂ.ಪಾಟೀಲ ಅವರ ಅವಿರತ ಪರಿಶ್ರಮದಿಂದ ಬಿಎಲ್ಡಿಇ ಸಂಸ್ಥೆಯ ಹೆಮ್ಮರವಾಗಿ ಬೆಳೆದಿದೆ. ಇಂತಹ ಸಂಸ್ಥೆಯಲ್ಲಿ…
ಸಿಂದಗಿ: ಪಂಚಮಸಾಲಿ ಸಮಾಜದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ೨ಎ ಮೀಸಲಾತಿ ಹಕ್ಕನ್ನು ಬರುವ ಮುಂಗಾರು ಅದಿವೇಶನದಲ್ಲಿ ಪ್ರತಿಪಾದಿಸುವಂತೆ ಹಕ್ಕೊತ್ತಾಯಿಸಿ ಶಾಸಕರುಗಳ ಮನೆಗೆ ತೆರಳಿ ಆಗ್ರಹ ಪತ್ರ ಚಳುವಳಿಯನ್ನು ಕೂಡಲಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು, ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು ಇದರ ಭಾಗವಾಗಿ ಈಗಾಗಲೇ ಸಮಾಜದ ಶಾಸಕರುಗಳಿಗೆ ಆಗ್ರಹ ಪತ್ರವನ್ನು ಸಲ್ಲಿಸಲಾಗಿದೆ.ಸಮಾಜದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ರಾಜುಗೌಡ ಪಾಟೀಲ್, ಕುದರಸಾಲವಾಡಗಿ, ಸಿ.ಸಿ.ಪಾಟೀಲ್, ರಾಜು ಕಾಗೆ ಇವರುಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಅದರಂತೆ ಸಿಂದಗಿಯ ಶಾಸಕ ಅಶೋಕ ಮನಗೂಳಿ ಅವರಿಗೂ ಸಹ ಮನವಿ ಸಲ್ಲಿಸಲು ಪೂಜ್ಯರು ಜು.೧೫ರಂದು ಬೆಳಿಗ್ಗೆ ೧೦ಗಂಟೆಗೆ ಅವರ ಮನೆಗೆ ಆಗಮಿಸಲಿದ್ದಾರೆ. ಕಾರಣ ಸಮಾಜದ ಮಕ್ಕಳಿಗೆ ೨ಎ ಮೀಸಲಾತಿಯನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಗಲಿರುಳು ಶ್ರಮಿಸುತ್ತಿರುವ ಪೂಜ್ಯರಿಗೆ ಬಲ ತುಂಬಿ ಕೊಡುವ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಪಂಚಮಸಾಲಿ ಸಮಾಜ ಬಾಂಧವರು ಉಪಸ್ಥಿತರಿದ್ದು, ಶ್ರೀಗಳ ಹೋರಾಟಕ್ಕೆ ಬೆಂಬಲಿಸಬೇಕೆಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ…
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ವಿಜಯಪುರ ವತಿಯಿಂದ ೨೦೨೪-೨೫ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ (ಸೂಕ್ಷ್ಮ ನೀರಾವರಿ) ಕೇಂದ್ರ ಪುರಸ್ಕೃತ ಯೋಜನೆಯಡಿ ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು, ಅಳವಡಿಕೆ ಮತ್ತು ನಿರ್ವಹಣೆ ಕುರಿತು ಇತ್ತೀಚೆಗೆ ಪ್ರಗತಿ ಪರ ರೈ ಜ್ಯೋತಿಬಾ ದಂದರಗಿ ಇವರ ಕ್ಷೇತ್ರದಲ್ಲಿ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉಪ ಕೃಷಿ ನಿರ್ದೇಶಕ ಡಾ.ಬಾಲರಾಜ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ವಿಜಯಲಕ್ಷ್ಮೀ ಚವ್ಹಾಣ, ಪ್ರಗತಿಪರ ರೈತರಾದ ಗುರುಪಾದ ದಾಸ್ಯಾಳ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ವಿಜ್ಞಾನಿಗಳಾದ ಡಾ.ಎಸ್.ಎಂ.ವಸ್ತ್ರದ, ಎಂ.ಕೆ.ಬಿರಾದಾರ ಅವರು ರೈತರಿಗೆ ಉಪಯುಕ್ತ ಮಾಹಿತಿ ಒದಗಿಸಿದರು.ಕೃಷಿ ಅಧಿಕಾರಿ ಶ್ರೀಮತಿ ಫಾತಿಮಾಬಾನು ಸುತಾರ ನಿರೂಪಿಸಿದರು.