Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಬಸವಾದಿ ಶರಣರ ಹಿಂದು ವೇದಿಕೆಯ ನೇತೃತ್ವದಲ್ಲಿ ಕನ್ಹೇರಿ ಸಿದ್ದಗಿರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲಾ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಶ್ರೀಮಠದ ಸದ್ಭಕ್ತರು, ವಿವಿಧ ಸಂಘಟನೆಗಳ ಮುಖಂಡರು ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.ಪಟ್ಟಣದ ಸಿದ್ದರಾಮ ಮಹಾರಾಜರ ಮಠದ ಮುಂಭಾಗ ವಿವಿಧ ಶ್ರೀಗಳು, ವಿವಿಧ ಸಂಘಟನೆಗಳ ಮುಖಂಡರು, ಶ್ರೀಮಠದ ಸದ್ಭಕ್ತರು, ಶ್ರೀಗಳ ಅಭಿಮಾನಿಗಳು ಜಮಾಯಿಸಿದ ನಂತರ ಪ್ರತಿಭಟನೆ ಮೆರವಣಿಗೆ ಗೊಳಸಂಗಿ ಗಲ್ಲಿ, ಅಗಸಿ ಮೂಲಕ ತೆರಳಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ಸಭೆಯ ನಡೆಸಿದರು.ಪ್ರತಿಭಟನೆಯಲ್ಲಿ ಕನ್ಹೇರಿಶ್ರೀಗಳ ಭಾವಚಿತ್ರಗಳು ರಾರಾಜಿಸಿದವು. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ್ದ ಗ್ರೇಡ್-2 ತಹಸೀಲ್ದಾರ ಎಸ್.ಎಚ್.ಅರಕೇರಿ ಮನವಿ ಪತ್ರ ಸ್ವೀಕರಿಸಿದರು.ಪ್ರತಿಭಟನೆ ಉದ್ದೇಶಿಸಿ ಗಿರೀಶಾನಂದ ಸ್ವಾಮೀಜಿ ಮಾತನಾಡಿ, ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಮ್ಮ ನೈಸರ್ಗಿಕ ಕೃಷಿಯ ಚಟುವಟಿಕೆಗಳ ಮೂಲಕ, ಜನೋಪಯೋಗಿ ಸೇವಾ ಚಟುವಟಿಕೆಗಳ ಮೂಲಕ ಗುರುಕುಲ ಪದ್ಧತಿಯ ಶಿಕ್ಷಣದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇತ್ತೀಚಿಗೆ ಮಕ್ಕಳು ಮೊಬೈಲ್ ಗೆ ಮಾರು ಹೋಗಿ ಓದಿನ ಕಡೆಗೆ ಹೆಚ್ಚಿನ ಗಮನವನ್ನು ಹರಿಸುತ್ತಿಲ್ಲ ಎಂದು ಪ್ರಶಸ್ತಿ ಪುರಸ್ಕೃತ, ಮಕ್ಕಳ ಸಾಹಿತಿ ಹ.ಮ.ಪೂಜಾರ ವಿಷಾದ ವ್ಯಕ್ತಪಡಿಸಿದರು.ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಇತ್ತೀಚಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಅವರಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ನಾನೊಬ್ಬ ಪ್ರೌಢಶಾಲಾ ಮೇಸ್ಟ್ರು. ಮಕ್ಕಳ ಏಳಿಗೆಗೆ ಹಾಗೂ ಓದಿನ ಹವ್ಯಾಸ ಬೆಳೆಸುವ ದಿಸೆಯಲ್ಲಿ ಕಳೆದ ೫೦ವರ್ಷಗಳಿಂದ ಮಕ್ಕಳ ಬಳಗವನ್ನು ಪ್ರಾರಂಭಿಸಿ ಕಥೆ, ಕವಿತೆ ಮತ್ತು ಕಾದಂಬರಿ ಓದುವ ಮತ್ತು ಬರೆಯಿಸುವ ಕಾರ್ಯವನ್ನು ಮಾಡುತ್ತಿದ್ದೇನೆ. ನನ್ನ ಇಡೀ ಬದುಕನ್ನೇ ಮಕ್ಕಳಿಗಾಗಿ ಮೀಸಲು ಇಟ್ಟಿದ್ದೇನೆ. ಮಕ್ಕಳು ಓದಿನೆಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮೊಬೈಲ್ ಗಿಳಿನಿಂದ ಹೊರ ಬಂದು ತಮ್ಮ ಬದುಕಿನನ್ನು ರೂಪಿಸಿಕೊಳ್ಳಬೇಕು. ಮುಂಬರುವ ದಿನಮಾನಗಳಲ್ಲಿ ೫೦ರ ಸಂಭ್ರಮದಲ್ಲಿರುವ ಮಕ್ಕಳ ಬಳಗದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಗುರಿಯನ್ನು ಬಳಗ ಹೊಂದಿದೆ. ಎಂದರು.