Author: editor.udayarashmi@gmail.com

ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಸಿಜೆಐಗೆ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಪತ್ರ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜರಿಯಾ ಅವರಿಗೆ ಪತ್ರ ಬರೆದಿದ್ದಾರೆ.ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಫಲಾನುಭವಿಯಾಗಿದ್ದು, ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ಹಗರಣದ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಬಿಜೆಪಿ ಶಾಸಕರು ಮನವಿ ಮಾಡಿದ್ದಾರೆ.ನಿಷ್ಪಕ್ಷಪಾತ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಗೌರವಾನ್ವಿತ ಉಚ್ಚ ನ್ಯಾಯಾಲಯ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸಿಕೊಳ್ಳಬೇಕು ಎಂದು ವಿನಂತಿಸುತ್ತೇನೆ. ನಿಮ್ಮ ಮಾರ್ಗದರ್ಶನದಲ್ಲಿ ನ್ಯಾಯವು ಮೇಲುಗೈ ಸಾಧಿಸುತ್ತದೆ ಮತ್ತು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಯತ್ನಾಳ್ ಹೇಳಿದ್ದಾರೆ.ಮೈಸೂರು ನಗರದ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತಗಳಲ್ಲಿ ಪ್ರಮುಖ ಆಸ್ತಿ ಸೇರಿದಂತೆ 3,000ಕ್ಕೂ ಹೆಚ್ಚು ನಿವೇಶನಗಳನ್ನು(ಸೈಟ್‌ಗಳು) ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

Read More

ಆಲಮಟ್ಟಿ: 3500 ಕ್ಯುಸೆಕ್ಸ್ ಹೊರಹರಿವು :ವಿದ್ಯುತ್ ಉತ್ಪಾದನೆ ಆರಂಭ ಆಲಮಟ್ಟಿ: ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಗುರುವಾರ ಮಧ್ಯಾಹ್ನದಿಂದ 3500 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಈ ನೀರನ್ನು ಜಲಾಶಯದ ಬಲಭಾಗದ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ವಿದ್ಯುತ್ ಉತ್ಪಾದನೆ ಆರಂಭಗೊಂಡಿದೆ.ಕಳೆದ‌ ಕೆಲ ತಿಂಗಳಿಂದ ಹೊರಹರಿವು ಸ್ಥಗಿತವಾಗಿದ್ದರಿಂದ ವಿದ್ಯುತ್ ಉತ್ಪಾದನಾ ಘಟಕ ಬಂದಾಗಿತ್ತು.ಗುರುವಾರ 55 ಮೆಗಾವಾಟ್ ಸಾಮರ್ಥ್ದದ ಒಂದು ಘಟಕ ಕಾರ್ಯನಿರ್ವಹಿಸುತ್ತಿದ್ದು, ಅದರಿಂದ 25 ಮೆಗಾವಾಟ್ ವಿದ್ಯುತ್ ಉತ್ಪಾದನೆ ಯಾಗುತ್ತಿದೆ.ಗುರುವಾರ 69,482 ಕ್ಯುಸೆಕ್ ಇದ್ದ ಒಳಹರಿವು ಸಂಜೆ ವೇಳೆಗೆ ಕಡಿಮೆಯಾಗಿದೆ. ನಾರಾಯಣಪುರ ಜಲಾಶಯ ಭರ್ತಿಗಾಗಿ ಇಲ್ಲಿಂದ ನೀರು ಬಿಡಲಾಗುತ್ತಿದೆ.ಸದ್ಯ ಆಲಮಟ್ಟಿ ಜಲಾಶಯದಲ್ಲಿ 84 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.ಮುಂಜಾಗ್ರತೆಯ ಕ್ರಮವಾಗಿ ಜಲಾಶಯ ಭರ್ತಿಗೂ‌ ಮುನ್ನವೇ ಆಲಮಟ್ಟಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಈಗಿರುವ 3500 ಕ್ಯುಸೆಕ್ ಹೊರಹರಿವನ್ನು ಸದ್ಯಕ್ಕೆ ಹೆಚ್ಚಿಗೆ ಮಾಡುವುದಿಲ್ಲ ಎಂದು ಪ್ರಭಾರಿ ಅಧೀಕ್ಷಕ ಎಂಜಿನಿಯರ್ ಬಿ.ಎಸ್. ಪಾಟೀಲ ತಿಳಿಸಿದರು.ಆಲಮಟ್ಟಿ ಜಲಾಶಯದ ಮುಂಭಾಗ ಹಾಗೂ ನಾರಾಯಣಪುರ ಜಲಾಶಯದ ಹಿಂಭಾಗದಲ್ಲಿನ ಕೃಷ್ಣಾ ನದಿ…