ಬರಟಗಿ ಗ್ರಾಮದ ಸುಭಾಷಚಂದ್ರ ರಜಪೂತ, ದೊಂಡಿಸಿಂಗ್ ಪತ್ತಾರ, ದತ್ತ ಕಾಟಕಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಮದ ಎಂ.ಟಿ.ಎಸ್. ಮತ್ತು ಹವಾಲ್ದಾರ ಪರೀಕ್ಷೆ ೨೦೨೪ರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದ್ದು, ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೇಶದಾದ್ಯಂತ ನಡೆಸಲಾಗುತ್ತಿದೆ.ಆಸಕ್ತ ಜಿಲ್ಲೆಯ ವಿದ್ಯಾವಂತ ೧೦ನೇ ಅಥವಾ ತತ್ಸಮಾನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರು ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ : ೩೧-೭-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗ (SSC) website: www.ssc.kkr.nic.in & https:ssc.gov.in ನ್ನು ಅಥವಾ ದೂ: ೦೮೦-೨೫೫೦೨೫೨೦ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೊಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಶ್ವವಿಖ್ಯಾತ ಗೋಲಗುಂಬಜ್ಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ಗೋಲಗುಂಬಜ್ನಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳು ಹಾಗೂ ಗೋಲಗುಂಬಜ್ಕ್ಕೆ ದೀಪಾಲಂಕಾರ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.ಗೋಲಗುಂಬಜ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿಶ್ವವಿಖ್ಯಾತ ಐತಿಹಾಸಿಕ ಗೋಲಗುಂಬಜ್ ವೀಕ್ಷಣೆಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸಲಿದ್ದು, ನೋಡುಗರಿಗೆ ಆಕರ್ಷಕಗೊಳಿಸಲು ಗೋಲಗುಂಬಜ್ ನಾಲ್ಕು ದಿಕ್ಕಿನಲ್ಲಿ ದೀಪಾಲಂಕಾರ ಕೈಗೊಳ್ಳಬೇಕು. ರಿನಿವ್ ಎನರ್ಜಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಸಿಎಸ್ಆರ್ ಅನುದಾನದಡಿ ಸೌರಶಕ್ತಿ ಅಳವಡಿಸಲಾಗುತ್ತಿದ್ದು, ಈ ಸೌರಶಕ್ತಿ ಖಾಸಗಿ ಕಂಪನಿಯವರು ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ನ್ನು ದೀಪಾಲಂಕಾರ, ವಸ್ತು ಸಂಗ್ರಹಾಲಯ, ಅಲ್ಲಿರುವ ಕಚೇರಿಗೆ ಬಳಸಿಕೊಳ್ಳುವುದು, ಉಳಿದ ವಿದ್ಯುತ್ ಹೆಸ್ಕಾಂಗೆ ಪಾವತಿಯಾಧಾರದ ಮೇಲೆ ವಿತರಣೆಗೆ ಕ್ರಮ ವಹಿಸಲು ತ್ವರಿತ ಕ್ರಿಯಾಯೋಜನೆ ಸಿದ್ಧಪಡಿಸಿ ಆಗಸ್ಟ್ ಮಧ್ಯಾವಧಿಯವರೆಗೆ ದೀಪಾಲಂಕಾರಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿಶ್ವವಿಖ್ಯಾತ ಗೋಲಗುಂಬಜ್ನ ಹಿಂದೆ ಖಾಲಿ ಇರುವ ೧೦ ಎಕರೆ ಜಾಗೆಯಲ್ಲಿ ಗಿಡಗಳನ್ನು ನೆಟ್ಟು ಹಸರಿಕರಣ ಮಾಡಬೇಕು. ದೇಶ-ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಗೋಲಗುಂಬಜ್ನಲ್ಲಿ ಸೂಕ್ತ ಕುಡಿಯುವ ನೀರಿನ…
