ಸಿಂದಗಿ: ಜಾತಿ ತಾರತಮ್ಯ, ಢಾಂಬಿಕ ಭಕ್ತಿ ಎಲ್ಲದರ ವಿರುದ್ಧ ತಿರುಗಿ ಬಿದ್ದಿದ್ದ ಬಸವಣ್ಣ, ತಮ್ಮದೇ ಆದ ರೀತಿಯಲ್ಲಿ ದಮನಕ್ಕೊಳಗಾದವರ ಧ್ವನಿಯಾಗಿ ನಿಂತಿದ್ದರು. ಇಷ್ಟಲಿಂಗ ಮೂರ್ತಿಯ ಪರಿಕಲ್ಪನೆಯನ್ನು ನೀಡಿ ದೇವರನ್ನು ಎಲ್ಲರ ಕರಸ್ಥಲಕ್ಕೆ ತಂದರು. ಕಾಯಕವೇ ಕೈಲಾಸ ಎಂದು ಹೇಳಿ, ಎಲ್ಲರಲ್ಲೂ ದುಡಿಯುವ ಛಲ ಹುಟ್ಟು ಹಾಕಿದರು ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗ ಶರಣರು ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಜರುಗಿದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪ ಸ್ಥಾಪಿಸಿ, ಅದರಲ್ಲಿ ಎಲ್ಲರೂ ವಿಚಾರ ವಿನಿಮಯ ಮಾಡಲು ವೇದಿಕೆ ಕಲ್ಪಿಸಿದರು. ಕೆಳ ಜಾತಿಗಳಿಂದಲೂ ಬಂದ ಶರಣರು ಇಲ್ಲಿ ತಮ್ಮ ಚಿಂತನೆಗಳನ್ನು ಮಂಡಿಸಿ ಮನುಕುಲಕ್ಕೆ ಆದರ್ಶವಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಸಿಎಂ ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿದರು.
ಈ ವೇಳೆ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ದಸಂಸ ವಿದ್ಯಾರ್ಥಿ ಘಟಕದ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಹಿರಿಯ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ, ಡಾ.ಚನ್ನಪ್ಪ ಕಟ್ಟಿ, ಗುರು ತಾರಾಪುರ, ಜಗದೀಶ ಕಲಬುರಗಿ, ವಿಶ್ವನಾಥ ಜೋಗುರು, ಆರ್.ಆರ್. ಪಾಟೀಲ, ರಾಷ್ಟ್ರೀಯ ಬಸವದಳ ಅಧ್ಯಕ್ಷ ಮಲ್ಲು ಅರ್ಜುಣಗಿ, ಗುರು ಬಸರಕೋಡ, ಶಿವಕುಮಾರ ಶಿಂಪಗೇರ, ನಾನಪ್ಪಗೌಡ ಚನಗೊಂಡ, ಅಣ್ಣಾರಾಯ ಈಳಗೇರ ಸೇರಿದಂತೆ ಬಸವ ದಳದ ಪದಾಧಿಕಾರಿಗಳು, ವಿವಿಧ ಸಂಘಟನೆ ಸದಸ್ಯರು, ಸಾಹಿತಿಗಳು, ಕಾಲೇಜಿನ ವಿದ್ಯಾರ್ಥಿಗಳು ಬಸವ ಅಭಿಮಾನಿಗಳು ಭಕ್ತರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

