ವಿಜಯಪುರ: ೨೦೨೪ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಚಾಲನೆ ನೀಡಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯ ರೂಪಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯವಾಗಿದೆ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಿ ವಿಶ್ರಾಂತಿ, ರಜೆಯನ್ನು ಪಡೆಯದೇ ಕೆಲಸ ಮಾಡುತ್ತಿರುವ ಮೋದಿಜಿ ಅವರಂತಹ ಪ್ರಧಾನಿಯನ್ನು ಪಡೆದಿದ್ದೆ ಒಂದು ಸುದೈವ ಎಂದರು.
ಮೋದಿಜಿ ಅವರ ಕಾಲಘಟ್ಟದಲ್ಲಿ ಪ್ರಾಮಾಣಿಕ, ಜನಪರ ಹಾಗೂ ಪರಿಶುದ್ಧ ಆಡಳಿತ ಪ್ರತಿಯೊಬ್ಬ ಭಾರತೀಯರ ಮನಗೆದ್ದಿದೆ, ವಿದೇಶಿ ರಾಷ್ಟ್ರಗಳು ಸಹ ಮೋದಿಜಿ ನಾಯಕತ್ವಕ್ಕೆ ಮನಸೋತಿವೆ ಎಂದರು.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಭವ್ಯ ರಾಮಮಂದಿರ ನಿರ್ಮಾಣ, ಕಪ್ಪು ಹಣದ ವಿರುದ್ದ ಸಮರ, ಉಜ್ವಲ ಯೋಜನೆ ಮೂಲಕ ಮನೆ ಮನೆಗೆ ಅಡುಗೆ ಅನೀಲ, ಫಸಲ್ಭೀಮಾ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಹೀಗೆ ಮೋದಿಜಿ ಅವರು ರೂಪಿಸಿದ ಜನಪರ, ರೈತಪರ ಕಾರ್ಯಕ್ರಮಗಳ ಪಟ್ಟಿ ದೊಡ್ಡದಿದೆ ಎಂದರು. ಆರ್ಥಿಕತೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಇದೇ ರೀತಿಯ ಪ್ರಗತಿಯ ಪರಂಪರೆ ಮುಂದುವರೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಿದೆ, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳು ಬಿಜೆಪಿ ಗೆಲುವಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶಿಂದೆ, ಅಶೋಕ್ ರಾಥೋಡ್, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ, ಮಹೇಶ್ ಒಡೆಯರ, ಕಾರ್ಯದರ್ಶಿ ಶರಣಬಸವ ಕುಂಬಾರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜ್ಜರಗಿ, ರಾಘವೇಂದ್ರ ಕಾಫ್ಸೆ, ಸಿದ್ದರಾಮ ಆನಗೊಂಡ, ಯುವ ಮೋರ್ಚ ಪದಾಧಿಕಾರಿ ಅನಿಲ ಉಪ್ಪಾರ್, ಪ್ರವೀಣ್ ಕೋಡಗಿ, ದಶರಥ ಕಾಂಬಳೆ, ಆನಂದ್ ಮುಚ್ಚಂಡಿ, ವಿಕಾಸ್ ಕಿಟ್ಟಾ, ನಿಖಿಲ್ ಬಾಗೇವಾಡಿ ಸ್ವರೂಪ್ ಸಪ್ತಾಳೆ ಸೇರಿದಂತೆ ಹಲವರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

