Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ: ಜಾಗತಿಕ ಜನಸಂಖ್ಯೆಯ ಪ್ರಮಾಣ ಹೆಚ್ಚುತ್ತಿರುವುದಿಂದ ಸಾಮಾಜಿಕ, ಆರ್ಥಿಕ, ಪರಿಸರ ನಾಶದಂತಹ ಅನೇಕ ಸಮಸ್ಯೆಗಳು ಕಾಡುತ್ತಿವೆ. ಇಂದು ಹೆಚ್ಚುತ್ತಿರುವ ಜನಸಂಖ್ಯೆ ಮಾನವನಿಗೆ ಒಂದು ಸವಾಲಾಗಿ ಪರಿಣಮಿಸಿದೆ ಎಂದು ಶಿಕ್ಷಕರಾದ ಆರ್.ಎಂ.ಚೋಪಡೆ ಹೇಳಿದರು.ಗುರುವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ‘ವಿಶ್ವ ಜನಸಂಖ್ಯಾ ದಿನ’ದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.ಈ ವೇಳೆಯಲ್ಲಿ ಶಿಕ್ಷಕರಾದ ಎಂ.ಸಿ.ಮಾಳಾಬಗಿಯವರು ಮಾತನಾಡುತ್ತ. ಈ ದಿನವು ಜನಸಂಖ್ಯೆಯ ಬೆಳವಣಿಗೆ, ಸಂಪನ್ಮೂಲಗಳ ಮೇಲೆ ಅದರ ಪ್ರಭಾವ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಮಾನವಾದ ಪ್ರವೇಶದ ಅಗತ್ಯತೆಯ ಚರ್ಚೆಗಳನ್ನು ಪ್ರೋತ್ಸಾಹಿಸುತ್ತದೆ. ವಿವಿಧ ಉಪಕ್ರಮಗಳ ಮೂಲಕ, ವಿಶ್ವ ಜನಸಂಖ್ಯಾ ದಿನವು ಜವಾಬ್ದಾರಿಯುತ ಜನಸಂಖ್ಯೆ ನಿರ್ವಹಣೆ, ಲಿಂಗ ಸಮಾನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.ಈ ವೇಳೆಯಲ್ಲಿ…
ಇಂಡಿ: ನಲಿಕಲಿ ಶಿಕ್ಷಣವನ್ನು ಪುನಶ್ಚೇತನಗೊಳಿಸಿ ಮಕ್ಕಳಲ್ಲಿ ಪ್ರತಿನಿತ್ಯ ಉತ್ಸಾಹ ತುಂಬುವ ಕಾರ್ಯ ಶಿಕ್ಷಕರಿಂದ ನಡೆಯಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಧರ ನಡುಗಡ್ಡಿ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಆಯೋಜಿಸಿದ್ದ ಹಿರೇರೂಗಿ-ತಡವಲಗ ಕ್ಲಸ್ಟರ್ ಮಟ್ಟದ ನಲಿ-ಕಲಿ ಶಿಕ್ಷಕರ ಸಮಾಲೋಚನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ನಲಿ-ಕಲಿ ಶಿಕ್ಷಣ ಮಕ್ಕಳ ಭವಿಷ್ಯದ ಭದ್ರ ಬುನಾದಿ.2008 ರಿಂದ ರಾಜ್ಯಾದ್ಯಂತ ಜಾರಿಗೊಂಡ ಈ ಪದ್ದತಿಯಲ್ಲಿ ಮಕ್ಕಳು ನಲಿಯುತ್ತ ಕಲಿಯಲಿ ಎಂಬ ತತ್ವ ಅಡಗಿದ್ದು, ಚಟುವಟಿಕೆಗಳ ಮೂಲಕ ಮಕ್ಕಳು ಆಡುತ್ತಾ ಹಾಡುತ್ತಾ ಕಲಿಯಲು ಶಿಕ್ಷಕರ ಸಹಕಾರ ಅಗತ್ಯ ಎಂದು ಹೇಳಿದರು.ತಾಲೂಕು ನಲಿಕಲಿ ನೋಡಲ್ ಅಧಿಕಾರಿ ಬಸವರಾಜ ಗೋರನಾಳ ಮಾತನಾಡಿ, ವಿದ್ಯಾರ್ಥಿಯು ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿಕೆಯನ್ನು ಆರಂಭಿಸಿ, ಗೆಳೆಯರ ಸಹಕಾರದಲ್ಲಿ ಪುನರ್ಬಲನಗೊಂಡು, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಗಳಿಸುವುದು ಈ ಪದ್ಧತಿಯ ವೈಶಿಷ್ಟ್ಯವಾಗಿದೆ ಎಂದು ಹೇಳಿದರು.