Author: editor.udayarashmi@gmail.com

-ಶಿವಕುಮಾರ ಲೇಖಕರು – ಪತ್ರಕರ್ತರು ಅಪರ್ಣ ಇನ್ನಿಲ್ಲ ಎಂಬ ಸುದ್ಧಿ ಇಡೀ ಕನ್ನಡಿಗರನ್ನು ನೋವಿಗೆ ದೂಡಿದೆ. ಅಷ್ಟರ ಮಟ್ಟಿಗೆ ತನ್ನ ಅಧ್ಯಯನಶೀಲತೆಯಿಂದ ಭಾಷೆ ಸಂವೇದನೆಯ ಶಕ್ತಿಯನ್ನು ಸಿದ್ಧಿಸಿಕೊಂಡು ನಿರೂಪಣೆಯ ಕ್ಷೇತ್ರದಲ್ಲಿ ನಂಬರ್ ಒನ್ ಜನಪ್ರಿಯತೆ ಸಾಧಿಸಿದ್ದರು. ಸರ್ಕಾರದ ಯಾವುದೇ ಕಾರ್ಯಕ್ರಮವಿರಲಿ ಅಪರ್ಣರದೆ ನಿರೂಪಣೆಯಿಂದ ಕಳೆಗಟ್ಟುತಿತ್ತು. ಸ್ಪುಟವಾಗಿ ಸರಳವಾಗಿ ಉಚ್ಚಾರಣಾ ಶೈಲಿಯ ಜೊತೆ ತಕ್ಕ ಸಾಂಪ್ರದಾಯಿಕ ಉಡುಗೆಯೊಂದಿಗೆ ಗೌರವಿಸಲ್ಪಡುತ್ತಿದ್ದರು. ಅವರ ಪ್ರತಿಮಾತಿನಲ್ಲೂ ಸಾಹಿತ್ಯ ಸದಭಿರುಚಿ ಧ್ವನಿಸುತ್ತಿತ್ತು. ಅವರ ಸಹಜ ಮುಗ್ಧ ನಗುವಿನ ನಡವಳಿಕೆ ನಮ್ಮ ಮನೆ ಅಕ್ಕ ತಂಗಿ ಮಗಳಂತೆ ಆಪ್ತತೆ ಮೂಡಿಸುತ್ತಿದ್ದ ಅಪರ್ಣ, ಗಂಭೀರವಾಗಿ ಇರುವಂತೆಯೂ ಕಾಣುತ್ತಿದುಂಟು. ಆದರೆ ಮಜಾ ಟಾಕೀಸಿನ ಒನ್ ಅಂಡ್ ಒನ್ಲಿ ವರು-ವರಲಕ್ಷ್ಮಿ ಪಾತ್ರದ ಮೂಲಕ‌ ತನ್ನೊಳಗಿನ ಅದ್ಭುತ ಹಾಸ್ಯ ಪ್ರತಿಭಾ ಪ್ರಜ್ಞೆಯನ್ನು ಪ್ರದರ್ಶಿಸಿದ್ದರು. ಈ ಮೂಲಕ ಕೋಟ್ಯಾಂತರ ಪ್ರೇಕ್ಷಕರನ್ನು ನಕ್ಕು ನಗಿಸಿ ಅಭಿಮಾನ‌ ಸೂರೆಗೊಂಡಿದ್ದು‌ ಅಪರ್ಣರ ಬಹುಮುಖ ಪ್ರತಿಭಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿತ್ತು. ವಾಸ್ತವ ಬದುಕಿನಲ್ಲಿ ಹಲವು ಏರಿಳಿತದ ಅನುಭವಗಳನ್ನು ಕಂಡು ಮಾಗಿದ್ದ ಅಪರ್ಣರ ವ್ಯಕ್ತಿತ್ವದ ತೂಕವು…

