Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕ ಉಣ್ಣಿಭಾವಿ ಅವರಿಗೆ ಬೀಳ್ಕೊಡುಗೆ
(ರಾಜ್ಯ ) ಜಿಲ್ಲೆ

ಶಿಕ್ಷಕ ಉಣ್ಣಿಭಾವಿ ಅವರಿಗೆ ಬೀಳ್ಕೊಡುಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ನಿಡಗುಂದಿ: ೩೯ ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಗೊಂಡ ಕಮದಾಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಬಿ. ಉಣ್ಣಿಭಾವಿ ಅವರನ್ನು ಗ್ರಾಮಸ್ಥರು, ನಾನಾ ಸಂಘಟನೆಗಳು, ಅವರ ಶಿಷ್ಯಂದಿರು ಸನ್ಮಾನಿಸಿ ಗುರುಭಕ್ತಿ ಮೆರೆದರು.
ಉಣ್ಣಿಭಾವಿ ಅವರ ಸೇವೆ ಹಾಗೂ ವಿದ್ಯಾರ್ಥಿಗಳ ಕುರಿತು ಅವರ ಕಾಳಜಿ ಹಾಗೂ ಬದ್ಧತೆ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಸಹಸ್ರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸಿದ ಉಣ್ಣಿಭಾವಿ ಅವರ ಸೇವೆ ಅನನ್ಯ ಎಂದರು. ನಿವೃತ್ತಿಯ ದಿನ ರಾಜ್ಯದ ನಾನಾ ಕಡೆಯಿಂದ ಅವರ ಶಿಷ್ಯರು ಬಂದು ಸನ್ಮಾನಿಸಿದ್ದು ಅವರ ಸೇವೆಗೆ ಸಂದ ಗೌರವ ಎಂದರು. ಸಮುದಾಯದ ಸಹಭಾಗಿತ್ವದಿಂದ ಕಮದಾಳ ಶಾಲೆಯಲ್ಲಿಯೂ ಸ್ಮಾರ್ಟ್ ಕ್ಲಾಸ್ ಅಳವಡಿಸಬೇಕು, ಅದಕ್ಕೆ ಬೇಕಾದ ಹಣವನ್ನು ಗ್ರಾಮಸ್ಥರು ನೀಡಬೇಕು ಎಂದರು. ಇದರಿಂದ ಮಕ್ಕಳ ಕಲಿಕೆ ಇನ್ನಷ್ಟು ದೃಡೀಕರಣಗೊಳ್ಳಲಿದೆ ಎಂದರು. 
ಪ್ರಾಸ್ತವಿಕವಾಗಿ ಮಾತನಾಡಿದ ಶಿಕ್ಷಕ ಎಂ.ಎಸ್. ಯಳಮೇಲಿ, ಎಲ್ಲಾ ಶಿಕ್ಷಕರನ್ನು ಒಗ್ಗೂಡಿಸಿ ಇಡೀ ಶಾಲೆಯನ್ನು ಶೈಕ್ಷಣಿಕ ರಂಗದಲ್ಲಿ ಅಭಿವೃದ್ಧಿಯತ್ತ ಮುನ್ನಡೆಸಿದ ಕೀರ್ತಿ ಉಣ್ಣಿಭಾವಿ ಅವರದ್ದಾಗಿದೆ. ಕೇವಲ ನಾಲ್ಕೂವರೆ ವರ್ಷಗಳಲ್ಲಿ ಕಮದಾಳ ಶಾಲೆಯ ಭೌತಿಕ, ಶೈಕ್ಷಣಿಕ ವಾತಾವರಣವನ್ನೇ ಬೆರಗುಗೊಳಿಸುವಂತೆ ಬದಲಾವಣೆ ಮಾಡಿದ್ದಾರೆಂದು ಅವರ ಬಗ್ಗೆ ಮಾತನಾಡಿ ಭಾವುಕರಾದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಶಿಕ್ಷಕ ಸಂಘಟನೆಯ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ಲೋಕಣ್ಣವರ, ಅಥಣಿ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ. ಹಿರೇಮಠ ಮಾತನಾಡಿದರು.
ಶಿಕ್ಷಣ ಸಂಯೋಜಕ ಉದಯಕುಮಾರ ಬಶೆಟ್ಟಿ, ಬಿ.ಎಸ್. ಅವಟಿ, ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಮುಕಾರ್ತಿಹಾಳ, ಪ್ರಧಾನ ಕಾರ್ಯದರ್ಶಿ ಸಲೀಂ ದಡೆದ, ನೌಕರರ ಸಂಘದ ಅಧ್ಯಕ್ಷ ಆರ್.ಎ. ನದಾಫ್, ಪ್ರಧಾನ ಕಾರ್ಯದರ್ಶಿ ಆರ್.ಎಸ್. ಕಮತ, ಜಿ.ಎಸ್. ಪರಡಿಮಠ, ಪಟ್ಟಣ ಪಂಚಾಯ್ತಿ ಸದಸ್ಯ ಕರಿಯಪ್ಪ ಸಿಂದಗಿ, ಮುದ್ದಪ್ಪ ಯಳ್ಳಿಗುತ್ತಿ, ಆರ್.ಸಿ. ಹೊಸಗೌಡರ, ಬಸವರಾಜ ಮೇಟಿ, ಮಹಾದೇವಪ್ಪ ಮಾದರ, ಹನುಮಂತ ಮಾಳಗೊಂಡ, ಎಂ.ಆರ್. ಮಕಾನದಾರ್, ಎಂ.ಎಂ. ಮುಲ್ಲಾ, ಬಿ.ಡಿ. ಚಲವಾದಿ, ಕುಮಾರ ಬಾಗೇವಾಡಿ ಮತ್ತೀತರರು ಇದ್ದರು.
*ಸನ್ಮಾನ:*
ನಾನಾ ಕಡೆಯಿಂದ ಬಂದಿದ್ದ ಅವರ ಶಿಷ್ಯ ಬಳಗ, ನಾನಾ ಸಂಘಟನೆಗಳು, ನಾನಾ ಶಾಲೆಗಳ ನೂರಾರು ಜನರು ಬಿ.ಬಿ. ಉಣ್ಣಿಬಾವಿ ದಂಪತಿಯನ್ನು ಸನ್ಮಾನಿಸಿದರು. 
ಅಕ್ಕಮಹಾದೇವಿ ಪಟ್ಟಣಶೆಟ್ಟಿ ಸ್ವಾಗತಿಸಿದರು. ರಾಘವೇಂದ್ರ ವಂದನಗೂರ ನಿರೂಪಿಸಿದರು. ಸುನಂದಾ ಬಡಿಗೇರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.