ಆಲಮೇಲ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಮನುಕುಲವನ್ನು ಆಧ್ಯಾತ್ಮದಿಂದ ಜಾಗೃತ ಮೂಡಿಸಿದವರು, ಅವರ ಜೀವನದ ಉದ್ದಕ್ಕೂ ಗಾಳಿ, ನೀರು, ಬೆಳಕು, ನಿಸರ್ಗವನ್ನು ಪ್ರೀತಿಸುತ್ತಿದ್ದರು ಎಂದು ಪೂಜ್ಯ ಅಮೃತಾನಂದ ಶ್ರೀಗಳು ಹೇಳಿದರು.
ಅವರು ಪಟ್ಟಣದ ಅಳ್ಳೋಳ್ಳಿಮಠದಲ್ಲಿ ಹಮ್ಮಿಕೊಳ್ಳಲಾದ ಗುರುನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಮಹಾಂತ ಶ್ರೀಗಳು ಮಾತನಾಡಿ, ಪ್ರತಿಯೊಬ್ಬರು ಸಿದ್ದೇಶ್ವರ ಶ್ರೀಗಳು ಹಾಕಿಕೊಟ್ಟ ಜ್ಞಾನ ದಾಸೋಹದ ಮೂಲಕ ಜನರ ಬದುಕನ್ನು ಪರಿವರ್ತನೆ ಮಾಡಿ ಪ್ರತಿಯೊಬ್ಬರ ಬದುಕಿನಲ್ಲಿ ಬೆಳಕನ್ನು ಚೆಲ್ಲಿ, ಪ್ರತಿಯೊಬ್ಬರಲ್ಲಿ ಅವರ ಆರ್ದಶಗಳನ್ನು, ತತ್ವಗಳನ್ನು ಸರಳತೆಯ ಮೂಲಕ ಜನರಲ್ಲಿ ಬಿತ್ತಿದ ಅಪರೂಪದ ವ್ಯಕ್ತಿತ್ವ ಅವರದು ಎಂದು ಗುಣಗಾನ ಮಾಡಿದರು.
ಆಲಮೇಲ ಹಿರೇಮಠದ ಚಂದ್ರಶೇಖರ ಶ್ರೀಗಳು, ಅಫಜಲಪುರ ಹಿರೇಮಠದ ವಿಶ್ವರಾಧ್ಯಮಳೇಂದ್ರ ಶ್ರೀಗಳು, ಮಲಘಾಣದ ಜಡೆಯಶಾಂತಲಿಂಗೇಶ್ವರ ಶ್ರೀಗಳು, ಪೀಠಾಧಿಪತಿ ಶ್ರೀಶೈಲ ಅಳ್ಳೊಳ್ಳಿಮಠ, ಪ್ರೋ.ಅರವಿಂದ ಮನಗೂಳಿ, ಸಂತ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಐಶ್ವರ್ಯ ಕೊಳಾರಿ ಅವರ ಸಂಗಡಿಗರಿಂದ ಸಂಗೀತ ಸೇವೆ ನಡೆಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