ಈ ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕನಾ೯ಟಕ ಗಾಂಧಿ ಖ್ಯಾತಿಯ ಮಂಜಪ್ಪ ಹಡೇ೯ಕರ ಅವರ ಜೀವನ ಚರಿತ್ರೆಯ ಯಶೋಗಾಥೆ ಬದುಕನ್ನು ಜೀವಂತ ಪಳಿಕೆಯಲ್ಲಿರಿಸಲು ಗದುಗಿನ ಲಿಂ,ತೋಂಟದ ಡಾ.ಸಿದ್ದಲಿಂಗ ಮಹಾಸ್ವಾಮಿಗಳು ಶ್ರಮಿಸಿದ್ದಾರೆ ಎಂದು ಗದಗ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆ ಕಾರ್ಯದರ್ಶಿ, ಶಿಕ್ಷಣ ತಜ್ಞರಾದ ಪ್ರೊಫೆಸರ್ ಶಿವಾನಂದ ಪಟ್ಟಣಶೆಟ್ಟರ ಹೇಳಿದರು.ಇಲ್ಲಿನ ಮಂಜಪ್ಪ ಹಡೇ೯ಕರ ಸ್ಮಾರಕ ಭವನದಲ್ಲಿ ಎಸ್.ವ್ಹಿ.ವ್ಹಿ ಸಂಸ್ಥೆ ಶಾಲಾ,ಕಾಲೇಜುಗಳಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಮಂಜಪ್ಪನವರು ಕರ್ನಾಟಕದ ಗಾಂಧಿವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಸರಳ ಮಾದರಿ ಜೀವನಕ್ಕೆ ತೋಂಟದ ಸಿದ್ದಲಿಂಗ ಪೂಜ್ಯರು ಬೆರಗಾಗಿದ್ದರು. ಅವರ ಬಹುಮುಖ ಪ್ರತಿಭೆ ಚರಿತೆಗೆ ಮೆಚ್ಚಿದ್ದರು.ವಿಶೇಷ ಕಾಳಜಿ ಹೊಂದಿದ್ದರು. ಅಪ್ರತಿಮ ಸಮಾಜ ಸೇವಕ ಮಂಜಪ್ಪ ಅಪ್ಪಟ ದೇಶಪ್ರೇಮಿಯಾಗಿ, ಬಸವ ಚಿಂತನೆಗಳ ಸಾಕಾರಮೂತಿ೯ಯಾಗಿ ಗೈದ ಕಾಯಕಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ ಎಂದರು.ಸಾಹಿತ್ಯ ಲೋಕಕ್ಕೆ ವಿಶೇಷ ಕೊಡುಗೆ ನೀಡಿರುವ ಮಂಜಪ್ಪನವರು ಆಲಮಟ್ಟಿಯಲ್ಲಿ ವಿದ್ಯಾಲಯ ಸ್ಥಾಪಿಸಿ ಜೀವನ ಶಿಕ್ಷಣಕ್ಕೆ ಹೊಸಭಾಷ್ಪ ಬರೆದು ಪ್ರಜ್ಞೆ ಮೆರೆದಿದ್ದಾರೆ.ನಾಡು,ನುಡಿ ಕಾಳಜಿಯಿಂದ ಅವಿರತ ಸಮಾಜಮುಖಿ ಪರ ಕಾಯಕಗೈದು ಶ್ರಮಿಸಿದ್ದಾರೆ. ಇಂಥ ಪುಣ್ಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ದಿನದಂದು ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ, ಕ್ರೀಡೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಲ್ಕು ಜನರಿಗೆ ಗೌರವ ಸನ್ಮಾನ ಮಾಡಲು ಕೋರ್ ಕಮಿಟಿ ನಿರ್ಧರಿಸಿದೆ.ಕೆಂಗಲಗುತ್ತಿ ಶಿಕ್ಷಕ ಹಣಮಂತ ಕಾತರಕಿ, ವಿಜಯಪುರ ಎ.ಎಸ್.ಐ ನೌಕರ ಮೌಲಾಸಾಬ ಮೈನುದ್ದೀನಸಾಬ ಇಂಗಳೇಶ್ವರ, ನವಿಮುಂಬೈನ ಓಟಗಾರ ಶ್ರೇಯಸ ಯಶವಂತ ರಾವ ಹಾಗೂ ವಿಜಯಪುರ ನಗರದ ಹೆಡ್ ಕಾನಸ್ಟೇಬಲ್ ಭೀಮಾಶಂಕರ ಮಾಡಗ್ಯಾಳ ಅವರನ್ನು ಕಾರ್ಯಕ್ರಮದ ದಿನ ಗೌರವ ಸನ್ಮಾನ ನಡೆಯಲಿದೆ.