ವಿಜಯಪುರ: ನಗರದಿಂದ ತಿರುಪತಿಗೆ ನೇರ ರೈಲುಸಂಚಾರ ಆರಂಭಿಸುವಂತೆ ಸಂಸದರಾದ ರಮೇಶ ಜಿಗಜಿಣಗಿ ಅವರು ಹುಬ್ಬಳ್ಳಿ ರೇಲ್ವೆ ಜನರಲ್ ಮ್ಯಾನೇಜರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಜಯಪುರದಿಂದ ತಿರುಪತಿಯ ಮಧ್ಯ ಸಂಚರಿಸುವ ರೈಲನ್ನು ಆರಂಭಿಸುವಂತೆ ಸಾರ್ವಜನಿಕರ ಬಹದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಕೇಂದ್ರ ರೇಲ್ವೆ ಸಚಿವರೊಂದಿಗೂ ಚರ್ಚಿಸಲಾಗಿದೆ. ಜನರಿಗೆ ನೇರವಾದ ಮಾರ್ಗವಿಲ್ಲದೇ ಇರುವುದರಿಂದ ಪ್ರಯಾಣಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಶೀಘ್ರವಾಗಿ ವಿಜಯಪುರ – ತಿರುಪತಿ ಮಧ್ಯ ರೈಲನ್ನು ಪ್ರಾರಂಭಿಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ಪತ್ರ ಬರೆದು ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

