ಬಸವನಬಾಗೇವಾಡಿ: ಸಂಸದ ಅನಂತಕುಮಾರ ಹೆಗಡೆ ಅವರು ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯವರ ಬಗ್ಗೆ ಗೌರವ ಇಲ್ಲದೇ ಮಾತನಾಡಿರುವುದು ಖಂಡನೀಯ. ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವದಕ್ಕೆ ನಾವು ಬಂದಿರುವುದು ಎಂದು ದೇಶ ವಿರೋದಿ ಹೇಳಿಕೆ ನೀಡುವ ಮೂಲಕ ಅನಂತಕುಮಾರ ಹೆಗಡೆ ವಿವಾದಕ್ಕೆ ಗುರಿಯಾಗಿದ್ದರು. ಇವರು ಜವಾಬ್ದಾರಿಯುತ ಜನಪ್ರತಿನಿಧಿ ಸಂಸದ ಸ್ಥಾನದಲ್ಲಿರುವ ಇವರು ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಮೂರ್ಖತನದ ಪರಮಾವಧಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ನ್ಯಾಯ, ಜನಪ್ರಿಯತೆ ಇದನ್ನೆಲ್ಲ ಸಹಿಸಿಕೊಳ್ಳಲು ಆಗದೆ ಮುಂಬರುವ ಲೋಕಸಭಾ ಚುನಾವಣೆಯ ಕುತಂತ್ರ ಮಾಡಲು ಹೊರಟಿರುವ ಸಂಸದರು ಕೂಡಲೇ ಕ್ಷಮೆ ಯಾಚಿಸಬೇಕು. ಕ್ಷಮೆ ಯಾಚಿಸದೇ ಹೋದರೆ ಪರಿಣಾಮ ನೆಟ್ಟಗಿರುವದಿಲ್ಲ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ರಾಜೇಶ್ವರಿ ಯರನಾಳ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕ ಅಧ್ಯಕ್ಷ ರಾಜಶೇಖರ ಯರನಾಳ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