Read More

ಇಂಡಿ: ಜನಸಂಖ್ಯೆ ಹೆಚ್ಚಳದಿಂದ ಮೂಲ ಸೌಲಭ್ಯಗಳ ಕೊರತೆ, ಶಿಕ್ಷಣ-ಆರೋಗ್ಯ-ನೈರ್ಮಲ್ಯ ಸೇವೆಗಳ ಅಲಭ್ಯತೆ, ಅಪೌಷ್ಟಿಕತೆ, ನಿರುದ್ಯೋಗದಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತರು ಜಾಗೃತಿ ಮೂಡಿಸಲು ವ್ಯಾಪಕವಾಗಿ ಶ್ರಮಿಸಬೇಕೆಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನದ ನಿಮಿತ್ತ ಹಮ್ಮಿಕೊಂಡ ‘ಜನಸಂಖ್ಯೆ ನಿಯಂತ್ರಣದಲ್ಲಿ ಶಿಕ್ಷಣದ ಪಾತ್ರ’ ಕುರಿತ ಚರ್ಚಾಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಬಡತನ ಮತ್ತು ಜನಸಂಖ್ಯೆಯ ನಡುವೆ ನೇರ ಸಂಬಂಧವಿದೆ. ಶಿಕ್ಷಣದಿಂದ ಜನರ ಜೀವನಮಟ್ಟ ಹೆಚ್ಚಿಸಿ, ಮಿತ ಸಂತಾನದ ಅರಿವನ್ನು ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು.ದೇಶದಲ್ಲಿ 1951ರಲ್ಲಿ ಕೇವಲ 36 ಕೋಟಿ ಇದ್ದ ಜನಸಂಖ್ಯೆ 2011ರಲ್ಲಿ 121 ಕೋಟಿ ಆಗಿದೆ. ಪ್ರತಿ ವರ್ಷ 1.81 ಕೋಟಿ ಜನ ಸೇರ್ಪಡೆಯಾಗುತ್ತಿದ್ದಾರೆ. ರಾಜ್ಯದಲ್ಲಿ 1951ರಲ್ಲಿ 1.94 ಕೋಟಿ ಇದ್ದ ಜನಸಂಖ್ಯೆ 2011ರಲ್ಲಿ 6.11 ಕೋಟಿಯಾಗಿದೆ. ಪ್ರತಿ ವರ್ಷ 8.40 ಲಕ್ಷ ಜನ ಹೆಚ್ಚಾಗಿ ಸೇರ್ಪಡೆಯಾಗುತ್ತಿದ್ದಾರೆ. ಇದೇ ವೇಗದಲ್ಲಿ ಜನಸಂಖ್ಯೆ ಬೆಳೆದರೆ ಬಡತನ, ಅನಕ್ಷರತೆ, ಅಜ್ಞಾನ, ಅನಾರೋಗ್ಯ, ಅತ್ಯಾಚಾರ, ಅಸುರಕ್ಷಿತ ಜೀವನ ಶೈಲಿ…

