ವಿಜಯಪುರ: ಸ್ವಾಮಿ ವಿವೇಕಾನಂದರು ಹಾಗೂ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ವ್ಯಕ್ತಿ ತನ್ನನ್ನು ತಾನಾರು ಎನ್ನುವುದನ್ನು ಕಂಡುಕೊಂಡಾಗ ಮಾತ್ರ ಅರಿವಿನ ಬೆಳಕಿನೆಡೆಗೆ ಮನುಷ್ಯ ಸಾಗುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಸ್ನಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೆಕಾನಂದರ ೧೬೧ ಜನ್ಮದಿನೋತ್ಸವ ಹಾಗೂ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ಜಗತ್ತಿಗೆ ನಿಜವಾದ ಭಾರತವನ್ನು ಪರಿಚಯಿಸುವ ಮೂಲಕ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಹಾಗೂ ಪರಂಪರೆಯ ಪರಿಚಯ ಮಾಡಿಕೊಟ್ಟ ಸ್ವಾಮಿ ವಿವೇಕಾನಂದರು ಹಾಗೂ ಆಧ್ಯಾತ್ಮಿಕ ಶಕ್ತಿಯ ಮೂಲಕ ಜನಸಾಮಾನ್ಯರಲ್ಲಿ ಅರಿವಿನ ದೀಪ ಪ್ರಜ್ವಲಿಸಿದವರು ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಎಂದು ಹೇಳಿದರು.
ವಿಜ್ಞಾನ ತಂತ್ರಜ್ಞಾನದಲ್ಲಿ ಮುಂದುವರಿದಿರುವ ಭಾರತ ಸ್ವಾಮಿ ವಿವೇಕಾನಂದರನ್ನು ಅರಿಯುವಲ್ಲಿ ಎಡವಿದೆ. ಪಾಶ್ಚಾತ್ಯರು ಅವರ ಮಾತುಗಳನ್ನು ಕೇಳಿ ತಮ್ಮ ಬದುಕಿನಲ್ಲಿ ಪರಿವರ್ತನೆ ತಂದುಕೊಂಡರು. ಇಂದಿಗೂ ಅಮೇರಿಕಾದ ೨೮ ಪ್ರತಿಶತ ಜನಗಳು ಭಾರತೀಯ ಸಂಸ್ಕೃತಿಯಂತೆ ಬದುಕು ಕಟ್ಟಿಕೊಳ್ಳುತ್ತಿರುವುದಕ್ಕೆ ಕಾರಣವಾಗಿದ್ದು ಸ್ವಾಮಿ ವಿವೇಕಾನಂದರ ವಿಚಾರದ ಹರಿವು ಅವರ ದೇಶದಲ್ಲಿ ಪ್ರವಾಹದಂತೆ ಬೋರ್ಗರೆದಿದ್ದು. ಆದರೆ ನಮ್ಮ ಭಾರತೀಯರಿಗೆ ಇದರ ಅರಿವಾಗುತ್ತಿಲ್ಲವೆಂದು ವಿಷಾದಿಸಿದ ಅವರು, ಸ್ವಾಮಿ ವಿವೇಕಾನಂದ, ಸಿದ್ಧೇಶ್ವರ ಸ್ವಾಮೀಜಿಯವರ ವಿಚಾರಗಳನ್ನು ಅರಿಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿದ್ಧೇಶ್ವರ ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ, ನಿರ್ಭಯಾನಂದ ಸರಸ್ವತಿಯವರ ರೂಪದಲ್ಲಿ ಸ್ವಾಮಿ ವಿವೇಕಾನಂದರು ಚಿರ ಶಾಶ್ವತವಾಗಿರುವಂತೆ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿಯವರು ತಮ್ಮ ಚಿಂತನೆಗಳ ಮೂಲಕ ಇಂದು ಪ್ರತಿಯೊಬ್ಬರ ಎದೆಯಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದರು.
ವಿಜಯಪುರ ರಾಮಕೃಷ್ಣ ಆಶ್ರಮದ ಸ್ವಾಮೀ ನರೇಶಾನಂದ, ಜೆಎಸ್ಎಸ್ ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಸೇರಿದಂತೆ ಆಸ್ಪತ್ರೆ ಸರ್ವ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಆಧ್ಯಾತ್ಮಿಕತೆಯಿಂದ ಅರಿವಿನ ದೀಪ ಬೆಳಗಿಸಿದ ಸಿದ್ದೇಶ್ವರ ಶ್ರೀ
Related Posts
Add A Comment

