ಬಸವನಬಾಗೇವಾಡಿ: ಮಹಾ ಮಾನವತಾವಾದಿ, ಜಗತ್ತಿನ ಪ್ರಥಮ ಸ್ವತಂತ್ರ ವಿಚಾರವಾದಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಮಂತ್ರಿಮಂಡಲದಲ್ಲಿ ನಿರ್ಧಾರ ತೆಗೆದುಕೊಂಡಿರುವುದು ಬಸವಣ್ಣನವರಿಗೆ ಕೊಟ್ಟ ಗೌರವವಾಗಿದೆ. ರಾಜ್ಯ ಸರ್ಕಾರಕ್ಕೆ ಅದರಲ್ಲೂ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಂತ್ರಿ ಮಂಡಲ ಸದಸ್ಯರಿಗೆ ಅಭಿನಂದನೆಗಳು. ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಎಂದೋ ಆಗಬೇಕಾಗಿತ್ತು. ಆಗಲಾದರೂ ಸರ್ಕಾರ ನಿರ್ಣಯ ತೆಗೆದುಕೊಂಡಿರುವದು ಸಂತಸದ ಸಂಗತಿ. ಕಿತ್ತೂರನ್ನು ಚನ್ನಮ್ಮನ ಕಿತ್ತೂರು ಎಂದು ಕರೆಯುವ ಕುರಿತು ಮಂತ್ರಿಮಂಡಲದಲ್ಲಿ ನಿರ್ಧಾರ ತೆಗೆದುಕೊಂಡಿರುವುದು ಸೂಕ್ತವಾಗಿದೆ. ಈ ಎರಡು ನಿರ್ಧಾರಗಳನ್ನು ತೆಗೆದುಕೊಂಡ ಮಂತ್ರಿಮಂಡಲ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