Read More

ಮುದ್ದೇಬಿಹಾಳ: ಕಳೆದ ಕೆಲವು ದಿನಗಳ ಹಿಂದೆ ಪಟ್ಟಣದ ಹುಡ್ಕೋ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.ಇಲ್ಲಿನ ಹುಡ್ಕೋದಲ್ಲಿರುವ ಕರ್ನಾಟಕ ಬ್ಯಾಂಕ್ ನಿಂದ ೩.೬೦ ಲಕ್ಷ ಹಣವನ್ನು ಡ್ರಾ ಮಾಡಿಕೊಂಡು ಬೈಕ್ ನ ಹಿಂಬದಿ ಬ್ಯಾಗನಲ್ಲಿಟ್ಟು ಹುಡ್ಕೋ ಗೇಟ್ ಬಳಿ ಎಳೆನೀರು ಖರೀದಿಸುವಷ್ಟರಲ್ಲಿ ಖದೀಮರು ಹಣವನ್ನು ಎಗರಿಸಿದ್ದರು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಶಂಕರ ಆಚಾರ್ಯ ಮತ್ತು ಸಂಜು ಹೊಸಮನಿ ಆರೋಪಿತರಿದ್ದು ಇವರಿಂದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಪೈಕಿ ಒಟ್ಟು ೩.೫ ಲಕ್ಷ ರೂ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಡಿವಾಯ್‌ಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್.ಎಲ್.ಮನ್ನಾಬಾಯಿ, ಸಿಬ್ಬಂದಿಗಳಾದ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ, ವಿ.ಎನ್.ಹಾಲಗಂಗಾಧರಮಠ, ಆರ್.ಎಸ್.ಮದರಿ, ಎಸ್.ಎಲ್.ಹತ್ತರಕಿಹಾಳ, ಎಸ್.ಸಿ.ರೆಡ್ಡಿ ಇವರನ್ನ ಶ್ಲಾಘಿಸಿದ ಎಸ್‌ಪಿ ಪ್ರಶಂಸನಾ…

Read More

ವಿಜಯಪುರ: ವಿಜಯಪುರದ ಸಿದ್ಧನಗೌಡ ಚಂದ್ರಶೇಖರ ಹೊಸಮನಿ ಅವರು ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ `ಸೈಂಟೋಮೆಟ್ರಿಕ್ ಡೈಮೆನಷನ್ಸ್ ಆಫ್ ಫಾರ್ಮಕಾಲಜಿ ಆ್ಯಂಡ್ ಫಾರ್ಮಸಿ ರಿಸರ್ಚ್ ಇನ್ ಇಂಡಿಯಾ : ಒಂದು ಅಧ್ಯಯನ ಎಂಬ ವಿಷಯಾಧಾರಿತ ಮಹಾಪ್ರಬಂಧವನ್ನು ಮನ್ನಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಘೋಷಿಸಿದೆ.

Read More

ವಿಜಯಪುರ: ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರದಿಂದ ಡೆಂಗ್ಯೂ ನಿಯಂತ್ರಣ ಹಾಗೂ ಶುದ್ಧ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ಕೆ.ಆರ್.ಎಸ್. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರ ಹೆಚ್ಚಾಗಿದ್ದು, ಹಾಗೂ ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿದ್ದು, ರಾಸಾಯನಿಕ ಗೊಬ್ಬರಗಳಿಂದ ದೋಷಿತ ನೀರು ಸರಬರಾಜು ಆಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಹಾಗೂ ಇತರ ಹಲವಾರು ರೋಗಗಳು ಉಂಟಾಗುತ್ತಿವೆ. ಜಿಲ್ಲೆಯಲ್ಲಿ ಮತ್ತು ವಿಜಯಪುರ ನಗರದಲ್ಲಿ ಸೊಳ್ಳೆಗಳ ಮೇಲೆ ಕೀಟನಾಶಕ ಔಷಧಗಳನ್ನು ಸಿಂಪರಣೆ ಮಾಡುವಂತಾಗಬೇಕು. ಇನ್ನು ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯವಾದ ಸೂಚನೆ ಮತ್ತು ಆರೋಗ್ಯಕ್ಕೆ ಬೇಕಾಗುವ ತುರ್ತು ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ತುರ್ತು ಸಭೆ ಕರೆದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೂ ಮತ್ತು ಜಿಲ್ಲೆಯಲ್ಲಿ ಏಕಕಾಲದಲ್ಲಿ ೪೦ ಕೀಟನಾಶಕಗಳ ಕೆಟ್ಟಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು…

