ಮುದ್ದೇಬಿಹಾಳ: ಅರ್ಹತೆ, ಧರ್ಮ, ಲಿಂಗ, ಜಾತಿ, ಜನಾಂಗ, ಶ್ರೀಮಂತ-ಬಡವ ಈ ಯಾವುದೇ ತಾರತಮ್ಯವಿಲ್ಲದೇ ಮತದಾನದ ಹಕ್ಕನ್ನು ಜನತೆಗೆ ಸಮಾನವಾಗಿ ನೀಡಲಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ ಈಡೇರಬೇಕಾದರೆ ಮತದಾನದ ಸದ್ಬಳಕೆ ಮಾಡಿಕೊಳ್ಳುವದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಾ.ಎಸ್.ಪಿ ಓಸ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ತಾಲೂಕು ಕನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಾ.ಎಸ್.ಪಿ.ಓಸ್ವಾಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ತಹಶೀಲ್ದಾರ ಬಲರಾಮ ಕಟ್ಟಿಮನಿ,
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಕೊರಬು ವಿಶೇಷ ಉಪನ್ಯಾಸ ನೀಡಿದರು.
ಸಹಾಯಕ ಸರಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರಕಾರಿ ವಕೀಲ ಎಚ್.ಎಲ್.ಸರೂರ, ತಾಲೂಕು ಪಂಚಾಯತ ನ ಸಹಾಯಕ ನಿರ್ದೇಶಕ(ಪಂ.ರಾ) ಖೂಬಾಸಿಂಗ್ ಜಾಧವ, ಪ್ರಂಶುಪಾಲ ಸಿಕಂದರ ಧನ್ನೂರ, ಉಪನ್ಯಾಸಕರಾದ ಎಚ್.ಎಸ್.ಕಟಗೂರ, ಯಲ್ಲಪ್ಪ ಗುಂಡಕರ್ಜಗಿ, ಕುಮಾರಸ್ವಾಮಿ ಹಿರೇಮಠ, ಗಿರಿಯಪ್ಪ ವಾಗಣಗೇರಿ, ಬಸವರಾಜ ಅಡಗಿ, ರವಿ ನಂದೆಪ್ಪನವರ, ಮಂಜುಳಾ ಭಾವಿಕಟ್ಟಿ, ನೇತ್ರಾ ನಾಲತವಾಡ, ಸರಿತಾ ಹಿಪ್ಪರಗಿ ಸೇರಿದಂತೆ ಮತ್ತೀತರರು ಇದ್ದರು.
ಪ್ರೊ.ರಾಜೇಶ್ವರಿ ಕಾರ್ಯಕ್ರಮ ನಿರ್ವಹಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