ಈ ನಾಲ್ಕೂ ಜನ ಸಾಧಕರು ಶಿಕ್ಷಣ, ಪ್ರವಾಸೋದ್ಯಮ, ಪರಿಸರ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅವರದೇ ಆದ ಕೊಡುಗೆ ನೀಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಚ್ಚ, ಸುಂದರ, ಸದೃಢ ವಿಜಯಪುರಕ್ಕಾಗಿ ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಂದ ಮನವಿ ಬಂದಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 4, 5 ಹಾಗೂ 6 ರಂದು ಮೂರು ದಿನಗಳ‌ ಕಾಲ‌ ಸ್ಥಳದಲ್ಲಿಯೇ‌ ನೋಂದಣಿಗೆ‌ ಅವಕಾಶ ಕಲ್ಪಿಸಲಾಗಿದೆ.ಮೊದಲು ಬರುವ ಕೇವಲ‌ 1000(ಒಂದು ಸಾವಿರ) ಜನರಿಗೆ ಅವಕಾಶ ಮಾತ್ರ ನೋಂದಣಿಗೆ ಅವಕಾಶ ಒದಗಿಸಲಾಗಿದೆ. ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಪರಿಸರಾಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.ಈಗಾಗಲೇ 21 ಕಿ. .ಮೀ ವಿಭಾಗದಲ್ಲಿ 538, 10 ಕಿ. ಮೀ. ವಿಭಾಗದಲ್ಲಿ, 264 ಹಾಗೂ 5 ಕಿ. ಮೀ ಓಟದಲ್ಲಿ 19,331 ಸೇರಿದಂತೆ ಒಟ್ಟು 20 ಸಾವಿರಕ್ಕೂ ಹೆಚ್ಚು ಓಟಗಾರರು ಆನಲೈನ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿದ್ದಾರೆ ಎಂದು ನೋಂದಣಿ ಸಮಿತಿಯ ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚಟ್ಟಿ ಹಾಗೂ ವಿನಯ ಕಂಚ್ಯಾಣಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Read More

ಹೂವು ಬಿಟ್ಟ ಕಬ್ಬಿನ ತೂಕ ಇಳಿಕೆ | ಕಬ್ಬು ಕಟಾವು ಗ್ಯಾಂಗ್‌ಗೆ ಬಾರಿ ಡಿಮ್ಯಾಂಡ್ | ಆತಂಕದಲ್ಲಿ ರೈತರು ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಕಬ್ಬಿಗೆ ಸೂಕ್ತ ದರ ನಿಗದಿಗೆ ಆಗ್ರಹಿಸಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದ ಕಬ್ಬು ಬೆಳೆಗಾರರು, ಈಗ ಕಟಾವಿಗೆ ಗ್ಯಾಂಗ್‌ಮನ್‌ಗಳನ್ನು ಕಾಯುವಂತಾಗಿದೆ. ಅಷ್ಟೇ ಅಲ್ಲ ಹೆಚ್ಚಿಗೆ ದುಡ್ಡು ಕೇಳಿದರೂ ನೀಡಿ ಕಾರ್ಖಾನೆಗೆ ಕಬ್ಬು ಸಾಗಿಸುವ ಒತ್ತಡದಲ್ಲಿ ಸಿಲುಕಿದ್ದಾರೆ. ಹೌದು, ಜಿಲ್ಲೆಯಲ್ಲಿ ಎಲ್ಲ ಸಕ್ಕರೆ ಕಾರ್ಖಾನೆಗಳು ಒಮ್ಮೆಲೆ ಆರಂಭವಾದ ಬಳಿಕ ಕಬ್ಬು ಬೆಳೆಗಾರರು ಎದುರಿ ಸುತ್ತಿರುವ ಹೊಸ ಸಂಕಷ್ಟ ಇದು.”ತಿಂಗಳುಗಟ್ಟೆ ಕೆಲಸ ಬಿಟ್ಟು ಕಬ್ಬಿನ ದರಕ್ಕಾಗಿ ರಸ್ತಾದಾಗ ಕುಳಿತು ಪ್ರತಿಭಟನೆ ಮಾಡಿದ್ದ ಆಯ್ರೀ. ಈಗ ಕಾರ್ಖಾನೆಗೆ ಕಬ್ಬ ಕಳಸಬೇಕಂದ್ರ ಕಡ್ಯಾಕ (ಕಟಾವು) ಗ್ಯಾಂಗ್‌ಮನ್‌ಗಳು ಹೆಚ್ಚಿಗೆ ಹಣ ಕೇಳಾಕ ಶುರು ಮಾಡ್ಯಾರಿ,” ಎಂದು ಕಬ್ಬು ಬೆಳೆಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.ಜಮೀನುಗಳು ರಸ್ತೆಯಿಂದ ಒಂದಿಷ್ಟು ದೂರ ಇದ್ದರೆ ಕಾರ್ಖಾನೆಯವರು ನೀಡುವ ಹಣ ಬಿಟ್ಟು ಪ್ರತಿ ಲೋಡ್‌ ಗೆ ಗ್ಯಾಂಗ್‌ಮನ್ ಗಳಿಗೆ…