ಹಿರೇರೂಗಿ ಕ್ಲಸ್ಟರ್ ಸಿಆರ್ಪಿ ಸಂತೋಷ ಚವ್ಹಾಣ ಮಾತನಾಡಿ, ನಲಿ-ಕಲಿ ಪದ್ಧತಿಯಲ್ಲಿರುವ ಬಹುಹಂತದ ಕಲಿಕೆ, ಸ್ವಕಲಿಕೆ,…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ | ಸಂಸದ ಜಿಗಜಿಣಗಿ ಸರ್ಕಾರಕ್ಕೆ ಒತ್ತಾಯ ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೊಳಪಡಿಸಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಸರ್ಕಾರಕ್ಕೆ ಒತ್ತಾಯಿಸಿರುವ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಒಂದು ದೊಡ್ಡ ಮಟ್ಟದ ಹಗರಣವಾಗಿದೆ. ಸ್ವತ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೆಸರು ಈ ಹಗರಣದಲ್ಲಿ ತಳಕು ಹಾಕಿಕೊಂಡಿದೆ, ಹೀಗಾಗಿ ಮುಕ್ತವಾದ ತನಿಖೆ ನಡೆಯಬೇಕಾಗಿರುವುದು ಅಗತ್ಯವಾಗಿದೆ, ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆದರೆ ಮಾತ್ರ ಸತ್ಯಾಂಶ ಹೊರಬೀಳಲಿದೆ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಸರ್ಕಾರ ಕೂಡಲೇ ಸಿಬಿಐಗೆ ಈ ಪ್ರಕರಣದ ತನಿಖೆಯನ್ನು ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಹಗರಣ ಹಿಗೆ ಹಗರಣಗಳಲ್ಲಿಯೇ ಮುಳುಗಿ ಹೋಗಿರುವ ರಾಜ್ಯ ಸರ್ಕಾರ ಒಂದು ರೀತಿ ಲೂಟಿ ಸರ್ಕಾರವಾಗಿದೆ ಎಂದು ಜಿಗಜಿಣಗಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ವಿಜಯಪುರ: ವಿಜಯಪುರ ನಗರ ಕೇಂದ್ರ ಗ್ರಂಥಾಲಯ ಹಾಗೂ ಶಾಖಾ ಗ್ರಂಥಾಲಯಗಳಲ್ಲಿ ಸಂಗ್ರಹವಾದ ಕನ್ನಡ ಮತ್ತು ಆಂಗ್ಲ ಹಳೆಯ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ವಿಲೇವಾರಿ ಮಾಡಲಾಗುತ್ತಿದ್ದು, ಅರ್ಹರಿಂದ ದರಪಟ್ಟಿ ಆಹ್ವಾಸಲಾಗಿದೆ ಎಂದು ಉಪ ನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ ಇವರು ತಿಳಿಸಿದ್ದಾರೆ.ದರಪಟ್ಟಿಯಲ್ಲಿ ಕನ್ನಡ ಮತ್ತು ಆಂಗ್ಲ ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳ ಪ್ರತಿ ಕೆ.ಜಿ.