ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಶುಕ್ರವಾರ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾಯೋಗಿ ವೇಮನ ಅವರ ಜಯಂತಿ ಆಚರಿಸಲಾಯಿತು.
ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರ ತತ್ವಾರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜವನ್ನು ಕಟ್ಟಬೇಕಾಗಿದೆ ಎಂದರು.
ವಕೀಲ ಎಸ್.ಎಚ್.ಗುರಡ್ಡಿ ಮಾತನಾಡಿ, ಮಹಾಯೋಗಿ ವೇಮನ ಅವರು ತಮ್ಮ ಸಾಹಿತ್ಯ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢನಂಬಿಕೆ, ಸೋಗಲಾಡಿತನವನ್ನು ಪ್ರಶ್ನಿಸಿದರು. ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಮಹಾಯೋಗಿ ವೇಮನ ಅವರು ಲೋಕeನ ಹರಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಭವಾನಿ ಪಾಟೀಲ, ರೇಷ್ಮೆ ಇಲಾಖೆಯ ಎಸ್.ಐ.ಗೋಲಗೊಂಡ, ಖಜಾನೆ ಇಲಾಖೆಯ ಅಧಿಕಾರಿ ಮನೋಜ ಪಾಟೀಲ, ಭೂಮಾಪನಾ ಇಲಾಖೆಯ ವ್ಯವಸ್ಥಾಪಕ ಕಲಾದಗಿ, ಶಿರಸ್ತೇದಾರ ಬೋರಮ್ಮ ಪೋಲೇಶಿ, ತಹಸೀಲ್ದಾರ ಸಿಬ್ಬಂದಿಗಳಾದ ಮಂಜು ಹಳ್ಳೂರ, ಆರ್.ವಿ.ಘಾಟಗೆ, ನರ್ಮಲಾ ಪೂಜಾರಿ, ಸುರೇಶ ದೇಸಾಯಿ, ಎಸ್.ಎಚ್.ಗುರಡ್ಡಿ, ಎಸ್.ಬಿ.ಅಡ್ಡೋಡಗಿ, ಸಿ.ಎಸ್.ಬಿರಾದಾರ, ಬಸವರಾಜ ದೇಸಾಯಿ, ವಿಶ್ವನಾಥ ರೆಡ್ಡಿ, ಸ್ಪರೂಪರಾಣಿ ಬಿಂಜಲಬಾವಿ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

