ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಜ. ೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ಪ್ರಥಮ ಗುರು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ. ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಅಭಿಯಾನಂದ ಸ್ವಾಮೀಜಿ, ಆಲಮಟ್ಟಿಯ ರುದ್ರಮುನಿ ದೇವರು ವಹಿಸುವರು. ಬಿ ಎಲ್ ಡಿ ಇ ಸಂಸ್ಥೆಯ ಆಡಳಿತಾಧಿಕಾರಿ ಎಂ.ಎನ್.ಚೋರಗಸ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಅಶೋಕ ಕಲ್ಲೂರ, ರವಿ ಪಟ್ಟಣಶೆಟ್ಟಿ, ರಾಹುಲ ಅಗರವಾಲ, ಡಾ.ಕರುಣಾಕರ ಚೌಧರಿ, ಸುನೀಲ ದುಂಬಾಳಿ, ಅಶೋಕ ಗುಳೇದ ಆಗಮಿಸುವರು ಎಂದು ಶಿವಲಿಂಗೇಶ್ವರ ವಿರಕ್ತಮಠದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
