Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುವೆಂಪು ಸಾಹಿತ್ಯ ೨೦ನೇ ಶತಮಾನದ ಸಾಕ್ಷಿಪ್ರಜ್ಞೆ :ಬಂಡೆ
(ರಾಜ್ಯ ) ಜಿಲ್ಲೆ

ಕುವೆಂಪು ಸಾಹಿತ್ಯ ೨೦ನೇ ಶತಮಾನದ ಸಾಕ್ಷಿಪ್ರಜ್ಞೆ :ಬಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಕುವೆಂಪುರವರ ಸಾಹಿತ್ಯ ೨೦ನೇ ಶತಮಾನದ ಸಾಕ್ಷಿಪ್ರಜ್ಞೆಯಾಗಿ, ೨೧ನೇ ಶತಮಾನದಲ್ಲೂ ಪ್ರಭಾವಿಯಾಗಿದೆ. ಶ್ರೀಸಾಮಾನ್ಯನನ್ನು ಜಗನ್ಮಾನ್ಯನೆಂದು ನಂಬಿ ಎಲ್ಲ ವಯೋಮಾನದ ಓದುಗರ ಆಸಕ್ತಿ ಅಭಿರುಚಿಗಳನ್ನು ತಣಿಸುವಂತೆ ಆಯಾ ಕಾಲ ಮತ್ತು ಸಂದರ್ಭಗಳಿಗೆ ಸ್ಪಂದಿಸುವ ಸಾಹಿತ್ಯ ಸೃಷ್ಟಿಸಿದ್ದು ಕುವೆಂಪು ಅವರ ವೈಶಿಷ್ಟ್ಯವಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಶನಿವಾರ ಸಂಜೆ ಇಂಡಿಯ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ-ಸಾಂಸ್ಕೃತಿಕ ಜಗಲಿ ಕೇಂದ್ರದಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-೨ ರಲ್ಲಿ ಕುವೆಂಪು ಮತ್ತು ನಾಟಕಗಳು ಕುರಿತು ಅವರು ಉಪನ್ಯಾಸ ನೀಡಿದರು.
ಕನ್ನಡ ರಂಗಭೂಮಿಗೆ ಕುವೆಂಪುರವರ ಕೊಡುಗೆ ಅನನ್ಯ.ಅವರು ಪಾರಂಪರಿಕ ಪುರಾಣ ಕಥೆಗಳನ್ನು ಸಮಕಾಲೀನ ಅಗತ್ಯಕ್ಕೆ ಅನುಗುಣವಾಗಿ ಮರು ರೂಪಿಸಿ ಕ್ರಾಂತಿಕಾರಕ ಬೆಳವಣಿಗೆಗೆ ಕಾರಣವಾಗಿದ್ದಾರೆ. ಜಲಗಾರ, ಶೂದ್ರ ತಪಸ್ವಿ, ಬೆರಳ್ಗೆ ಕೊರಳ್, ಶ್ಮಶಾನ ಕುರುಕ್ಷೇತ್ರ, ಮಹಾರಾತ್ರಿ ಇಂಥ ನಾಟಕಗಳ ಮೂಲಕ ಪುರಾಣಗಳ ಮರು ವ್ಯಾಖ್ಯಾನ ಮಾಡಿ,ಕನ್ನಡ ಸಾಹಿತ್ಯದ ಬೃಹನ್ಮೂರ್ತಿಯಾಗಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಿರಗಿ ಪ್ರೌಢ ಶಾಲಾ ಶಿಕ್ಷಕ ವೈ.ಜಿ. ಬಿರಾದಾರ ಮಾತನಾಡಿ, ಮನುಜ ಮತ, ವಿಶ್ವಪಥ ಎಂಬ ಮಹಾನ್ ಸಂದೇಶದ ಮೂಲಕ ಅಲ್ಪಮಾನವರೆಲ್ಲ ವಿಶ್ವಮಾನವರಾಗಬೇಕೆಂದು ಕರೆಕೊಟ್ಟು, ಅದರಂತೆ ಬದುಕಿದ್ದ ಕುವೆಂಪು ಪ್ರಪಂಚದಲ್ಲಿರುವ ಎಲ್ಲ ಧರ್ಮಗಳ ಎಲ್ಲ ತತ್ವಗಳನ್ನು ಆಳವಾಗಿ ಅಧ್ಯಯನ ಮಾಡಿ, ಅವುಗಳ ಸಾರವನ್ನು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡವರು ಎಂದು ಹೇಳಿದರು.
ನಾದ ಕೆ.ಡಿ. ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಂ. ಬಂಡಗರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಖ್ಯಾತ ಸಂಶೋಧಕ ಡಾ. ಚನ್ನಪ್ಪ ಕಟ್ಟಿ, ಗೀತಯೋಗಿ, ಬಸವರಾಜ ಕಿರಣಗಿ, ಶ್ರೀಧರ ಹಿಪ್ಪರಗಿ, ದಾನಯ್ಯ ಮಠಪತಿ, ಡಾ. ಮಂಜುನಾಥ ಕೋಟೆಣ್ಣವರ, ರಾಚು ಕೊಪ್ಪ, ಸುಜಾತಾ ಬೀಳಗಿ, ಸುನೀಲ ಗೌರ, ಸಂಗನಗೌಡ ಹಚಡದ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
ಶಿಕ್ಷಕಿ ಸರೋಜಿನಿ ಮಾವಿನಮರ ಸ್ವಾಗತಿಸಿ, ಪರಿಚಯಿಸಿದರು. ಶಿಕ್ಷಕಿ ಬಿ.ಸಿ. ಭಗವಂತಗೌಡರ ನಿರೂಪಿಸಿದರು. ಶಿಕ್ಷಕ ವೀರಣ್ಣ ದಸ್ತರೆಡ್ಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.