ವಿಜಯಪುರ: ಸಮ ಸಮಾಜದ ಕನಸು ಹೊತ್ತು,ಆ ಮೂಲಕ ಸತ್ಯಪಥದಲ್ಲಿ ನಡೆದು, ತಮ್ಮ ವಚನಗಳ ಮೂಲಕ ಸಾಮಾನ್ಯರಿಗೂ ತಿಳಿಯುವಂತೆ ಬರೆದಂತೆ, ನುಡಿದಂತೆ ನಡೆದು ಜನಸಾಮಾನ್ಯರಿಗೆ ಅರಿವಿನ ಗುರುವಾಗಿದ್ದವರು ೧೨ನೇ ಶತಮಾನದ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು.
ಅವರು ಜಿಲ್ಲಾಡತ ಹಾಗೂ ವಿವಿಧ ಇಲಾಖೆಗಳ ಸಹಯೋಗದ ಮೂಲಕ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಶಿವಯೋಗಿ ಸಿದ್ಧರಾಮೇಶ್ವರ ಕರ್ಮಯೋಗಿಯಾಗಿದ್ದ ಅವರು ಮುಂದೆ ಅಲ್ಲಮಪ್ರಭುಗಳ ಆಶಯದಂತೆ ಕಲ್ಯಾಣಕ್ಕೆ ತೆರಳಿ, ಶಿವಯೋಗಿ-ಜ್ಞಾನಯೋಗಿಯಾದರು. ಅವರು ಸೊನ್ನಲಾಪೂರದಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಮೂಲಕ ಬಹು ದೊಡ್ಡ ಕಾಯಕ ಯೋಗಿಯಾದವರು. ಇವರ ವಚನಗಳು ಜ್ಞಾನದೊಂದಿಗೆ ಸಮಾಜದಲ್ಲಿನ ಅನಿಷ್ಟ ಪದ್ಧತಿಗಳ ತೊಡೆದು ಹಾಕಲು ವಚನದ ಸಾರ ಧ್ವನಿಸುತ್ತವೆ. ಇವರು ಸಮಾಜಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ನಿವೃತ್ತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಅವರು ಶಿವಯೋಗಿ ಸಿದ್ಧರಾಮೇಶ್ವರ ಅವರ ಕುರಿತಾಗಿ ಮಾತನಾಡಿದರು.ಅಂದಿನ ಶರಣರು ಲಿಂಗಭೇದ, ಜಾತಿ ಭೇದ,ವರ್ಣಭೇದ ವಿಲ್ಲದ ಯಾವುದೇ ಭೇದ ವಿಲ್ಲದ ಎಲ್ಲರಿಗೂ ಸರಿಸಮಾನವಾದ ಅವಕಾಶಗಳನ್ನು ಕಲ್ಪಿಸಿದ್ದರು. ಕಾಯಕಯೋಗಿಗಳ, ಶ್ರಮಜೀವಿಗಳಾಗಿದ್ದ ಶರಣರು ಈ ಸತ್ಯದ ಪಥವ ತೋರಿದವರು.ಇವರು ಅದ್ಭುತವಾದ ಸುಮಾರು ೧೬೦೦ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ ಎಂದು ಹೇಳಿದರು.
ಬಸವರಾಜ ಎ ನಾಟೀಕಾರ ತಂಡ ಸಂಗೀತ ಕಾರ್ಯಕ್ರಮ ನಡಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಸದಸ್ಯರಾದ ವಿಠ್ಠಲ ಹೊಸಪೇಟೆ, ವಿ.ಸಿ.ನಾಗಠಾಣ, ರಾಮು ಹೊಸಪೇಟೆ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೀರೇಕರ, ಎಚ್.ಮಮದಾಪೂರ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

