ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮಿತಿ ವತಿಯಿಂದ ಭಾರತದ ಪ್ರಥಮ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ರಾಜ್ಯ ಮಟ್ಟದಲ್ಲಿ ಜನ್ಮ ಜಯಂತಿಯನ್ನು ಆಚರಣೆ ಜೊತೆಗೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜನವರಿ ೦೩ ರಂದು ಮಾತೇ ಸಾವಿತ್ರಿಬಾಯಿ ಫುಲೆ ಅವರ ೧೯೩ ನೇ ಜನ್ಮ ಜಯಂತಿ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮತ್ತು ಮಾಡುತ್ತಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ ರಾಜ್ಯ ಮಟ್ಟದ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ” ನೀಡಲಾಗುತ್ತಿದೆ.
ಸದರಿ ಕಾರ್ಯಕ್ರಮದ ಉದ್ಘಾಟಕರಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಎಂ. ಬಿ. ಪಾಟೀಲ ಆಗಮಿಸುತ್ತಿದ್ದು, ಫಾದರ್ ಟಿಯೋಲ ಮೆಚಡೊ ಅವರು ದಿವ್ಯ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು, ಹಿರಿಯ ಹೋರಾಟಗಾರರಾದ ಬಿ. ಗೋಪಾಲ್, ಹಿರಿಯ ಪತ್ರಕರ್ತರಾದ ಅನಿಲ್ ಹೊಸಮನಿ, ಡಿಸಿಸಿ ಬ್ಯಾಂಕ್ ನಿರ್ದೇಶಕಿಯಾದ ಶ್ರೀಮತಿ ಸಂಯುಕ್ತ ಪಾಟೀಲ, ಪರಿಷತ್ ರಾಜ್ಯ ಸಂಚಾಲಕರಾದ ಬಾಲಾಜಿ ಎಂ ಕಾಂಬಳೆ ಉಪಸ್ಥಿತ ಇರಲಿದ್ದಾರೆ.
ಸಮಾರಂಭದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾದ ನಾಡಿನ ಎಲ್ಲಾ ಜಿಲ್ಲೆಗಳ ಮಹಿಳಾ ಸಾಧಕಿಯರು ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯ ಮುಖಂಡರು ಮತ್ತು ಎಲ್ಲಾ ಜಿಲ್ಲೆಗಳ ಸಂಚಾಲಕರು ಹಾಗೂ ತಾಲ್ಲೂಕು ಸಂಚಾಲಕರು ಅಲ್ಲದೇ ಕಾರ್ಯಕರ್ತರು ಇರಲಿದ್ದಾರೆ. ಸಮಾರಂಭ ಮುಗಿದ ನಂತರ ಮಧ್ಯಾಹ್ನ ೨. ೩೦ಕ್ಕೆ ಸರಜೂ ಕಾಟ್ಕರ್ ವಿರಚಿತ ಕಾದಂಬರಿ ಅಧಾರಿತ ಮತ್ತು ವಿಧ್ಯಾರ್ಥಿ ಯುವಜನರು ನಟಿಸಿದ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ” ನಾಟಕ ಪ್ರದರ್ಶನ ನಡೆಯಲಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

