Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ತಾಲೂಕಿನಲ್ಲಿ ಅನುಷ್ಠಾನಗೊಂಡ ಜೆಜೆಎಮ್ ಕಾಮಗಾರಿಗಳು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿವೆ. ಈ ಕಾಮಗಾರಿಗಳ ಗುತ್ತಿಗೆದಾರರಿಗೆ ಕಳಪೆ ಮಾಡಲು ಸಹಕರಿಸಿದ ಅಧಿಕಾರಿಗಳನ್ನು ಕೂಡಲೆ ಅಮಾನತು ಮಾಡಬೇಕಲ್ಲದೇ, ಈ ಕಾಮಗಾರಿಯ ಬಿಲ್ಲನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಬುಧವಾರ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟಿಸಿ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭ ಡಿಎಸ್ಸೆಸ್ ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ಬೆಳಗಾಂವ ವಿಭಾಗದ ಸಂಚಾಲಕ ವಿನಾಯಕ ಗುಣಸಾಗರ, ಜಿಲ್ಲಾ ಸಂಚಾಲಕ ಅಶೋಕ ಛಲವಾದಿ ಮತ್ತು ಶರಣು ಸಿಂಧೆ ಮಾತನಾಡಿ, ಸರ್ಕಾರ ಗ್ರಾಮೀಣ ಪ್ರದೇಶದ ಜನತೆಗೆ ಆರೋಗ್ಯ ದೃಷ್ಠಿಯಿಂದ ಜಲ ಜೀವನ ಮಿಷನ್ ದ ಮೂಲಕ ಶುದ್ದ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಾಲಯದಿಂದ ಸಿಂದಗಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೆರುಟಗಿ, ತಿಳಗೂಳ, ಆಲಗೂರ, ಬೆಕಿನಾಳ, ಬೂದಿಹಾಳ, ವಣಕಿಹಾಳ, ಕಲಕೇರಿ, ಕಲಕೇರಿ ಎಲ್.ಟಿ, ರಾಂಫುರ, ರಾಂಪೂರ ಎಲ್.ಟಿ,…
ಅಧಿಕಾರಿಗಳಿಂದ ಹಣ ದುರ್ಬಳಕೆಯಾಗಿದ್ದು ನಿಜ | ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸೊಲ್ಲ | ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಠನೆ ಬೆಂಗಳೂರು: ಗಿರಿಜನ ಕಲ್ಯಾಣ ಮಂಡಳಿಯಲ್ಲಿ ಹಣ ದುರುಪಯೋಗ ಮತ್ತು ದುರ್ಬಳಕೆ ನಡೆದಿರುವುದನ್ನು ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಆದಿವಾಸಿ ಕಲ್ಯಾಣ ಮಂಡಳಿಯಲ್ಲಿ ಅಧಿಕಾರಿಗಳಿಂದ ಹಣ ದುರುಪಯೋಗ ಆಗಿರುವುದು ನಿಜ. ಈ ಸಂಬಂಧ ನಮ್ಮ ಸಚಿವರ ಜತೆ ಮಾತನಾಡಿದ್ದೇವೆ. ಆದರೆ ಅವರು ತಾವು ಯಾವುದೇ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸಚಿವರಾಗಿ ತನಿಖೆ ಎದುರಿಸುವುದು ಒಳ್ಳೆಯದಲ್ಲ ಎಂದು ಸ್ವಯಂ ಪ್ರೇರಿತರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ, ಅವರು ತನಿಖೆ ನಡೆಸಲಿ ಎಂದು ಶಿವಕುಮಾರ್ ತಿಳಿಸಿದ್ದಾರೆ.