Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಲ ಮರು ಪಾವತಿಯಿಂದ ಬ್ಯಾಂಕುಗಳ ಅಭಿವೃದ್ಧಿ ಸಾಧ್ಯ
(ರಾಜ್ಯ ) ಜಿಲ್ಲೆ

ಸಾಲ ಮರು ಪಾವತಿಯಿಂದ ಬ್ಯಾಂಕುಗಳ ಅಭಿವೃದ್ಧಿ ಸಾಧ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಲಕ್ಷ್ಮಿ ವೆಂಕಟೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ

ವಿಜಯಪುರ: ಸಹಕಾರಿ ಸಂಘಗಳ ಆಡಳಿತ ಮಂಡಳಿ ಮತ್ತು ಸಾಲ ಪಡೆಯುವ ಗ್ರಾಹಕರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಬ್ಯಾಂಕುಗಳು ಹೆಚ್ಚಿನ ಅಭಿವೃದ್ಧಿಯಾಗಲು ಸಾಧ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಇಂದು ಗುರುವಾರ ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. ಅಲ್ಲದೇ, ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖವಾಗಿರುತ್ತದೆ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು. ಅದೇ ರೀತಿ, ಸಾಲ ಪಡೆಯುವ ಗ್ರಾಹಕರೂ ಕೂಡ ಶ್ರದ್ಧೆಯಿಂದ ಸಾಲ ಮರು ಪಾವತಿಸಬೇಕು. ಆಗ ಮಾತ್ರ ಹಣಕಾಸು ಸಂಸ್ಥೆಗಳು ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯ. ಸಹಕಾರಿ ಮತ್ತು ಖಾಸಗಿ ಸೇರಿದಂತೆ ಯಾವುದೇ ಹಣಕಾಸು ಸಂಸ್ಥೆಗಳು ಯಶಸ್ವಿಯಾಗಬೇಕಾದರೆ ಅಲ್ಲಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರಾಮಾಣಿಕವಾಗಿ ಪರಿಶ್ರಮ ಪಡಬೇಕು. ಸಮನ್ವಯದಿಂದ ವ್ಯವಹಾರ ನಿರ್ವಹಣೆ ಮಾಡಬೇಕು. ಶ್ರೀ ಲಕ್ಷ್ಮಿ ವೆಂಕಟೇಶ ಸೌಹಾರ್ದ ಸಹಕಾರಿ ಸಂಘದ ಪದಾಧಿಕಾರಿಗಳ ಸಾಮರ್ಥ್ಯ ಅಗಾಧವಾಗಿದೆ. ಈ ಸಂಘದಿಂದ ರೈತರಿಗೆ, ಜನರಿಗೆ ಮತ್ತು ಬ್ಯಾಂಕಿಗೆ ಒಳ್ಳೆಯದಾಗಲಿ. ಹೋಬಳಿ ಮಟ್ಟದಲ್ಲಿ ದೊಡ್ಡ ಹೆಸರು ಮಾಡುವಂತಾಗಲಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬೀಳಗಿ ಶಾಸಕ ಜೆ. ಟಿ. ಪಾಟೀಲ, ಮರೆಗುದ್ದಿ ದಿಗಂಬರೇಶ್ವರ ಸಂಸ್ಥಾನಮಠದ ಪ್ರಭು ತೋಂಟದಾರ್ಯ ಮಹಾಸ್ವಾಮೀಜಿ, ಮಮದಾಪುರ ವಿರಕ್ತಮಠದ ಅಭಿನವ ಮುರುಗೇಂದ್ರ ಸ್ವಾಮೀಜಿ, ಕೊಡಬಾಗಿಯ ಮಹಾದೇವಯ್ಯ ಶಂ. ಹಿರೇಮಠ, ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ ಲ. ಕೋನಪ್ಪನವರ, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕುಮಾರ ದೇಸಾಯಿ, ಖಾದಿ ಮತ್ತು ಗ್ರಾಮೋದ್ಯೋಗ ಜಿಲ್ಲಾಧ್ಯಕ್ಷ ಬಾಪುಗೌಡ ಬಿ. ಪಾಟೀಲ ಶೇಗುಣಶಿ, ನಿರ್ದೇಶಕ ಎಚ್. ಬಿ. ಹರನಟ್ಟಿ, ಜಿ. ಪಂ. ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ಮುಖಂಡರಾದ ಗೋವಿಂದಪ್ಪ ಹರನಟ್ಟಿ, ಕೃಷ್ಣಾಜಿ ಕುಲಕರ್ಣಿ, ಬಿ. ಡಿ. ಪಾಟೀಲ, ಕೆ. ಎಚ್. ಮುಂಬಾರೆಡ್ಡಿ, ಶಿವನಗೌಡ ಪಾಟೀಲ, ಸಿ. ಎಚ್. ಲೆಂಡಿ, ಮುತ್ತಪ್ಪ ಶಿವಣ್ಣವರ, ಉಮೇಶ ಮಲ್ಲಣ್ಣವರ, ಮುತ್ತನಗೌಡ ಪಾಟೀಲ, ಮಹಾದೇವಪ್ಪ ಮಧರಖಂಡಿ, ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು, ಸಲಹಾ ಮಂಡಳಿ ಸದಸ್ಯರು ಸೇರಿದಂತೆ ನಾನಾ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.