Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ರಾಮತಾರಕ ಹೋಮ ಸಂಪನ್ನ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ರಾಮತಾರಕ ಹೋಮ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸಮಸ್ತ ಭಾರತೀಯರಿಗೆ ಅಯೋಧ್ಯ ಭವ್ಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾನ ನಡೆಯುತ್ತಿರುವ ಸಂಗತಿ ಬಹಳ ಸಂತಸ, ಸಂಭ್ರಮ ತಂದುಕೊಟ್ಟಿದೆ. ಬಹಳ ದಿನಗಳ ಕನಸು ನನಸಾಗುತ್ತಿದೆ. ಇಡೀ ದೇಶವೇ ಸಂಭ್ರಮ ಪಡುತ್ತಿದೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿಯ ಸಹಯೋಗದಲ್ಲಿ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜ.೨೨ ರಂದು ನಡೆಯುತ್ತಿರುವ ಶ್ರೀರಾಮ ದೇವರ ಮೂರ್ತಿ ಪ್ರತಿಷ್ಠಾಪನೆಯಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ರಾಮತಾರಕ ಹೋಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಬಹು ವರ್ಷಗಳ ಹಿಂದೆ ನಿರ್ಮಾಣವಾಗಬೇಕಿತ್ತು. ಕೆಲವರ ಕಾರಣದಿಂದಾಗಿ ಈ ಕಾರ್ಯ ನೆರವೇರಿರಲಿಲ್ಲ. ಇದೀಗ ಕಾನೂನು ಬದ್ಧವಾಗಿ ನಿರ್ಮಾಣ ಮಾಡಿದ್ದು ಸಂತೋಷದಾಯಕ ಸಂಗತಿ. ಈ ಮೊದಲು ಎಲ್ಲೆಡೆ ಬನಾಯೆಂಗೇ ಮಂದಿರ ಹಾಡು ಹಾಕಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಇದರ ಬದಲು ಬನ್ನಗಯಾ ಮಂದಿರ ಎಂಬ ಹಾಡು ಹಾಕಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜ.೨೨ ರಂದು ಶ್ರೀರಾಮ ಭಾವಚಿತ್ರ ಪೂಜೆ ಮಾಡುವ ಜೊತೆಗೆ ದೀಪ ಬೆಳಗಿಸಬೇಕೆಂದು ಕರೆ ನೀಡಿದ್ದಾರೆ. ಅವರ ಕರೆಯನ್ನು ಎಲ್ಲರೂ ಪಾಲಿಸುವ ಮೂಲಕ ಶ್ರೀರಾಮನಿಗೆ ನಮನ ಸಲ್ಲಿಸಬೇಕೆಂದರು.
ರಾಜ್ಯ ಸರ್ಕಾರವು ಬಸವೇಶ್ವರರನ್ನು ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡಿದ್ದು ಬಸವ ಭಕ್ತರಿಗೆ ಸಂತೋಷ ತಂದಿದೆ. ಹೋಮ-ಹವನ ಮಾಡುವುದು ಭಾರತೀಯ ವಿಶಿಷ್ಟ ಸಂಪ್ರದಾಯ. ಹೋಮದಲ್ಲಿ ವನಸ್ಪತಿಗಳನ್ನು ಬಳಕೆ ಮಾಡುತ್ತಿರುವುದರಿಂದ ದುಷ್ಟ ಶಕ್ತಿ ನಾಶವಾಗುತ್ತದೆ ಎಂದ ಅವರು ರಾಜ್ಯ ಸರ್ಕಾರವು ಬಸವೇಶ್ವರರನ್ನು ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡಿದ್ದು ಬಸವ ಭಕ್ತರಿಗೆ ಸಂತೋಷ ತಂದಿದೆ ಎಂದರು.
ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಬುರಣಾಪೂರ ಯೋಗೇಶ್ವರಿ ಮಾತಾಜಿ, ಮುಖಂಡ ಕಲ್ಲು ಸೊನ್ನದ ಮಾತನಾಡಿದರು.
ರಾಮತಾರಕ ಹೋಮವನ್ನು ಯೋಗೀಶ ಜೈನಿ, ಅಭಿಷೇಕ ಜೈನಿ, ಕೃಪಾಚಾರ್ಯ ಗಲಗಲಿ, ಹರೀಶ ಜೈನಿ, ದೇವದಾಸ ಹುಂಡೆಕರ ಅವರು ನೆರವೇರಿಸಿದರು. ಹೋಮದಲ್ಲಿ ೨೦೦ಕ್ಕೂ ಹೆಚ್ಚು ದಂಪತಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಇಂಗಳೇಶ್ವರದ ಬೃಂಗೀಶ್ವರ ಶಿವಾಚಾರ್ಯ ಸ್ವಾಮೀಜಿ, ಮಾತೃಶಕ್ತಿಯ ವಿಭಾಗ ಸಂಚಾಲಕಿ ಮಾಯಕ್ಕ ಚೌಧರಿ, ಬಜರಂಗದಳ ವಿಜಯಪುರ ವಿಭಾಗದ ಸಂಯೋಜಕ ಸಂತೋಷ ಹಿರೇಮಠ, ಮಾತೃಶಕ್ತಿ ತಾಲೂಕು ಪ್ರಮುಖ ರೂಪಾ ಜಾಧವ, ಉಪಾಧ್ಯಕ್ಷೆ ವಿದ್ಯಾಶ್ರೀ ಬಡಿಗೇರ, ದುರ್ಗಾವಾಹಿನಿ ತಾಲೂಕು ಸಂಚಾಲಕಿ ಸ್ವಾತಿ ಪಾಟೀಲ, ವಿದ್ಯಾರ್ಥಿ ಪ್ರಮುಖ ಲಕ್ಷ್ಮೀ ವಸ್ತ್ರದ, ಅಶೋಕ ಹಾರಿವಾಳ, ಬಸವರಾಜ ಹಾರಿವಾಳ, ವಿವೇಕಾನಂದ ಕಲ್ಯಾಣಶೆಟ್ಟಿ, ಕೆ. ಗಂಗಾಧರ ಸೇರಿದಂತೆ ಇತರರು ಇದ್ದರು.
ಪದ್ಮರಾಜ ಒಡೆಯರ ಸ್ವಾಗತಿಸಿದರು. ರಾಹುಲ ಜಗತಾಪ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.