ಹಗರಣದಲ್ಲಿ ನಮ್ಮ ಸಚಿವರು ಮತ್ತು ಶಾಸಕರ ಕೈವಾಡವಿಲ್ಲ ಆದರೆ ಇದರಲ್ಲಿ ಬೇರೆಯವರು ಶಾಮೀಲಾಗಿದ್ದಾರೆಯ. ನಾವು ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಸುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.ಏತನ್ಮಧ್ಯೆ, ಮಂಡಳಿಯ…
ವಿಜಯಪುರ: ಬಿಜೆಪಿಯ ಹಿರಿಯ ನಾಯಕ, ಏಳು ಬಾರಿ ಸಂಸದರಾಗಿರುವ ರಮೇಶ್ ಜಿಗಜಿಣಗಿ ಅವರನ್ನು ಮೋದಿ ತನ್ನ ಕ್ಯಾಬಿನೆಟ್ಗೆ ಸೇರಿಸಿಕೊಳ್ಳದಿರುವ ಬಗ್ಗೆ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಹೈಕಮಾಂಡ್ ಮೇಲೆ ಬೇಸರಗೊಂಡಿರುವ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಸಂಸದ, ರಾಜ್ಯದ ಹಿರಿಯ ದಲಿತ ರಾಜಕಾರಣಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.“ನನಗೆ ಕ್ಯಾಬಿನೆಟ್ ಹುದ್ದೆ ಬೇಕಾಗಿಲ್ಲ; ನನಗೆ ಜನ ಬೇಕು. ನಾನು ಮತ್ತೆ (ಕ್ಷೇತ್ರಕ್ಕೆ) ಹಿಂತಿರುಗಿದಾಗ, ಅನೇಕ ಜನರು ನನಗೆ ಬೈದರು. ಈ ಹಿಂದೆ ಹಲವರು ಬಿಜೆಪಿ ದಲಿತ ವಿರೋಧಿ ಎಂದು ನನಗೆ ಎಚ್ಚರಿಕೆ ನೀಡಿದ್ದರು” ಎಂದು ಅವರು ಹೇಳಿದರು.“ನಾನು ಕೇಂದ್ರದಲ್ಲಿ ಸಚಿವನಾಗಬೇಕು ಎಂಬ ಬಗ್ಗೆ ಜನರಿಂದ ಒತ್ತಡವಿದೆ. ಇದು ನ್ಯಾಯವೋ ಅನ್ಯಾಯವೋ? ಇಡೀ ದಕ್ಷಿಣ ಭಾರತದಲ್ಲಿ, ಏಳು ಬಾರಿ (ಸಂಸತ್ತಿಗೆ) ಆಯ್ಕೆಯಾದ ಏಕೈಕ ದಲಿತ ಸಂಸದ ನಾನು. ಮೇಲ್ವರ್ಗದ ಎಲ್ಲರೂ ಕ್ಯಾಬಿನೆಟ್ ಮಂತ್ರಿಗಳಾದರು, ದಲಿತರು ಬಿಜೆಪಿಗೆ ಬೆಂಬಲ ನೀಡಿಲ್ಲವೇ? ನನಗೆ ತೀವ್ರ ನೋವಾಗಿದೆ” ಎಂದು ಜಿಗಜಿಣಗಿ ಅವರು ಪಕ್ಷದ ಹೈಕಮಾಂಡ್ಗೆ ಸಚಿವ…
ರಾಜ್ಯ ಚಲವಾದಿ ಸರಕಾರಿ ನೌಕರರ ಸಂಘದ ಉದ್ಘಾಟನೆ ನೆರವೇರಿಸಿದ ಎಸ್ಪಿ ರವೀಂದ್ರ ಗಡಾದೆ ಅಭಿಮತ ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ರವರು ಬದುಕಿದ್ದಾಗಲೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಡೆಗೆ ಇದ್ದರು. ಅವರ ಸಾವಿನ ನಂತರವೂ ಬಡವರನ್ನು ನಿಕೃಷ್ಟರನ್ನು ಕಟ್ಟ ಕಡೆಯ ವ್ಯಕ್ತಿಯನ್ನು ಕಾಪಾಡುತ್ತಿರುವುದು ಬಾಬಾ ಸಾಹೇಬರು ಬರೆದ ಸಂವಿಧಾನವೇ ವಿನಃ ಯಾವ ವ್ಯಕ್ತಿಯೂ ಅಲ್ಲ, ಸರಕಾರವೂ ಅಲ್ಲ ಎಂದು ಬೆಳಗಾವಿಯ ಎಸ್ಪಿ ರವೀಂದ್ರ ಕೆ. ಗಡಾದೆ ಹೇಳಿದರು.