ಸಿಂದಗಿ: ಪದವಿ ಶಿಕ್ಷಣ ಬದುಕನ್ನು ನಿರ್ಮಾಣ ಮಾಡುತ್ತದೆ ಆದರೆ ಅಕ್ಷರದ ಜ್ಞಾನವಿಲ್ಲದಿದ್ದರೆ ಬದುಕೆ ನಿರ್ನಾಮವಾಗುತ್ತದೆ ಎಂದು ವಿಜಯಪುರ ಅಕ್ಕ ಮಹಾದೇವಿ ವಿವಿಯ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿಷ್ಣು ಎಂ. ಶಿಂಧೆ ಹೇಳಿದರು.
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾ ಭವನದಲ್ಲಿ ಪ್ರಸಕ್ತ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವೆಂದರೆ ಕೇವಲ ಓದು-ಬರಹವಲ್ಲ. ಶಿಕ್ಷಣವೆಂದರೆ ಬದುಕು ನಿರ್ಮಿಸಬಲ್ಲ ಅಸ್ತ್ರವಾಗಿದೆ. ಇಂದು ಯುವಕರು ಮಾದಕ ವಸ್ತುಗಳ ದಾಸರಾಗುತ್ತ ದಾರಿ ತಪ್ಪುತ್ತಿದ್ದಾರೆ. ಪಾಲಕರು ಕೇವಲ ಶಿಕ್ಷಣ ಸಂಸ್ಥೆಯೆಡೆಗೆ ಬೆರಳು ಮಾಡಿ ತೊರಿಸದೇ ಗ್ರಾಮೀಣ ಬಾಗದಲ್ಲಿ ಇಂತಹ ದಾರಿ ತಪ್ಪುತ್ತಿರುವ ಯುವಕರನ್ನು ಒಂದೆಡೆಗೆ ಸೇರಿಸಿ ಜೀವನದ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವದಲ್ಲದೇ ಮಾರ್ಗದರ್ಶನ ನೀಡಬೇಕು. ಇದರಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಅಂದ ಅವರು, ಇಂದು ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿತು ಎನ್ನುವ ಭಾವನೆಯಲ್ಲಿರುವ ನಾವುಗಳು ತಾರತಮ್ಯ ತೊರದೇ ಸರಿಸಮಾನವಾದ ಶಿಕ್ಷಣ ನೀಡುವ ಮೂಲಕ ಸಂಸ್ಕಾರ ಬೆಳೆಸಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಚೇರಮನ್ನ್ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಕಲಿಕೆಗೆ ಪೂರಕವಾಗಿ ಪಠ್ಯೇತರ ಚಟುವಟಿಕೆಗಳ ಬಾಗವಹಿಸಿ ತಮ್ಮಲ್ಲಿರುವ ಸೂಕ್ತ ಪ್ರತಿಭೆಗಳನ್ನು ಹೊರಹಾಕವುದಲ್ಲದೇ ತಮ್ಮಲ್ಲಿರುವ ಕೀಳರಿಮೆ ತಾಳದೇ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಸರಿಸಮನಾದ ಶಿಕ್ಷಣ ಪಡೆದು ಈ ಸಂಸ್ಥೆಯ ಹಿರಿಮೆಯನ್ನು ಮೇಲೆತ್ತರಕ್ಕೆ ತೆಗೆದುಕೊಂಡು ಹೋಗುವ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.
ಈ ವೇಳೆ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ. ಮಠ ಮಾತನಾಡಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎಸ್.ಎಂ.ಪೂಜಾರಿ ಮಾತನಾಡಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಕುಳಗೇರಿ, ಲಕ್ಷ್ಮೀ ಕುಂಬಾರ ಅನಿಸಿಕೆ ವ್ಯಕ್ತಪಡಿಸಿದರು.
ಈರಮ್ಮ ಹಿರೇಮಠ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಯು.ಸಿ. ಪೂಜೇರಿ ಸ್ವಾಗತಿಸಿ ಪರಿಚಯಿಸಿದರು. ಕು. ನೀಲಗಂಗಾ ದೇವರಮನಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರಿ ಕಾವೇರಿ ರೇವೂರ ವಂದಿಸಿದರು.
ಈ ವೇಳೆ ನಿವೃತ್ತ ಪ್ರಾಚಾರ್ಯ ಡಾ. ಸಿ.ಕೆ.ಕಟ್ಟಿ, ಡಾ.ಎಂ.ಎಂ.ಪಡಶೆಟ್ಟಿ, ಸಿಬ್ಬಂದಿಗಳಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಪಿ.ಎಮ್ ಮಾಲಿಪಾಟೀಲ್, ಅನೀಲಕುಮಾರ ರಜಪೂತ, ಎಸ್.ಎಮ್. ಹೂಗಾರ, ಎಮ್.ಕೆ. ಬಿರಾದಾರ, ಎಸ್.ಸಿ ದುದ್ದಗಿ, ಮಂಗಳಾ ಈಳಗೇರ, ಡಿ.ಎಂ. ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

