Author: editor.udayarashmi@gmail.com

ವಿಜಯಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ ಅವರು ಗುರುವಾರ ವಿಜಯಪುರ ತಾಲೂಕಿನ ಸವನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ಗುರುವಾರ ನೀಡಿ ಪರಿಶೀಲನೆ ನಡೆಸಿ,ಶಾಲೆಯ ಸಮಗ್ರ ಕಲಿಕಾ ವಾತಾವರಣ, ಕಲಿಕಾ ಚಟುವಟಿಕೆ, ವಾರ್ಷಿಕ ಕ್ರಿಯಾ ಯೋಜನೆ, ಮಕ್ಕಳ ಕಲಿಕಾ ಪ್ರಕ್ರಿಯೆ, ಕಲಿಕಾ ಗುಣಮಟ್ಟ, ಶಿಕ್ಷಕರ ಬೋಧನಾ ಕೌಶಲ್ಯ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿದರು.ಅಲ್ಲದೇ ಇದೇ ಸಂದರ್ಭ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಬೇಕು ಎಂದು ಮಾರ್ಗದರ್ಶನ ಮಾಡಿದರು.ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ. ಎಲ್.ಬಿ, ಶಿಕ್ಷಕರಾದ ಎಸ್.ಬಿ. ಮಕಾನದಾರ, ಎಮ್.ಸಿ.ಮಿಶ್ರಕೋಟೆ, ಕೆ.ಎಚ್. ರಾಠೋಡ, ಪಿ.ಎಸ್. ಹಿರೇಮಠ, ಎಂ.ಆರ್.ಮುದ್ದೇಬಿಹಾಳ, ಎ.ವಿ. ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

Read More

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಇವರ ಸಹಯೋಗದೊಂದಿಗೆ ಜುಲೈ ೧೧ ರಂದು ಬಾಗಲಕೋಟ ರಸ್ತೆಯಲ್ಲಿರುವ ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಸುಮಾರು ೩೦೦ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು ಅದರಲ್ಲಿ ೨೪೦ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು. ೮ ಪ್ರತಿಷ್ಠಿತ ಉದ್ಯೋಗದಾತರು ಭಾಗವಹಿಸಿ ೩೧ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಯಿತು. ೫೦ ಅಭ್ಯರ್ಥಿಗಳಿಗೆ ಮುಂದಿನ ನೇಮಕಾತಿಗಾಗಿ ಕಾಯ್ಡಿರಿಸಲಾಗಿದೆ ಎಂದು ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಈ ಸಂದರ್ಭ ಸಹಾಯಕ ಉದ್ಯೋಗಾಧಿಕಾರಿ ಎಸ್.ಎಸ್.ಆಲಮೇಲ, ಉದ್ಯೋಗಾಭಿವೃದ್ಧಿ ಕಾರ್ಯನಿರ್ವಾಹಕ ಮುಸ್ತಾಕ ಗುಂಡಬಾವಡಿ ಹಾಗೂ ಕಾಲೇಜಿನ ಪ್ರಾಚಾರ್ಯ ಸೈಯ್ಯದ್ ಸಮೀರ ಹುಸ್ಸೇನ ಹಾಗೂ ಶ್ರೀಮತಿ ಹಬಿಬಾ ಮ್ಯಾಗಿನಮನಿ ಉಪಸ್ಥಿತರಿದ್ದರು.

Read More

ವಿಜಯಪುರ: ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಜುಲೈ೧೫ ರಂದು ನಿಗದಿಪಡಿಸಿದ ಚುನಾವಣೆಯನ್ನು ಜುಲೈ ೧೫ ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯುವ ಕಾರಣದಿಂದ ಮುಂದೂಡಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

