ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆಯು ಪ್ರತಿವರ್ಷ ನೀಡುವ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಧಾರವಾಡದ ಹಿರಿಯ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಅವರಿಗೆ ನೀಡಲು ನಿರ್ಧರಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ತಿಳಿಸಿದ್ದಾರೆ.
ಪ್ರಶಸ್ತಿಯು ಹತ್ತು ಸಾವಿರ ರೂ.ಗಳ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದು ಇದೇ ತಿಂಗಳು ೩೦ ರಂದು ಕಡಣಿಯಲ್ಲಿ ನಡೆಯುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಸಂಸ್ಮರಣಾರ್ಥ ಹಮ್ಮಿಕೊಂಡಿರುವ ೩೦ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಿಂದಗಿಯ ಸಿ.ಎಂ.ಮನಗೂಳಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಳೆದ ವರ್ಷ ನಿವೃತ್ತಿಯಾಗಿರುವ ಡಾ. ಸಂಗಮನಾಥ ಲೋಕಾಪೂರ ಅವರು ನಾಡಿನ ಹಿರಿಯ ತಲೆಮಾರಿನ ಶ್ರೇಷ್ಠ ಕತೆಗಾರರು, ಕತೆ, ವಿಮರ್ಶೆ, ಸಂಶೋಧನೆಗಳಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡಿರುವ ಅವರನ್ನು ಅವರ ಒಟ್ಟು ಜೀವಮಾನದ ಸಾಹಿತ್ಯಕ್ಕಾಗಿ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿಯ ಡಾ. ರಮೇಶ ಕತ್ತಿ ತಿಳಿಸಿದ್ದಾರೆ. ಕಳೆದ ವರ್ಷ ಸ್ಥಾಪಿಸಲಾಗಿದ್ದ ಪ್ರಶಸ್ತಿಯು ವಿಜಯಪುರ ಜಿಲ್ಲೆಯ ೬೦ ವರ್ಷದಾಟಿದ ಹಿರಿಯ ಸಾಹಿತಿಯೊಬ್ಬರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಮೊದಲ ಪ್ರಶಸ್ತಿಯನ್ನು ಡಾ. ಚನ್ನಪ್ಪ ಕಟ್ಟಿ ಅವರಿಗೆ ನೀಡಲಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


