Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.೬.೫೦ ಕೋಟಿ ವೆಚ್ಚದ ಕಸಾಪ ಭವನ ನಿರ್ಮಾಣಕ್ಕೆ ಅನುಮತಿ
(ರಾಜ್ಯ ) ಜಿಲ್ಲೆ

ರೂ.೬.೫೦ ಕೋಟಿ ವೆಚ್ಚದ ಕಸಾಪ ಭವನ ನಿರ್ಮಾಣಕ್ಕೆ ಅನುಮತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಸಾಪ ಗೆ ಕೆಲಸ ಮಾಡುವವರು ಬೇಕಿದೆ, ಟೀಕೆ ಮಾಡುವವರಲ್ಲ :ಹಾಸಿಂಪೀರ ವಾಲೀಕಾರ

ಬಸವನಬಾಗೇವಾಡಿ: ಕನ್ನಡ ಸಾಹಿತ್ಯ ಪರಿಷತ್ತಿನ ಹುದ್ದೆಗಳನ್ನು ಪಡೆದುಕೊಂಡ ನಂತರ ಸುಮ್ಮನೆ ಕುಳಿತುಕೊಳ್ಳದೇ ನಿರಂತರವಾಗಿ ಕನ್ನಡ ತಾಯಿ ಸೇವೆ ಮಾಡಬೇಕು. ಜಿಲ್ಲೆಯ ಆರು ತಾಲೂಕುಗಳಲ್ಲಿ ತಾಲೂಕು ಅಧ್ಯಕ್ಷರು ನಿಷ್ಕ್ರಿಯವಾದ ಕಾರಣದಿಂದಾಗಿ ಅವರನ್ನು ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.
ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಕಸಾಪ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಲಸ ಮಾಡುವವರು ಬೇಕು, ಟೀಕೆ ಮಾಡುವವರು ಬೇಕಿಲ್ಲ. ಪರಿಷತ್ತಿನಿಂದ ದಂಪತಿ ಸಮೇತರಾಗಿ ಸನ್ಮಾನ ಸ್ವೀಕರಿಸಿಕೊಂಡು ಟೀಕೆ ಮಾಡುವುದು ಎಷ್ಟು ಸರಿ? ಟೀಕೆ ಮಾಡುವವರು ವೇದಿಕೆಗೆ ಬನ್ನಿ ಎಂದರು.
ಜಿಲ್ಲೆಯಲ್ಲಿ ೧೦ ಸಾವಿರ ಪರಿಷತ್ತಿನ ಸದಸ್ಯರಿದ್ದಾರೆ. ಎಲ್ಲರಿಗೂ ಅವಕಾಶ ಕಲ್ಪಿಸುವ ಮಹಾದಾಸೆ ನನ್ನದು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಮಮತೆ, ಪ್ರೀತಿ ಬೇಕಿದೆ. ೬.೫೦ ಕೋಟಿ ವೆಚ್ಚದಲ್ಲಿ ಭವ್ಯವಾದ ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೆ ಅನುಮತಿ ಪಡೆದುಕೊಂಡಿದ್ದು. ಈ ಭವನ ನಿರ್ಮಾಣ ಕಾರ್ಯ ಎಲ್ಲರ ಸಹಕಾರದೊಂದಿಗೆ ಮುಗಿಸುತ್ತೇನೆ. ನಾನು ಕನ್ನಡ ಸೇವಕನಾಗಿ ನಿರಂತರವಾಗಿ ಕಾರ್ಯ ಮಾಡಲು ಬದ್ಧ ಎಂದರು.
ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ ಮಾತನಾಡಿ, ಜೀವನವನ್ನು ಪರಿವರ್ತಿಸುವ ಶಕ್ತಿ ಕನ್ನಡ ಸಾಹಿತ್ಯಕ್ಕೆ ಇದೆ. ಜೀವನಕ್ಕೆ ಬೇಕಾದ ಮೌಲ್ಯಗಳನ್ನು ಸಾಹಿತ್ಯದಲ್ಲಿ ಕಾಣುತ್ತೇವೆ. ಎರಡು ಸಾವಿರ ವರ್ಷ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಗೆ ಸದೃಢ ಗೊಳಿಸುವ ಶಕ್ತಿ ಇದೆ. ನಮ್ಮ ರಾಜ್ಯದಲ್ಲಿ ವಿವಿಧೆತೆಯನ್ನು ಕಾಣಬಹುದು ಎಂದ ಅವರು ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಪ್ರವಚನಗಳ ಮೂಲಕ ಕನ್ನಡ ಭಾಷೆಯನ್ನು ಇನ್ನಷ್ಟು ಸದೃಢಗೊಳಿಸಿದ್ದಾರೆ. ಮುಂದಿನ ಪೀಳಿಗೆಗೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಬಸವನಬಾಗೇವಾಡಿ ವಿಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು.
ಸಾನಿಧ್ಯ ವಹಿಸಿದ್ದ ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ತಾಲೂಕು ಕಸಾಪ ನೂತನ ಅಧ್ಯಕ್ಷ ಶಿವಾನಂದ ಡೋಣೂರ ಮಾತನಾಡಿದರು.
ಭಾಗ್ಯಶ್ರೀ ಪಾಟೀಲ, ಭಾಗ್ಯಶ್ರೀ ಹಿರೇಮಠ ಸಿದ್ದೇಶ್ವರ ಸ್ವಾಮೀಜಿಯವರಿಗೆ ನುಡಿನಮನ ಸಲ್ಲಿಸಿದರು.
ಸಾನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿ. ಬೃಂಗೇಶ್ವರ ಶಿವಾಚಾರ್ಯರು ವಹಿಸಿದ್ದರು. ವೇದಿಕೆಯಲ್ಲಿ ಬಿಇಓ ವಸಂತ ರಾಠೋಡ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಚಂದ್ರಶೇಖರ ಮರೋಳ, ಚಂದ್ರಶೇಖರ ಮುಳವಾಡ, ಬಾಲು ರಾಠೋಡ,ಸಂಗಮೇಶ ಓಲೇಕಾರ, ಎಸ್.ಐ.ಬಿರಾದಾರ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಅಭಿಷೇಕ ಚಕ್ರವರ್ತಿ, ಡಾ.ಸಂಗಮೇಶ ಮೇತ್ರಿ, ರಾಜೇಸಾಬ ಶಿವನಗುತ್ತಿ ಇತರರು ಇದ್ದರು.
ಎಚ್.ಬಿ.ಬಾರಿಕಾಯಿ ಸ್ವಾಗತಿಸಿದರು. ಪಿ.ಎಸ್.ಬಾಗೇವಾಡಿ ನಿರೂಪಿಸಿದರು. ಬಿ.ವಿ.ಚಕ್ರಮನಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.