ಅವರು ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಚಲವಾದಿ ಸರಕಾರಿ ನೌಕರರ ಸಂಘದ ಉದ್ಘಾಟನೆ ನೆರವೇರಿಸಿ ಕರ್ನಾಟಕ ರಾಜ್ಯ ಚಲವಾದಿ ಸರಕಾರಿ ನೌಕರರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ನಮ್ಮೆಲ್ಲರ ಬದುಕಿಗೆ ಆಧಾರ ಸ್ತಂಭ ಆಗಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ನಾವು ನಮ್ಮ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಹೋಗೋಣ ಎಂದು ಹೇಳಿದರು.ಬೆಳಗಾವಿ ಹೆಸ್ಕಾಂ ಲೆಕ್ಕ ನಿಯಂತ್ರಣಾಧಿಕಾರಿ ಸುರೇಶ ಎ.ಸಿಂಧೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಇಂದಿನ ಯುಗದಲ್ಲಿ…
ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅಭಿಮತ ವಿಜಯಪುರ: ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಜ್ಞಾನ ಪಸರಿಸುವಲ್ಲಿ ಇಂತಹ ದತ್ತಿ ಗೋಷ್ಠಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪೇಡರೇಶನ ಅಧ್ಯಕ್ಷ ಡಾ ಜಾವೀದ ಜಮಾದಾರ ಅಭಿಪ್ರಾಯ ವ್ಯಕ್ತಪಡಿಸಿದರು.ವಿಜಯಪುರ ಜಿಲ್ಲಾ, ತಾಲೂಕ ಹಾಗು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜರುಗಿದ ಲಿಂ.ಮಾತೋಶ್ರೀ ಗುರವ್ವ ಹೊರಟ್ಟಿ ದತ್ತಿ ಕಾರ್ಯಕ್ರಮದಲ್ಲಿಅವಿಭಕ್ತ ಕುಟುಂಬ ಕುರಿತ ಚಿಂತನ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡುತ್ತಾ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ದತ್ತಿ ಗೋಷ್ಠಿಗಳಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದರು.ವಿಶೇಷ ಸನ್ಮಾನಿತರಾದ ಮುಖ್ಯಮಂತ್ರಿಗಳಿಂದ ಶ್ರೇಷ್ಠ ಶಸ್ತ್ರ ಚಿಕಿತ್ಸಕ ಪ್ರಶಸ್ತಿ ಪುರಸ್ಕೃತ ಡಾ ಶಿವಾನಂದ ಮಾಸ್ತಿಹೊಳಿ ಮಾತನಾಡಿ, ನನ್ನದು ಅವಿಭಕ್ತ ಕುಟುಂಬ. ಚಿಕ್ಕ ಮನೆಯಲ್ಲಿ ಎಂಟು ಜನ ಸಹೋದರ, ಸಹೋದರಿಯರು ಕೂಡಿ ಆನಂದದಿಂದ ಕಳೆದ ನನ್ನ ಬಾಲ್ಯ ಜೀವನ…