Read More

ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಸಿ.ಬಿ.ಎಸ್.ಇ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯಾವ ದೇಶ ತನ್ನ ಇತಿಹಾಸವನ್ನು ಮರೆಯುತ್ತದೆಯೋ ಅದಕ್ಕೆ ಭವಿಷ್ಯವಿಲ್ಲ. ಇಡೀ ಜಗತ್ತಿಗೆ ಶಿಕ್ಷಣ ಕೊಟ್ಟ ದೇಶ ನಮ್ಮ ಭಾರತ. ನಮ್ಮತನವನ್ನು ಉಳಿಸಿಕೊಂಡು ಶಿಕ್ಷಣ ಕೊಟ್ಟಿದೆ ಎಂದು ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಸಿ.ಬಿ.ಎಸ್.ಇ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಶಿಕ್ಷಣವು ವೈಜ್ಞಾನಿಕ ತಳಹದಿಯ ಮೇಲಿದೆ. ಅದನ್ನು ನಾಶಪಡಿಸುವ ಕೆಲಸ ಬ್ರಿಟಿಷರಿಂದ ನಡೆದಿತ್ತಾದರೂ ಸಾಧ್ಯವಾಗಲಿಲ್ಲ. ಇದೀಗ ಹೊಸ ಶಿಕ್ಷಣ ಪದ್ಧತಿ ನಮ್ಮತನದ ಶಿಕ್ಷಣ ಕಲ್ಪಿಸಲಿದೆ ಎಂದರು.ವಿಜಯಪುರ ಜಿಲ್ಲೆಯ ಅತ್ಯಂತ ಹಳೆಯದಾದ ಶ್ರೀ ಸಿದ್ದೇಶ್ವರ ಸಂಸ್ಥೆಯಡಿ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವ ಸಂಗನಬಸವ ಶಿಶುನಿಕೇತನ ಶಾಲೆಯು ಉತ್ತರ ಕರ್ನಟಕದಲ್ಲಿ ಅತೀ ಹೆಚ್ಚು ಮಕ್ಕಳನ್ನು ಹೊಂದಿರುವ ಶಾಲೆಯಾಗಿದೆ. ಈ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿ ಮಾಡಿದವರು ಡಾ.ಫ.ಗು.ಹಳಕಟ್ಟಿ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಶಾಲಾ ಎಸ್ ಡಿ ಎಂ ಸಿಯವರು ಹಾಗೂ ಶಾಲಾ ಶಿಕ್ಷಕರು ಪ್ರಾಮಾಣಿಕವಾಗಿ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿದಾಗ ಶಾಲಾ ಅಭಿವೃದ್ಧಿಯಾಗಲು ಸಾಧ್ಯ ಎಂದು ಗ್ರಾಮ ಸಂಪನ್ಮೂಲ ವ್ಯಕ್ತಿ ಅಶ್ವಿನಿ ಬಗಲಿ ಹೇಳಿದರು.ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-2 ಮರಡಿ ಶಾಲೆಯಲ್ಲಿ 2023-24ನೇ ಸಾಲಿನ ಸಮಗ್ರ ಶಿಕ್ಷಣ ಅಭಿಯಾನದ ಯೋಜನೆಯ ಸಾಮಾಜಿಕ ಪರಿಶೋಧನಾ ವರದಿಯ ಶಾಲಾ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸರಕಾರದ ಯೋಜನೆಯ ಸದುಪಯೋಗ ಪಡೆದುಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಶ್ರಮಿಸಬೇಕೆಂದು ಹೇಳಿದರು.ಶಿಕ್ಷಕ ಡಿ.ಎಸ್. ಬಗಲಿ ಮಾತನಾಡಿ, ಸರ್ಕಾರದಿಂದ ಬಂದ ಅನುದಾನವನ್ನು ಪ್ರಾಮಾಣಿಕವಾಗಿ ಬಳಕೆಮಾಡಿ ಶಾಲೆಯ ಭೌತಿಕ ಹಾಗೂ ಗುಣಮಟ್ಟದ ಶಿಕ್ಷಣ ಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದರು.ಇದಕ್ಕೆ ಪೋಷಕರ ಸಹಕಾರ ಅಗತ್ಯವಾಗಿ ಬೇಕು ಎಂದು ಹೇಳಿದರು.