Read More

ಇನ್ನು ಮುಂದೆ ಕಾರ್ಯಕ್ರಮಗಳಲ್ಲಿ ಸನ್ಮಾನ ಸ್ವೀಕರಿಸದಿರಲು ಸಚಿವ ಎಂ.ಬಿ.ಪಾಟೀಲ ನಿರ್ಧಾರ ವಿಜಯಪುರ: ಇನ್ನು ಮುಂದೆ ಕಾರ್ಯಕ್ರಮಗಳಲ್ಲಿ ಹಾರ, ಶಾಲು, ಸನ್ಮಾನ ಬೇಡ. ಇದಕ್ಕೆ ಖರ್ಚು ಮಾಡುವ ಹಣವನ್ನು ಬಡವರಿಗೆ ಸಹಾಯ ಮಾಡಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಂಬಾಗಿ ಮತ್ತು ಬೋಳಚಿಕ್ಕಲಕಿ ಗ್ರಾಮಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಕಂಬಾಗಿಯಲ್ಲಿ ಪಿ. ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸನ್ಮಾನ ಮಾಡಿಕೊಳ್ಳುತ್ತಿರುವುದು ಇದು ಕೊನೆಯ ಕಾರ್ಯಕ್ರಮ. ಇನ್ನು ಮುಂದೆ ಸನ್ಮಾನ ಬೇಡ ಎಂದು ಡಿಸಿ ಮೂಲಕ ಆದೇಶ ಮಾಡಿಸುವೆ. ಸನ್ಮಾನದ ಹಾರ, ಶಾಲು, ತುರಾಯಿ ಹಣವನ್ನು ಬಡವರಿಗೆ ಸಹಾಯ ಮಾಡಿ. ಸಿದ್ದೇಶ್ವರ ಸ್ವಾಮೀಜಿ ಎಂದೂ ಹಾರ ಹಾಕಿಸಿಕೊಳ್ಳಲಿಲ್ಲ. ಪಾದಗಳಿಗೆ ನಮಸ್ಕಾರ ಮಾಡಿಸಿಕೊಳ್ಳಲಿಲ್ಲ. ಅವರು ನಮಗೆ ಆದರ್ಶರಾಗಿದ್ದಾರೆ. ಸನ್ಮಾನ ಕಾರ್ಯಕ್ರಮದಿಂದಗಾಗಿ ಸಮಯವೂ…

Read More

ಎಂ.ಎಚ್.ಎಂ.ಪ.ಪೂ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಡಿಪಿಐ ಹೊಸಮನಿ ಸಲಹೆ ಆಲಮಟ್ಟಿ: ಮಕ್ಕಳ ಶೈಕ್ಷಣಿಕ ಬಾಳಿನಲ್ಲಿಂದು ಪಿಯುಸಿ ಶಿಕ್ಷಣ ಮಹತ್ವದ್ದಾಗಿದೆ. ಅವರ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮಹೋನ್ನತ ನಿಣಾ೯ಯಕ ಘಟ್ಟದ ಪಾತ್ರ ವಹಿಸುತ್ತದೆ ಎಂದು ವಿಜಯಪುರ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿದೇ೯ಶಕ ಎಸ್.ಕೆ.ಹೊಸಮನಿ ಹೇಳಿದರು.ಇಲ್ಲಿನ ಎಸ್.ವಿ.ವಿ.ಸಂಸ್ಥೆಯ ಮಂಜಪ್ಪ ಹಡೇ೯ಕರ ಸ್ಮಾರಕ ಸಂಯುಕ್ತ ಪ.ಪೂ (ಎಂ.ಎಚ್.ಎಂ) ಕಾಲೇಜಿಗೆ ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿ ಆಡಳಿತಾತ್ಮಕ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಾಲೇಜು ಉಪನ್ಯಾಸಕ ಬೋಧಕರು ಶಿಕ್ಷಣ ವೃತ್ತಿ ಕೇವಲ ವೃತ್ತಿಯನ್ನಾಗಿ ಪರಿಗಣಿಸದೇ ಮಕ್ಕಳ ಭವಿಷ್ಯತ್ತಿನ ಹಿತದೃಷ್ಟಿಯಿಂದ ಸೇವಾ ಮನೋಭಾವನೆಯ ಬದ್ದತೆ ಕಾಪಾಡಿಕೊಂಡು ಬರಬೇಕು. ಗುಣಾತ್ಮಕ ವಿಮರ್ಶೆ, ನಿರ್ದೇಶನ, ಮಾರ್ಗದರ್ಶನದ ಮೂಲಕ ಬೋಧನಾ ಕಾಯಕ ಕೈಗೊಂಡು ತಮ್ಮ ವೃತ್ತಿಪರತೆಗೆ ವಿಶೇಷ ಮೆರುಗು ತರಬೇಕೆಂದರು.ದೇಶದ ಸತ್ಪ್ರಜೆಗಳನ್ನು ರೂಪಿಸುವ ಗುರುತರ ದೊಡ್ಡ ಹೊಣೆಗಾರಿಕೆ ಗುರುಗಳ ಮೇಲಿದೆ. ವಿದ್ಯಾರ್ಥಿಗಳಲ್ಲಿ ಮೊದಲು ಸನ್ನಡತೆ ಸೃಷ್ಟಿಸಲು ಮುಂದಾಗಬೇಕು. ಸಮಾಜದಲ್ಲಿ ಗೌರವದಿಂದ ಬಾಳಿ ಬದುಕುವಂಥ ವ್ಯಕ್ತಿತ್ವದ ಮುಖಗಳು ರೂಪಿಸಿದಾಗ ಮಾತ್ರ ಶಿಕ್ಷಣ…