ಗೆ ಪ್ರತ್ಯೇಕ ದರ ನಮೂದಿಸಿ ಸಲ್ಲಿಸಬೇಕು, ದರಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ಉಪ ನಿರ್ದೇಶಕರ ಕಚೇರಿ,ನಗರ ಕೇಂದ್ರ ಗ್ರಂಥಾಲಯ, ಗಾಂಧಿ ಚೌಕ, ವಿಜಯಪುರ ವಿಳಾಸಕ್ಕೆ ೨೦೨೪ರ ಆಗಸ್ಟ್ ೯ರ ಸಂಜೆ ೪ ಗಂಟೆ ಒಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು, ಅವಧಿ ಮೀರಿ ಬಂದ ದರಪಟ್ಟಿಗಳನ್ನು ಪರಿಗಣಿಸುವುದಿಲ್ಲ. ಅದೇ ದಿನ ಬಿಡ್ಡುದಾರರ ಸಮಕ್ಷಮದಲ್ಲಿ ೨೦೨೪ರ ಆಗಸ್ಟ್ ೯ರ ಸಂಜೆ ೫ ಗಂಟೆಗೆ ದರಪಟ್ಟಿ ತೆರೆಯಲಾಗುವುದು, ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ ನಗರ ಕೇಂದ್ರ ಗ್ರಂಥಾಲಯ ,ವಿಜಯಪುರ ಇವರನ್ನು ಕಛೇರಿಯ ಸಮಯದಲ್ಲಿ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ…
ಮುದ್ದೇಬಿಹಾಳ: ಆರೋಗ್ಯ ಇಲಾಖೆಯಿಂದ ಪಟ್ಟಣದಲ್ಲಿ ಶುಕ್ರವಾರ ಢೆಂಘೀ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.ಇಲಾಖೆಯ ಅಧಿಕಾರಿಗಳು ಬಸ್ ಡಿಪೋ, ಬಸ್ ನಿಲ್ದಾಣ, ಚಿತ್ರಮಂದಿರ ಹಾಗೂ ಟೈರ್ ಅಂಗಡಿಗಳಿಗೆ ಭೇಟಿ ನೀಡಿ ಈಡಿಸ್ ಲಾರ್ವ ಸಮೀಕ್ಷೆ ಮತ್ತು ಲಾರ್ವ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ತಿಳಿ ಹೇಳಿದರು.ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕ ಎ.ಎಚ್.ಮಧಬಾವಿ ಹಾಗೂ ಸಿಬ್ಬಂದಿಗಳಿಗೆ ಮತ್ತು ಚಿತ್ರಮಂದಿರ ಹಾಗೂ ಟೈರ್ ಅಂಗಡಿ ಮಾಲಕರು ಹಾಗೂ ಅಲ್ಲಿಯ ಕೆಲಸಗಾರರಿಗೆ ಪ್ರಾತ್ಯಕ್ಷಿಕೆಯೊಂದಿಗೆ ಲಾರ್ವ ಕಂಡು ಬಂದ ತಾಣಗಳನ್ನು ತೋರಿಸಿ ಅವುಗಳನ್ನು ಟೆಮಿಪಾಸ್ (ಲಾರ್ವ ನಾಶಕ ರಾಸಾಯನಿಕ ದ್ರಾವನ) ಹಾಕಿ ನಾಶಪಡಿಸಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲು ಸ್ವಚ್ಛತೆ ಕಾಪಾಡಿಕೊಳ್ಳಲು ತಿಳಿಸಿ ಹೇಳಿದರು. ಲಾರ್ವ ಸಮೀಕ್ಷೆ ಹಾಗೂ ನಿರ್ಮೂಲನಾ ಕಾರ್ಯಾಚರಣೆಯನ್ನು ಮಾಡಿದಾಗ ಸುಮಾರು ಕಡೆ ಲಾರ್ವ ಕಂಡು ಬಂದವು. ಬಸ್ ಡಿಪೋದಲ್ಲಿ ಹಾಗೂ ಚಿತ್ರಮಂದಿರದಲ್ಲಿ, ಟೈಯರ್ ಅಂಗಡಿ, ಹೋಟೆಲಗಳಲ್ಲಿ ಅವುಗಳನ್ನು ತಕ್ಷಣ ಖಾಲಿ ಮಾಡಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು.ಸೊಳ್ಳೆ ನಿಯಂತ್ರಣದ ಜೈವಿಕ ವಿಧಾನವಾದ ಲಾರ್ವಹಾರಿ ಮೀನುಗಳನ್ನು…
