ಸಿಂದಗಿ: ಪಟ್ಟಣದಲ್ಲಿ ಶ್ರೀ ಶಿವದಾಸಿಮಯ್ಯ ಶಿವಶಿಂಪಿ ಸಮುದಾಯ ಸಭಾಭವನ ನಿರ್ಮಾಣಗೊಳ್ಳಲು ರಾಜ್ಯ ಸರ್ಕಾರದಿಂದ ೨೫ ಲಕ್ಷ ಅನುದಾನವನ್ನು ನೀಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ಪಟ್ಟಣದ ಲೋಣಿ ಲೇಔಟ್ದಲ್ಲಿ ಸೋಮವಾರ ಶ್ರೀ ಶಿವದಾಸಿಮಯ್ಯ ಶಿವಸಿಂಪಿ ಸಮಾಜ ವಿಕಾಸ ಸಂಘದಿಂದ ನಡೆದ ಸಭಾಭವನದ ಮತ್ತುಕಾರ್ಯಾಲಯದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಸಣ್ಣ ಸಣ್ಣ ಸಮುದಾಯಗಳು ಯಾವತ್ತು ನಾವು ಸಣ್ಣ ಸಮುದಾಯದವರು ಎಂದು ಭಾವಿಸಿಕೊಳ್ಳಬಾರಾದು ಸಣ್ಣ ಸಮುದಾಯದಲ್ಲಿಯೆ ಅತ್ಯಂತ ಮಹತ್ತರವಾದ ಪ್ರತಿಭೆಗಳಿರುತ್ತವೆ. ಅಂತಹ ಸಮುದಾಯಗಳನ್ನು ಶಿಕ್ಷಣ, ಸಾಮಾಜಿಕ, ಆರೋಗ್ಯವಾಗಿ ಮತ್ತು ಎಲ್ಲ ರೀತಿಗಳಲ್ಲಿ ಅಭಿವೃದ್ದಿ ಪಡಿಸುವ ಕನಸನ್ನು ಹೊತ್ತುಕೊಂಡಿದ್ದೇನೆ. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು ಎಂದ ಅವರು ನಮ್ಮ ತಂದೆಯ ಕಾಲದಿಂದಲೂ ಶಿವಶಿಂಪಿ ಸಮುದಾಯ ನಮ್ಮ ಮನೆತನದ ಮೇಲೆ ಅತಿಯಾದ ಗೌರವವನ್ನಿಟ್ಟುಕೊಂಡಿದೆ ಆ ಸಮುದಾಯಕ್ಕೆ ನಾವು ಸದಾಋಣಿಯಾಗಿರುತ್ತೇವೆ ಎಂದರು.
ಸಮುದಾಯದ ಪ್ರಮುಖ ಪ್ರಭುಲಿಂಗ ಲೋಣಿ, ಸಮಾಜದ ಉಪಾಧ್ಯಕ್ಷ ಡಾ.ವಿಶ್ವರಾಧ್ಯ ಶಿವಶಿಂಪಗೇರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜದ ಗೌರವಾಧ್ಯಕ್ಷ ಬಂಡೆಪ್ಪ ಲೋಣಿ, ಅಧ್ಯಕ್ಷ ಅಶೋಕ ಲೋಣಿ, ನ್ಯಾಯವಾದಿ ಬಿ.ಜಿ.ನೆಲ್ಲಗಿ, ಮಂಜುನಾಥ ಬಿಜಾಪೂರ ಇದ್ದರು.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಲೋಣಿ, ವಿಶ್ವನಾಥ ಶಿವಶಿಂಪಗೇರ, ಮಲ್ಲಿಕಾರ್ಜುನ ಶಿವಶಿಂಪಗೇರ, ವಿಶ್ವನಾಥ ಶಿವಶಿಂಪಗೇರ, ಭೋಜಪ್ಪ ಅತನೂರ, ಶಿವಕುಮಾರ ಶಿವಶಿಂಪಗೇರ, ಗಂಗಾಧರ ಶಿವಶೀಂಪಗೇರ, ಡಾ.ಸಾತಪ್ಪ ಶಿವಶೀಂಪಗೇರ, ಕಾಶೀನಾಥ ಲೋಣಿ, ಸಂಗಪ್ಪ ತಾಳಿಕೋಟಿ, ವಿಜಯಲಕ್ಷ್ಮೀ ಲೋಣಿ, ಸೂರ್ಯಕಾಂತ ಅತನೂರ, ಡಾ. ಬಾಬು ಶಿವಶಿಂಪಗೇರ, ಚಂದ್ರಶೇಖರ ಹರಿಹರ, ಗುರುಪಾದ ಲೊಣಿ, ಸುರೇಶ ಅತನೂರ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