Read More

ವಿಜಯಪುರ: ವಿಜಯಪುರ ನಗರದ ವಿವಿಧೆಡೆ ಭಿಕ್ಷಾಟನೆಯಲ್ಲಿ ತೊಡಗಿದ ೧೮ ಜನ ಭಿಕ್ಷುಕರನ್ನು ರಕ್ಷಣೆ ಮಾಡಿ ನಗರದ ಅಫಜಲಪೂರ ಟಕ್ಕೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ದಾಖಲು ಮಾಡಿ ಆಶ್ರಯ ಒದಗಿಸಲಾಗಿದೆ.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರ ಸಂಚಾರ ಕೈಗೊಂಡ ಸಂದರ್ಭದಲ್ಲಿ ನಗರದ ವಿವಿಧೆಡೆ ಇರುವ ನಿರಾಶ್ರಿತರು-ಭಿಕ್ಷುಕರನ್ನು ಕಂಡು, ತಕ್ಷಣ ನಿರಾಶ್ರಿತ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಭಿಕ್ಷಾಟಣೆಯಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡಿ, ಆಶ್ರಯ ಒದಗಿಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ ಶುಕ್ರವಾರದಂದು ವಿಜಯಪುರ ನಗರದ ಲಕ್ಷ್ಮೀ ಗುಡಿ ಹತ್ತಿರ, ಗಾಂಧಿ ಚೌಕ್, ಬಸ್ ನಿಲ್ದಾಣ, ಬಸವೇಶ್ವರ ಸರ್ಕಲ್, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ೧೬ ಜನರ ಪುರುಷರು ಹಾಗೂ ೦೨ ಮಹಿಳೆಯರನ್ನು ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿಗಳು ರಕ್ಷಣೆ ಮಾಡಿ ಆಶ್ರಯ ಒದಗಿಸಿದ್ದಾರೆ.ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ಭಿಕ್ಷುಕರಿಗೆ ಹಾಸಿಗೆ, ಹೊದಿಕೆ, ಬಟ್ಟೆ, ಆರೋಗ್ಯ ತಪಾಸಣೆ ಮತ್ತು ಬೆಳಿಗ್ಗೆ ಯೋಗಾಸನ, ಉಪಹಾರ, ಊಟ ಒದಗಿಸುತ್ತಿದ್ದು, ಸಂಜೆ ನಿರಾಶ್ರಿತರಿಗೆ ಕ್ರೀಡಾ ಚಟುವಟಿಕೆ, ರಾತ್ರಿ…

Read More

ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಪಾಲಿಕೆಯ ಸದಸ್ಯರು & ಆಯುಕ್ತರೊಂದಿಗೆ ವಿವಿಧೆಡೆ ಭೇಟಿ ನೀಡಿದ ಡಿಸಿ ವಿಜಯಪುರ: ಸ್ವಚ್ಛ, ಸುಂದರ ನಗರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳುವುದು, ಬೀದಿ ಬದಿ ವ್ಯಾಪಾರಸ್ಥರಿಗೆ ವಿವಿಧೆಡೆ ವ್ಯಾಪಾರ ವಲಯ ಸ್ಥಾಪಿಸಿ ಅನುಕೂಲ ಕಲ್ಪಿಸುವುದು, ಸುವ್ಯವಸ್ಥಿತ ವಾಹನಗಳ ನಿಲುಗಡೆ ವ್ಯವಸ್ಥೆ ಕೈಗೊಂಡು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಮಹೇಜಬಿನ್ ಹೊರ್ತಿ, ಉಪ ಮಹಾಪೌರ ದಿನೇಶ ಹಳ್ಳಿ, ಪಾಲಿಕೆಯ ವಿವಿಧ ಸದಸ್ಯರು ಹಾಗೂ ಪಾಲಿಕೆ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಶುಕ್ರವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಸೂಚನೆ ನೀಡಿದರು.ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಕಣಕಿ ಬಜಾರ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಐತಿಹಾಸಿಕ ಕೋಟೆ ಗೋಡೆ ಪಕ್ಕದಲ್ಲಿ ಬೆಳೆದಿರುವ ಮುಳ್ಳಿನ ಕಂಟಿಗಳನ್ನು ತೆರವುಗೊಳಿಸುವುದು, ಸದರಿ ಪ್ರದೇಶದಲ್ಲಿ…