ಕೊಲ್ಹಾರ: ರೈತರ ಜೀವನಾಡಿ ಕೃಷ್ಣಾ ನದಿ ಉಗಮಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರದ ಪಂಚಗಂಗಾ ಕ್ಷೇತ್ರದಲ್ಲಿ ಕಡ್ಲಿಗರ ಹುಣ್ಣಿಮೆಯ ದಿನವಾದ ಜು.೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ರೈತರೊಂದಿಗೆ ಸೇರಿ ಉಡಿ ತುಂಬುವ ವಿಶೇಷ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ತಿಳಿಸಿದ್ದಾರೆ.ಪಟ್ಟಣದಲ್ಲಿ ಮಂಗಳವಾರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುತ್ತಾ ಮಾತನಾಡಿದ ಅವರು, ಮುಂಗಾರು ಮಳೆಗಳು ಉತ್ತಮವಾಗಿ ಸುರಿದು ಕಡ್ಲಿಗರ ಹುಣ್ಣಿಮೆಗೆ ಕೃಷ್ಣಾ ನದಿ ತುಂಬಿ ಹರಿಯುತ್ತದೆ. ಹೀಗಾಗಿ ಅದು ಈ ಭಾಗದ ರೈತರಿಗೆ ಜೀವನಾಡಿಯಾಗಿದೆ.ಅದರ ಪ್ರಯುಕ್ತ ಕಡ್ಲಿಗರ ಹುಣ್ಣಿಮೆಯ ದಿನ ದಂಪತಿಗಳ ಸಮೇತವಾಗಿ ಮಹಾಬಳೇಶ್ವರಕ್ಕೆ ತೆರಳಿ ಕೃಷ್ಣಾ ನದಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಕಳೆದ ೧೫ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ಈ ಬಾರಿಯೂ ಕೂಡಾ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ರೈತರೊಂದಿಗೆ ತೆರಳಿ ಕೃಷ್ಣಾ ನದಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಉಡಿ ತುಂಬುವ ಕಾರ್ಯಕ್ರಮಕ್ಕೆ ಆಗಮಿಸುವವರು ಜು.೨೦ರಂದು ಬೆಳಿಗ್ಗೆ ೧೧…
ವಿಜಯಪುರ: ಸಾವರ್ಕರ್ ವಿಚಾರ ಸಾವಿಲ್ಲದ ವಿಚಾರ – ಮೃತ್ಯುಂಜಯ ವಿಚಾರ, ಸತ್ಯಮೇವ ಜಯತೇ ಎಂಬ ವಾಕ್ಯದಂತೆ ; ಸಾವರ್ಕರ್ ಸತ್ಯವನ್ನು ಹೇಳಿದರಿಂದ ಅವರ ವಿಚಾರ ಇಂದಿಗೂ ಉಳಿದಿವೆ ಡಾ. ಜಿ ಬಿ ಹರೀಶ ಹೇಳಿದರು.ನಗರದ ಪಿಡಿಜೆ ಸಭಾಭವನದಲ್ಲಿ ನಡೆದ ಮಂಥನ ವಿಜಯಪುರ ಮತ್ತು “ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ” ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ “ಸ್ವಾತಂತ್ರ್ಯ ವೀರ ಸಾವರ್ಕರ್ ಕುರಿತ ಆರೋಪಗಳು ಸತ್ಯವೋ, ಮಿಥ್ಯವೋ ?” ವಿಷಯಾಧರಿಸಿ ಮಾತಾಡಿದ ಅವರು, ಕಮ್ಯುನಿಸ್ಟ್ ರು “ಹಿಂದು” ಶಬ್ದ ಸಂಸ್ಕೃತ ಶಬ್ದವಲ್ಲ , ವೇದ ಉಪನಿಷತ್ ಗಳಲ್ಲಿಯೂ ಹಿಂದು ಶಬ್ದದ ಉಲ್ಲೇಖವಿಲ್ಲ ಎಂದು ಆರೋಪಿಸುವುದುಂಟು. ಆದರೆ, ಪ್ರಾಕೃತ ಭಾಷೆಯಲ್ಲಿ “ಹಿಂದು” ಶಬ್ದದ ಉಲ್ಲೇಖವಿದೆ. ಪೃಥ್ವಿರಾಜ್ ಚೌವ್ಹಾಣನ ʼರಾಸೋ” ಕೃತಿಯಲ್ಲಿ ಹಿಂದು “ಶಬ್ದ” ಉಲ್ಲೇಖವಿದೆ. ಹಾಗೆ, ವಿಜಯನಗರದ ಎರಡನೇ ಹರಿಹರ ಶಾಸನದಲ್ಲಿ ‘ಹಿಂದು ರಾಜ ಸುಲ್ತಾನ್’ ಎಂದು ಬರೆಸಲಾಗಿದೆ, ಇದನ್ನು ತೋರಿಸಿಕೊಟ್ಟವರು ಸ್ವಾತಂತ್ರ್ಯ ವೀರ ಸಾವರ್ಕರ್ ಮಾತ್ರ. ಆದರೆ, ಹಿಂದು ಮಹಾಸಭಾದ ಜನಪ್ರಿಯ ನೇತಾರರಾಗಿದ್ದ ಸಾವರ್ಕರ್ ಕಂಡು,…
ಚಿಮ್ಮಡ: ರಬಕವಿ- ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿ ಹಾಗೂ ಅವರ ಪತಿ ಮಾಜಿ ಉಪಾಧ್ಯಕ್ಷ ಅಶೋಕ ಮೋಟಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.ಕಾಂಗ್ರೆಸ್ ಮುಖಂಡ ಸಿದ್ದು ಕೋಣ್ಣೂರರವರ ಗ್ರಹ ಕಛೇರಿಯಲ್ಲಿ ರವಿವಾರ ಸಂಜೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಚಿಮ್ಮಡ ಗ್ರಾಮ ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.ತೇರದಾಳ ಮತಕ್ಷೇತ್ರದ ಕಾಂಗ್ರೆಸ ಗ್ರಾಮೀಣ ಘಟಕದ ಅಧ್ಯಕ್ಷ ಲಕ್ಷ್ಮಣ ದೇಸಾರಟ್ಟಿ, ಮಹಾಲಿಂಗಪೂರ ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ, ಚಿಮ್ಮಡ ಗ್ರಾಮ ಘಟಕದ ಕಾಂಗ್ರೆಸ್ ಅಧ್ಯಕ್ಷ ಉಮೇಶ ಪೂಜಾರಿ, ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ, ಬಾಳಪ್ಪಾ ಗಡೆಪ್ಪನವರ, ಪ್ರವೀಣ ಪೂಜಾರಿ, ಮಹಾಲಿಂಗ ಬಳಗಾರ, ಶ್ರೀಶೈಲ ಮಠಪತಿ, ಶಿವಪ್ಪಾ ನಾಗನೂರ, ರಾಜು ಬಗನಾಳ, ಅಶೋಕ ಚಿಮ್ಮಡ, ಪಿರಸಾಬ ನದಾಫ, ರವಿ ದೊಡವಾಡ, ಸಲೀಮ ಸರಕಾವಸ ಸೇರಿದಂತೆ ಹಲವಾರು ಜನ ಪ್ರಮುಖರು ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.ಇಪ್ಪತ್ತೆಂಟು ಸದಸ್ಯಬಲದ ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕಳೆದ…
