ಮುದ್ದೇಬಿಹಾಳ: ಕಲ್ಬುರ್ಗಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಅಪಮಾನ ಮಾಡಿದವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ತಾಲೂಕಿನ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರನ್ನು ವಜಾಗೊಳಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಮಕ್ಕಳ ಸಂಖ್ಯೆ ಹಾಗೂ ಸ್ವಂತ ಕಟ್ಟಡ ಇಲ್ಲದೇ ನಡೆಯುತ್ತಿರುವ ಅನುದಾನಿತ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಗುರುವಾರ ತಹಶೀಲ್ದಾರ ಕಚೇರಿಯವರೆಗೆ ತಮಟೆ ಬಾರಿಸುವ ಮೂಲಕ ಪ್ರತಿಭಟಿಸುತ್ತ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ತಹಶೀಲ್ದಾರ ಕಚೇರಿಯ ಎದುರು ಹೋರಾಟಗಾರರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ ಮತ್ತು ರವಿ ನಾಯಕ ಮಾತನಾಡಿ, ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿದವರನ್ನು ಗಲ್ಲಿಗೇರಿಸುವಂತೆ ಮತ್ತು ಪಿಎಲ್ಡಿ ಬ್ಯಾಂಕ್ ನ ವ್ಯವಹಾರಗಳ ತನಿಖೆಗಾಗಿ ಮತ್ತು ಬಾಂಕ್ ನ ಅಧ್ಯಕ್ಷರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಲಾಗಿತ್ತು. ಬ್ಯಾಂಕ್ ನ ಮೇಲಾಧಿಕಾರಿಗಳು ವಿಜಯಪುರದಿಂದ ಬಂದು ಜ.೨೦ ರ ಒಳಗಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಗಡುವಿನ ಮೇಲೆ ಇವತ್ತಿಗೆ ೫ ದಿನಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ. ಕಾರಣ ಕ್ರಮಕ್ಕೆ ಮುಂದಾಗಬೇಕು ಎಂದರು.
ಈ ವೇಳೆ ದೇವಪ್ಪ ಹುನಕುಂಟಿ, ಮಹಾಂತೇಶ ತಮದಡ್ಡಿ, ಪ್ರಕಾಶ ಜಲಪೂರ, ಶರನು ಸರೂರ, ಲವಕುಮಾರ ದೊಡಮನಿ, ರಾಹುಲ ಕಟ್ಟಿಮನಿ, ಗುಂಡಪ್ಪ ಚಲವಾದಿ, ಈಶ್ವರ ಗುಡ್ನಾಳ, ಮಾದಪ್ಪ ಡೊಂಕಮಡು, ದೇವೆಂದ್ರ ಡೊಂಕಮಡು, ಶಶಿಕುಮಾರ ಹಂಗರಗಿ, ಹೊಳೆಪ್ಪ ಸರೂರ, ಶಶಿಕುಮಾರ ಹಳ್ಳುರ, ಹೊಳೆಪ್ಪ ಸರೂರ, ಪ್ರಕಾಶ ಚಲವಾದಿ, ಬಸು ಸರೂರ, ಶಂಕರ ಕಟ್ಟಿಮನಿ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