Read More

ವಿಜಯಪುರ: ಜಿಲ್ಲಾ ಅಪಾರ ಜಿಲ್ಲಾಧಿಕಾರಿಯಾಗಿ ಹಾಜರಾದ ದಕ್ಷ ಐ.ಎ.ಎಸ್ ಅಧಿಕಾರಿ ಸೋಮಲಿಂಗ ಗೆಣ್ಣೂರ ಅವರನ್ನು ಗೌರವಿಸಲು ಅಭಿಮಾನಿಗಳು, ಹಿತೈಷಿಗಳು ಮತ್ತು ಸ್ನೇಹಿತರು ಬಿಡುವಿಲ್ಲದಂತೆ ಆಗಮಿಸುತ್ತಿರುವುದು ಗೆಣ್ಣೂರ ರವರ ಬಾಂಧವ್ಯವನ್ನು ಸೂಚಿಸುತ್ತದೆ.ಇಂತಹ ಗೌರವದ ಅಪರ ಜಿಲ್ಲಾಧಿಕಾರಿಗಳನ್ನು ಯಾದಗಿರಿಯ ಹೋರಾಟಗಾರರು ಮತ್ತು ಪತ್ರಕರ್ತರಾದ ಸಂಗಮೇಶ. ಹೊಸಮನಿ, ಶಾಂತು ದೊಡ್ಡಮನಿ ಮತ್ತು ರಾಮು ದೊಡ್ಡಮನಿಯವರು ಗೌರವಿಸಿ ಅಭಿನಂದಿಸಿದರು.

Read More

ಚಡಚಣ: ಬರಿ ಅಂಕ ಗಳಿಸುವುದು ಶಿಕ್ಷಣದ ಉದ್ದೇಶವಲ್ಲ, ಆದರೆ ಸದ್ಗುಣಗಳನ್ನು ಕಲಿಸುವದು ಶಿಕ್ಷಣದ ಮುಖ್ಯ ಉದ್ದೇಶ ಎಂದು ಕಾತ್ರಾಳದ ಗುರದೇವ ಆಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು.ಚಡಚಣದ ಸಂಗಮೇಶ್ವರ ಪದವಿ ಪೂವ ಮಹಾವಿದ್ಯಾಲಯದ ವತಿಯಿಂದ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತುಕ್ರೀಡಾ ಹಾಗೂ ಸಾಂಸ್ಕತಿಕ ವಿಭಾಗ, ಎನ್‌,ಎಸ್.ಎಸ್, ರೇಂಜರ, ರೋವರ ಮತ್ತು ರೆಡ್‌ ಕ್ರಾಸ್‌ ವಿಭಾಗಗಳನ್ನು ಉಧ್ಘಾಟಿಸಿ ಅವರು ಆಶಿರ್ವಚನ ನೀಡಿದರು.ವಿದ್ಯಾರ್ಥಿಗಳು ಬರಿ ಕಾಲೇಜು ಪರೀಕ್ಷೆಗಳಲ್ಲಿ ಮಾತ್ರ ಯಶಸ್ವು ಸಾಧಿಸದೆ ಬದುಕೆಂಬ ಪರೀಕ್ಷೆಯಲ್ಲಿಯೂ ಸಾಧನೆ ಮಾಡಬೇಕು ಎಂದು ಅವರು ಹೇಳಿದರು.ವಿದ್ಯಾರ್ಥಿಯಾದವನು ಪ್ರತಿದಿನ ಹೊಸದನ್ನು ಕಲಿಯಬೇಕು. ಕಲಿಕೆಯನ್ನು ನಿರಂತರವಾಗಿ ಇಟ್ಟುಕೊಳ್ಳಬೇಕು. ಎಲ್ಲರಿಂದಲೂ ಒಂದಿಲ್ಲೊಂದು ಒಳ್ಳೆಯ ವಿಷಯವನ್ನು ಕಲಿಯಬೇಕು. ಜೀವನದಲ್ಲಿ ಸಂಸ್ಕಾರಗಳನ್ನು ಕಲಿತು ಸಾಧನೆ ಮಾಡಬೇಕು. ಪ್ರತಿಯೊಬ್ಬರು ತಂದೆ-ತಾಯಿಗಳ ಸೇವೆ ಮಾಡಬೇಕು. ತಂದೆ-ತಾಯಿಗಳ ಸೇವೆ ಮಾಡದವ ಸಮಾಜದ ಸೇವೆ ಮಾಡಲು ಸಾಧ್ಯವಿಲ್ಲ ಎಂದ ಅವರು, ಒಳ್ಳೆಯ ಶಿಕ್ಷಣದ ಅರ್ಥ ಅಂಕವಲ್ಲ ಎಂದು ಅವರು ಹೇಳಿದರು.ಕಾರ್ಯಕ್ರಮದ ಅದ್ಯಕ್ಷತೆಯನ್ನು ಸಂಗಮೇಶ್ವರ ಸಂಸ್ಥೆಯ…