Read More

ಇಂಡಿ: ೧೨ ನೆಯ ಶತಮಾನದ ಶರಣರ ವಿಚಾರ ಧಾರೆಗಳನ್ನು ಅಂದಿನ ಅನುಭವ ಮಂಟಪ ಭಕ್ತ ಸಮುದಾಯಕ್ಕೆ ತಲುಪಿಸಿದಂತೆ ಅಥರ್ಗಾದ ಷಣ್ಮುಖಾರೂಢ, ಈರಯ್ಯ ಶ್ರೀಗಳು ಮತ್ತು ಶ್ರೇಷ್ಠ ಸಂತ ಶ್ರೀ ಸಿದ್ದೇಶ್ವರ ಶ್ರೀಗಳ ಚಿಂತನೆಗಳನ್ನು ಇಂದಿನ ಜನ ಸಮುದಾಯಕ್ಕೆ ಮುಟ್ಟಿಸುವ ಕಾರ್ಯ ಆಗಬೇಕು, ಜನ ಸಾಮಾನ್ಯರು ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಬೇಕೆಂದು ಕಾಗವಾಡದ ಯತಿಶ್ವರಾನಂದ ಶ್ರೀಗಳು ಹೇಳಿದರು.ಅವರು ತಾಲೂಕಿನ ಅಥರ್ಗಾ ಗ್ರಾಮದ ಶ್ರೀ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದಲ್ಲಿ ನಡೆದ ಗುರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಗುರುದೇವಾಶ್ರಮದ ಈಶ ಪ್ರಸಾದ ಶ್ರೀಗಳು ಮಾತನಾಡಿ, ೧೨ ನೆಯ ಶತಮಾನದಲ್ಲಿ ಶರಣಾಂದೋಲನ ಆದ್ಯ ಉದ್ದೇಶವೇ ವ್ಯಕ್ತಿಗತ ಪರಿವರ್ತನೆ, ವ್ಯಕ್ತಿ ಪರಿವರ್ತನೆ ಗೊಂಡರೆ ಸಹಜವಾಗಿ ಸಮುದಾಯ ಪರಿವರ್ತನೆ ಯಾಗುತ್ತದೆ. ಅಂತಹ ವ್ಯಕ್ತಿಗತ ಪರಿವರ್ತನೆಗೆ ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕ ಒಂದು ಉಜ್ವಲ ನಿದರ್ಶನ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತ ಸಮುದಾಯವೆಲ್ಲ ಸ್ವಾಭಾವಿಕವಾಗಿಯೇ ಸಿದ್ದೇಶ್ವರ ಶ್ರೀಗಳ ಪ್ರವಚನ ಅನುಸರಿಸಿದರು ಎಂದರು.ತಿಕೋಟಾದ ಚೆನ್ನಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ ಸಿದ್ದೇಶ್ವರ…

Read More

ಇಂಡಿ: ಪಟ್ಟಣದ ಹೆಸ್ಕಾಂ ಇಲಾಖೆಯ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಚಿದಾನಂದ ಕಾಂಬಳೆ ಅವರು ಕರ್ನಾಟಕ ರಾಜ್ಯ ಛಲವಾದಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.ಡಾ.ಅರವಿಂದ ಲಂಬು (ರಾಜ್ಯ ಹಿರಿಯ ಉಪಾಧ್ಯಕ್ಷ), ರವಿಕಾಂತ ಸಿ.ಎಂ(ರಾಜ್ಯ ಉಪಾಧ್ಯಕ್ಷ), ರಾಜೇಶ ಇಂಗಳಗಿ(ರಾಜ್ಯ ಪ್ರ,ಕಾರ್ಯದರ್ಶಿ), ಹಿರಗಪ್ಪ ಸಿಂಗ್ಯಾಗೋಳ(ರಾಜ್ಯ ಸಂಘಟನಾ ಕಾರ್ಯದರ್ಶಿ), ರವೀಂದ್ರ ಶಿವಯಗೊಳ, ದುರ್ಗಪ್ಪ ಛಲವಾದಿ(ಸಹ ಕಾರ್ಯದರ್ಶಿಗಳು), ಮೋಹನ ಗುನ್ನಾಪೂರ, ಡಾ.ಸುಜಾತಾ ಚಂಚಲಕರ(ರಾಜ್ಯ ಸಂಚಾಲಕರು), ಸುರೇಶ ದುಲಾರಿ( ರಾಜ್ಯ ಖಜಾಂಚಿ), ಶಿವಾನಂದ ಕಟ್ಟಿಮನಿ, ಪುನಿತಕುಮಾರ ಪಿ, ಕುಮಾರ ಬಾಗೇವಾಡಿ, ರಮೇಶ ಫಿರಗಾ, ಆಂಜನಯ್ಯಸ್ವಾಮಿ ಹೊಸಮನಿ, ಪಿ.ಎಸ್‌.ಧರಣಾಕರ, ರವೀಂದ್ರ ಇರನೂರ, ಯುವರಾಜ ನಾಟೀಕಾರ, ಚಿಕ್ಕಪ್ಪ ಕಾಂಬಳೆ ರಾಜ್ಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Read More

