ಸಿಂದಗಿ: ಭಗವಂತನ ಸೇವೆಯನ್ನು ನಿಸ್ವಾರ್ಥ ಭಾವದಿಂದ ಮಾಡಿದಾಗ ಮಾತ್ರ ಆ ದೇವರು ಒಳ್ಳೆಯ ಮಾರ್ಗ ತೋರುತ್ತಾನೆ ಎಂದು ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಹೇಳಿದರು.
ಭಾನುವಾರದಂದು ಪಟ್ಟಣದ ಬಸ್ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೮ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಆದ್ಯಾತ್ಮಿಕ ಜ್ಞಾನವನ್ನು ರೂಢಿಸಿಕೊಳ್ಳಬೇಕು. ತಿಳುವಳಿಕೆಗಾಗಿ ಇಂತಹ ಪುರಾಣ ಪ್ರವಚನ ಸಂತ್ಸಂಗಗಳನ್ನು ಆಲಿಸಬೇಕು. ಈ ಮಾನವ ಜನ್ಮ ಬಲು ದೊಡ್ಡದು ಮತ್ತು ಅಪೂರ್ವವಾಗಿದೆ. ಶರಣರ, ಸಂತರ, ಮಹಾಂತರ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.
ಈ ವೇಳೆ ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿದ ಡಾ.ವಿಜಯಕುಮಾರ ವಾರದ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾದನ ಹಿಪ್ಪರಗಾ ಶ್ರೀಮಠದ ಶಾಂತವೀರ ಶಿವಾಚಾರ್ಯರು ಆಶೀರ್ವದಿಸಿದರು. ಸಾನಿಧ್ಯವನ್ನು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಸಿಂದಗಿ ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಸ್ವಾಮಿಗಳು ವಹಿಸಿಕೊಂಡಿದ್ದರು.
ಪೂಜಾ ಹಿರೇಮಠ ನಿರೂಪಿಸಿದರು. ಪಂಡಿತ ಯಂಪೂರೆ ಸ್ವಾಗತಿಸಿದರು. ಮಾಹಾಂತೇಶ ನೂಲಾನವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಸತೀಶ ಬಿರಾದಾರ, ಭೋಜಪಗೌಡ ಬಿರಾದಾರ, ಗೊಲ್ಲಾಳಪ್ಪ ಬಗಲಿ, ಪ್ರವಚನಕಾರ ವೆ.ಮೂ.ಸಿದ್ದಯ್ಯ ಶಾಸ್ತ್ರಿಗಳು, ಸಂಗೀತಗಾರ ಶಾಂತಲಿಂಗ ಹೊನ್ನಕಿರಣಗಿ, ತಬಲಾ ಆಕಾಶ ಹೈದ್ರಾ, ಮಹಾಂತೇಶ ನಾಗೋಜಿ, ಆನಂದ ಶಾಬಾದಿ, ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಭೋಜರಾಜ ದೇಸಾಯಿ, ಗುರು ಮಠ, ಸುದರ್ಶನ ಜಂಗಣ್ಣಿ, ವಿದ್ಯಾ ಚೌಕಿಮಠ, ಸಂಗನಗೌಡ ಪಾಟೀಲ ಅಗಸಬಾಳ, ಶಾಂತವೀರ ಹಿರೇಮಠ, ಸಿದ್ದಲಿಂಗ ಕಿಣಗಿ, ಸುರೇಶ ಭಜಂತ್ರಿ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

