ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಎತ್ತುಗಳನ್ನು ಸಂರಕ್ಷಿಸಲು ಆಧ್ಯಾತ್ಮಿಕ ಸ್ಥಳಗಳಿಗೆ ನಂದಿ ಯಾತ್ರೆ ಕೈಗೊಳ್ಳಬೇಕೆಂಬ ಆಶಯ ಹೊರ ಹಾಕಿದ್ದರು. ಎತ್ತು ಹಾಗೂ ಮಣ್ಣಿನ ಮಹತ್ವದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಬಿಜ್ಜರಗಿಯ ಸಿದ್ಧೇಶ್ವರ ರೈತಮಿತ್ರ ಸ್ವಯಂ ಸೇವಕರ ಸಂಘದ ನೇತೃತ್ವದಲ್ಲಿ ಜೋಡೆತ್ತು ಬಂಡಿಗಳ ಮೂಲಕ ನಂದಿ ಯಾತ್ರೆ ಆರಂಭಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಪ್ರಮುಖ 40 ಆಧ್ಯಾತ್ಮಿಕ ಕೇಂದ್ರಗಳಲ್ಲಿ ಸಂಘಗಳನ್ನು ಸ್ಥಾಪಿಸಲಾಗುವುದು. ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನ ಮನಗೂಳಿ, ಯರನಾಳ, ನಂದಿಹಾಳ ಪಿ.ಯು, ಇಂಗಳೇಶ್ವರ ಗ್ರಾಮಗಳಲ್ಲಿ ಸಂಘ ರಚನೆ ಮಾಡಲಾಗಿದೆ ಎಂದು ಹೇಳಿದರು.ಬಸವನಬಾಗೇವಾಡಿ: ಪಟ್ಟಣದಲ್ಲಿ ಎತ್ತುಗಳ ಹಾಗೂ ಮಣ್ಣಿನ ಮಹತ್ವ ಸಾರುವ ಉದ್ದೇಶದಿಂದ ಗುರುವಿಗಾಗಿ ನಡೆ ನಮನ ಸಂದೇಶದೊಂದಿಗೆ ಬಿಜ್ಜರಗಿಯಿಂದ ಆರಂಭವಾದ ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸೋಮವಾರ ಸ್ವಾಗತ ಕೋರಲಾಯಿತು.
ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದ ವಿರಕ್ತಮಠದಿಂದ ರೈತರು ಜೋಡೆತ್ತು ಬಂಡಿಗಳಲ್ಲಿ ಬಸವೇಶ್ವರ, ಶಿವಯೋಗಿ ಶಿವಲಿಂಗೇಶ್ವರರ ಮೂರ್ತಿ ಹಾಗೂ ಸಿದ್ಧೇಶ್ವರ ಸ್ವಾಮೀಜಿ ಅವರ ಭಾವಚಿತ್ರದ ಮೆರವಣಿಗೆ ಮೂಲಕ ವಿಜಯಪುರ ರಸ್ತೆಯಲ್ಲಿನ ಬಸವ ಭವನ ಮುಂಭಾಗಕ್ಕೆ ಆಗಮಿಸಿದರು. ಬಿಜ್ಜರಗಿಯ ರೈತರು ತಾಲೂಕಿನ ನಂದಿಹಾಳ ಪಿ.ಯು ಗ್ರಾಮದಿಂದ 9 ಜೋಡೆತ್ತು ಬಂಡಿಗಳೊಂದಿಗೆ ಆಗಮಿಸಿದ ನಂದಿ ಯಾತ್ರೆಗೆ ಸ್ವಾಗತ ಕೋರಲಾಯಿತು.
ನಂದಿ ಯಾತ್ರೆಯ ನೇತೃತ್ವ ವಹಿಸಿರುವ ವಿಜಯಪುರದ ಅಭಿ ಪೌಂಡೇಷನ್ ಮುಖ್ಯಸ್ಥ ಬಸವರಾಜ ಬಿರಾದಾರ ಮಾತನಾಡಿ, ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಎತ್ತುಗಳನ್ನು ಸಂರಕ್ಷಿಸಲು ಆಧ್ಯಾತ್ಮಿಕ ಸ್ಥಳಗಳಿಗೆ ನಂದಿ ಯಾತ್ರೆ ಕೈಗೊಳ್ಳಬೇಕೆಂಬ ಆಶಯ ಹೊರ ಹಾಕಿದ್ದರು. ಎತ್ತು ಹಾಗೂ ಮಣ್ಣಿನ ಮಹತ್ವದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಬಿಜ್ಜರಗಿಯ ಸಿದ್ಧೇಶ್ವರ ರೈತಮಿತ್ರ ಸ್ವಯಂ ಸೇವಕರ ಸಂಘದ ನೇತೃತ್ವದಲ್ಲಿ ಜೋಡೆತ್ತು ಬಂಡಿಗಳ ಮೂಲಕ ನಂದಿ ಯಾತ್ರೆ ಆರಂಭಿಸಲಾಗಿದೆ ಎಂದು ಹೇಳಿದರು.
ಯಾತ್ರೆಯ ಪ್ರಮುಖ ಬಸವರಾಜ ಕೋನರೆಡ್ಡಿ ಮಾತನಾಡಿದರು.
ಯಾತ್ರೆಯ ಸಂದರ್ಭದಲ್ಲಿ ಬಸವರಾಜ ಹಾರಿವಾಳ, ಶ್ರೀಶೈಲ ಉಟಗಿ, ಶಿವಾನಂದ ಬಿರಾದಾರ, ಪ್ರಭಾಕರ ಖೇಡದ, ಮಲ್ಲಪ್ಪ ಕುಂಬಾರ, ಬಸವರಾಜ ಸಂಗಮ, ಸಿರಸಪ್ಪ ಉಟಗಿ ಭೀಮು ಪೋಳ, ಶಿವಾನಂದ ತೊಳನೂರ, ಹನಮಂತ ಕನಮಡಿ, ಕೆ.ಎಸ್.ಅವಟಿ, ನಿಂಗಪ್ಪ ಸಿಗ್ಗಾವಿ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

