ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ರಾಜ್ಯಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ವಿಧ್ಯಾರ್ಥಿ ವಿದ್ಯಾರ್ಥಿನಿಯರೊಂದಿಗೆ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಸುಮಾರು ೨ ಗಂಟೆಗಳ ಕಾಲ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ, ರಾಜಕೀಯ ಕ್ಷೇತ್ರ, ಶಿಕ್ಷಣ ಕ್ಷೇತ್ರ. ಸಾರಿಗೆ, ಮೂಲಭೂತ ಸೌಕರ್ಯಗಳ ಕುರಿತು ಕೇಳಿದ ಹತ್ತು ಹಲವು ಪ್ರಶ್ನೆಗಳಿಗೆ ಶಾಂತ ರೀತಿಯಿಂದ ವಿಧ್ಯಾರ್ಥಿಗಳಿಗೆ ಉತ್ತರ ನೀಡಿದರು,
ಸಂವಾದದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ರಾಜುಗೌಡ ಕುದರಿಸಾಲೋಡಗಿ ಅವರು, ಇಂದಿನ ವಿಧ್ಯಾರ್ಥಿಗಳು ಮುಖ್ಯವಾಗಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಗುರು ಹಿರಿಯರನ್ನು ಗೌರವಿಸುವ, ಮಾತಾಪಿತರನ್ನು ಪೂಜ್ಯನೀಯ ಬಾವದಿಂದ ಕಾಣುವುದನ್ನು ಕಲಿಯಬೇಕು. ಇದರಿಂದ ಎಂತಹುದೇ ಸಾಧನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆಗಬೇಕಿದೆ. ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆಧ್ಯತೆ ನೀಡುತ್ತೇನೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ, ಪ್ರಾಚಾರ್ಯ ಸಿ ಎಸ್ ಹಿರೇಮಠ, ಬಸವಂತಪ್ಪ ಚನಗೊಂಡ, ಇಎಲ್ಸಿ ಕ್ಲಬ್ ಸಂಚಾಲಕ ಬಸವರಾಜ್ ಕುಂಬಾರ ಮಾತನಾಡಿದರು.
ಈ ವೇಳೆ ಸಂಸ್ಥೆ ನಿರ್ಧೇಶಕ ಸಿದ್ದಣ್ಣ ಚಳ್ಳಗಿ, ಷಣ್ಮುಕಪ್ಪ ಝಳಕಿ, ದೇವಿಂದ್ರ ಗುಮಶೆಟ್ಟಿ, ವೀರಪ್ಪ ಝಳಕಿ, ಕಾಶಿಂ ನಾಯ್ಕೋಡಿ, ಸಾತವೀರಪ್ಪ ಕಲಶೆಟ್ಟಿ, ಶರಣಗೌಡ ಕೋರವಾರ, ಶಾಂತು ದುರ್ಗಿ, ನಿತ್ಯಾನಂದ ಕತ್ತಿ, ರವಿಕುಮಾರ ಗುಮಶೆಟ್ಟಿ, ವಿಶ್ವನಾಥ ಸಿಂದಗಿ, ಎಸ್ ಎಸ್ ಕೋರವಾರಮಠ, ಎಸ್ ಪಿ ರಾಣಗಟ್ಟಿ, ಕೆ ಎಸ್ ದೇಸಾಯಿ, ನಿಂಗನಗೌಡ ಗುಂಡಕನಾಳ, ವ್ಹಿ ಟಿ ಜಾನಮಟ್ಟಿ, ಶಿವಾನಂದ ಹರಿಜನ, ಪ್ರವೀಣ ಜಗಶೆಟ್ಟಿ, ರಾಜು ಅಡಕಿ, ರಮೇಶ ಹೆಂಡಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

