ವಿಜಯಪುರ: ಗಮಕ ಕಲೆಯು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿದ್ದು ೬೪ ಕಲೆಗಳಲ್ಲಿ ಒಂದಾಗಿದೆ. ಇದನ್ನು ಉಳಿಸಿ ಬೆಳೆಸುವ ಹೊಣೆ ಇಂದಿನ ಯುವ ಗಮಕ ಕಲಾದರ ಮೇಲಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಕನ್ನಡ ವಿಭಾಗ ಕರ್ನಾಟಕ ಗಮಕ ಕಲಾ ಪರಿಷತ್ತು (ರಿ) ಬೆಂಗಳೂರು, ಜಿಲ್ಲಾ ಘಟಕ ವಿಜಯಪುರ, ಸಹಯೋಗದಲ್ಲಿ “ಮಹಾಕವಿ ಕುಮಾರವ್ಯಾಸ ಜಯಂತಿ ಹಾಗೂ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಮಕ ಇಂದು ಮರೆಯಾಗುತ್ತಿದ್ದು, ಅದರ ಉಳಿವು ಅಗತ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವ ಮೂಲಕ ಗಮಕ ಪರಂಪರೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಹೇಳಿದರು.
ಪ್ರಾಚಾರ್ಯ ಡಾ. ಆರ್.ಎಂ.ಮಿರ್ದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಗಮಕ ಕಲೆಯು ಹೆಚ್ಚು ಹೆಚ್ಚು ಮುನ್ನೆಲೆಗೆ ಬರಬೇಕಾಗಿದೆ. ಇದು ಕಾಲೇಜು ಹಂತದಲ್ಲಿ ನಡೆಯುತ್ತಾ ಸಾಗಿದರೆ ವಿದ್ಯಾರ್ಥಿಗಳಿಗೆ ಪ್ರಾಚೀನ ಕನ್ನಡ ಕಾವ್ಯಗಳ ಅರ್ಥಬದ್ದತೆ ಮತ್ತು ಅದರಲ್ಲಿಯ ಮೌಲ್ಯಗಳು ಮನಮುಟ್ಟಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕಲ್ಯಾಣರಾವ್ ದೇಶಪಾಂಡೆ ಕುಮಾರವ್ಯಾಸ ಭಾರತದ ವಿರಾಟಪರ್ವದ ಉತ್ತರಾಭಿಮನ್ಯು ಕಲ್ಯಾಣದ ಕುರಿತ ಪದ್ಯಗಳ ವ್ಯಾಖ್ಯಾನ ಮಾಡಿದರು.
ಶ್ರೀಮತಿ ಪುಷ್ಪಾ ಕುಲಕರ್ಣಿ ಮತ್ತು ಶ್ರೀಮತಿ ಭೂದೇವಿ ಕುಲಕರ್ಣಿ ಗಮಕವಾಚನ ಮಾಡಿದರು.
ಬಿ.ಎಂ.ಪಾಟೀಲ್ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಸ್ವಾಗತಿಸಿ, ಅತಿಥಿಗಳ ಪರಿಚಯ ಮಾಡಿದರು. ಡಾ.ಉಷಾದೇವಿ ಹಿರೇಮಠ ನಿರೂಪಿಸಿದರು. ಎಸ್.ಎಚ್.ಹೂಗಾರ ವಂದಿಸಿದರು.
ಈ ಸಂದರ್ಭದಲ್ಲಿ ನ್ಯಾಕ್ ಸಂಯೋಜಕ ಡಾ.ಮಹೇಶಕುಮಾರ ಕೆ, ಪ್ರೋ.ರಾಜಶ್ರೀ.ಡಿ.ಜೋಷಿ, ಡಾ.ಭಕ್ತಿ ಮಹೇಂಧ್ರಕರ್, ಪ್ರೊ. ಪ್ರಬಾವತಿ ತಳವಾರ, ಪ್ರೊ ಅಮೀನ್ ಲೇನ್, ಪ್ರೊ. ಆಯ್.ಎಸ್.ಹೂಗಾರ, ಎಸ್.ಎಂ.ಜೇವರ್ಗಿ, ಮೋರೆ, ಪ್ರೊ.ಎಸ್.ವಾಯ್.ಅಂಗಡಿ, ಡಾ. ಚೈತನಾ ಸಂಕೊಂಡ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

