ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ವಿವಿಧೆಡೆ ಸುಮಾರು ೪.೧೫ ಲಕ್ಷ ಮೌಲ್ಯದ ಬೈಕ್ಗಳನ್ನು ಕದ್ದ ಹಾಗೂ ಮಲ್ಲಯ್ಯ ದೇವಸ್ಥಾನ ದೋಚಲು ಯತ್ನಿಸಿದ ಮೂವರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ಮಡಿವಾಳ ಮಾಚಿದೇವರ ದೇವಸ್ಥಾನದ ಮುಂದೆ ಅನುಮಾನಸ್ಪದವಾಗಿ ಅಲೆಯುತ್ತಿದ್ದ ಮೂವರು ವ್ಯಕ್ತಿಗಳನ್ನು ಸ್ಥಳೀಯ ಪೊಲೀಸ್ ಸಿಬ್ಬಂದಿ ಠಾಣೆಗೆ ಕರೆ ತಂದು ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಾವು ಪಟ್ಟಣ ಸೇರಿದಂತೆ ಯಾದಗಿರಿ ಜಿಲ್ಲೆಯ ವಿವಿಧೆಡೆ ಕದ್ದ ೧೦ ಬೈಕ್ ಹಾಗೂ ಕಳೆದ ಕೆಲವು ದಿನಗಳ ಹಿಂದೆ ಮಲ್ಲಯ್ಯ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದನ್ನು ಒಪ್ಪಿಕೊಂಡಿದ್ದಾರೆ.
ಆರೋಪಿಗಳು ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅನೀಲಕುಮಾರ ಬಾಗೋಡಿ, ವೆಂಕಟೇಶ ನೀಡಗಿ, ಶರಣಯ್ಯಸ್ವಾಮಿ ಗೊಬ್ಬಿ ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ಹೆಚ್ಚುತ್ತಿರುವ ಕಳವು ಪ್ರಕರಣಗಳು ಪೊಲೀಸ್ ಇಲಾಖೆಗೆ ಸವಾಲಾಗಿದ್ದವು. ಇವುಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವಣೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಎಮ್.ಮಾರಿಹಾಳ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಇವರ ಮಾರ್ಗದರ್ಶನದಲ್ಲಿ ವಿಜಯಪುರ ಗ್ರಾಮಾಂತರ ಉಪವಿಭಾಗದ ಡಿಎಸ್ಪಿ ಗಿರಿಮಲ್ಲ ತಳಕಟ್ಟಿ, ಸಿಪಿಐ ಆನಂದರಾವ್ ಎಸ್.ಎನ್, ಪಿಎಸೈಗಳಾದ ಬಸವರಾಜ ತಿಪ್ಪಾರಡ್ಡಿ, ಎಸ್.ಬಿ.ನಡುವಿನಕೇರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಿದ್ದರು. ಕೊನೆಗೆ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯ ತನಿಖಾ ತಂಡದಲ್ಲಿ ಸಿಬ್ಬಂದಿ ಗುರು ಸಿಂಗೆ, ಬಿ.ಎಸ್.ಮೇಡೆದಾರ, ಎಸ್.ಎಸ್. ಸಿನ್ನೂರ, ಎಮ್.ಎಸ್.ಮುಜಾವರ, ಆರ್.ಬಿ.ಕುಂಬಾರ, ಕೆ.ವೈ.ಕರಿಕಟ್ಟಿ, ವಿ.ಎಚ್.ಶಾಂತಗಿರಿ, ತೌಸೀಫ್ ಎಂ.ಪಿ, ಜಾವೀದ್ ಎ.ಎನ್, ವೈ.ಬಿ.ಬಜಂತ್ರಿ, ವಿ.ಎಲ್.ಕೆಳಗಿನಮನಿ, ಎಸ್.ಎಸ್. ಬಿರಾದಾರ, ಸಂಜೀವ ಹೊಸಮನಿ ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

