Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀರಾಮನಿಲ್ಲದ ಭಾರತ ಊಹಿಸಲು ಅಸಾಧ್ಯ :ಕರದಳ್ಳಿ
(ರಾಜ್ಯ ) ಜಿಲ್ಲೆ

ಶ್ರೀರಾಮನಿಲ್ಲದ ಭಾರತ ಊಹಿಸಲು ಅಸಾಧ್ಯ :ಕರದಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ: ಪ್ರಭು ಶ್ರೀರಾಮನನ್ನು ಬಿಟ್ಟು ಭಾರತವಿಲ್ಲ , ಭಾರತಬಿಟ್ಟು ರಾಮನಿಲ್ಲ. ಶ್ರೀರಾಮನಿಲ್ಲದ ಭಾರತವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಮತ್ತು ಸ್ವದೇಶಿ ಚಿಂತಕ ಮಹಾದೇವಯ್ಯ ಕರದಳ್ಳಿ ಕಲಬುರಗಿ ಅವರು ಹೇಳಿದರು.
ಯಡ್ರಾಮಿ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಹಾಗೂ ಶ್ರೀ ಮುರುಘೇಂದ್ರ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆನ್ಲೈನ್ ಹುಣ್ಣಿಮೆ ಕಾರ್ಯಕ್ರಮದ ಸಂಗಮ -56ರಲ್ಲಿ ರಾಷ್ಟ್ರಪುರುಷ ಶ್ರೀರಾಮ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಅಯೋಧ್ಯೆಯ ಪ್ರಭು ಶ್ರೀರಾಮ ತನ್ನ ಬದುಕಿನುದ್ದಕ್ಕೂ ಉದಾತ್ತ ಮೌಲ್ಯಗಳನ್ನು ಅನುಸರಿಸಿ ಆದರ್ಶ ಮೆರೆದಿದ್ದಾನೆ. ಆತನಲ್ಲಿನ ಸತ್ಯ, ನಿಷ್ಠೆ ಪ್ರಜಾಪರಿಪಾಲನೆ ಹಾಗೂ ಧರ್ಮ , ಇತ್ಯಾದಿ ಶ್ರೇಷ್ಠ ಗುಣಗಳೇ ರಾಮನನ್ನು ಮಹಾದೇವರನ್ನಾಗಿಸಿದವು. ಸಾವಿರಾರು ವರ್ಷಗಳ ಹಿಂದೆ ಬದುಕಿ ಹೋದ ಶ್ರೀರಾಮ ಇವತ್ತಿಗೂ ಕೋಟ್ಯಂತರ ಭಾರತೀಯರ ಮನದಲ್ಲಿ ನೆಲೆಸಿರುವುದು ಹುಡುಗಾಟದ ವಿಷಯವಲ್ಲ. ರಾಮನ ಆದರ್ಶ ಗುಣಗಳು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗುವಲ್ಲಿ ಯಾವ ಅನುಮಾನಗಳಿಲ್ಲ ಎಂದರು.
ಪ್ರಭು ಶ್ರೀರಾಮಚಂದ್ರನನ್ನು ಧಾರ್ಮಿಕ ನಾಯಕ ಎಂದು ನೋಡದೇ ಆದರ್ಶ ರಾಷ್ಟ್ರಪುರುಷ ಎಂದು ತಿಳಿದರೆ ರಾಮ ಎಲ್ಲರಿಗೂ ನಿಲುಕುವ ವ್ಯಕ್ತಿಯಾಗಿಯೇ ಕಾಣುತ್ತಾನೆಂದು ಎಂದು ತಿಳಿಸಿದರು.
ಆನ್ಲೈನ್ ಕಾರ್ಯಕ್ರಮವನ್ನು ನುಡಿಯ ಮೂಲಕ ಮಾದನಹಿಪ್ಪರಗಿ ವಿರಕ್ತಮಠದ ಪೂಜ್ಯ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಉದ್ಘಾಟಿಸಿದರು. ಯಡ್ರಾಮಿ ವಿರಕ್ತಮಠದ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಸಂಶೋಧಕ ಸಾಹಿತಿಗಳಾದ ಡಿ.ಎನ್.ಅಕ್ಕಿ, ನಿಂಗನಗೌಡ ಪೊಲೀಸ್ ಪಾಟೀಲ, ಪ್ರಕಾಶ ಸಾಹು ಬೆಲ್ಲದ, ಬಿ.ಬಿ.ವಾರದ, ಡಾ. ಭಾಗ್ವವತಿ ಕೆಂಭಾವಿ, ಡಾ. ಮಾಳಪ್ಪ ಪಾಟೀಲ, ಪ್ರಿಯಾಂಕಾ, ಆರ್.ಜಿ.ಪುರಾಣಿಕ, ಗೊಲ್ಲಾಳಪ್ಪಗೌಡ ಬಿರಾದಾರ, ರುದ್ರಗೌಡ ಪಾಟೀಲ, ವಿಜಯೇಂದ್ರ ಕುಲಕರ್ಣಿ, ಸಿದ್ರಾಮಪ್ಪ ನವಲಗುಂದ, ಸುಧೀಂದ್ರ ಕುಲಕರ್ಣಿ ಬೆಂಗಳೂರು, ಬಸವರಾಜ ಅರಕೇರಿ, ಈರಣ್ಣಗೌಡ ಬಿರಾದಾರ, ಪ್ರಶಾಂತ ಕುನ್ನೂರ, ಸಂಗಮದ ಸದಸ್ಯರಿದ್ದರು.
ಬಸವರಾಜ ಬೋರಗಿ ಪ್ರಾರ್ಥಿಸಿದರು, ಮಲ್ಲಿಕಾರ್ಜುನ ಯಾದಗಿರಿ ಸ್ವಾಗತಿಸಿದರು, ಡಾ. ಸಂತೋಷ ನವಲಗುಂದ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.