ಸಿಂದಗಿ ಜೆ.ಹೆಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಸಿಂದಗಿ: ಸಂತಾನೋತ್ಪತ್ತಿ ಆರೋಗ್ಯ ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ನೀಡುವುದು ಇಲಾಖೆಯ ಆದ್ಯ ಕರ್ತವ್ಯ ಎಂದು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.ಪಟ್ಟಣದ ಜೆ.ಹೆಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಂದಗಿ ತಾಲೂಕ ಆರೋಗ್ಯ ಇಲಾಖೆ ಹಾಗೂ ಜೆ.ಹೆಚ್.ಪಟೇಲ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡ ವಿಶ್ವ ಜನಸಂಖ್ಯೆ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣ ಯೋಜನೆಯಲ್ಲಿ ತಾತ್ಕಾಲಿಕ ವಿಧಾನಗಳಾದ ಗರ್ಭ ನಿರೋಧಕ ಮಾತ್ರೆಗಳ ಸೇವನೆ, ವಂಕಿಧಾರಣೆ, ನಿರೋಧ ಬಳಕೆಯಿಂದ ಬೇಗನೆ ಗರ್ಭಧರಿಸುವದನ್ನು ತಡೆಯಬಹುದು. ಒಂದು ಮತ್ತು ಎರಡನೇಯ ಮಗುವಿನ ಅಂತರ ಕಾಪಾಡಬಹುದು. ಶಾಶ್ವತ ವಿಧಾನಗಳಾದ ಉದರ ದರ್ಶಕ ಹಾಗೂ ಉದರ ಛೇದಕ ಶಸ್ತ್ರಚಿಕಿತ್ಸೆ, ಮತ್ತು ಪುರುಷರಿಗಾಗಿ ನೋಸ್ಕಾಲ್‌ಪೆಲ್ ವ್ಯಾಸಕ್ಟಮಿ ಶಸ್ತ್ರ ಚಿಕಿತ್ಸೆಯಿಂದ ಸಂತಾನ ನಿಯಂತ್ರಿಸಬಹುದು ಎಂದರು.ಈ ವೇಳೆ ಪ್ರಾಚಾರ್ಯ ಡಾ.ಬಿ.ಎಮ್.ಹುರಕಡ್ಲಿ ಮಾತನಾಡಿ, ಆರೋಗ್ಯ ಇಲಾಖೆ ಕುಟುಂಬ…

Read More

ಸಿಂದಗಿ: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ನಡೆಸಿಕೊಡುವ ವಚನ ಕಮ್ಮಟ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಿಂದಗಿಯ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ನಿಂಗನಗೌಡ ಕರ್ನಾಳ ಹಾಗೂ ಮಾರ್ಗದರ್ಶಕರಾದ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ಅವರಿಗೆ ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.ವಿದ್ಯಾರ್ಥಿಯ ಈ ಸಾಧನೆಗೆ ಮತ್ತು ಮಾರ್ಗದರ್ಶನ ನೀಡಿದ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ಅವರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ ಮನಗೂಳಿ, ಸಂಸ್ಥೆಯ ನಿರ್ದೇಶಕ ಮಂಡಳಿ, ಮಹಾವಿದ್ಯಾಲಯ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.ಈ ವೇಳೆ ಉಪನ್ಯಾಸಕರಾದ ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ, ಎಫ್.ಎ.ಹಾಲಪ್ಪನವರ, ಡಾ.ಶಾಂತುಲಾಲ ಚವ್ಹಾಣ, ಆರ್.ವಾಯ್.ಪರೀಟ, ಬಿ.ಎಸ್.ಬಿರಾದಾರ, ಆರ್.ಬಿ.ಹೊಸಮನಿ, ಎಸ್.ಪಿ.ಬಿರಾದಾರ, ಎಮ್.ಎನ್.ಅಜ್ಜಪ್ಪ ಸೇರಿದಂತೆ ಅನೇಕರು ಇದ್ದರು.

Read More