ಇಂಡಿ: ಇಂದಿನ ಯುವ ಪೀಳಿಗೆಯಲ್ಲಿ ಸಮಾಜದ ಕಳಕಳಿ ಹುಟ್ಟಿಸಲು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ತಾಲೂಕಿನ ಹಿರೇರೂಗಿ ಬೊಳೆಗಾಂವದ ಶ್ರೀ ಬಸವಲಿಂಗ ಗಿರಿಜಾಮಾತಾಜಿ ಮಠದಲ್ಲಿ ನಡೆದ ಜಿ.ಆರ್.ಕಲಾ, ವಾಯ್.ಎ.ಪಾಟೀಲ ವಾಣಿಜ್ಯ, ಎಂ.ಎಫ್ ದೋಶಿ ವಿಜ್ಞಾನ ಮಹಾವಿದ್ಯಾಲದಿಂದ ಆಯೋಜಿಸಿದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಎನ್ನೆಸ್ಸೆಸ್ ಶಿಬಿರ ಮಹಾತ್ಮಾ ಗಾಂಧಿಯವರ ಪರಿಕಲ್ಪನೆಯಾಗಿದ್ದು ನಿಸ್ವಾರ್ಥ ಸೇವೆ ಮತ್ತು ನಾಯಕತ್ವದ ಕೌಶಲವನ್ನು ಕಲಿಸುತ್ತದೆ.ಶಿಬಿರದಲ್ಲಿ ಉತ್ತಮ ಮಾರ್ಗದರ್ಶನ ಪಡೆದುಕೊಂಡು ಸಮಾಜದ ಜತೆ ಸಂಪರ್ಕ ಸಾಧಿಸಿ ಶಿಕ್ಷಣ ಆರೋಗ್ಯ ಪರಿಸರ ನೈರ್ಮಲೀಕರಣ ವೈಜ್ಞಾನಿಕ ಮನೋಭಾವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದರು.ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಬಿ.ಜಾಧವ, ಜಾವೇದ ತಾಂಬೋಳಿ, ಸುಸ್ಮಿತಾ ಎಸ್ ಮಾತನಾಡಿದರು.ವೇದಿಕೆಯ ಮೇಲೆ ಗ್ರಾ.ಪಂ ಅಧ್ಯಕ್ಷ ಪರಶುರಾಮ ಹೊಸಮನಿ, ಸದಸ್ಯ ಉಮೇಶ ಹಲಸಂಗಿ, ಎನ್ನೆಸ್ಸೆಸ್ ಅಧಿಕಾರಿ ಡಾ. ಪಿ.ಕೆ.ರಾಠೋಡ ಮತ್ತಿತರಿದ್ದರು.ಸಮಾರಂಭದಲ್ಲಿ ಆನಂದ ನಡುವಿನಮನಿ, ಡಾ. ಜಯಪ್ರಸಾದ, ಮಲ್ಲಿಕಾರ್ಜುನ ಕೋಣದೆ, ಡಾ. ಸಿ.ಎಸ್.ಬಿರಾದಾರ, ಡಾ. ಸುರೇಂದ್ರ ಕೆ,ಶ್ರೀಶೈಲ, ಶ್ರೀಕಾಂತ…
ದೇವರಹಿಪ್ಪರಗಿ: ಪೂರ್ವ ಪ್ರಾಥಮಿಕ ಶಿಕ್ಷಣ ಮಕ್ಕಳಿಗೆ ಅತ್ಯಂತ ಮಹತ್ವದ ಹಾಗೂ ಪರಿಣಾಮಕಾರಿ ಕಲಿಕೆಯಾಗಿದೆ. ಈ ರೀತಿಯಾದ ಕಲಿಕೆ ನಮ್ಮ ಗ್ರಾಮೀಣ ಅಂಗನವಾಡಿಗಳಲ್ಲಿ ದೊರೆಯುತ್ತಿರುವುದು ಸಂತಸದ ವಿಷಯ ಎಂದು ಶಿಕ್ಷಕಿ ವೀಣಾ ಕಾರದ ಹೇಳಿದರು.ತಾಲ್ಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ೩ರಲ್ಲಿ ಶುಕ್ರವಾರ ಜರುಗಿದ ಮಕ್ಕಳ ಪೋಷಕರ ಸಭೆಗೆ ಚಾಲನೆ ನೀಡಿ ಮಾತನಾಡಿದರು. ನಲಿ ಕಲಿಯ ಮೂಲಕ ಕಲಿತ ಮಕ್ಕಳಿಗೆ ಮುಂದಿನ ತರಗತಿಯ ಕಲಿಕೆಗಳು ಸುಲಭವಾಗುತ್ತದೆ. ಇಂತಹ ಕಲಿಕೆಗೆ ತರಬೇತಿಯ ಮೂಲಕ ಅವಕಾಶ ಕಲ್ಪಿಸಿದ ಉಜ್ಚಲ ಸಂಸ್ಥೆಗೆ ಧನ್ಯವಾದ ಎಂದರು.