Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಸ್ಯನಟ ವೈಜನಾಥ ಬಿರಾದಾರಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಹಾಸ್ಯನಟ ವೈಜನಾಥ ಬಿರಾದಾರಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನ ಬಾಗೇವಾಡಿ: ಇಂದಿನ ಕಾಲದಲ್ಲಿ ಮಕ್ಕಳಿಗೆ ವಿದ್ಯೆ ಚೆನ್ನಾಗಿ ಸಿಗುತ್ತಿದೆಯಾದರೂ ಅವರಿಗೆ ಕಷ್ಟ ಗೊತ್ತಾಗದೇ ಇರುವದು ವಿಷಾದನೀಯ. ಮಕ್ಕಳು ವಿದ್ಯೆಯನ್ನು ಚೆನ್ನಾಗಿ ಕಲಿಯುವ ಜೊತೆಗೆ ಉತ್ತಮ ಸಂಸ್ಕಾರ ಕಲಿತುಕೊಳ್ಳುವಂತಾಗಬೇಕೆಂದು ಚಲನಚಿತ್ರ ಹಾಸ್ಯನಟ ವೈಜನಾಥ ಬಿರಾದಾರ ಹೇಳಿದರು.
ಪಟ್ಟಣಕ್ಕೆ ಸೋಮವಾರ ಸಂಜೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಚಿಕ್ಕವರಿದ್ದಾಗ ಅಷ್ಟಾಗಿ ಹಿರಿಯರು ವಿದ್ಯೆಗೆ ಮಹತ್ವ ಕೊಡುತ್ತಿರಲಿಲ್ಲ. ನಾವು ಶಾಲೆಯಿಂದ ಬಂದ ನಂತರ ಮನೆಯಲ್ಲಿ ಹೇಳುವ ಎಲ್ಲ ಕೆಲಸಗಳನ್ನು ಮಾಡುವ ಪರಿಸ್ಥಿತಿಯಿತ್ತು. ಅಭ್ಯಾಸ ಮಾಡಲು ಅಷ್ಟಾಗಿ ಸಮಯ ಸಿಗುತ್ತಿರಲಿಲ್ಲ. ಇಂದು ಮಕ್ಕಳಿಗೆ ಹೆಚ್ಚು ಕೆಲಸಗಳನ್ನು ಹಚ್ಚದೇ ಅವರಿಗೆ ಅಭ್ಯಾಸ ಮಾಡಲು ಅವಕಾಶ ಕೊಟ್ಟರೂ ಅವರು ಅದನ್ನು ಸದುಪಯೋಗ ಪಡಿಸಿಕೊಳ್ಳದೇ ಮೊಬೈಲ್ದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಈ ಅಭ್ಯಾಸ ಹೋಗಿ ಅವರು ಉತ್ತಮ ವಿದ್ಯಾವಂತರಾಗಿ ಹೊರಹೊಮ್ಮುವಂತಾಗಬೇಕಾದ ಅಗತ್ಯವಿದೆ ಎಂದರು.
ನಾನು ಇದುವರೆಗೂ ಸುಮಾರು ೫೫೦ ಚಲನಚಿತ್ರಗಳಲ್ಲಿ ನಟನೆ ಮಾಡಿದ್ದೇನೆ. ನಾನು ರಂಗಭೂಮಿಯಿಂದ ಸಿನಿಮಾ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದು. ರಂಗಭೂಮಿಯು ಕಲಾವಿದರರನ್ನು ಬೆಳೆಯಲು ಅವಕಾಶ ನೀಡುತ್ತದೆ. ನಾನು ನಟಿಸಿದ ನೈಂಟಿ ಹೊಡಿ ಮನಿಗೆ ನಡಿ ಎಂಬ ಚಲನಚಿತ್ರ ನೋಡಿ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಜನರು ಕುಡಿತವನ್ನು ಬಿಟ್ಟಿದ್ದಾರೆ. ಇದು ನನಗೆ ತೃಪ್ತಿ ತಂದಿದೆ. ಯಾವುದೇ ವೃತ್ತಿ ಮಾಡಲಿ ಅಲ್ಲಿ ಯಾವುದೇ ಒತ್ತಡದಿಂದ ಕಾರ್ಯನಿರ್ವಹಿಸಬಾರದು. ತಮಗೆ ಭಗವಂತ ನೀಡಿದ ವೃತ್ತಿಯಲ್ಲಿ ಪ್ರಾಮಾಣಿಕವಾಗಿ, ನಿಷ್ಠೆಯಿಂದ ಯಾವುದೇ ಒತ್ತಡ ಇಲ್ಲದೇ ಕಾರ್ಯನಿರ್ವಹಿಸಿದರೆ ಜೀವನ ಸುಂದರವಾಗಿರಲು ಸಾಧ್ಯ. ನನಗೆ ಭಗವಂತ ನೀಡಿದ ಈ ವೃತ್ತಿಯಲ್ಲಿ ಯಾವುದೇ ಒತ್ತಡವಿಲ್ಲದೇ ನನಗೆ ಸಿಕ್ಕ ಅವಕಾಶವನ್ನು ನಾಡಿನ ಜನರಿಗೆ ಪ್ರಾಮಾಣಿಕವಾಗಿ ಮುಟ್ಟಿಸುವ ಕಾರ್ಯ ಮಾಡುತ್ತಿದ್ದೇನೆ. ಇಡೀ ರಾಜ್ಯವೇ ನನ್ನ ಮನೆ, ನಾಡಿನ ಜನರೇ ನನಗೆ ಬಾಂಧವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಶ್ವಬಂಧು ಬಸವ ಸಮಿತಿಯ ಡಾ.ಅಮರೇಶ ಮಿಣಜಗಿ, ಶಿಕ್ಷಕ ಎಸ್.ಪಿ.ಮಡಿಕೇಶ್ವರ ಅವರು ಹಾಸ್ಯನಟ ವೈಜನಾಥ ಬಿರಾದಾರ ಅವರನ್ನು ಸನ್ಮಾನಿಸಿದರು. ಶ್ರೀಶೈಲ ಮಠಪತಿ, ರಮೇಶ ಮಂಗಳೂರ, ಬಸವರಾಜ ಮೇಟಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.