ಆಲಮೇಲ: ಪಟ್ಟಣದ
ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಆಲಮೇಲ ದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಟ್ಟಣದ ಹಿರಿಯ ಸಾಹಿತಿ ಸಿದ್ದಾರಾಮ ಉಪ್ಪಿನ ಅವರು ಧ್ವಜಾರೋಹಣ ನೆರವೇರಿಸಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಅದ್ಯಕ್ಷ ಎಸ್.ಆಯ್.ಜೋಗೂರ, ಅತಿಥಿಗಳಾಗಿ ಆಡಳಿತ ಮಂಡಳಿಯ ಕೋಶಾಧ್ಯಕ್ಷ ಎ.ಜಿ.ಕುಲಕರ್ಣಿ, ಸದಸ್ಯರಾದ ಶಿವಾನಂದ ಮಾರ್ಸನಳ್ಳಿ ಉಪಸ್ಥಿತರಿದ್ದರು.
ಈ ವೇಳೆ ಸಂಸ್ಥೆಯ ವತಿಯಿಂದ ಸಾಹಿತಿ ಸಿದ್ದಾರಾಮ ಉಪ್ಪಿನ ರವರಿಗೆ ಇತ್ತೀಚೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದಕ್ಕಾಗಿ ಹಾಗೂ ಶಾಲೆಯ ಮುಖ್ಯ ಗುರು ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಜ್ಯೋತಿಬಾ ಫುಲೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿದಕ್ಕಾಗಿ ಸನ್ಮಾನಿಸಲಾಯಿತು.
ಸನ್ಮಾನಕ್ಕೆ ಪ್ರತಿಯಾಗಿ ಮಾತನಾಡಿದ ಸಿದ್ದಾರಾಮ ಉಪ್ಪಿನ ರವರು, ಆಲಮೇಲ ಪಟ್ಟಣದಲ್ಲಿಯೇ ಬಡಮಕ್ಕಳ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಯು ಕಳೆದ ನಾಲ್ಕು ದಶಕಗಳಿಂದ ತನ್ನ ಕಾರ್ಯವನ್ನು ಯಾವುದೇ ಪ್ರಚಾರವಿಲ್ಲದೆ ಮಾಡುತ್ತ ಬಂದಿದೆ. ಇಲ್ಲಿಯ ಮಕ್ಕಳು ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದು, ಉತ್ತಮ ಸಂಸ್ಕಾರಯುತವಾದ ಶಿಕ್ಷಣ ನೀಡುವಲ್ಲಿ ಸಂಸ್ಥೆಯ ಹಾಗೂ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಚಂದ್ರಕಾಂತ ದೇವರಮನಿ ನಿರೂಪಿಸಿದರು, ಶ್ರೀಮತಿ ಸುವರ್ಣ ಸಾರಂಗಮಠ ಸ್ವಾಗತಿಸಿದರು, ಶಿಕ್ಷಕ ಈರಣ್ಣ ಕಲಶೆಟ್ಟಿ ವಂದಿಸಿದರು.
ಮಕ್ಕಳಿಂದ ಭಾಷಣ, ಸಾಮೂಹಿಕ ಕವಾಯತು, ಡ್ರೀಲ್, ಲೇಝಿಮ, ದೇಶಭಕ್ತಿ ಗೀತೆಗಳ ಮೇಲೆ ನೃತ್ಯ ಮಾಡಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