ಉಜ್ವಲ-ಐಎಲ್ಪಿಯ ಸಂಯೋಜಕ ಸಾಗರ ಘಾಟಗೆ ಮಾತನಾಡಿ, ನಮ್ಮ ತಾಲ್ಲೂಕಿನ ೧೬೨ ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದೆ. ಆದರೆ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಪೂರ್ವಪ್ರಾಥಮಿಕ ಶಾಲೆಗಳಿಗೆ ಕಳುಹಿಸುವುದರಿಂದ ಮಕ್ಕಳ ವಿಕಸಿತ ಮನಸ್ಸು ಕುಗ್ಗುತ್ತಿದೆ.ಮೂರರಿಂದ ಆರು ವರ್ಷದ ಮಕ್ಕಳನ್ನು ಕಡ್ಡಾಯವಾಗಿ ಅಂಗನವಾಡಿಗೆ ಕಳಿಸಬೇಕು ಮತ್ತು ಸಮುದಾಯದ ಎಲ್ಲಾ ದಾನಿಗಳಲ್ಲಿ ಅಂಗನವಾಡಿ ನಮ್ಮದು, ಅಂಗನವಾಡಿ ಮಕ್ಕಳು ನಮ್ಮ ಮಕ್ಕಳು ಎಂಬ ಮನೋಭಾವ ಬರಬೇಕು. ಅಂಗನವಾಡಿ ಮಕ್ಕಳಿಗೆ…
ದೇವರಹಿಪ್ಪರಗಿ: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು. ಈ ನಿಟ್ಟಿನಲ್ಲಿ ನಾನು ಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ದೇವರಹಿಪ್ಪರಗಿ ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ಸಂಘದಿಂದ ಶುಕ್ರವಾರ ಏಳನೇ ವೇತನ ಆಯೋಗದ ಜಾರಿ, ಎನ್ಪಿಎಸ್ ರದ್ದತಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯ ಜಾರಿ ಕುರಿತು ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದರು.ಸಿಂದಗಿ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ಮಾತನಾಡಿ, ಎರಡು ವರ್ಷಗಳ ಹಿಂದೆಯೇ ಜಾರಿಯಾಗಬೇಕಾಗಿದ್ದ ವೇತನ ಆಯೋಗ ಇನ್ನೂ ಕೂಡಾ ಜಾರಿಯಾಗದಿರುವುದು ನೋವಿನ ಸಂಗತಿ. ಎಪ್ರೀಲ್ ೧, ೨೦೦೬ರ ನಂತರ ಸೇವೆಗೆ ಸೇರಿರುವ ಸರ್ಕಾರಿ ನೌಕರರಿಗೆ ಇರುವ ಹೊಸ ಪಿಂಚಣಿ ಯೋಜನೆಯನ್ನು ರದ್ದು ಮಾಡಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಿ ನೌಕರಸ್ಥರ ಸಂಕಟದ ಯಾತನೆಯನ್ನು ಪರಿಹರಿಸಬೇಕು ಎಂದರು.ದೇವರಹಿಪ್ಪರಗಿ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಎಮ್.ಜಿ.ಯಂಕಂಚಿ, ಪ್ರಧಾನ ಕಾರ್ಯದರ್ಶಿ ಜಿ.ಪಿ.ಬಿರಾದಾರ, ಹಾಗೂ ನಿವೃತ್ತ…
ಮುದ್ದೇಬಿಹಾಳ: ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಎಂಜಿವ್ಹಿಸಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಆರ್.ಎಸ್.ಸಜ್ಜನ ಹೇಳಿದರು.