ಇಂಡಿ: ಇಂಡಿ ಪ್ರತ್ಯೇಕ ಜಿಲ್ಲೆಯಾಗುವಂತೆ ಮತ್ತು ಅಖಂಡ ಇಂಡಿ ಸಿಂದಗಿ ತಾಲ್ಲೂಕುಗಳನ್ನು ೩೭೧ (ಜೆ) ಗೆ ಸೇರಿಸಬೇಕು. ಮತ್ತು ಫೆಬ್ರವರಿ ತಿಂಗಳಲ್ಲಿ ಮಂಡಿಸುವ ಬಜೆಟ್ನಲ್ಲಿ ಈ ಭಾಗಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ, ಕರವೇ ತಾಲೂಕಾಧ್ಯಕ್ಷ ಶಿವಾನಂದ ಮಲಕಗೊಂಡ, ಫಯಾಜ ಬಾಗವಾನ, ಸದ್ದಾಂ ಆಲಗೂರ, ಅಶೋಕ ಭೂಸನೂರ, ಬಸವರಾಜ ಮಾರಲಭಾವಿ, ಸುನಿಲ್ ಮಾಗಿ ಮಾತನಾಡಿ, ಇಂಡಿ ಕೇಂದ್ರ ಸ್ಥಾನವಾಗಿಟ್ಟುಕೊಂಡು ಜಿಲ್ಲಾ ಕೆಂದ್ರವಾಗಿ ಘೋಷಣೆ ಮಾಡಬೇಕು. ಈಗಾಗಲೆ ಇಂಡಿಯಲ್ಲಿ ಉಪವಿಭಾಗವಿದ್ದು ಬಹುತೇಕ ಜಿಲ್ಲಾ ಮಟ್ಟದ ಕಚೇರಿಗಳು ಕರ್ಯ ನಿರ್ವಹಿಸುತ್ತಿವೆ. ಅಲ್ಲದೆ ಸಾರಿಗೆ ವ್ಯವಸ್ಥೆಗಾಗಿ ಎರಡು ಹೆದ್ದಾರಿಗಳು, ರೈಲು ನಿಲ್ದಾಣದ ವ್ಯವಸ್ಥೆ ಇದೆ. ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ಚಡಚಣ ತಾಲೂಕುಗಳ ಮಧ್ಯಭಾಗದಲ್ಲಿ ಇಂಡಿ ಇರುವ ಕಾರಣ ಎಲ್ಲ ತಾಲ್ಲೂಕಿನವರಿಗೆ ಬಂದು ತಮ್ಮ ಕೆಲಸ ಕಾರ್ಯ ಮುಗಿಸಿಕೊಂಡು ಹೋಗಲು ಅನುಕೂಲವಾಗುತ್ತದೆ ಎಂದರು.
ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿ ಮಾತನಾಡಿ, ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸಿ ಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಪ್ಪು ಪವಾರ, ಶಿವು ಬಗಲಿ, ಮಾದೇವ ರಾಮಗೊಂಡ, ಮಂಜುನಾಥ ತೇಲಿ, ಮಲ್ಲನಗೌಡ ಪಾಟೀಲ, ರಾಘು ಕೋಣಶಿರಸಗಿ, ದಯಾನಂದ ಉಮರಾಣಿ ಸೇರಿದಂತೆ ಮತ್ತಿತರರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

