ಸಿಂದಗಿ: ಮಹಿಳೆಯರ ಮತ್ತು ಗರ್ಭಿಣಿಯರ ಅನುಕೂಲಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ ಸಮಸ್ಯೆಯಿಂದ ಯಾವುದೇ ಗರ್ಭಿಣಿ, ತಾಯಂದಿರು ಮತ್ತು ಶಿಶು ಮರಣವಾಗದಂತೆ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ಡಾ.ನಾಗರಾಜ ಹೇಳಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ, ಪ್ರತಿಬಂಧಕ ಘಟಕ, ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ತಾಲೂಕ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ/ಎಆರ್ಟಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಗರ್ಭಿಣಿ ಮಹಿಳೆಯರ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಮಹಿಳೆಯರು ತರಕಾರಿ, ಹಣ್ಣು ಸೇರಿದಂತೆ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಒಂದು ವೇಳೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸದೇ ಹೋದರೆ ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಆರೋಗ್ಯವಾಗಿರಲು ಪೌಷ್ಟಿಕಾಂಶದ ಆಹಾರವನ್ನು ಮನೆಯಲ್ಲಿಯೇ ತಯಾರಿಸಿ ಸೇವನೆ ಮಾಡಬೇಕು. ಮತ್ತು ಆರೋಗ್ಯ ತಪಾಸಣೆ ಮಾಡಿಸಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಐಸಿಟಿಸಿ ಘಟಕದ ಆಪ್ತಸಮಾಲೋಚಕ ಎಂ.ಪಿ ಸಾಗರ ಮಾತನಾಡಿದರು.
ಈ ವೇಳೆ ಡಾ.ಹರಿಕೃಷ್ಣ, ಲವ ಗಾಣಿಗೇರ, ವಿರೇಂದ್ರ ಪವಾಡೆ, ರಾಜು ನರಗೋದಿ, ರಾಯಣ್ಣ ಸನ್ನೋಳ್ಳಿ, ದೇವಮ್ಮ, ಸಿದ್ದರಾಮ ಮುಗದಿ, ಚಿದಾನಂದ, ಜ್ಯೋತಿ ಪಾಟೀಲ, ರಾಜೇಶ್ವರಿ, ಸವಿತಾ ಹಿರೇಪಟ, ಗೀತಾ, ಸುರೇಶಗೌಡ, ಮಹಮ್ಮದಸೊಹೆಬ್ ಸೇರಿದಂತೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಗರ್ಭಿಣಿ ಮಹಿಳೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