ಪಟ್ಟಣದ ಎಂಜಿವಿಸಿ ಕಾಲೇಜಿನಲ್ಲಿ ಆಯೋಜಿಸಲಾದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ, ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ಮತ್ತು ಲಿಂಗ ಸಮಾನತೆ, ಕುಟುಂಬ ಯೋಜನೆಯ ಪ್ರಾಮುಖ್ಯತೆ, ಬಡತನ, ತಾಯಿಯ ಆರೋಗ್ಯ, ಮಾನವ ಹಕ್ಕುಗಳು ಇತ್ಯಾದಿ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಓದ್ಸುಮಠ ಮಾತನಾಡಿ, ನಮ್ಮ ಕರ್ನಾಟಕವು ಸುಮಾರು ೮ ಕೋಟಿ ಜನಸಂಖ್ಯೆಯನ್ನು ಹೊಂದಿದೆ ಮತ್ತು ಭಾರತದ ಜನಸಂಖ್ಯೆಯು ೧೪೨ ಕೋಟಿಗಿಂತ ಹೆಚ್ಚು ಎಂಬುದು ಸತ್ಯ. ಅತಿ ದೊಡ್ಡ ವಿಪರ್ಯಾಸವೆಂದರೆ ಜನಸಂಖ್ಯೆ ಹೆಚ್ಚಾದಂತೆ ಮೂಲಭೂತ ಅವಶ್ಯಕತೆಗಳು ಮತ್ತು ಸೌಲಭ್ಯಗಳು ದೊರೆಯುತ್ತಿಲ್ಲ ಜೊತಗೆ ಬಡತನ,…
ಮುದ್ದೇಬಿಹಾಳ: ಮನೆಯು ಆದರ್ಶಮಯವಾಗಿದ್ದಲ್ಲಿ ಮಾತ್ರವೇ ಮಗುವಿನ ಕಲಿಕೆ ಉತ್ತಮವಾಗಲು ಸಾಧ್ಯ ಎಂದು ವಿದ್ಯಾ ಭಾರತಿ ದಕ್ಷಿಣ ಮಧ್ಯ ಕ್ಷೇತ್ರ ಶಿಶುವಾಟಿಕಾ ಸಹ ಪ್ರಮುಖರಾದ ತಾರಾ ಕಾಳಿಚರಣ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಮಾತೃ ಭಾರತಿ ಪರಿಷತ್ ವತಿಯಿಂದ ಆಯೋಜಿಸಿರುವ ಜನನಿ ಸಮಾಗಮ ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಅವರು ಮಾತನಾಡಿದರು.ಮಗುವಿನ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಹಿರಿದಾಗಿದೆ. ಮಗುವಿನ ಕಲಿಕೆಯಲ್ಲಿ ತಾಯಿಯು ಅರ್ಧದಷ್ಟು ಪ್ರಮುಖ ಪಾತ್ರವನ್ನು ವಹಿಸುತ್ತಾಳೆ. ಆಚಾರ ಸಂಸ್ಕೃತಿ, ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವಲ್ಲಿ ಹೆಣ್ಣಿನಿಂದ ಮಾತ್ರ ಸಾಧ್ಯ. ಸರ್ವ ಶಕ್ತಿ ಸಾಮರ್ಥ್ಯ ಹೆಣ್ಣಿನಲ್ಲಿ ಇರುವುದರಿಂದ ಮಾತ್ರವೇ ಭೂಮಿ, ನೀರು, ವಿದ್ಯೆ, ಶಕ್ತಿ ಇತ್ಯಾದಿಯಲ್ಲಿ ಮಾತೃ ಶಕ್ತಿ ಅಡಗಿದೆಯೆಂದು ಗುರುತಿಸಿಯೇ ಮಾತೆಯೆಂದು ಸಂಬೋಧಿಸಿ ಗೌರವಿಸಿರುವುದು ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯಾಗಿದೆ ಎಂದರು.ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ಮಾತೃ ಭಾರತಿ ಸಂಯೋಜನೆಯ ಕುರಿತಾಗಿ ಶಾಲೆಯಲ್ಲಿ ಅನುಕೂಲಕರವಾದ ವಾತಾವರಣ ಮೂಡಿಸಲು ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು.ಮಾತೃ ಭಾರತಿ ಪರಿಷತ್ತಿನ ಅಧ್ಯಕರಾದ ಶ್ರೀದೇವಿ ಪತ್ತಾರ ಅಧ್ಯಕ್ಷತೆ ವಹಿಸಿದ್ದರು. ಮಾತೃ ಭಾರತಿ ಪರಿಷತ್ತಿನ…
