ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಎಸ್.ಆರ್.ಹೈಸ್ಕೂಲನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಜ.17 ರಂದು ಮಧ್ಯಾಹ್ನ 3 ಗಂಟೆಗೆ ಲಿಂ.ಬಿ.ಎಸ್.ಪಾಟೀಲ ಮಹಾರಾಜರು, ಲಿಂ.ಶ್ರೀಶೈಲಪ್ಪ ಧನಶೆಟ್ಟಿ, ಲಿಂ.ಮುರಿಗೆವ್ವ ಲಿಂ.ಮಲಕಾಜಪ್ಪ ಅಳ್ಳಗಿ ಇವರ ಸ್ಮರಣಾರ್ಥ ದತ್ತಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವಿ.ಬಿ.ಮರ್ತುರ ಅಧ್ಯಕ್ಷತೆ ವಹಿಸುವರು. ರೇಣುಕಾಚಾರ್ಯ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೈಲಾಸ ಗುರಪ್ಪ ಸಜ್ಜನ ಕಾರ್ಯಕ್ರಮ ಉದ್ಘಾಟಿಸುವರು. ವಿಜಯಪುರದ ಫ.ಗು.ಹಳಕಟ್ಟಿ ಇಂಜನಿಯರಿಂಗ್ ಕಾಲೇಜಿನ ಪ್ರೊ.ಎಂ.ಐ.ಸಕ್ಕರಿ ಉಪನ್ಯಾಸ ನೀಡುವರು. ಮುಖ್ಯಶಿಕ್ಷಕ ಬಿ.ಬಿ.ಪಾಟೀಲ, ನಿವೃತ್ತ ಶಿಕ್ಷಕ ಆರ್.ಜಿ.ಅಳ್ಳಗಿ, ಎಸ್.ಬಿ.ಐ ನಿವೃತ್ತ ವ್ಯವಸ್ಥಾಪಕ ವೀರೇಶ ಕುಂಟೋಜಿ, ಕದಳಿ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ, ಯುವ ಘಟಕದ ಅಧ್ಯಕ್ಷ ಶರಣು ಬಸ್ತಾಳ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