Read More

ಕೆಂಭಾವಿ: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಆದೇಶದ ಮೇರೆಗೆ ಪಟ್ಟಣದ ಬಸ್ ನಿಲ್ದಾಣಕ್ಕೆ ಮರು ಜೀವ ತುಂಬಿದ ಇಲಾಖೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯು ಜನರ ಅನುಕೂಲಕ್ಕಾಗಿ ಹೊಸ ಮಾರ್ಗಗಳನ್ನು ಕಂಡು ಕೊಂಡು ಬಸ್ಸ್ ಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಜೀವರಾವ್ ಕುಲ್ಕರ್ಣಿ ಹೇಳಿದರು.ಪಟ್ಟಣದಿಂದ ಕಲಬುರ್ಗಿಗೆ ಆರಂಭವಾದ ನೂತನ ಬಸ್ಸ್ ಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಈ ಬಸ್ಸು ಸಾಯಂಕಾಲ 5- 40, ಕ್ಕೆ ಕಲಬುರ್ಗಿ ಬಿಟ್ಟು ರಾತ್ರಿ 8-30, ಕ್ಕೆ ಕೆಂಭಾವಿ ತಲುಪಿ, ಬೆಳಿಗ್ಗೆ 6 ಗಂಟೆ 5 ನಿಮಿಷಕ್ಕೆ ಕೆಂಭಾವಿ ಬಿಟ್ಟು 8-30, ಕ್ಕೆ ಕಲ್ಬುರ್ಗಿ ತಲುಪಲಿದೆ. ಪಟ್ಟಣವು ಸೇರಿದಂತೆ ಸುತ್ತಲಿನ ಗ್ರಾಮಗಳ ಪ್ರಯಾಣಿಕರು ಈ ಬಸ್ಸಿನಲ್ಲಿ ಪ್ರಯಾಣಿಸಿ ಸಾರಿಗೆ ಸಂಸ್ಥೆಗೆ ಆದಾಯ ಹೆಚ್ಚಿಸಬೇಕು ಹಾಗೂ ಬಸ್ಸು ಕಾಯಂ ಓಡಾಡಲು ಜನಸಾಮಾನ್ಯರು ಸಹಕರಿಸಬೇಕು. ಸಾರಿಗೆ ಸಂಸ್ಥೆಗೆ ಆದಾಯ ಬರದಿದ್ದರೆ ಇಲಾಖೆ ಅಧಿಕಾರಿಗಳು ಬಸ್ಸ್…

Read More

ವಿಜಯಪುರ: ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕುಬಕಡ್ಡಿ ಗ್ರಾಮದ RMSMA ಪ್ರೌಢ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತುಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಮತ್ತು ಆರೋಗ್ಯ ಸಿಬ್ಬಂದಿ ಹಾಜರಿದ್ದರು.

Read More

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ | 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಡಿ ದಾಳಿ | ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜು.12 ರಂದು ತಮ್ಮ ವಶಕ್ಕೆ ಪಡೆದಿದ್ದಾರೆ.ಬೆಂಗಳೂರಿನ ಸದಾಶಿವನಗರದ ಡಾಲರ್ಸ್‌ ಕಾಲೊನಿಯ ನಿವಾಸದಿಂದ ನಾಗೇಂದ್ರ ಅವರನ್ನು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದ ಅಧಿಕಾರಿಗಳು, ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಅವರ ಆಪ್ತರು ಮತ್ತು ಆಪ್ತ ಸಹಾಯಕರನ್ನು ಕೂಡ ಇದೇ ಕಚೇರಿಯಲ್ಲಿ ಇರಿಸಲಾಗಿದೆ.ಇಡಿ ಅಧಿಕಾರಿಗಳು ಕರೆದೊಯ್ಯುವಾಗ ಮಾಧ್ಯದವರಿಗೆ ಪ್ರತಿಕ್ರಿಯಿಸಿದ ಬಿ.ನಾಗೇಂದ್ರ “ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ. ಸುಮ್ಮನೆ ಕರೆದುಕೊಂಡು ಬಂದಿದ್ದಾರೆ” ಎಂದು ಹೇಳಿದ್ದಾರೆ.ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷರೂ…