Read More

ವೃಕ್ಷೋಥಾನ್ ಹೆರಿಟೇಜ್ ರನ್ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ ಮಾಹಿತಿ ವಿಜಯಪುರ: ಈ ಬಾರಿ ವೃಕ್ಷೋತ್ಥಾನ್ ಹೆರಿಟೇಜ್ ರನ್ ಮುಂಬರುವ ಡಿಸೆಂಬರ್ 22 ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ವೃಕ್ಷೋತ್ಥಾನ್ ಹೆರಿಟೇಜ್ ರನ್-2024 ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿರುವ ಈ ವರ್ಷದ ವೃಕ್ಷೋಥಾನ್ ಹೆರಿಟೇಜ್ ರನ್-2024 ಪೋಸ್ಟರ್ ನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.ಕಳೆದ ವರ್ಷ ನಡೆದ ಮ್ಯಾರಾಥಾನ್ ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೋಂಡಿದ್ದರು. ಈ ಬಾರಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನ ಪಾಲ್ಗೋಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.ಕಳೆದ ಬಾರಿ ನಡೆದ ಮ್ಯಾರಾಥಾನ್ ನಿಂದಾಗಿ ದೇಶಾದ್ಯಂತ ವಿಜಯಪುರ ಜಿಲ್ಲೆ ಮತ್ತು ಇಲ್ಲಿರುವ ಪ್ರಾಚೀನ ಸ್ಮಾರಕಗಳು ಹಾಗೂ ಇಲ್ಲಿನ ಆಯೋಜನೆ ಗಮನ ಸೆಳೆದಿದ್ದು, ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ. ಈ ಬಾರಿ ಮತ್ತಷ್ಟು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವವರು ಈಗಿನಿಂದಲೇ ತಯಾರಿ…

Read More

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿವಿಮಾತು ವಿಜಯಪುರ: ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಮತ್ತು ಶಾಲಾ ಕಟ್ಟಡಗಳ ದುರಸ್ಥಿ ಮತ್ತು ಹಾಸ್ಟೇಲುಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಳೆದ ಕೆಡಿಪಿ ಸಭೆಯಲ್ಲಿಯೇ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ಎಬಿವಿಪಿ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.ಗ್ರಾಮೀಣ ಮತ್ತು ನಗರ ಭಾಗದ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಒದಗಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ. ಅಲ್ಲದೇ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ತುರ್ತಾಗಿ ಕ್ರಮ ಕೈಗೊಳ್ಳಬೇಕಿರುವ ಕಡೆ ಕೂಡಲೇ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ, ಹಾಸ್ಟೇಲುಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪ್ರವೇಶಾತಿ ನೀಡಬೇಕು ಮತ್ತು ಅಲ್ಲಿ ಸೂಕ್ತ ಮೂಲಸೌಲಭ್ಯ ಒದಗಿಸಬೇಕು. ಜೊತೆಗೆ, ಹೆಚ್ಚುವರಿ ಹಾಸ್ಟೇಲುಗಳ ಅಗತ್ಯತೆ ಕುರಿತು ಕೂಡ…

Read More