ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಅವರು ಮತದಾನದ ಮಹತ್ವದ ಕುರಿತು ಮಾತನಾಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ವಿಭಾಗದ ಸಂಯೋಜಕ, ರಾಜ್ಯಶಾಸ್ತ್ರದ ಪ್ರಾಧ್ಯಾಪಕ ದೀಲಿಪಕುಮಾರ ಕೆ. ಅವರು ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವ ಎಂಬ ಧ್ಯೇಯ ವಾಕ್ಯ ಹೇಳುವದರೊಂದಿಗೆ ನಾನು ಯಾವುದೇ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೇ ಪ್ರಾಮಾಣಿಕವಾಗಿ ಮತದಾನವನ್ನು ಮಾಡುವುದಾಗಿ ಎಂಬ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರವೀಂದ್ರಗೌಡ ಕೆ., ಡಾ.ವೈ.ಬಿ.ನಾಯಕ, ಪ್ರೊ.ಡಿ.ಎಸ್.ಲಗಳಿ, ಪ್ರೊ.ಸಿ.ಪಿ.ದಡೇಕರ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