Read More

ಬಂಜಾರಾ ಪ್ರೌಢ ಶಾಲೆಯಲ್ಲಿ ಚುನಾವಣಾ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ ವಿಜಯಪುರ: ಭಾರತದ ಭಾವಿ ಮತದಾರ ಆಗಲಿರುವ ಫ್ರೌಢ ಶಾಲಾ ಮಕ್ಕಳು ನಮ್ಮ ಚುನಾವಣಾ ಮಾದರಿ ಅನುಸರಿಸಲಾಗಿದೆ. ಚುನಾವಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡುವುದರಲ್ಲಿ ಮತದಾರರ ಜವಾಬ್ದಾರಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದಾಗಿದೆ ಎಂದು ಶಾಲಾ ಚುನಾವಣಾ ಅಧಿಕಾರಿಗಳಾದ ಎಸ್.ಕೆ.ಸಿಂಧೆಯವರು ಹೇಳಿದರು.ಶುಕ್ರವಾರದಂದು ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ಚುನಾವಣಾ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ ಜರುಗಿತು. ನಾಮಪತ್ರ ಸಲ್ಲಿಕೆ, ಚಿಹ್ನೆ ನೀಡುವಿಕೆ, ಬ್ಯಾಲೇಟ್ ಪೇಪರ್, ಚುನಾವಣಾ ಪ್ರಚಾರ, ಸಿಬ್ಬಂದಿಗಳ ನೇಮಕ, ಮತ ಹಾಕಿದ ವಿದ್ಯಾರ್ಥಿಗಳಿಗೆ ಶಾಹಿ ಬಳಕೆ, ಏಜೆಂಟರ ನೇಮಕ ಮಾಡುವ ಮೂಲಕ ಚುನಾವಣಾ ಮಾದರಿಯಲ್ಲಿಯೇ ಶಾಲಾ ಸಂಸತ್ತು ಚುನಾವಣೆ ಯಶಸ್ವಿಯಾಗಿ ನೆರವಾಯಿತು. ಈ ವೇಳೆ ೪೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತದಾನ ಮಾಡಿ ತಮ್ಮ ನಾಯಕರನ್ನು ಆರಿಸಿದರು.ಈ ವೇಳೆಯಲ್ಲಿ ಮಾತನಾಡಿದ ಅವರು. ಚುನಾವಣೆಯಲ್ಲಿ ಆಸಕ್ತಿ ಮತ್ತು ನಾಯಕತ್ವದ ಗುಣ ಬೆಳೆಸುವ ಭಾಗವಾಗಿ ಈ ಚುನಾವಣೆ…

Read More

ವಿಜಯಪುರ: ನಗರದ ಗಾಂಧಿನಗರ ಬಡಾವಣೆಯಲ್ಲಿರುವ ಕಲ್ಲು ಗಣಿಗಾರಿಕೆಯಿಂದ ಉಂಟಾಗುತ್ತಿರುವ ಗುಂಡಿಯ ಸುತ್ತಲೂ ಗೋಡೆಯನ್ನು ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸೋಶಿಯಲ್ ಡೆಮೋಕ್ರೇಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಅತಾವುಲ್ಲಾ ದ್ರಾಕ್ಷೀ ಮಾತನಾಡಿ, ವಿಜಯಪುರ ನಗರದ ಗಾಂಧಿನಗರ ಬಡಾವಣೆಯಲ್ಲಿ ನೀರಿನ ಟ್ಯಾಂಕ್ ಹತ್ತಿರ ಕಳೆದ ಹಲವಾರು ವರ್ಷಗಳಿಂದ ಇರುವ ಕಲ್ಲು ಗಣಿಗಾರಿಕೆಯಿಂದ ಉಂಟಾಗಿರುವ ಗುಂಡಿಯ ಸುತ್ತಲು ಸುರಕ್ಷತೆಗಾಗಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಕಾರಣ ಅಲ್ಲಿ ಸುತ್ತು ಮುತ್ತಲೂ ವಾಸಿಸುವ ಜನ – ಜಾನುವಾರುಗಳ , ವಾಹನ ಸವಾರರ ಮತ್ತು ಶಾಲಾ ಮಕ್ಕಳಿ ಜೀವಕ್ಕೆ ಹಾನಿ ಉಂಟಾಗುವ ಸಂಭವ ಇರುತ್ತದೆ. ಅದಲ್ಲದೆ ಗುಂಡಿಯಲ್ಲಿ ಮಳೆ ನೀರು ತುಂಬಿರುವುದರಿಂದ ಜನ – ಜಾನುವಾರುಗಳ ಜೀವಹಾನಿ ಉಂಟಾಗುವ ಸಂಭವ ಹೆಚ್ಚಾಗಿದ್ದು, ಗುಂಡಿಯಲ್ಲಿ ಮಳೆ ನೀರು ತುಂಬಿದ್ದರಿಂದ ಅಲ್ಲಿ ಸುತ್ತು ಮುತ್ತಲೂ ವಾಸಿಸುವ ಜನರದ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ. ಅದಲ್ಲದೆ ಕೆಲವು ತಿಂಗಳುಗಳ…