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ದೇವೂರ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.ತಾಲ್ಲೂಕಿನ ದೇವೂರ ಗ್ರಾಮದಲ್ಲಿ ದಿ:೪ ರಿಂದ ಆರಂಭಗೊಂಡು ೧೦ ರವರೆಗೆ ಜರುಗುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಕಾರ್ಯಕ್ರಮವಾದ ಹತ್ತು ದಿನಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಗ್ರಾಮದ ವಿವಿಧೆಡೆ ಸ್ವಚ್ಛತಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ಅಕ್ರಮ್ ಪಾಷಾ ಮಾತನಾಡಿ, ಎನ್ಎಸ್ಎಸ್ನ ವಾರ್ಷಿಕ ವಿಶೇಷ ಶಿಬಿರವನ್ನು ನಿಗದಿತ ರಜಾ ದಿನಗಳಲ್ಲಿ ಯಾವುದಾದರೂ ಒಂದು ಗ್ರಾಮದಲ್ಲಿ ಸಕಲ ತಯಾರಿಯೊಂದಿಗೆ ಆಯೋಜಿಸಲಾಗುತ್ತಿದೆ. ಅಂತೆಯೇ ಶಿಬಿರದ ೫ನೇ ದಿನವಾದ ಸೋಮವಾರ ಗ್ರಾಮದ ವಿವಿಧ ಬೀದಿಗಳು, ದೇವಸ್ಥಾನ ಹಾಗೂ ರುದ್ರಮುನಿ ಹಾಗೂ ಶಿವಬಸವ ತಪೋಮಂದಿರದ ಆವರಣದಲ್ಲಿ ಕಸಗೂಡಿಸಿ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು ಎಂದರು.ಉಪನ್ಯಾಸಕ ಬಸವರಾಜ ಹೊನಮಟ್ಟಿ ವಿದ್ಯಾರ್ಥಿ ಪ್ರತಿನಿಧಿಗಳಾದ ದೀಪಾ ನಾಯ್ಕೋಡಿ, ದಾನಮ್ಮಾ, ಅಶೋಕ ಚವ್ಹಾಣ, ಮಾಳಪ್ಪ ದೊಡ್ಡಿನಿ, ಖಾಜಾಅಮೀನ್ ಮುಲ್ಲಾ, ನೂರ್ಜಹಾನ್ ಮುಜಾವರ್, ಪೂಜಾ ಚವ್ಹಾಣ, ಐಶ್ವರ್ಯ…
ದೇವರಹಿಪ್ಪರಗಿ: ತಾಲ್ಲೂಕು ಗ್ರಾಮೀಣ ಪ್ರದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆದು ಬಡ ಕುಟುಂಬಗಳ ಸುಗಮ ಸಂಸಾರ ನಿರ್ವಹಣೆಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರು ತಹಶೀಲ್ದಾರ ಪ್ರಕಾಶ ಸಿಂದಗಿ ಹಾಗೂ ಅಬಕಾರಿ ಇಲಾಖೆಯ ಉಪನಿರೀಕ್ಷಕ ಬಿ.ವಿ.ರಜಪೂತ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ದೇವೂರ ಗ್ರಾಮದ ಮಹಿಳೆಯರು ಗ್ರಾಮ ಹಾಗೂ ತಾಂಡಾಗಳಲ್ಲಿ ಮಾಡಲಾಗುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ರೇಣುಕಾ ಪಾಟೀಲ ಮಾತನಾಡಿ, ದೇವೂರ ಗ್ರಾಮ ಮತ್ತು ತಾಂಡಾಗಳಲ್ಲಿ ಅಕ್ರಮವಾಗಿ ಸಾರಾಯಿ ತಯಾರಿಸಿ ಅಪಾಶಿ ಶಂಕರಗೌಡ ಬಗಲಿ, ಕಲಾವತಿ ಅಪಾಶಿ ಬಗಲಿ ಮನೆ, ಶಾಲೆಯ ಹತ್ತಿರದ ಮಾದೇವಪ್ಪ ಪೂಜಾರಿ, ಅನಸೂಬಾಯಿ ಮಾದೇವಪ್ಪ ಪೂಜಾರಿ ಮಾಲೀಕತ್ವದ ಕಿರಾಣಿ ಅಂಗಡಿ, ಬಸ್ನಿಲ್ದಾಣದ ಹತ್ತಿರದ ಸಿದ್ದು ಬೋರಗಿ ಪಾನ್ ಶಾಪ್, ರೇಣುಕಾ ಸಿದ್ದು ಬೋರಗಿ, ಸಂತೋಷ ರಾಠೋಡರ ಎಲ್.ಟಿ ೧ರಲ್ಲಿನ, ಎಲ್ಲಮ್ಮ…