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ | ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. ೨೮ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.ಬೃಹತ್ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು.ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು.ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಗಮಿಸುವರು.ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವ ಈ…
ಬಾಬಾನಗರ ಹಾಗೂ ಬಿಜ್ಜರಗಿ ಗ್ರಾಪಂಗೆ ಭೇಟಿ ನೀಡಿದ ಜಿಪಂ ಸಿಇಒ ರಿಷಿ ಆನಂದ ಸೂಚನೆ ವಿಜಯಪುರ: ತಿಕೋಟಾ ತಾಲೂಕಿನ ಬಾಬಾನಗರ ಮತ್ತು ಬಿಜ್ಜರಗಿ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಶನಿವಾರ ಭೇಟಿ ನೀಡಿ ವಿವಿಧ ಯೋಜನೆಗಳ ಹಲವು ಕಾಮಗಾರಿಗಳ ಪರಿಶೀಲನೆ ನಡೆಸಿದರು.ಬಾಬಾನಗರ ಹಾಗೂ ಬಿಜ್ಜರಗಿ ಗ್ರಾಮ ಗ್ರಾಮದಲ್ಲಿ ಸರಕಾರಿ ಪ್ರೌಢಶಾಲೆ, ಗ್ರಂಥಾಲಯ, ಗ್ರಾಮ ಪಂಚಾಯತಿ ಕಾರ್ಯಾಲಯ, ಪಂಚಾಯತಿ ವ್ಯಾಪ್ತಿಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಬಾಬಾನಗರ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಆಟದ ಮೈದಾನ, ಶಾಲಾ ಕಂಪೌಂಡ, ಹೈಟೆಕ್ ಶೌಚಾಲಯ, ಸಸಿಗಳ ನಾಟಿ, ಅಡುಗೆ ಕೊಠಡಿ ವೀಕ್ಷಿಸಿದರು.ಶಾಲೆಯಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ, ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಚರ್ಚೆ…
ಪ್ರಧಾನಿ ಮೋದಿ ಹೇಳಿಕೆ | “ಆರ್ಬಿಐ ಉದ್ಯೋಗದ ಕುರಿತು ಪ್ರಕಟಿಸಿದ ವಿಸ್ತೃತ ವರದಿ | ಪ್ರತಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ಮುಂಬೈ: ಆರ್ಬಿಐ ವರದಿಯ ಪ್ರಕಾರ ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.ಮುಂಬೈನ ಗೋರೆಗಾಂವ್ ಉಪನಗರದಲ್ಲಿ ನಡೆದ ಸಮಾರಂಭದಲ್ಲಿ ರಸ್ತೆ, ರೈಲ್ವೆ ಮತ್ತು ಬಂದರು ವಲಯಗಳಲ್ಲಿ 29,000 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, “ಆರ್ಬಿಐ ಇತ್ತೀಚೆಗೆ ಉದ್ಯೋಗದ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿದೆ. ಆ ವರದಿಯ ಪ್ರಕಾರ, ಕಳೆದ ಮೂರು-ನಾಲ್ಕು ವರ್ಷಗಳಲ್ಲಿ ಸುಮಾರು ಎಂಟು ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಈ ಅಂಕಿ ಅಂಶಗಳು ಉದ್ಯೋಗಗಳ ಬಗ್ಗೆ ಸುಳ್ಳು ಮಾಹಿತಿ ಹರಡುವವರ ಬಾಯಿ ಮುಚ್ಚಿಸಿದೆ ಎಂದರು.ಉದ್ಯೋಗದ ಬಗ್ಗೆ ಸುಳ್ಳು ಮಾಹಿತಿ ಹರಡುವವರು ಹೂಡಿಕೆ, ಮೂಲಸೌಕರ್ಯ ಮತ್ತು ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಾರೆ. ಈಗ ಅವರ ಬುದ್ಧಿ ಬಯಲಾಗಿದೆ. ದೇಶದ ನಾಗರಿಕರು…