ಶಿಕ್ಷಕ ಬಸವರಾಜ ಕರಜಗಿ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಪರಿಸರ, ಉತ್ತಮ ಸಂಸ್ಕಾರ ನೀಡುವುದು ಅತೀ ಮುಖ್ಯವಾಗಿದೆ. ಉಚಿತ ಶಿಕ್ಷಣ, ಉಚಿತ ಪಠ್ಯಪುಸ್ತಕ, ಉಚಿತ ಸಮವಸ್ತ್ರ, ಬಿಸಿಯೂಟ, ಬಾಳೆಹಣ್ಣು,…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಶಾಲಾ ಹಂತದ ಕ್ರೀಡಾಕೂಟಗಳಿಂದ ಮಕ್ಕಳಲ್ಲಿ ಗೆಲುವಿನ ಹಠ, ಛಲ, ಸ್ಫೂರ್ತಿ ಸಿಗುತ್ತದೆ ಎಂದು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಬಿ ಪತಂಗಿ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಎಂ.ಜಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ 2ನೇ ವರ್ಷದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಶಾಲಾ ಹಂತದ ಕ್ರೀಡಾಕೂಟಗಳು ಮಕ್ಕಳ ಮಾನಸಿಕ, ದೈಹಿಕ ಹಾಗೂ ಶಾರೀರಿಕ ಬೆಳವಣಿಗಯಲ್ಲಿ ಅತಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ಸಿ.ಆರ್.ಪಿ ಸಂಗಮೇಶ ಮಾತನಾಡಿ, ಮಕ್ಕಳ ಸಮತೋಲನ ಬೆಳವಣಿಗೆಯಲ್ಲಿ ಕ್ರೀಡಾಕೂಟಗಳ ಪಾತ್ರ ಹಿರಿದಾಗಿದೆ ಎಂದರು.ಮಹಿಳಾ ಕ್ರಿಕೆಟ್ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯ ರಾಜೇಶ್ವರಿ ಗಾಯಕವಾಡ ದೇಶದ ಕೀರ್ತಿಯನ್ನು ಬೆಳಗಿದಂತೆ ಮುಂದಿನ ದಿನಮಾನಗಳಲ್ಲಿ ಎಂ.ಜಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ದೇಶದ ಕೀರ್ತಿಯನ್ನು ಬೆಳಗಬೇಕು ಎಂದು ಹಾರೈಸಿದರು.ಈ ಸಂದರ್ಭದಲ್ಲಿ ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.ಭರ್ಜರಿ ಬ್ಯಾಟಿಂಗ್, ಬಾಲಿಂಗ್ಕ್ರೀಡಾಕೂಟಗಳ ಉದ್ಘಾಟನಾ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಬಿ ಪಕಾಲಿ ಬಾಲಿಂಗ್ ಮಾಡುವ ಮೂಲಕ ಕ್ರಿಕೆಟ್…

Read More

ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಸ್ವಾಗತಕರ. ಆದರೆ ಸರ್ಕಾರ ಇನ್ನುವರೆಗೂ ಮೆಕ್ಕೆಜೋಳ ಖರೀದಿ ಕೇಂದ್ರಗಳು ಆರಂಭ ಮಾಡದಿರುವುದು ದುರದೃಷ್ಟಕರ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ತಾಲೂಕು ಅಧ್ಯಕ್ಷ ರಹಿಮನಸಾಬ್ ಕನಕಾಲ ಹೇಳಿದ್ದಾರೆ.ಈ ಕುರಿತು ಶನಿವಾರ ಪ್ರಕಟಣೆ ಮೂಲಕ ತಿಳಿಸಿದ ಅವರು, ದೇವರ ಹಿಪ್ಪರಗಿ ತಾಲೂಕಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರಿಂದ ರೈತರ ಸಹಾಯಕ್ಕಾಗಿ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕೆಂದು ರಹಿಮನಸಾಬ್ ಕನಕಾಲ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Read More