Read More

ವಿಜಯಪುರ: ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ ರವರಿಗೆ ದಲಿತ ವಿದ್ಯಾರ್ಥಿ ಪರಿಷತ್ ಮೂಲಕ ಮನವಿ ಮಾಡಲಾಯಿತು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿಯವರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಾರೆ.ಈ ಬಾರಿ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಈಗಿರುವ ವಸತಿ ನಿಲಯಗಳಲ್ಲಿ ಅವಕಾಶ ಸಿಗದೇ ಹೊರಗಡೆ ರೂಮ್ ಮಾಡಿಕೊಂಡು ಓದಬಹುದು ಕಷ್ಟದ ಸಂಗತಿ ಆಗಿದೆ, ಅದರಲ್ಲೂ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ ಗಳಿಲ್ಲದೆ ಕ್ಲಾಸ್ ಗಳನ್ನು ತಪ್ಪಿಸುವ ಸಂಭವ ಉಂಟಾಗಿದೆ ಪ್ರತಿದಿನ ಕಾಲೇಜಿನಿಂದ ರೂಮಿಗೆ ರೂಮಿನಿಂದ ಕಾಲೇಜಿಗೆ ಓಡಾಡುವದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ.ಅದಕ್ಕಾಗಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹಿತ ದೃಷ್ಟಿಯಯಿಂದ ಸಮಾಜ ಕಲ್ಯಾಣ…

Read More

ಚಿಮ್ಮಡದಲ್ಲಿ ಸಸಿ ನೆಡುವ ಕಾರ್ಯಕ್ರಮ | ನಿವೃತ್ತ ಅಧಿಕಾರಿಯ ಪರಿಸರ ಪ್ರೇಮ ಚಿಮ್ಮಡ: ಮನುಕುಲ, ಪಕ್ಷಿ ಸಂಕುಲ ಸೇರಿದಂತೆ ಸಕಲ ಜೀವರಾಶಿಗಳ ಉಳಿವಿಗೆ ಹಸಿರು ಪರಿಸರ ಕಾಪಾಡಿಕೊಳ್ಳುವ ಅಗತ್ಯತೆ ಹೆಚ್ಚಿದೆ ಎಂದು ಚಿಮ್ಮಡ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ಗುಡ್ಡದ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಿವೃತ್ತ ವಲಯ ಅರಣ್ಯಾಧಿಕಾರಿ ವಾಸುದೇವ ಇಗವೆಯವರು ಆಯೋಜಿಸಿದ್ದ “ಸಸಿ ನೆಡುವ ಕಾರ್ಯಕ್ರಮ”ದ ಸಾನಿಧ್ಯವಹಿಸಿ ಮಾತನಾಡಿದ ಅವರು ಅಭೀವೃದ್ದಿ, ಆದುನಿಕತೆಯ ಭರಾಟೆಯಲ್ಲಿ ಲಕ್ಷಾಂತರ ಗಿಡ, ಮರಗಳನ್ನು ಕಡಿದು ಹಾಕಲಾಗುತ್ತಿದೆ. ಅದಕ್ಕೆ ಪ್ರತಿಯಾಗಿ ಸಾವಿರಾರು ಗಿಡಗಳನ್ನು ನೆಡಲಾಗುತ್ತಿದೆ ಆದರೆ ಅವುಗಳ ಪೋಷಣೆ ಮಾಡದ್ದರಿಂದ ಶೇ. ೯೦ ರಷ್ಟು ಗಿಡಗಳು ಹಾಳಾಗುತ್ತಿವೆ ಇಂಥಹ ಸಂಧರ್ಬದಲ್ಲಿ ವಾಸುದೇವ ರವರು ನಿವೃತ್ತಿ ಹೊಂದಿದ್ದರು ಪರಿಸರ ಬೆಳೆಸುವ ಅವರ ಕಾಳಜಿ ಮಾದರಿಯಾಗಿದೆ ಎಂದರು.ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿ, ಗ್ರಾಮದ ಯುವಕರ ಕಾಳಜಿಯಿಂದ ಗ್ರಾಮದ ಬಂಜರು ಪ್ರದೇಶ ಇಂದು ಹಸಿರು ತಾಣವಾಗಿದೆ. ಗುಡ್ಡದ ದೇವಸ್ಥಾನ ಇಂದು…

Read More