ಇಂಡಿ: ರಾಜ್ಯದಲ್ಲಾಗುವ ಪ್ರತಿಯೊಂದು ಅನ್ಯಾಯದ ಕಾರ್ಯಗಳಿಗೆ ಧ್ವನಿ ಎತ್ತುವ ಕಾರ್ಯ ಮೊದಲು ಮಾಡುವುದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಎಂದು ಕರವೇ ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಹೇಳಿದರು.
ಗುರುವಾರ ಪಟ್ಟಣದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಸಂಘಟನಾ ಸಭೆಯ ನೇತೃತ್ವವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು-ನುಡಿಗೆ ಅನ್ಯಾಯವಾಗುತ್ತದೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಕರವೇ ಕಾರ್ಯಕರ್ತರು ಆಕ್ರೋಶಗೊಂಡು ಹೋರಾಟಕ್ಕೆ ಇಳಿಯುತ್ತಾರೆ. ಹಲವು ರಾಜಕಾರಣಿಗಳು ಹೋರಾಟ ಹತ್ತಿಕ್ಕುವ ಕೆಲಸಗಳನ್ನೂ ಮಾಡುತ್ತಾರೆ. ಕರವೇ ಕಾರ್ಯಕರ್ತರ ಬಂಧನವೂ ಆಗುತ್ತದೆ. ಆದರೂ ಹೋರಾಟ ನಿಲ್ಲಲ್ಲ. ಈ ನಾಡು ನುಡಿಗಾಗಿ ಕರವೇ ಕಾರ್ಯಕರ್ತರು ಜೀವ ನೀಡಲು ಸಹ ಮುಂದಾಗುತ್ತಾರೆ ಎಂದರು.
ಅನ್ಯಾಯದ ವಿರುಧ್ಧ ಹೋರಾಡಲು ಕರವೇ ಕಾರ್ಯಕರ್ತರು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಾಗುತ್ತದೆ. ನಾರಾಯಣಗೌಡ್ರು ಹಾಗೂ ಪ್ರವೀಣಶೆಟ್ಟಿ ಅವರ ಸಂಘಟನೆಗಳು ಎರಡಿರಬಹುದು ಆದರೆ ಇಬ್ಬರ ಆಶಯ ಒಂದೇ ಆಗಿದೆ. ಆ ದಿಸೆಯಲ್ಲಿ ಮೊದಲು ನಾವೆಲ್ಲ ಸಂಘಟಿತರಾಗಬೇಕಾಗಿದೆ. ಅಕ್ರಮ ಮರಳು ಗಣಿಗಾರಿಕೆ, ನಾಡದ್ರೋಹಿ ಹೇಳಿಕೆ ಕೊಡುವವರಿಗೆ, ಕನ್ನಡ ನಾಡನ್ನು ಅತಿಕ್ರಮಣ ಮಾಡುವವರಿಗೆ, ಕನ್ನಡ ಭಾಷೆಗೆ ಮಸಿ ಬಳೆಯುವವರಿಗೆ ನಾವೆಲ್ಲ ಹೊರಾಟದ ಮೂಲಕ ತಕ್ಕ ಪಾಠ ಕಲಿಸಲು ಮುಂದಾಗಬೇಕಿದೆ ಎಂದರು.
ಇಂಡಿ ಒಂಕಾರಾಶ್ರಮದ ಡಾ. ಸ್ವರೂಪಾನಂದ ಶ್ರೀಗಳು ಆಶೀರ್ವಚನ ನೀಡಿದರು.
ಕರವೇ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ, ಬಸವರಾಜ ಮಾರನಭಾವಿ, ಶಿವಾನಂದ ಮಲಕಗೊಂಡ, ಅಶೋಕ ಭೂಸನೂರ, ಸದ್ದಾಂ ಆಗೂರ, ಶಿವು ಬಗಲಿ, ಆನಂದ ಪವಾರ, ದಯಾನಂದ ಉಮರಾಣಿ, ಮಾದೇವ ರಾಮಗೊಂಡ, ಮಂಜು ತೇಲಿ, ಫಯಾಜ ಬಾಗವಾನ, ಮಹೇಶ ಹಾರಿವಾಳ, ಆನಂದ ಓಜಿ, ಗಂಗಾಧರ ಗುಳೇದ, ಶ್ರೀಕಾಂತ ರಾಠೋಡ, ಶಂಕರ ಕಾಂಬಳೆ ಮತ್ತಿತರರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

