ದೇವರಹಿಪ್ಪರಗಿ: ಇಡೀ ಸಮಾಜಕ್ಕೆ ತನ್ನದೇಯಾದ ಅತ್ಯಮೂಲ್ಯವಾದ ಸಂದೇಶಗಳನ್ನು ನೀಡಿದ ವೇಮನರ ಆದರ್ಶಗಳು ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿವೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ವೇಮನರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವೇಮನರು ತನ್ನನ್ನು ತಾನು ತಿದ್ದಿಕೊಂಡು ಮಹಾಯೋಗಿಯಾಗಿ ಬೆಳೆದರು ಎಂದರು.
ಬಸವಶರಣ ಸಂಗಮ ಸೇವಾ ಸಮೀತಿ ಅಧ್ಯಕ್ಷ ಸಂಗಪ್ಪಣ್ಣ ತಡವಲ್ ಮಾತನಾಡಿ, ವೇಮನರ ಬಾಲ್ಯ, ಸಮಾಜ ಅವರನ್ನು ಕಂಡ ರೀತಿ, ಮುಂದೆ ಅವರು ಬದಲಾಗಿ ಸಮಾಜಕ್ಕೆ ನೀಡಿದ ದಿವ್ಯಸಂದೇಶಗಳ ಕುರಿತು ಮಾಹಿತಿ ನೀಡಿದರು.
ಶಿಕ್ಷಕ ಪ್ರಲ್ಹಾದ್ ಕುಲಕರ್ಣಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಿದ ಸರ್ಕಾರದ ನಿಲುವನ್ನು ಶ್ಲಾಘಿಸಿ, ಧನ್ಯವಾದ ಸಲ್ಲಿಸಲಾಯಿತು.
ವಚನ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ, ಮುಖ್ಯಗುರು ಪಿ.ಸಿ.ತಳಕೇರಿ, ಉಪನ್ಯಾಸಕ ಆಕ್ರಮ್ ಪಾಷಾ, ಕೆ.ಎಮ್.ನಂದಿ, ಪ್ರಕಾಶ ಪೂಜಾರಿ, ಎಸ್.ಜಿ.ತಾವರಖೇಡ, ಗೊಲ್ಲಾಳ ಬಿರಾದಾರ, ಬಸವರಾಜ ಬಡಿಗೇರ, ಕೆ.ಜಿ.ಪವಾರ ಸೇರಿದಂತೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

